By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: Cereal Cooking Competition: ನ.13ರಂದು ಜಿಲ್ಲಾ ಸಿರಿಧಾನ್ಯ ಪಾಕ ಸ್ಪರ್ಧೆ | ಅರ್ಜಿ ಆಹ್ವಾನ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » Cereal Cooking Competition: ನ.13ರಂದು ಜಿಲ್ಲಾ ಸಿರಿಧಾನ್ಯ ಪಾಕ ಸ್ಪರ್ಧೆ | ಅರ್ಜಿ ಆಹ್ವಾನ

ಮುಖ್ಯ ಸುದ್ದಿ

Cereal Cooking Competition: ನ.13ರಂದು ಜಿಲ್ಲಾ ಸಿರಿಧಾನ್ಯ ಪಾಕ ಸ್ಪರ್ಧೆ | ಅರ್ಜಿ ಆಹ್ವಾನ

News Desk Chitradurga News
Last updated: 7 November 2024 06:32
News Desk Chitradurga News
8 months ago
Share
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 07 NOVEMBER 2024

ಚಿತ್ರದುರ್ಗ: ಜಿಲ್ಲಾ ಮಟ್ಟದಲ್ಲಿ ಸಿರಿಧಾನ್ಯ ಮತ್ತು ಮರೆತುಹೋದ ಖಾದ್ಯಗಳ ಪಾಕ ಸ್ಪರ್ಧೆ(Cereal Cooking Competition)ಯನ್ನು ಕೃಷಿ ಇಲಾಖೆಯಿಂದ ನವೆಂಬರ್ 13ರಂದು ಬೆಳಿಗ್ಗೆ 10ಕ್ಕೆ ನಗರದ ಎಪಿಎಂಸಿ ಯಾರ್ಡ್ ಹತ್ತಿರದ ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಏರ್ಪಡಿಸಲಾಗಿದ್ದು, ಈ ಸಂಬಂಧ ಅರ್ಜಿ ಆಹ್ವಾನಿಸಲಾಗಿದೆ.

ಕ್ಲಿಕ್ ಮಾಡಿ ಓದಿ: ಅಡಿಕೆ ಧಾರಣೆ | ಮತ್ತೆ ಇಳಿಕೆಯ ಹಾದಿ ಹಿಡಿದ ರಾಶಿ

ಸಿರಿಧಾನ್ಯ ಮತ್ತು ಸಾವಯವ ಅಂತರಾಷ್ಟ್ರೀಯ ವಾಣಿಜ್ಯ ಮೇಳ – 2025 ರ ಅಂಗವಾಗಿ ರಾಜ್ಯಮಟ್ಟದ ಸಿರಿಧಾನ್ಯ ಮತ್ತು ಮರೆತುಹೋದ ಖಾದ್ಯಗಳ ಪಾಕ ಸ್ಪರ್ಧೆಯ ಪೂರ್ವಭಾವಿಯಾಗಿ ಆಯೋಜಿಸಲಾಗಿದೆ.

ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು, ಕೃಷಿ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಹೊರುಪಡಿಸಿ, ಜಿಲ್ಲೆಯ ಎಲ್ಲಾ ಸಾರ್ವಜನಿಕರಿಗೆ ಭಾಗವಹಿಸಲು ಅವಕಾಶವಿರುತ್ತದೆ.

ಅಭ್ಯರ್ಥಿಗಳು ತಮ್ಮ ಭಾವ ಚಿತ್ರದೊಂದಿಗೆ ಹೆಸರು, ವಿಳಾಸ ಮತ್ತು ತಯಾರಿಸುವ ಖಾದ್ಯ, ಬೇಕಾಗುವ ಸಾಮಗ್ರಿಗಳು, ತಯಾರಿಸಲು ಬೇಕಾಗುವ ಸಮಯ ಹಾಗೂ ತಯಾರಿಸುವ ವಿಧಾನದ ಸಂಕ್ಷಿಪ್ತ ಮಾಹಿತಿಯೊಂದಿಗೆ ಅರ್ಜಿಯನ್ನು 2024ರ ನವೆಂಬರ್ 12 ರೊಳಗೆ ಇ-ಮೇಲ್ ವಿಳಾಸ jdagricta@yahoo.co.in ಅಥವಾ ಖುದ್ದಾಗಿ, ಪೋಸ್ಟ್ ಮುಖಾಂತರ ಜಂಟಿ ಕೃಷಿ ನಿರ್ದೇಶಕರ ಕಛೇರಿ, ಎ.ಪಿ.ಎಂ.ಸಿ ರಸ್ತೆ, ಚಿತ್ರದುರ್ಗ – 577501 ವಿಳಾಸಕ್ಕೆ ಕಳುಹಿಸಬೇಕು.

ಕ್ಲಿಕ್ ಮಾಡಿ ಓದಿ: ನ.9 ರಂದು ಪ್ರಧಾನ ಅಂಚೆ ಕಚೇರಿಯಲ್ಲಿ ಉಚಿತ ಜೀವನ ಪ್ರಮಾಣ ಪತ್ರ ಅಭಿಯಾನ

ಸ್ಪರ್ಧೆಯಲ್ಲಿ ಭಾವಹಿಸುವ ಅಭ್ಯರ್ಥಿಗಳಿಗೆ ಸೂಚನೆಗಳು:

ಪ್ರತಿ ಸ್ಪರ್ಧಿಗೆ ಒಂದೇ ತಿನಿಸು ಸಿಹಿ ಅಥವಾ ಖಾರ ಅಥವಾ ಮರೆತುಹೋದ ಖಾದ್ಯಗಳ ತಿನಿಸು ಮಾಡಲು ಅವಕಾಶವಿರುತ್ತದೆ ತಮ್ಮ ಅರ್ಜಿಯಲ್ಲಿ ನಮೂದಿಸಿದ ತಿನಿಸುಗಳನ್ನು, ಮನೆಯಲ್ಲಿಯೇ ತಯಾರಿಸಿ, 2024ರ ನವೆಂಬರ್ 13ರಂದು ಜಂಟಿ ಕೃಷಿ ನಿರ್ದೇಶಕರ ಕಛೇರಿಯಲ್ಲಿ ಸರಿಯಾಗಿ ಬೆಳಿಗ್ಗೆ 10ಕ್ಕೆ ಪ್ರದರ್ಶಿಸುವುದು.

ಪ್ರದರ್ಶಿಸುವ ಮುನ್ನ ಬೆಳಿಗ್ಗೆ 9 ಗಂಟೆಗೆ ನೊಂದಾವಣೆ ಮಾಡಬೇಕು. 2023-24ನೇ ಸಾಲಿನಲ್ಲಿ ಸಿರಿಧಾನ್ಯ ಪಾಕ ಸ್ಪರ್ಧೆಯಲ್ಲಿ ಭಾಗವಹಿಸಿ ರಾಜ್ಯ ಮಟ್ಟದಲ್ಲಿ ಮೊದಲನೇ, ದ್ವಿತೀಯ ಮತ್ತು ತೃತೀಯ ಬಹುಮಾನ ಪಡೆದ ಸ್ಪರ್ಧಿಗಳಿಗೆ ಪ್ರಸ್ತುತ ವರ್ಷದಲ್ಲಿ ಭಾಗವಹಿಸಲು ಅವಕಾಶವಿರುವುದಿಲ್ಲ. ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯದ ಸಸ್ಯಹಾರಿ ತಿನಿಸುಗಳಿಗೆ ಮಾತ್ರ ಅವಕಾಶವಿರುತ್ತದೆ.

ತಯಾರಿಸಿದ ತಿನಿಸುಗಳ ಪ್ರದರ್ಶನ ತಯಾರಿಕೆಗೆ ಬಳಸಿದ ಸಾಮಗ್ರಿಗಳು, ತೋರಿಕೆ, ರುಚಿ, ಸುವಾಸನೆ, ಪೌಷ್ಠಿಕತೆಗಳ ಮೇಲೆ ಅಂತಿಮ ತೀರ್ಪು ಕೈಗೊಳ್ಳಲಾಗುವುದು. ತೀರ್ಪುಗಾರರ ನಿರ್ಧಾರವೇ ಅಂತಿಮವಾಗಿರುತ್ತದೆ. ಜಿಲ್ಲಾ ಮಟ್ಟದಲ್ಲಿ ಅತ್ಯುತ್ಯಮ ಒಂದು ಸಿಹಿ, ಖಾರ (ಸಿರಿಧಾನ್ಯ ಖಾದ್ಯಗಳಿಗೆ ಮಾತ್ರ) ಮತ್ತು ಮರೆತು ಹೋದ ಖಾದ್ಯದ ತಿನಿಸನ್ನು ಆಯ್ಕೆ ಮಾಡಲಾಗುವುದು.

ಕ್ಲಿಕ್ ಮಾಡಿ ಓದಿ: ಗ್ರಾ.ಪಂ ಉಪಚುನಾವಣೆ | ವೇಳಾಪಟ್ಟಿ ಪ್ರಕಟ

ಜಿಲ್ಲಾ ಮಟ್ಟಕ್ಕೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನ ಸಿಹಿ, ಖಾರ (ಸಿರಿಧಾನ್ಯ ಖಾದ್ಯಗಳಿಗೆ ಮಾತ್ರ) ಮತ್ತು ಮರೆತು ಹೋದ ಖಾದ್ಯಗಳ ತಿನಿಸಿಗೆ ತಲಾ ರೂ.5000/-, 3000/- ಹಾಗೂ 2000/- ಗಳನ್ನು ನೀಡಲಾಗುವುದು.

ರಾಜ್ಯ ಮಟ್ಟದ ಸ್ಪರ್ಧೆಯನ್ನು ಬೆಂಗಳೂರಿನಲ್ಲಿ ಏರ್ಪಡಿಸಲಾಗುತ್ತದೆ. ರಾಜ್ಯ ಮಟ್ಟದ “ಸಿರಿಧಾನ್ಯ” ಮತ್ತು “ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆ” ಯಲ್ಲಿ ಜಿಲ್ಲಾ ಮಟ್ಟದ ಪ್ರಥಮ ಬಹುಮಾನ ವಿಜೇತರು ಸ್ವತಃ ತಿನಿಸನ್ನು ತಯಾರಿಸಲು ಅವಶ್ಯವಿರುವ ಸಾಮಗ್ರಿಗಳೊಂದಿಗೆ ಸಿದ್ದರಿರಬೇಕು.

ಜಿಲ್ಲಾ ಮಟ್ಟದಲ್ಲಿ ಪ್ರಥಮ ಬಹುಮಾನ ಪಡೆದವರು ನಿಗಧಿತ ದಿನಾಂಕದಂದು ಬೆಂಗಳೂರಿನಲ್ಲಿ ಏರ್ಪಡಿಸುವ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು.

ಕ್ಲಿಕ್ ಮಾಡಿ ಓದಿ: ಜಾನುಕೊಂಡ ಗ್ರಾಪಂ ನೂತನ ಅಧ್ಯಕ್ಷರಾಗಿ‌ ಮಂಜುಳಾ ಸ್ವಾಮಿ ಆಯ್ಕೆ

ಖಾದ್ಯವನ್ನು ತಯಾರಿಸಲು ಬೇಕಾಗುವ ಸಾಮಗ್ರಿಗಳನ್ನು ತಾವೇ ತೆಗೆದುಕೊಂಡು, ನಿಗಧಿತ ಸ್ಥಳ ಹಾಗೂ ಸಮಯದಲ್ಲಿ ಖುದ್ದಾಗಿ ಖಾದ್ಯವನ್ನು ಅಲ್ಲಿಯೇ ತಯಾರಿಸಲು ಸಿದ್ದರಾಗಿರಬೇಕು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ApplicationCerealChitradurgaChitradurga newsChitradurga UpdatesCooking CompetitionDepartment of AgricultureedibleKannada Latest NewsKannada Newsಅರ್ಜಿಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಕೃಷಿ ಇಲಾಖೆಖಾದ್ಯಚಿತ್ರದುರ್ಗಚಿತ್ರದುರ್ಗ ನ್ಯೂಸ್ಪಾಕ ಸ್ಪರ್ಧೆಸಿರಿಧಾನ್ಯ
Share This Article
Facebook Email Print
Previous Article Upper Bhadra Project UpperBhadraProject: ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದ ಅನುದಾನ ಕಡಿತ ! ಇಲ್ಲಿವೆ ಸುಲಭವಾಗಿ ಅರ್ಥವಾಗುವ 8 ಅಂಶಗಳು
Next Article SharanaBasappa bogi Horticulture: ತೊಟಗಾರಿಕೆ ಇಲಾಖೆ ಉಪನಿರ್ದೇಶಕ ಶರಣಬಸಪ್ಪ ಬೋಗಿ ಅಮಾನತು
Leave a Comment

Leave a Reply Cancel reply

Your email address will not be published. Required fields are marked *

ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up