By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: laptop: ವಿಕಲಚೇತನರಿಗೆ ಶಾಸಕ ಎಂ.ಚಂದ್ರಪ್ಪ ತ್ರಿಚಕ್ರ ವಾಹನ, ಲ್ಯಾಪ್‍ಟಾಪ್‍ ವಿತರಣೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » laptop: ವಿಕಲಚೇತನರಿಗೆ ಶಾಸಕ ಎಂ.ಚಂದ್ರಪ್ಪ ತ್ರಿಚಕ್ರ ವಾಹನ, ಲ್ಯಾಪ್‍ಟಾಪ್‍ ವಿತರಣೆ

ಹೊಳಲ್ಕೆರೆ

laptop: ವಿಕಲಚೇತನರಿಗೆ ಶಾಸಕ ಎಂ.ಚಂದ್ರಪ್ಪ ತ್ರಿಚಕ್ರ ವಾಹನ, ಲ್ಯಾಪ್‍ಟಾಪ್‍ ವಿತರಣೆ

News Desk Chitradurga News
Last updated: 8 December 2024 09:04
News Desk Chitradurga News
7 months ago
Share
ಲ್ಯಾಪ್‍ಟಾಪ್‍ ವಿತರಣೆ
ಲ್ಯಾಪ್‍ಟಾಪ್‍ ವಿತರಣೆ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 08 DECEMBER 2024

ಹೊಳಲ್ಕೆರೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ವತಿಯಿಂದ ಪಟ್ಟಣದ ಉರ್ದು ಶಾಲೆ ಆವರಣದಲ್ಲಿ ಹಮ್ಮಿಕೊಂಡಿದ್ದ ಸಲಕರಣೆಗಳ ವಿತರಣಾ ಕಾರ್ಯಕ್ರಮದಲ್ಲಿ ಶಾಸಕ ಎಂ.ಚಂದ್ರಪ್ಪ ವಿಕಲಚೇತನರಿಗೆ ತ್ರಿಚಕ್ರ ವಾಹನ, ಲ್ಯಾಪ್‍ಟಾಪ್‍(laptop) ವಿತರಿಸಿದರು.

ಕ್ಲಿಕ್ ಮಾಡಿ ಓದಿ: 15 ದಿ‌ನ ದಿನ ಬಿಟ್ಟು ದಿನ ವಿದ್ಯುತ್ ವ್ಯತ್ಯಯ | ಎಲ್ಲೆಲ್ಲಿ..?

ನಂತರ ಮಾತನಾಡಿದ ಶಾಸಕರು, ವಿಕಲಚೇತನರು ಕೀಳರಿಮೆ ತೊರೆದು ಸಮಾಜದ ಮುಖ್ಯ ವಾಹಿನಿಗೆ ಬರಲಿ ಎನ್ನುವ ಉದ್ದೇಶದಿಂದ ಸರ್ಕಾರ ಹಲವಾರು ಸಲಕರಣೆಗಳನ್ನು ನೀಡುತ್ತಿದೆ. ಎಲ್ಲವನ್ನು ಸದ್ಬಳಕೆ ಮಾಡಿಕೊಂಡು ಸ್ವಾವಲಂಭಿಗಳಾಗಿ ಬದುಕಬೇಕು ಎಂದು ಹೇಳಿದರು.

ಸಾಮಾನ್ಯರಿಗಿಂತ ವಿಕಲಚೇತನರಿಗೆ ಹೆಚ್ಚಿನ ಬುದ್ದಿಶಕ್ತಿ, ಜ್ಞಾನರ್ಜಾನೆಯಿರುತ್ತದೆ. ಹಾಗಾಗಿ ಜೀವನದಲ್ಲಿ ಮುಂದೆ ಬರುವ ಪ್ರಯತ್ನ ಮಾಡುತ್ತಿರುತ್ತಾರೆ. ಸರ್ಕಾರ ಅಂಗವಿಕಲರಲ್ಲಿ ಆತ್ಮಸ್ಥೈರ್ಯ ತುಂಬುವುದಕ್ಕಾಗಿ ಒಂದು ಕೋಟಿ 90 ಲಕ್ಷ ರೂ.ಗಳ ವೆಚ್ಚದಲ್ಲಿ ಲ್ಯಾಪ್‍ಟಾಪ್, ತ್ರಿಚಕ್ರ ವಾಹನ, ಬ್ಯಾಟರಿ ಚಾಲಿತ ವೀಲ್‍ಚೇರ್‍ಗಳನ್ನು ನೀಡಿದೆ.

180 ವಿಕಲಚೇತನರಿಗೆ ಗಂಗಾ ಕಲ್ಯಾಣ ಯೋಜನೆಯಡಿ ಬೋರ್‍ವೆಲ್ ಕೊರೆಸಿ ಮೋಟಾರ್ ಕೊಡುವ ಕೆಲಸವಾಗುತ್ತಿದೆ. ಎಸ್ಟಿ ಕಾರ್ಪೊರೇಷನ್‍ನಿಂದ 200 ಕ್ಕೂ ಹೆಚ್ಚು ಪರಿಶಿಷ್ಟ ಜಾತಿಯ ವಿಕಲಚೇತನರಿಗೆ ಕೊಳವೆ ಬಾವಿಗಳನ್ನು ಮಂಜೂರು ಮಾಡಲಾಗಿದೆ. ಸರ್ಕಾರ ನಿಮಗೆ ನೀಡುವ ಸಲಕರಣೆಗಳು ದುರುಪಯೋಗವಾಗಬಾರದು, ನೀವುಗಳೇ ಬಳಸಿಕೊಳ್ಳಿ ಎಂದು ತಿಳಿಸಿದರು.

ಕ್ಲಿಕ್ ಮಾಡಿ ಓದಿ: ಡಾ.ಬಿ.ಆರ್.ಅಂಬೇಡ್ಕರ್ ಚಿಂತನೆ ಕುರಿತು ಎಬಿವಿಪಿ ಪ್ರಬಂಧ ಸ್ಪರ್ಧೆ | ಯಾರು ಭಾಗವಹಿಸಬಹುದು ಕ್ಲಿಕ್ ಮಾಡಿ ನೋಡಿ

ಈ ವೇಳೆ ಹೊಳಲ್ಕೆರೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ವಿಶ್ವನಾಥ್, ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ವೈಶಾಲಿ, ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ದಿ ನಿಗಮದ ತಾಲ್ಲೂಕು ಅಧಿಕಾರಿ ದೇವರಾಜ ಇದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChitradurgaChitradurga newsChitradurga UpdatesDisabilityHolalkereKannada Latest NewsKannada NewsLaptopMLA M. ChandrappaTricycleಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ತ್ರಿಚಕ್ರ ವಾಹನಲ್ಯಾಪ್‍ಟಾಪ್ವಿಕಲಚೇತನಶಾಸಕ ಎಂ.ಚಂದ್ರಪ್ಪಹೊಳಲ್ಕೆರೆ
Share This Article
Facebook Email Print
Previous Article today bhavishya Horoscope: ದಿನ ಭವಿಷ್ಯ | 08 ಡಿಸೆಂಬರ್ | ಇವತ್ತು ಯಾವ್ಯಾವ ರಾಶಿಗೆ ಹೇಗಿದೆ ದಿನ?
Next Article Habbida Malemadhyadolage Kannada Novel: 12. ಜಂಗಮಯ್ಯರ ಆಗಮನ
Leave a Comment

Leave a Reply Cancel reply

Your email address will not be published. Required fields are marked *

ಲಿಫ್ಟ್ ಹತ್ತಿದ ತಕ್ಷಣ ತಲೆ ಸುತ್ತುವವರು ಒಮ್ಮೆ ಈ ವಿಚಾರ ತಿಳಿದಿರಿ
Life Style
ಮಳೆಗಾಲದಲ್ಲಿ ಶೀತ ಮತ್ತು ಕೆಮ್ಮು ಬಂದಾಗ ಏನು ತಿನ್ನಬೇಕು ಮತ್ತು ಏನು ತಿನ್ನಬಾರದು? ಎಂಬುದನ್ನು ತಿಳಿಯಿರಿ
Life Style
ಹೆರಿಗೆಯ ನಂತರ ಬೇಗ ಚೇತರಿಸಿಕೊಳ್ಳಲು ಈ ಲಡ್ಡುಗಳನ್ನು ತಿನ್ನಿರಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 30 | ಉದ್ಯೋಗಗಳಲ್ಲಿ ಬಡ್ತಿ, ದೂರದ ಪ್ರಯಾಣ, ಆರೋಗ್ಯದಲ್ಲಿ ಎಚ್ಚರ
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up