CHITRADURGA NEWS | 30 SEPTEMBER 2024
ಹೊಳಲ್ಕೆರೆ: ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಅಕ್ಷರ ದಾಸೋಹ, ಅಜೀಂ ಪ್ರೇಂಜಿ ಫೌಂಡೇಷನ್ ವತಿಯಿಂದ ಪಟ್ಟಣದ ಸಂವಿಧಾನ ಸೌಧದಲ್ಲಿ ತಾಲ್ಲೂಕಿನ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮಕ್ಕಳಿಗೆ ವಾರದಲ್ಲಿ ಆರು ದಿನಗಳ ಕಾಲ ನೀಡುವ ಪೌಷ್ಠಿಕಾಂಶ ಆಹಾರ(Nutritious Food) ವಿತರಣೆಗೆ ಶಾಸಕ ಎಂ. ಚಂದ್ರಪ್ಪ ಸೋಮವಾರ ಚಾಲನೆ ನೀಡಿದರು.
ಕ್ಲಿಕ್ ಮಾಡಿ ಓದಿ: Rain Report: ಹಿರೇಗುಂಟನೂರು ವ್ಯಾಪ್ತಿಯಲ್ಲಿ 33 ಮಿ.ಮೀ ಮಳೆ

ನಂತರ ಮಾತನಾಡಿದ ಅವರು, ಮಕ್ಕಳಿಗೆ ಆರು ದಿನಗಳ ಕಾಲ ಮೊಟ್ಟೆ ಮತ್ತು ಬಾಳೆಹಣ್ಣು ನೀಡುವ ರಾಜ್ಯ ಸರ್ಕಾರದ ಯೋಜನೆ ಅತ್ಯುತ್ತಮವಾದುದ್ದು. ಸರ್ಕಾರ ಮಕ್ಕಳಿಗೆ ಪಠ್ಯ ಪುಸ್ತಕ, ಶೂ, ಸಾಕ್ಸ್ ನೀಡುತ್ತಿದೆ. ಸರ್ಕಾರದಿಂದ ಸಿಗುವ ಎಲ್ಲಾ ರೀತಿಯ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ತಂದೆ-ತಾಯಿ, ಗುರು-ಹಿರಿಯರು ಹಾಗೂ ನೀವುಗಳು ಓದಿದ ಶಾಲೆಗೆ ಗೌರವ ತರುವ ರೀತಿಯಲ್ಲಿ ನಡೆದುಕೊಳ್ಳಬೇಕು ಎಂದರು.
ಮಕ್ಕಳಿಗೆ ಗುಣ ಮಟ್ಟದ ಶಿಕ್ಷಣ ನೀಡಿ ಮುಂದಿನ ಭವಿಷ್ಯ ರೂಪಿಸುವ ಹೊಣೆಗಾರಿಕೆ ಶಿಕ್ಷಕರುಗಳ ಮೇಲಿದೆ, ಪಟ್ಟಣದಲ್ಲಿ ಗುಣಮಟ್ಟದ ಶಾಲಾ-ಕಾಲೇಜು, ಸ್ಟೇಡಿಯಂ, ಒಳಾಂಗಣ ಕ್ರೀಡಾಂಗಣ, ಈಜುಕೊಳ ನಿರ್ಮಿಸಲಾಗಿದೆ. ಸರ್ಕಾರದ ಎಲ್ಲಾ ಯೋಜನೆಗಳು ನಿಮಗೆ ತಲುಪಲಿ. ಮಕ್ಕಳ ಮನಸ್ಸಿಗೆ ನಾಟುವ ರೀತಿಯಲ್ಲಿ ಪಾಠ ಹೇಳಿಕೊಡುವಂತೆ ಶಿಕ್ಷಕರುಗಳಿಗೆ ಸೂಚಿಸಿದರು.
ಕ್ಲಿಕ್ ಮಾಡಿ ಓದಿ: Horticulture Department; ತೋಟಗಾರಿಕೆ ಇಲಾಖೆಯಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
ಈ ಸಂದರ್ಭದಲ್ಲಿ ಪುರುಸಭೆ ಸದಸ್ಯರುಗಳಾದ ಆರ್.ಎ.ಅಶೋಕ್, ಸುಧಾ ಬಸವರಾಜ್, ತಾಲ್ಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಶ್ವನಾಥ್, ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಶ್ರೀನಿವಾಸ್, ಬಿಆರ್ ಸಿ ಎಸ್. ಸುರೇಂದ್ರನಾಥ, ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ರೂ.3.9 ಕೋಟಿ ವೆಚ್ಚದ ಪೊಲೀಸ್ ವಸತಿ ಗೃಹಗಳ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ
ತಾಲ್ಲೂಕಿನ ಚಿತ್ರಹಳ್ಳಿ ಗೇಟ್ನಲ್ಲಿ 3.9 ಕೋಟಿ ರೂ.ವೆಚ್ಚದಲ್ಲಿ ಪೊಲೀಸ್ ವಸತಿ ಗೃಹಗಳ ನಿರ್ಮಾಣ ಕಾಮಗಾರಿಗೆ ಸೋಮವಾರ ಶಾಸಕ ಎಂ. ಚಂದ್ರಪ್ಪ ಭೂಮಿ ಪೂಜೆ ಸಲ್ಲಿಸಿದರು.

ಈ ವೇಳೆ ಹೆಚ್ಚುವರಿ ರಕ್ಷಣಾಧಿಕಾರಿ ಕುಮಾರಸ್ವಾಮಿ, ವೃತ್ತ ನಿರೀಕ್ಷಕ ಚಿಕ್ಕಣ್ಣ, ಚಿತ್ರಹಳ್ಳಿ ಪೊಲೀಸ್ ಠಾಣೆ ಸಬ್ಇನ್ಸ್ಪೆಕ್ಟರ್ ಕಾಂತರಾಜ್, ಚಿತ್ರಹಳ್ಳಿ ದೇವರಾಜ್, ಈಶಣ್ಣ, ಅಂಕಳಪ್ಪ, ನಾಗರಾಜ್, ಪ್ರವೀಣ್, ರಂಗಸ್ವಾಮಿ ಇದ್ದರು.
ಭರಮಸಾಗರದಲ್ಲಿ ನೂತನವಾಗಿ ನಿರ್ಮಿಸಿರುವ ಹಾಪ್ಕಾಮ್ಸ್ ಮಳಿಗೆ ಉದ್ಘಾಟನೆ
ತಾಲೂಕಿನ ಭರಮಸಾಗರದಲ್ಲಿ ನೂತನವಾಗಿ ನಿರ್ಮಿಸಿರುವ ಹಾಪ್ಕಾಮ್ಸ್ ಮಳಿಗೆಗಳನ್ನು ಸೋಮವಾರ ಶಾಸಕ ಎಂ. ಚಂದ್ರಪ್ಪ ಉದ್ಘಾಟಿಸಿದರು.

ಕ್ಲಿಕ್ ಮಾಡಿ ಓದಿ: ksrtc bus accident: ಕೆಎಸ್ಆರ್ಟಿಸಿ ಬಸ್ ಪಲ್ಟಿ | ಪ್ರಯಾಣಿಕರ ರಕ್ಷಣೆಗೆ ಮುಂದಾದ ಸ್ಥಳೀಯರು
ಈ ಸಂದರ್ಭದಲ್ಲಿ ಚಿತ್ರದುರ್ಗ ಹಾಪ್ಕಾಮ್ಸ್ ಅಧ್ಯಕ್ಷ ಕೆ.ಎಂ.ತಿಪ್ಪೇಸ್ವಾಮಿ, ಭರಮಸಾಗರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರತ್ನಮ್ಮ, ಟಿ.ಎ.ಪಿ.ಸಿ.ಎಂ.ಎಸ್. ಅಧ್ಯಕ್ಷ ಮಂಜುನಾಥ್, ತೋಟಗಾರಿಕೆ ಉಪ ನಿರ್ದೇಶಕ ಶರಣಬಸಪ್ಪ, ರುದ್ರಪ್ಪ, ಹಾಪ್ಕಾಮ್ಸ್ ನಿರ್ದೇಶಕರುಗಳು ಇದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
