Connect with us

    ತೆಂಗಿನ ಮರ ಹತ್ತುವವರಿಗೆ ವಿಮಾ ಸೌಲಭ್ಯ

    coconut tree climbers

    ಮುಖ್ಯ ಸುದ್ದಿ

    ತೆಂಗಿನ ಮರ ಹತ್ತುವವರಿಗೆ ವಿಮಾ ಸೌಲಭ್ಯ

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 31 DECEMBER 2024

    ಚಿತ್ರದುರ್ಗ: ತೆಂಗು ಅಭಿವೃದ್ಧಿ ಮಂಡಳಿ ವತಿಯಿಂದ ಫ್ರೆಂಡ್ಸ್ ಆಫ್ ಕೊಕನಟ್ ಟ್ರೀ ಕಾರ್ಯಕ್ರಮದಡಿ ತೆಂಗು ಗೊನೆಗಾರರಿಗೆ ಕೇರಾ ಸುರಕ್ಷಾ ವಿಮಾ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ.

    ಕ್ಲಿಕ್ ಮಾಡಿ ಓದಿ: ನಾಳೆಯಿಂದ ಚಿತ್ರದುರ್ಗ, ಚಿಕ್ಕಜಜೂರು ದಾವಣಗೆರೆ ನಡುವಿನ ರೈಲು ಸಂಚಾರದಲ್ಲಿ ಬದಲಾವಣೆ

    ವಿಮಾ ಯೋಜನೆಯಡಿ ತೆಂಗಿನಮರ ಹತ್ತುವವರು, ತೆಂಗಿನಕಾಯಿ ಕೀಳುವವರು, ನೀರಾ ತಂತ್ರಜ್ಞರು ಅಪಘಾತಕ್ಕೊಳಗಾಗಿ ಮರಣ ಹೊಂದಿದಲ್ಲಿ ರೂ.7ಲಕ್ಷ, ಶಾಶ್ವತ ಭಾಗಶಃ ಅಂಗವಿಕಲತೆ ಹೊಂದಿದಲ್ಲಿ ರೂ.3.50ಲಕ್ಷ, ಆಸ್ಪತ್ರೆ ವೆಚ್ಚ (24ಗಂಟೆ ಐಪಿ) ಗರಿಷ್ಠ ರೂ.2ಲಕ್ಷ, ತಾತ್ಕಾಲಿಕ ಅಂಗವಿಕಲತೆಯನ್ನು ಹೊಂದುವವರಿಗೆ ಪ್ರತಿವಾರ ರೂ.3500 ರಂತೆ ಗರಿಷ್ಠ ರೂ.21,000, ಅಂಬುಲೆನ್ಸ್ ಖರ್ಚು ರೂ.3500 ಹಾಗೂ ಪಾಲಿಸಿದಾರ ಮೃತಪಟ್ಟರೆ ಅಂತ್ಯ ಸಂಸ್ಕಾರಕ್ಕೆ ರೂ.5,500 ನೀಡಲಾಗುತ್ತದೆ.

    ದುರ್ಘಟನೆ ಅಥವಾ ಅಪಘಾತ ಆದ ಏಳು ದಿನಗಳ ಒಳಗಾಗಿ ತೆಂಗು ಅಭಿವೃದ್ಧಿ ಮಂಡಳಿಗೆ ಮಾಹಿತಿ ತಲುಪಿಸಬೇಕು.

    ವಾರ್ಷಿಕ ವಿಮಾ ಒಟ್ಟು ಕಂತು ರೂ.956 ಗಳಾಗಿದ್ದು, ಶೇ. 75:25 ರಂತೆ ತೆಂಗು ಅಭಿವೃದ್ಧಿ ಮಂಡಳಿ ವಂತಿಕೆ ರೂ. 717 ಮತ್ತು ರೈತರ ವಂತಿಕೆ ರೂ.239ಆಗಿರುತ್ತದೆ. ರೈತರ ವಂತಿಕೆಯನ್ನು ತೆಂಗು ಅಭಿವೃದ್ಧಿ ಮಂಡಳಿಗೆ ಡಿಡಿ ಮೂಲಕ ಅಥವಾ ಆನ್ಲೈನ್ ಮೂಲಕ ಪಾವತಿಸಬಹುದಾಗಿರುತ್ತದೆ.

    ಕ್ಲಿಕ್ ಮಾಡಿ ಓದಿ: ಚಳ್ಳಕೆರೆ ಕೃಷಿಕ ಸಮಾಜದ ಅಧ್ಯಕ್ಷರಾಗಿ ಚಾಲುಕ್ಯ ನವೀನ್

    ಜಿಲ್ಲೆಯ ಆಸಕ್ತರು ತೆಂಗು ಅಭಿವೃದ್ಧಿ ಮಂಡಳಿಯ ನಿಗಧಿತ ಅರ್ಜಿ ನಮೂನೆ. ಆಧಾರ್ ಕಾರ್ಡ್ ಪ್ರತಿ, ಬ್ಯಾಂಕ್ ಪಾಸ್‌ಬುಕ್ ಪ್ರತಿ, ರೈತರ ವಾರ್ಷಿಕ ವಂತಿಕೆ ಪಾವತಿಸಿದ ರಶೀದಿ ಸಲ್ಲಿಸಬೇಕು.

    ಹೆಚ್ಚಿನ ಮಾಹಿತಿಗಾಗಿ www.cocpnut.board.govt.in/Shceme.aspx#kera surksha insurance ಜಾಲತಾಣಕ್ಕೆ ಭೇಟಿ ನೀಡಿ ಮಾಹಿತಿ ಪಡೆಯಬಹುದು ಎಂದು ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top