
CHITRADURGA NEWS | 06 JANUARY 2025
ಹೊಸದುರ್ಗ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾಯಕಯೋಗಿ ಶ್ರೀ ಸಿದ್ದರಾಮೇಶ್ವರ ಪ್ರಶಸ್ತಿಗೆ ಸಾಣೇಹಳ್ಳಿಯ ತರಳಬಾಳು ಶಾಖಾಮಠದ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಅವರು ಆಯ್ಕೆಯಾಗಿದ್ದಾರೆ.
ಕ್ಲಿಕ್ ಮಾಡಿ ಓದಿ: ರೈತರಿಗೆ ಗುಡ್ ನ್ಯೂಸ್ | ಜಿಲ್ಲೆಯಲ್ಲಿ ರೂ.23.33 ಕೋಟಿ ಬೆಳೆವಿಮೆ ಬಿಡುಗಡೆ
ಪ್ರಶಸ್ತಿಯು ₹5 ಲಕ್ಷ ನಗದು, ಸ್ಮರಣಿಕೆ ಮತ್ತು ಫಲಕ ಒಳಗೊಂಡಿದೆ.
ಜನಪರ ಕಾಳಜಿ, ವೈಚಾರಿಕೆ, ರಂಗಾಸಕ್ತಿ, ಸಾಹಿತ್ಯ ಮತ್ತು ಸಾಂಸ್ಕೃತಿಕ ಒಲವು ಹಾಗೂ ಅವರ ಜೀವನಾದರ್ಶಗಳನ್ನು ಪರಿಗಣಿಸಿ ಸ್ವಾಮೀಜಿ ಅವರನ್ನು ಈ ಸಾಲಿನ ಪ್ರಶಸ್ತಿಗೆ ಮಲ್ಲಿಕಾ ಘಂಟಿ ಅವರ ಅಧ್ಯಕ್ಷತೆಯ ಸಮಿತಿ ಆಯ್ಕೆ ಮಾಡಿದೆ’ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ.
ಕ್ಲಿಕ್ ಮಾಡಿ ಓದಿ: 15. ಹಿರೇ ಬಡಗಿ ಗೌನಳ್ಳಿಗೆ ಬಂದರು | ಹಬ್ಬಿದಾ ಮಲೆ ಮಧ್ಯದೊಳಗೆ
ಜನವರಿ 14ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿರುವ ಶ್ರೀ ಸಿದ್ದರಾಮೇಶ್ವರ ಜಯಂತಿ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
