By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಕಾಂಗ್ರೆಸ್ ಗುಲಾಮಿತನದಿಂದ ಹೊರಬಂದಾಗಲೇ ದಲಿತರಿಗೆ ಸ್ವಾತಂತ್ರ್ಯ | ಗೋವಿಂದ ಕಾರಜೋಳ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಕಾಂಗ್ರೆಸ್ ಗುಲಾಮಿತನದಿಂದ ಹೊರಬಂದಾಗಲೇ ದಲಿತರಿಗೆ ಸ್ವಾತಂತ್ರ್ಯ | ಗೋವಿಂದ ಕಾರಜೋಳ

ಮುಖ್ಯ ಸುದ್ದಿ

ಕಾಂಗ್ರೆಸ್ ಗುಲಾಮಿತನದಿಂದ ಹೊರಬಂದಾಗಲೇ ದಲಿತರಿಗೆ ಸ್ವಾತಂತ್ರ್ಯ | ಗೋವಿಂದ ಕಾರಜೋಳ

chitradurganews.com
Last updated: 25 December 2024 19:49
chitradurganews.com
6 months ago
Share
Govinda karajola
ಸಂಸದ ಗೋವಿಂದ ಕಾರಜೋಳ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 25 DECEMBER 2024

ಚಿತ್ರದುರ್ಗ: ದೇಶದಲ್ಲಿನ ದಲಿತ ಸಮುದಾಯ ಕಾಂಗ್ರೆಸ್‍ನ ಗುಲಾಮಿತನದಿಂದ ಹೊರ ಬರುವವರೆಗೂ ದಲಿತರು ಸ್ವಾತಂತ್ರ್ಯದಿಂದ ಹೂರ ಬರಲು ಸಾಧ್ಯವಿಲ್ಲ ಎಂದು ಸಂಸದ ಗೋವಿಂದ ಕಾರಜೋಳ ಅಭಿಪ್ರಾಯಪಟ್ಟರು.

ಇಲ್ಲಿನ ಬಿಜೆಪಿ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂಬೇಡ್ಕರ್ ಜೀವಿತ ಕಾಲದಲ್ಲಿ ಕಾಂಗ್ರೆಸ್ ಮಾಡಿದ ಅವಮಾನವನ್ನು ದಲಿತ ಸಮುದಾಯ ಎಂದೂ ಮರೆಯಲು ಸಾಧ್ಯವಿಲ್ಲ ಎಂದರು.

ಇದನ್ನೂ ಓದಿ: ವಾಣಿವಿಲಾಸ ಸಾಗರ ಜಲಾಶಯದ ನೀರಿನ ಮಟ್ಟ

ಕಾಂಗ್ರೆಸ್ ಅಂಬೇಡ್ಕರರಿಗೆ ಮಾಡಿರುವ ಮೋಸ, ಅಪಮಾನವನ್ನು ದೇಶಾದ್ಯಂತ ಬಿಜೆಪಿ ತಿಳಿಸುವ ಕೆಲಸ ಮಾಡಲಿದೆ. ಅಂಬೇಡ್ಕರ್ ಅವರಿಗೆ ಭಾರತ ರತ್ನ ನೀಡಲಿಲ್ಲ. ಆದರೆ, ನೆಹರು ಪ್ರಧಾನ ಮಂತ್ರಿಯಾಗಿದ್ದಾಗ ಅವರಿಗೆ ಅವರೇ ಭಾರತ ರತ್ನ ಘೋಷಣೆ ಮಾಡಿಕೊಂಡಿದ್ದರು ಎಂದು ಹೇಳಿದರು.

ಇಡೀ ದೇಶದಲ್ಲಿನ ದಲಿತ ಬಂಧುಗಳಿಗೆ ಸತ್ಯ ಮತ್ತು ವಸ್ತುಸ್ಥಿತಿಯನ್ನು ಬಿಚ್ಚಿಡುವಂತಹ ಕೆಲಸ ಮಾಡುತ್ತೇನೆ. ಅಂಬೇಡ್ಕರ್ ದೇಶ ಸ್ವಾತಂತ್ರವಾದ ಸಂದರ್ಭದಲ್ಲಿ ಅವರು ನನಗೆ ಅರ್ಥ ಮಂತ್ರಿ ಸ್ಥಾನ ನೀಡುವಂತೆ ಅಂದಿನ ಪ್ರಧಾನಮಂತ್ರಿ ನೆಹರು ಅವರನ್ನು ಕೇಳಿದಾಗ ತಿರಸ್ಕರಿಸಿ ಕಾನೂನು ಮಂತ್ರಿ ಮಾಡಿದ್ದರು. ಆದರೆ, ಅಂಬೇಡ್ಕರ್ ನೆಹರು ಕ್ಯಾಬಿನೆಟ್‍ನಲ್ಲಿ ಬಹಳ ದಿನ ಇರಲಿಲ್ಲ. ಅವಮಾನ ಸಹಿಸಲಾರದೆ ರಾಜೀನಾಮೆ ಕೊಟ್ಟು ಹೊರ ಬಂದರು.

ಇದನ್ನೂ ಓದಿ: ದೇಶದಲ್ಲೇ ಮಾದರಿ ಗ್ರಾಪಂ ಕಟ್ಟಡ ನಿರ್ಮಿಸಿ | ಗೋವಿಂದ ಕಾರಜೋಳ

1952ರಲ್ಲಿ ನಡೆದ ಚುನಾವಣೆಯಲ್ಲಿ ಅವರು ಸ್ಪರ್ಧೆ ಮಾಡಿದಾಗ ಅವಿರೋಧವಾಗಿ ಆಯ್ಕೆ ಮಾಡಬಹುದಾಗಿತ್ತು. ಆದರೆ, ಚುನಾವಣೆಯಲ್ಲಿ ಸೋಲಿಸಿದ ಕೀರ್ತಿ ಕಾಂಗ್ರೆಸ್‍ಗೆ ಸಲುತ್ತದೆ. ಇದನ್ನು ನಮ್ಮ ದಲಿತ ಯುವಕರು ಅರ್ಥ ಮಾಡಿಕೊಳ್ಳಬೇಕು ಎಂದರು.

ಅಂಬೇಡ್ಕರ್ ನಿಧನರಾದಾಗ ಅವರ ಸಂತ್ಯಕ್ರಿಯೆ ನಡೆಸಲು ದೆಹಲಿಯಲ್ಲಿ ಅಂದಿನ ಕಾಂಗ್ರೆಸ್ ಸರ್ಕಾರ ಜಾಗ ಕೊಡಲಿಲ್ಲ. ಆದರೆ, ನೆಹರು ಕುಟುಂಬದವರಿಗೆ ನೂರಾರು ಎಕರೆ ಜಾಗ ನೀಡಲಾಗಿದೆ. ಆದರೂ, ತಿಳುವಳಿಕೆ ಇಲ್ಲದ ಯುವಕರು ಅವರನ್ನು ಬೆಂಬಲಿಸುತ್ತಿದ್ದಾರೆ. ಕಾಂಗ್ರೆಸ್ ಜನರಿಗೆ ಶಿಕ್ಷಣ ನೀಡದೆ ದಲಿತರನ್ನು ಕತ್ತಲಿನಲ್ಲಿ ಇಟ್ಟಿದೆ. ಇವರಿಗೆ ಶಿಕ್ಷಣ ನೀಡಿದರೆ ನಮಗೆ ಮತಗಳು ಬರುವುದಿಲ್ಲ ಎನ್ನುವುದು ಅವರ ನಂಬಿಕೆ ಎಂದು ಹೇಳಿದರು.

ಇದನ್ನೂ ಓದಿ: ಕರಡಿ ಮರಿಗಳ BIRTHDAY ಸಂಭ್ರಮ | ಆಡುಮಲ್ಲೇಶ್ವರದಲ್ಲಿ ವಿಶಿಷ್ಟ ಆಚರಣೆ

ಕಳೆದ ಒಂದು ವಾರದಿಂದ ಕಾಂಗ್ರೆಸ್ ದೇಶದ ಉದ್ದಗಲಕ್ಕೂ ಸುಳ್ಳು ಆಪಾದನೆ ಮಾಡಿ ಅಮಿತ್ ಶಾ ವಿರುದ್ಧ ದಲಿತರನ್ನು ಎತ್ತಿ ಕಟ್ಟುವಂತಹ ಹುನ್ನಾರ ಮಾಡುತ್ತಿರುವುದನ್ನು ಖಂಡಿಸುತ್ತೇನೆ ಎಂದರು.

ನಮ್ಮ ಸರ್ಕಾರ ಇದ್ದಾಗ ಒಳಮೀಸಲಾತಿಗೆ ಶಿಫಾರಸ್ಸು ಮಾಡಲಾಗಿತ್ತು. ಆದರೆ, ಈಗ ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದರೂ ಕಾಂಗ್ರೆಸ್ ಒಳಗಿನವರೇ ಒಳಮೀಸಲಾತಿಗೆ ವಿರೋಧ ಮಾಡುತ್ತಿದ್ದಾರೆ. ಇದಕ್ಕೆ ಕಾರಣ ದಲಿತ ವಿರೋಧಿ ನೀತಿ ಎಂದರು.

ಇದನ್ನೂ ಓದಿ: ವಿದ್ಯಾರ್ಥಿನಿಗೆ ಥಳಿಸಿದ್ದ ಶಿಕ್ಷಕ ಅಮಾನತು

ಅಮಿತ್ ಶಾ ಅವರು ಕಾಂಗ್ರೆಸ್ಸಿನವರ ಬಗ್ಗೆ ರಾಜ್ಯಸಭೆಯಲ್ಲಿ ವ್ಯಂಗ್ಯವಾಗಿ ಮಾತನಾಡಿದರು. ಅದನ್ನು ತಪ್ಪಾಗಿ ಅರ್ಥೈಸಿ ಅವರನ್ನು ಅಂಬೇಡ್ಕರ್ ವಿರೋಧಿ ಎಂಬಂತೆ ಬಿಂಬಿಸುತ್ತಿದ್ದಾರೆ. ಈ ಕಾರಣಕ್ಕೆ ದಲಿತ ಯುವಕರು ಯಾವ ಕಾರಣಕ್ಕೂ ಕಾಂಗ್ರೆಸ್ ನಂಬಬೇಡಿ ಎಂದು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಮಾಜಿ ಶಾಸಕ ಎಸ್.ತಿಪ್ಪೇಸ್ವಾಮಿ, ಜಿಲ್ಲಾಧ್ಯಕ್ಷ ಎ.ಮುರುಳಿ, ಪ್ರಧಾನ ಕಾರ್ಯದರ್ಶಿಗಳಾದ ಸುರೇಶ್ ಸಿದ್ದಾಪುರ, ಸಂಪತ್ ಕುಮಾರ್, ದಗ್ಗೆ ಶಿವಪ್ರಕಾಶ್, ನಾಗರಾಜ್ ಬೇದ್ರೆ, ಛಲವಾದಿ ತಿಪ್ಪೇಸ್ವಾಮಿ, ಮಲ್ಲಿಕಾರ್ಜನ್, ನವೀನ್ ಚಾಲುಕ್ಯ ಇತರರಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:Amit ShahBJPChitradurgaChitradurga newscongressConstitutionGovinda KarjolaKannada Newsಅಮಿತ್ ಶಾಕನ್ನಡ ಸುದ್ದಿಕಾಂಗ್ರೆಸ್ಗೋವಿಂದ ಕಾರಜೋಳಚಿತ್ರದುರ್ಗಚಿತ್ರದುರ್ಗ ನ್ಯೂಸ್ಬಿಜೆಪಿಸಂವಿಧಾನ
Share This Article
Facebook Email Print
Previous Article ದೇಶದಲ್ಲೇ ಮಾದರಿ ಗ್ರಾಪಂ ಕಟ್ಟಡ ನಿರ್ಮಿಸಿ | ಗೋವಿಂದ ಕಾರಜೋಳ
Next Article today bhavishya Astrology: ದಿನ ಭವಿಷ್ಯ | ಡಿಸೆಂಬರ್ 26 | ಕುಟುಂಬ ಸದಸ್ಯರೊಂದಿಗೆ ವಿವಾದ, ಆರೋಗ್ಯದಲ್ಲಿ ಎಚ್ಚರ ವಹಿಸಿ
Leave a Comment

Leave a Reply Cancel reply

Your email address will not be published. Required fields are marked *

Gavayi smaranothsava
ಶಾರದಮ್ಮ ರುದ್ರಪ್ಪ ಕಲ್ಯಾಣ ಮಂಟಪದಲ್ಲಿ ಗಾನಯೋಗಿಗಳ ಪುಣ್ಯ ಸ್ಮರಣೆ | ಸಾಧಕರಿಗೆ ಸನ್ಮಾನ
ಮುಖ್ಯ ಸುದ್ದಿ
ಮುರುಘಾಮಠದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾದ ಮೊದಲನೇ ಕಾರ್ಯಕಾರಿ ಸಭೆ | ಮಠಾಧೀಶರು ಸೇರಿದಂತೆ ಗಣ್ಯರು ಭಾಗೀ
ಮುಖ್ಯ ಸುದ್ದಿ
ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up