By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: Traffic: ಚಿತ್ರದುರ್ಗದಲ್ಲಿ ಬಸ್ ಸಂಚಾರ ವ್ಯವಸ್ಥೆ ಬದಲಾವಣೆ | ಟ್ರಾಫಿಕ್ ಸಮಸ್ಯೆ ಮುಕ್ತಿಗೆ ಜಿಲ್ಲಾಡಳಿತ ನಿರ್ಧಾರ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » Traffic: ಚಿತ್ರದುರ್ಗದಲ್ಲಿ ಬಸ್ ಸಂಚಾರ ವ್ಯವಸ್ಥೆ ಬದಲಾವಣೆ | ಟ್ರಾಫಿಕ್ ಸಮಸ್ಯೆ ಮುಕ್ತಿಗೆ ಜಿಲ್ಲಾಡಳಿತ ನಿರ್ಧಾರ

ಮುಖ್ಯ ಸುದ್ದಿ

Traffic: ಚಿತ್ರದುರ್ಗದಲ್ಲಿ ಬಸ್ ಸಂಚಾರ ವ್ಯವಸ್ಥೆ ಬದಲಾವಣೆ | ಟ್ರಾಫಿಕ್ ಸಮಸ್ಯೆ ಮುಕ್ತಿಗೆ ಜಿಲ್ಲಾಡಳಿತ ನಿರ್ಧಾರ

chitradurganews.com
Last updated: 11 November 2024 18:55
chitradurganews.com
8 months ago
Share
Gandhi circle chitradurga
ಗಾಂಧಿವೃತ್ತ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 11 NOVEMBER 2024

ಚಿತ್ರದುರ್ಗ: ಐತಿಹಾಸಿಕ ನಗರ ಚಿತ್ರದುರ್ಗದಲ್ಲಿ ರಸ್ತೆಗಳು ಕಿರಿದಾಗಿದ್ದು, ಸಾಕಷ್ಟು ಜನದಟ್ಟಣೆ, ವಾಹನ (Traffic) ದಟ್ಟಣೆ ಕಾರಣಕ್ಕೆ ಸಂಚಾರ ಸಮಸ್ಯೆ ತೀವ್ರವಾಗುತ್ತಲೇ ಇದೆ.

ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ, ಪೊಲೀಸ್ ಇಲಾಖೆ ಹಾಗೂ ನಗರಸಭೆ ಸಾಕಷ್ಟು ಪ್ರಯತ್ನ ನಡೆಸಿದರೂ ಪ್ರಯೋಜನವಾಗಿಲ್ಲ. ಈಗ ನಗರದ ಮುಖ್ಯ ರಸ್ತೆಗಳಲ್ಲಿ ಬಸ್ಸುಗಳ ಸಂಚಾರ ನಿಷೇಧಿಸಲು ತೀರ್ಮಾನಿಸಲಾಗಿದೆ.

ಇದನ್ನೂ ಓದಿ: ಚಿತ್ರದುರ್ಗ ಮಾರುಕಟ್ಟೆ | ಇಂದಿನ ಮೆಕ್ಕೆಜೋಳ, ಶೇಂಗಾ, ಸೂರ್ಯಕಾಂತಿ ರೇಟ್ 

ನಗರದ ಬಿ.ಡಿ.ರಸ್ತೆ, ಮೆದೇಹಳ್ಳಿ ರಸ್ತೆ, ಹೊಳಲ್ಕೆರೆ ರಸ್ತೆಗಳ ಮೂಲಕ ksrtc, ಖಾಸಗಿ ಬಸ್ಸುಗಳು ಆಗಮಿಸಿ ಗಾಂಧಿ ವೃತ್ತದ ಮೂಲಕ ಕೆಎಸ್‍ಆರ್‍ಟಿಸಿ ಹಾಗೂ ಖಾಸಗಿ ಬಸ್ ನಿಲ್ದಾಣಕ್ಕೆ ಹೋಗುವುದು, ಬರುವುದು ಸಾಮಾನ್ಯ.

ಇನ್ನು ಮುಂದೆ ಹೆದ್ದಾರಿಯನ್ನು ಬಳಸಿ ನಗರ ಪ್ರವೇಶಿಸಿ, ಹೆದ್ದಾರಿ ಮೂಲಕವೇ ಚಿತ್ರದುರ್ಗ ನಗರದಂದ ಹೊರಗೆ ಹೋಗುವಂತೆ ಸಂಚಾರ ವ್ಯವಸ್ಥೆ ಬದಲಾವಣೆ ಮಾಡಲು ಜಿಲ್ಲಾಧಿಕಾರಿ ನೇತೃತ್ವದಲ್ಲಿ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಮಹತ್ವದ ತೀರ್ಮಾನ ತೆಗೆದುಕೊಳ್ಳಲಾಗಿದೆ.

ಇದನ್ನೂ ಓದಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ

ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ ನಡೆಯಿತು.

ಈ ಸಭೆಯಲ್ಲಿ ಜಿಲ್ಲೆಯಲ್ಲಿ ಆಗುತ್ತಿರುವ ಅಪಘಾತ, ಅಸುರಕ್ಷಿತ ರಸ್ತೆಗಳು, ಟ್ರಕ್ ಟರ್ಮಿನಲ್, ಕಾಮಗಾರಿಗಳು, ನಿರ್ವಹಣೆ ಇತ್ಯಾದಿ ವಿಚಾರಗಳ ಬಗ್ಗೆ ಗಂಭೀರ ಚರ್ಚೆ ನಡೆಯಿತು.

ಇದನ್ನೂ ಓದಿ: 9. ಊರಿಗೊಬ್ಬ ಅಕ್ಕಸಾಲಿಯ ಆಗಮನ | ಹಬ್ಬಿದಾ ಮಲೆಮಧ್ಯದೊಳಗೆ

ಇದೇ ವೇಳೆ ಚಿತ್ರದುರ್ಗ ನಗರದಲ್ಲಿನ ಸಂಚಾರ ಸಮಸ್ಯೆ ಕುರಿತ ಚರ್ಚಿಸಿದ್ದು, ನಗರದ ಬಿ.ಡಿ.ರಸ್ತೆಯ ಮೂಲಕ ಬೆಂಗಳೂರು, ಶಿವಮೊಗ್ಗ ಹಾಗೂ ಚಳ್ಳಕೆರೆ ಮಾರ್ಗಗಳಿಗೆ ಸಂಚರಿಸುವ ಕೆ.ಎಸ್.ಆರ್.ಟಿ.ಸಿ ಹಾಗೂ ಖಾಸಗಿ ಬಸ್ಸುಗಳ ಸಂಚಾರ ಮಾರ್ಗದ ಬದಲಾವಣೆಗೆ ಸಭೆಯಲ್ಲಿ ತೀರ್ಮಾನಿಸಲಾಯಿತು.

ಪ್ರತಿ ದಿನ ಈಗ ನಗರದಲ್ಲಿ 1200 ಕ್ಕೂ ಹೆಚ್ಚು ಬಸ್‍ಗಳ ಸಂಚಾರ ಈ ಮಾರ್ಗಗಳಲ್ಲಿ ಆಗುತ್ತಿದೆ. ಇದರಿಂದಾಗಿ ಗಾಂಧಿ ವೃತ್ತ ಹಾಗೂ ಎಸ್.ಬಿ.ಐ ಬ್ಯಾಂಕ್ ವೃತ್ತದಲ್ಲಿ ಹೆಚ್ಚಿನ ಟ್ರಾಫಿಕ್ ಜಾಮ್ ಆಗುತ್ತಿದೆ.

ಇದನ್ನೂ ಓದಿ: ವಿದ್ಯಾರ್ಥಿಗಳು ರಾಮಾಯಣ, ಮಹಾಭಾರತ ಗ್ರಂಥ ಓದುವ ಹವ್ಯಾಸ ರೂಢಿಸಿಕೊಳ್ಳಿ | ತರಳಬಾಳು ಶ್ರೀ 

ಇದನ್ನು ತಪ್ಪಿಸಲು ಹಳೆಯ ರಾಷ್ಟ್ರೀಯ ಹೆದ್ದಾರಿ ಮಾರ್ಗವನ್ನು ಬಳಸಿಕೊಂಡು ಬಸ್ಸುಗಳು ಸಂಚಾರ ನಡೆಸುವಂತೆ ಶೀಘ್ರದಲ್ಲೇ ಜಿಲ್ಲಾಡಳಿತದಿಂದ ಆದೇಶ ಹೊರಡಿಸಲಾಗುತ್ತದೆ. ಈ ಸಭೆಯಲ್ಲಿ ಹಾಜರಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಅವರು ಕೂಡಾ ಈ ಸಲಹೆ ನೀಡಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:BD RoadBus Route ChangeChitradurga cityChitradurga newsCollector T. VenkateshDavangere RoadfeaturedHolalkere RoadKannada NewsKSRTCPrivate BusShimogaSP Ranjithkumar Bandarutraffic problemಎಸ್ಪಿ ರಂಜಿತ್‍ಕುಮಾರ್ ಬಂಡಾರುಕನ್ನಡ ಸುದ್ದಿಕೆಎಸ್‍ಆರ್‍ಟಿಸಿಖಾಸಗಿ ಬಸ್ಚಿತ್ರದುರ್ಗ ನಗರಚಿತ್ರದುರ್ಗ ನ್ಯೂಸ್ಜಿಲ್ಲಾಧಿಕಾರಿ ಟಿ.ವೆಂಕಟೇಶ್ಟ್ರಾಫಿಕ್ ಸಮಸ್ಯೆದಾವಣಗೆರೆ ರಸ್ತೆಬಸ್ ಮಾರ್ಗ ಬದಲಾವಣೆಬಿ.ಡಿ.ರಸ್ತೆಶಿವಮೊಗ್ಗಹೊಳಲ್ಕೆರೆ ರಸ್ತೆ
Share This Article
Facebook Email Print
Previous Article ಲಸಿಕೆಗಳು ಮಕ್ಕಳ ಮರಣ ತಪ್ಪಿಸುತ್ತವೆ | ಡಾ.ಡಿ.ಎಂ.ಅಭಿನವ್ Vaccines: ಲಸಿಕೆಗಳು ಮಕ್ಕಳ ಮರಣ ತಪ್ಪಿಸುತ್ತವೆ | ಡಾ.ಡಿ.ಎಂ.ಅಭಿನವ್
Next Article ವೀರವನಿತೆ ಒನಕೆ ಓಬವ್ವನ ಅದ್ದೂರಿ ಜಯಂತಿ Onake Obavva: ವೀರವನಿತೆ ಒನಕೆ ಓಬವ್ವನ ಅದ್ದೂರಿ ಜಯಂತಿ | ಸಚಿವ ಡಿ.ಸುಧಾಕರ್ ಭಾಗೀ
Leave a Comment

Leave a Reply Cancel reply

Your email address will not be published. Required fields are marked *

ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up