ಮುಖ್ಯ ಸುದ್ದಿ
ಡಿ.31 ರಿಂದ KSRTC ನೌಕರರ ಅನಿರ್ಧಿಷ್ಟಾವಧಿ ಮುಷ್ಕರ
CHITRADURGA NEWS | 29 DECEMBER 2024
ಚಿತ್ರದುರ್ಗ: ಕೆಎಸ್ಆರ್ ಟಿಸಿ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಡಿ.31 ರಿಂದ ಅನಿರ್ಧಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಸ್ಟಾಫ್ ಅಂಡ್ ವಕರ್ಸ್ ಯೂನಿಯನ್ ಚಿತ್ರದುರ್ಗ ವಿಭಾಗದ ಗೌರವಾಧ್ಯಕ್ಷ ಕಾಂ.ಜಿ.ಸಿ.ಸುರೇಶ್ಬಾಬು ತಿಳಿಸಿದರು.
Also Read: ವಾಣಿವಿಲಾಸ ಸಾಗರ ಜಲಾಶಯ ಭರ್ತಿಗೆ ಅರ್ಧ ಅಡಿ ಬಾಕಿ
ಪತ್ರಕರ್ತರ ಭವನದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿಯಲ್ಲಿ ನಡೆದ ಅಧಿವೇಶನದಲ್ಲಿ ಸಾರಿಗೆ ನೌಕರರ ಬೇಡಿಕೆಗಳನ್ನು ಚರ್ಚಿಸಿ ಈಡೇರಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದರು. ಆದರೆ ಅಲ್ಲಿ ನಮ್ಮ ಮನವಿ ಪತ್ರವನ್ನು ಪಡೆಯಲು ಸಿ.ಎಂ.ಬರಲಿಲ್ಲ. ಅವರ ಬದಲಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ಗುಂಡೂರಾವ್ ಸ್ವೀಕರಿಸಿ, ಸಾರಿಗೆ ಸಚಿವರ ಗಮನ ಸೆಳೆಯುವ ಭರವಸೆ ನೀಡಿದರೆ ವಿನಃ ಇದುವರೆಗೂ ಯಾವುದೂ ಈಡೇರಿಲ್ಲದ ಕಾರಣ ನೌಕರರು ಮುಷ್ಕರಕ್ಕೆ ಮುಂದಾಗಿರುವುದರಿಂದ ಸಾರ್ವಜನಿಕರು ಸಹಕರಿಸುವಂತೆ ಕಾಂ.ಜಿ.ಸಿ.ಸುರೇಶ್ಬಾಬು ಮನವಿ ಮಾಡಿದರು.
ಕೆ.ಎಸ್.ಆರ್.ಟಿ.ಸಿ. ಸ್ಟಾಫ್ ಅಂಡ್ ವಕರ್ಸ್ ಯೂನಿಯನ್ ಕಾರ್ಯಾಧ್ಯಕ್ಷ ರಹೀಂಸಾಬ್ ಮಾತನಾಡಿ, 38 ತಿಂಗಳ ವೇತನ ಬಾಕಿ ಕೂಡಲೆ ಪಾವತಿಸಬೇಕು. ದಿನಾಂಕ 1.1.2024 ರಿಂದ ವೇತನ ಪರಿಷ್ಕರಣೆ ಹಾಗೂ ನಿವೃತ್ತ ನೌಕರರಿಗೆ ದಿನಾಂಕ 27.6.2024 ರ ಸುತ್ತೋಲೆ ಹಣವನ್ನು ಕೂಡಲೆ ಬಿಡುಗಡೆಗೊಳಿಸುವಂತೆ ಹಲವಾರು ಬಾರಿ ಮನವಿ ಸಲ್ಲಿಸಿದ್ದೇವೆ.
Also Read: ಈಜಲು ಹೋಗಿದ್ದ ಯುವಕ ನೀರು ಪಾಲು | ಸಂಬಂಧಿಕರ ಆಕ್ರಂಧನ
ರಾಜ್ಯ ಸರ್ಕಾರದಿಂದ ಯಾವುದೆ ಸ್ಪಂದನೆಯಿಲ್ಲ. ಬಸವರಾಜ ಬೊಮ್ಮಯಿ ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಶೇ.15 ರಷ್ಟು ವೇತನ ಹೆಚ್ಚಳ ಮಾಡಿದ್ದನ್ನು ಇದುವರೆವಿಗೂ ನೀಡಿಲ್ಲ. ಹಾಗಾಗಿ ಅನಿರ್ಧಿಷ್ಟಾವಧಿ ಧರಣಿಗೆ ಮುಂದಾಗಿದ್ದೇವೆ. ಪ್ರಯಾಣಿಕರಿಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.
ಸುದ್ದಿಗೊಷ್ಟಿಯಲ್ಲಿ KSRTC ಸ್ಟಾಫ್ ಅಂಡ್ ವಕರ್ಸ್ ಯೂನಿಯನ್ ಪ್ರಧಾನ ಕಾರ್ಯದರ್ಶಿ ಟಿ.ಅಶೋಕ್, ಉಪಾಧ್ಯಕ್ಷ ಟಿ.ಆರ್.ಉಮಾಪತಿ, ಸಂಘಟನಾ ಕಾರ್ಯದರ್ಶಿ ಕಾಂ.ಈ.ಸತ್ಯಮೂರ್ತಿ ಇದ್ದರು.