By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಆದ್ಯತೆ ಮೇರೆಗೆ ಭದ್ರಾ ಮೇಲ್ದಂಡೆ ಯೋಜನೆ ಮೊದಲ ಹಂತ ಪೂರ್ಣ | ಸಚಿವ ಕೃಷ್ಣ ಬೈರೇಗೌಡ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಆದ್ಯತೆ ಮೇರೆಗೆ ಭದ್ರಾ ಮೇಲ್ದಂಡೆ ಯೋಜನೆ ಮೊದಲ ಹಂತ ಪೂರ್ಣ | ಸಚಿವ ಕೃಷ್ಣ ಬೈರೇಗೌಡ

ಮುಖ್ಯ ಸುದ್ದಿ

ಆದ್ಯತೆ ಮೇರೆಗೆ ಭದ್ರಾ ಮೇಲ್ದಂಡೆ ಯೋಜನೆ ಮೊದಲ ಹಂತ ಪೂರ್ಣ | ಸಚಿವ ಕೃಷ್ಣ ಬೈರೇಗೌಡ

News Desk Chitradurga News
Last updated: 18 December 2024 16:59
News Desk Chitradurga News
6 months ago
Share
Upper Bhadra Project
ಭದ್ರಾ ಮೇಲ್ದಂಡೆ ಯೋಜನೆ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 18 DECEMBER 2024

ಚಿತ್ರದುರ್ಗ: ಮಧ್ಯ ಕರ್ನಾಟಕ ಭಾಗದ ಬಹುದಿನದ ಬೇಡಿಕೆಯಾದ ಭದ್ರಾ ಮೇಲ್ದಂಡೆ ಯೋಜನೆಯ ಮೊದಲನೆ ಹಂತವನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸುವುದಾಗಿ ಸಚಿವ ಕೃಷ್ಣ ಬೈರೇಗೌಡ ಮಾಹಿತಿ ನೀಡಿದರು.

ಕ್ಲಿಕ್ ಮಾಡಿ ಓದಿ: FUNDOOS ವಾಟರ್ ಪಾರ್ಕ್‍ನಲ್ಲಿ ಮಸ್ತ್ ಮಜಾ ಮಾಡಿದ ಮಹಾನಟಿ ಗಗನ

ಮಂಗಳವಾರ ವಿಧಾನ ಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಶಾಸಕ ಎಂ.ಚಂದ್ರಪ್ಪನವರ ಚುಕ್ಕೆ ಗುರುತಿನ ಪ್ರಶ್ನೆಗೆ ಉಪ ಮುಖ್ಯಮಂತ್ರಿಗಳ ಪರವಾಗಿ ಅವರು ಉತ್ತರಿಸಿದರು.

2003ರಲ್ಲಿ ಯೋಜನೆಗೆ ರೂ.2813 ಕೋಟಿ ಮೊತ್ತಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿತ್ತು. ನಂತರ 2015 ರಲ್ಲಿ ಯೋಜನೆಯ ಪರಿಷ್ಕೃತ ಮೊತ್ತ ರೂ.12340 ಕೋಟಿಗೆ ಸರ್ಕಾರ ಅನುಮೋದನೆ ನೀಡಿದೆ. 2020 ರಲ್ಲಿ ಪರಿಷ್ಕೃತ ಯೋಜನೆ ಮೊತ್ತ ರೂ.21473.67 ಕೋಟಿಗೆ ಏರಿಕೆಯಾಗಿದೆ.

ಇದಕ್ಕೆ ತಕ್ಕಹಾಗೆ ಯೋಜನೆಯ ಮೂಲ ವ್ಯಾಪ್ತಿ ವಿಸ್ತೀರ್ಣ ಹಾಗೂ ಕುಡಿಯುವ ನೀರಿನ ಯೋಜನೆಗಳು ಸಹ ಸೇರ್ಪಡೆಯಾಗಿವೆ. 2027-28ನೇ ಸಾಲಿನ ಮಾರ್ಚ್ ಅಂತ್ಯಕ್ಕೆ ಯೋಜನೆ ಪೂರ್ಣಗೊಳಿಸಲು ಉದ್ದೇಶಿಸಲಾಗಿದ್ದು, ಇನ್ನೂ ರೂ.11,358.54 ಕೋಟಿ ಅನುದಾನ ಬೇಕಾಗುತ್ತದೆ.

ಕ್ಲಿಕ್ ಮಾಡಿ ಓದಿ: ಚಿತ್ರದುರ್ಗ ಮಾರುಕಟ್ಟೆ | ಇಂದಿನ ಮೆಕ್ಕೆಜೋಳ, ಶೇಂಗಾ, ಸೂರ್ಯಕಾಂತಿ ರೇಟ್

ಕೇಂದ್ರ ಸರ್ಕಾರ ಆಯವ್ಯಯದಲ್ಲಿ ಘೋಷಿಸಿದಂತೆ ರೂ.5300 ಕೋಟಿ ಅನುದಾನವನ್ನು ಇನ್ನೂ ಬಿಡುಗಡೆ ಮಾಡಿಲ್ಲ. ಅನುದಾನ ಲಭಿಸಿದರೆ ಯೋಜನೆ ಪೂರ್ಣಗೊಳಿಸಲು ಸಹಾಯವಾಗಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು.

1957 ರಲ್ಲಿ ದಿವಂಗತ ಮಾಜಿ ಮುಖ್ಯಮಂತ್ರಿ ನಿಜಲಿಂಗಪ್ಪನವರು ಮಧ್ಯ ಕರ್ನಾಟಕ ಬರ ಪೀಡಿತ ಜಿಲ್ಲೆಗಳಿಗೆ ನೀರನ್ನು ನೀಡಲು ಮಹತ್ವಾಂಕ್ಷೆ ಭದ್ರಾ ಯೋಜನೆಯ ಬಗ್ಗೆ ಚಿಂತಿಸಿದ್ದರು. 2003ರಲ್ಲಿ ಅನುಮೊದನೆ ನೀಡಿದ ಯೋಜನಾ ವೆಚ್ಚ ಇಂದು 21473.67 ಕೋಟಿಗಳಷ್ಟು ಹೆಚ್ಚಾಗಿದೆ.

ಇನ್ನೂ ತಡವಾದರೆ ಎಸ್.ಆರ್. ರೇಟ್ ಏರಿಕೆಯಾಗಿ ಯೋಜನೆ ವೆಚ್ಚವು ಇನ್ನೂ ಹೆಚ್ಚಾಗಲಿದೆ. ಪಕ್ಕದ ತೆಲಂಗಾಣ ರಾಜ್ಯದಲ್ಲಿನ ಸರ್ಕಾರ 5 ವರ್ಷದಲ್ಲಿ ರೂ.1.20 ಲಕ್ಷ ಕೋಟಿ ಖರ್ಚು ಮಾಡಿ 18 ಸಾವಿರ ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಕಲ್ಪಿಸಿದೆ.

ಕ್ಲಿಕ್ ಮಾಡಿ ಓದಿ: ಲಂಚ ಸ್ವೀಕರಿಸುತ್ತಿದ್ದ ಖಜಾನೆ ಇಲಾಖೆ ಸಿಬ್ಬಂದಿ ಲೋಕಾಯುಕ್ತ ಬಲೆಗೆ

ರಾಜ್ಯವೂ ಸಹ ಇಂತಹದೇ ಇಚ್ಛಾ ಶಕ್ತಿಯನ್ನು ಪ್ರದರ್ಶಿಸಬೇಕು. ಕೇಂದ್ರ ಸರ್ಕಾರ ಘೋಷಿಸಿದ ಅನುದಾನ ನೀಡಿಲ್ಲ ಎಂದು ನೆಪ ಹೇಳದೆ, ರಾಜ್ಯ ಸರ್ಕಾರವೇ ಅನುದಾನ ನೀಡಿ ಯೋಜನೆ ಪೂರ್ಣಗೊಳಿಸಬೇಕು ಎಂದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:Bhadra Upper Bank ProjectCentral GovtCentral KarnatakaChitradurgaChitradurga newsChitradurga UpdatescompletedFirst stepKannada Latest NewsKannada NewsMinister Krishna ByregowdaState Govt.ಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಕೇಂದ್ರ ಸರ್ಕಾರಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ಚಿತ್ರದುರ್ಗ ನ್ಯೂಸ್ಪೂರ್ಣಭದ್ರಾ ಮೇಲ್ದಂಡೆ ಯೋಜನೆಮಧ್ಯ ಕರ್ನಾಟಕಮೊದಲನೆ ಹಂತರಾಜ್ಯ ಸರ್ಕಾರಸಚಿವ ಕೃಷ್ಣ ಬೈರೇಗೌಡ
Share This Article
Facebook Email Print
Previous Article APMC: ಚಿತ್ರದುರ್ಗ ಮಾರುಕಟ್ಟೆ | ಇಂದಿನ ಮೆಕ್ಕೆಜೋಳ, ಶೇಂಗಾ, ಸೂರ್ಯಕಾಂತಿ ರೇಟ್ 
Next Article ಚಿತ್ರದುರ್ಗ ನಗರಸಭೆ ನಗರಸಭೆ ಬಜೆಟ್ | ಸಾರ್ವಜನಿಕರಿಂದ ಸಲಹೆ, ಸೂಚನೆಗೆ ಸಮಾಲೋಚನಾ ಸಭೆ
Leave a Comment

Leave a Reply Cancel reply

Your email address will not be published. Required fields are marked *

Gavayi smaranothsava
ಶಾರದಮ್ಮ ರುದ್ರಪ್ಪ ಕಲ್ಯಾಣ ಮಂಟಪದಲ್ಲಿ ಗಾನಯೋಗಿಗಳ ಪುಣ್ಯ ಸ್ಮರಣೆ | ಸಾಧಕರಿಗೆ ಸನ್ಮಾನ
ಮುಖ್ಯ ಸುದ್ದಿ
ಮುರುಘಾಮಠದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾದ ಮೊದಲನೇ ಕಾರ್ಯಕಾರಿ ಸಭೆ | ಮಠಾಧೀಶರು ಸೇರಿದಂತೆ ಗಣ್ಯರು ಭಾಗೀ
ಮುಖ್ಯ ಸುದ್ದಿ
ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up