By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: Chitradurga: ಉಪನ್ಯಾಸಕರಿಲ್ಲದೆ ಸೊರಗುತ್ತಿದೆ ಸರ್ಕಾರಿ ವಿಜ್ಞಾನ ಕಾಲೇಜು
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » Chitradurga: ಉಪನ್ಯಾಸಕರಿಲ್ಲದೆ ಸೊರಗುತ್ತಿದೆ ಸರ್ಕಾರಿ ವಿಜ್ಞಾನ ಕಾಲೇಜು

ಮುಖ್ಯ ಸುದ್ದಿ

Chitradurga: ಉಪನ್ಯಾಸಕರಿಲ್ಲದೆ ಸೊರಗುತ್ತಿದೆ ಸರ್ಕಾರಿ ವಿಜ್ಞಾನ ಕಾಲೇಜು

chitradurganews.com
Last updated: 24 September 2024 16:36
chitradurganews.com
9 months ago
Share
Government Scince college
ಸರ್ಕಾರಿ ವಿಜ್ಞಾನ ಕಾಲೇಜು
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 24 SEPTEMBER 2024

ಚಿತ್ರದುರ್ಗ: (Chitradurga) ಐತಿಹಾಸಿಕ ಸರ್ಕಾರಿ ವಿಜ್ಞಾನ ಕಾಲೇಜು ರಾಜ್ಯದಲ್ಲಿ ತನ್ನದೇ ಆದ ಮಹತ್ವವನ್ನು ಹೊಂದಿದ್ದು ಯಶಸ್ವಿ 75ವರ್ಷ ಪೂರೈಸಿದೆ.

ಇಂತಹ ಕಾಲೇಜಿನಲ್ಲಿ ಈ ವರ್ಷ ವಿದ್ಯಾರ್ಥಿಗಳ ದಾಖಲಾತಿ ಕೊರತೆ ಒಂದು ಕಡೆಯಾದರೆ, ಉಪನ್ಯಾಸಕರ ವರ್ಗಾವಣೆಯಿಂದ ಅನೇಕ ವಿಷಯಗಳಿಗೆ ಬೋಧನೆ ಮಾಡಲು ಸಿಬ್ಬಂದಿ ಇಲ್ಲವಾಗಿದ್ದಾರೆ. ಅತಿಥಿ ಉಪನ್ಯಾಸಕರ ನೇಮಕವೂ ಆಗದೆ ಕಾಲೇಜು ಸೊರಗುತ್ತಿದೆ ಎಂದು ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಪ್ರಕಾಶ್ ರಾಮಾನಾಯ್ಕ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಶ್ರೀ ಶಿವಕುಮಾರ ಸ್ವಾಮೀಜಿ ಹುಟ್ಟೂರಿಗೆ ಭದ್ರೆ | ನೆರವೇರಿದ ಶ್ರೀ ಶಿವಮೂರ್ತಿ ಶಿವಾಚಾರ್ಯ ಶ್ರೀಗಳ ಸಂಕಲ್ಪ

ಈ ಕಾಲೇಜು ಲಕ್ಷಾಂತರ ವಿಧ್ಯಾರ್ಥಿಗಳಿಗೆ ಶಿಕ್ಷಣ ನೀಡಿದ್ದು, ಅನೇಕರು ಅತ್ಯುನ್ನತ ಸ್ಥಾನಗಳಲ್ಲಿದ್ದಾರೆ. ಇಂತಹ ಹಿನ್ನೆಲೆ ಹೊಂದಿರುವ ಕಾಲೇಜಿನಲ್ಲಿ ಈಗಲೂ ಸಾವಿರಾರು ವಿಧ್ಯಾರ್ಥಿಗಳು ಪ್ರವೇಶ ಪಡೆದು ಶಿಕ್ಷಣ ಪಡೆಯುತ್ತಿದ್ದಾರೆ.

ಕಾಲೇಜಿನಲ್ಲಿ ಬಹುತೇಕ ವಿಜ್ಞಾನಕ್ಕೆ ಸಂಬಂಧಿಸಿದ ಎಲ್ಲಾ ವಿಭಾಗಗಳು ಕಾರ್ಯನಿರ್ವಹಿಸುತ್ತಿದ್ದು ಬಡ ವಿಧ್ಯಾರ್ಥಿಗಳಿಗೆ ಆಶಾಕಿರಣವಾಗಿದೆ. ರಾಜ್ಯ ಸರ್ಕಾರ ಯಾವುದೇ ಬಡ ವಿದ್ಯಾರ್ಥಿಗಳು ಕಾಲೇಜಿಗೆ ಪ್ರವೇಶ ಬಯಸಿ ಬಂದಲ್ಲಿ ಅವರಿಗೆ ಪ್ರವೇಶ ನಿರಾಕರಿಸುವಂತಿಲ್ಲ ಎಂದು ಆದೇಶಿಸಿದೆ. ಈ ವರ್ಷ ಕಾಲೇಜಿಗೆ ಹಲವು ವಿಭಾಗದಲ್ಲಿ ವಿಧ್ಯಾರ್ಥಿಗಳು ಪ್ರವೇಶ ಬಯಸಿ ಬಂದರೂ ಅವರೆಲ್ಲರಿಗೂ ಹಲವು ಸಬೂಬು ಹೇಳಿ ಪ್ರಾಂಶುಪಾಲರು ಪ್ರವೇಶ ನಿರಾಕರಿಸಿ ಖಾಸಗಿ ಕಾಲೇಜಿಗೆ ಅನುಕೂಲ ಮಾಡಿದ್ದಾರೆ ಎಂದು ದೂರಿದ್ದಾರೆ.

ಇದನ್ನೂ ಓದಿ: ಬಿಎಸ್‍ಸಿ, ಜಿಎನ್‍ಎಂ ನರ್ಸಿಂಗ್ ಕೋರ್ಸ್ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

ಕಾಲೇಜಿನಲ್ಲಿ 2007-08 ರಿಂದ ರಸಾಯನಶಾಸ್ತ್ರ, ಬೌತಶಾಸ್ತ್ರ, ಸಸ್ಯಶಾಸ್ತ್ರ ಮತ್ತು ಗಣಿತ ವಿಭಾಗಗಳು ಕಾರ್ಯ ನಿರ್ವಹಿಸುತ್ತಿದ್ದು, ಇಡೀ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಅತ್ಯುತ್ತಮ ಸಾಧನೆ ಮಾಡುತ್ತಾ ಬರಲಾಗಿದೆ. ಈ ಸಾಧನೆಗೆ ಅತಿಥಿ ಮತ್ತು ಖಾಯಂ ಉಪನ್ಯಾಸಕರು ಕಾರಣಿಕರ್ತರಾಗಿದ್ದರು.

ಆದರೆ ಈ ಬಾರಿಯ ದಾಖಲಾತಿ ಕುಸಿತದಿಂದ ಕಾರ್ಯಭಾರ ಕಡಿಮೆಯಾಗಿದ್ದು ಸ್ನಾತಕೋತ್ತರ ವಿಭಾಗದ ಕಾರ್ಯಾಬಾರದ ಮಾಹಿತಿಯನ್ನು ಅತಿಥಿ ಉಪನ್ಯಾಸಕರ ನೇಮಕಾತಿಗಾಗಿ ಇಲಾಖೆಗೆ ಅಪ್ಲೋಡ್ ಮಾಡದೇ ಇನ್ಮೇನು ಕೆಲವೇ ದಿನಗಳಲ್ಲಿ ತರಗತಿಗಳು ಶುರುವಾದರು ಅತಿಥಿ ಉಪನ್ಯಾಸಕರ ನೇಮಕಾತಿ ಬೇಗ ಪೂರ್ಣಗೊಂಡರೂ ಸ್ನಾತಕೊತ್ತರ ವಿಭಾಗಗನುಗುಣವಾಗಿ ಕಾರ್ಯಾಭಾರಕ್ಕೆ ಅತಿಥಿ ಉಪನ್ಯಾಸಕರು ನೇಮಕವಾಗುವುದಿಲ್ಲ.

ಇದನ್ನೂ ಓದಿ: ಜಿಲ್ಲಾ ಪಂಚಾಯಿತಿ ಚುನಾವಣೆಗೆ ಕಾರ್ಯಕರ್ತರು ಸಜ್ಜಾಗಿ | ವಿಜಯೇಂದ್ರ ಕರೆ

ಹೀಗಿರುವಾಗ ಮೊನ್ನೆ ಕಾಲೇಜು ಶಿಕ್ಷಣ ಇಲಾಖೆಯಿಂದ ನಡೆದ ವರ್ಗಾವಣೆಯಿಂದಾಗಿ ಈ ಕಾಲೇಜಿನ ಹಲವು ಖಾಯಂ ಉಪನ್ಯಾಸಕರು ವರ್ಗಾವಣೆಯಾಗಿದ್ದಾರೆ.

ಕೆಲವು ಸ್ನಾತಕೊತ್ತರ ವಿಭಾಗಕ್ಕೆ ಯಾವುದೇ ಉಪನ್ಯಾಸಕರು ಇಲ್ಲದೆಯೇ ಇಡೀ ವಿಭಾಗಗಳು ಅಳಿವಿನಂಚಿಗೆ ತಲುಪಿ ಮುಚ್ಚುವ ಪರಿಸ್ಥಿತಿ ಒದಗಿ ಬರಲಿದೆ.

ಇದನ್ನೂ ಓದಿ: ಮೂಲ ಸೌಲಭ್ಯ ಅಭಿವೃದ್ಧಿಗೆ ಜಿಲ್ಲೆಯ 87 ಗ್ರಾಮಗಳ ಆಯ್ಕೆ

ಇತ್ತ ಖಾಯಾಂ ಉಪನ್ಯಾಸಕರೂ ಇಲ್ಲ, ಅತ್ತ ಅತಿಥಿ ಉಪನ್ಯಾಸಕರೂ ಇಲ್ಲದಂತಾಗಿ ಸರ್ಕಾರಿ ವಿಜ್ಞಾನ ಕಾಲೇಜು ಸೊರಗುತ್ತಿದೆ. ಉನ್ನತ ಶಿಕ್ಷಣ ಇಲಾಖೆ ಆಯುಕ್ತರು ಮತ್ತು ಸಚಿವರಾದ ಎಂ.ಸಿ.ಸುಧಾಕರ್ ಕಾಲೇಜಿನಲ್ಲಿ ಉಳಿದಿರುವ ಉಪನ್ಯಾಸಕರನ್ನು ವರ್ಗಾವಣೆಗೊಳಿಸದೇ ಅಲ್ಲಿಯೇ ಮುಂದುವರೆಸಲು ಅವಕಾಶ ನೀಡಬೇಕು ಎಂದು ಪ್ರಕಾಶ್ ರಾಮಾನಾಯ್ಕ್ ಮನವಿ ಮಾಡಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChitradurgaChitradurga newsChitradurga UpdatesGovernment Science CollegeGuest LecturerKannada Latest NewsLecturer ShortagePrakash Ramanayakeಅತಿಥಿ ಉಪನ್ಯಾಸಕರುಉಪನ್ಯಾಸಕರ ಕೊರತೆಕನ್ನಡ ಲೇಟೆಸ್ಟ್ ನ್ಯೂಸ್ಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ಚಿತ್ರದುರ್ಗ ನ್ಯೂಸ್ಪ್ರಕಾಶ್ ರಾಮಾನಾಯ್ಕ್ಸರ್ಕಾರಿ ವಿಜ್ಞಾನ ಕಾಲೇಜು
Share This Article
Facebook Email Print
Previous Article Sirigere Taralabalu bruhanmata Sirigere Swamiji: ಶಿವಕುಮಾರ ಸ್ವಾಮೀಜಿ ಹುಟ್ಟೂರಿಗೆ ಭದ್ರೆ | ನೆರವೇರಿದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಸಂಕಲ್ಪ
Next Article Davanagere univercity Davangere University ಅಧ್ಯಾಪಕರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ
Leave a Comment

Leave a Reply Cancel reply

Your email address will not be published. Required fields are marked *

ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up