By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ
    ಜಿಲ್ಲಾ ಕೃಷಿಕ ಸಮಾಜ ಕಾರ್ಯಕಾರಿ ಸಮಿತಿ ಸಭೆ ಜುಲೈ 30ಕ್ಕೆ 
    3 hours ago
    Agniveer
    ಸಿಕಂದರಾಬಾದ್‍ನಲ್ಲಿ ಅಗ್ನಿವೀರ್ ನೇಮಕಾತಿ ರ್ಯಾಲಿ
    3 hours ago
    ಜಿಲ್ಲಾಮಟ್ಟದ ಎಂಆರ್‌ಪಿ ತರಬೇತಿ ಕಾರ್ಯಾಗಾರ
    ಡಯಟ್‌ನಲ್ಲಿ ಜಿಲ್ಲಾಮಟ್ಟದ ಎಂಆರ್‌ಪಿ ತರಬೇತಿ ಕಾರ್ಯಾಗಾರ
    13 hours ago
    ಒತ್ತಡ ನಿರ್ವಹಣೆ ಕುರಿತ ಉಪನ್ಯಾಸ ಕಾರ್ಯಕ್ರಮ
    ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಒತ್ತಡ ರಹಿತ ಕೆಲಸ ಅತ್ಯಂತ ಅವಶ್ಯಕ | ಹೆಚ್.ಟಿ.ಅಶೋಕ
    14 hours ago
    ಬೆಳೆ ಸಮೀಕ್ಷೆ ಕಾರ್ಯಕ್ರಮ ಅನುಷ್ಠಾನ ಕುರಿತು ಸಭೆ
    ಬೆಳೆ ಸಮೀಕ್ಷೆ ಕಾರ್ಯ ನಿರ್ಲಕ್ಷ್ಯಿಸುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ADC ಬಿ.ಟಿ.ಕುಮಾರಸ್ವಾಮಿ 
    16 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    1 week ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 weeks ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    1 month ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    2 months ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
  • ತಾಲೂಕು
    ತಾಲೂಕುShow More
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 weeks ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    4 weeks ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    3 weeks ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಜುಲೈ 29 | ವ್ಯಾಪಾರದಲ್ಲಿ ನಿರೀಕ್ಷಿತ ಲಾಭ, ಆರೋಗ್ಯದಲ್ಲಿ ಎಚ್ಚರ
    3 hours ago
    today bhavishya
    ದಿನ ಭವಿಷ್ಯ | ಜುಲೈ 28 | ಉದ್ಯೋಗಿಗಳಿಗೆ ಹೆಚ್ಚುವರಿ ಕೆಲಸದ ಒತ್ತಡ, ಆರ್ಥಿಕವಾಗಿ ನಿರೀಕ್ಷಿಸಿದ ಮಟ್ಟದ ಫಲಿತಾಂಶ
    1 day ago
    today bhavishya
    ದಿನ ಭವಿಷ್ಯ | ಜುಲೈ 27 | ವ್ಯಾಪಾರದಲ್ಲಿ ನಿರೀಕ್ಷಿತ ಪ್ರಗತಿ, ದೂರದ ಪ್ರಯಾಣದ ಸೂಚನೆ
    2 days ago
    today bhavishya
    ದಿನ ಭವಿಷ್ಯ | ಜುಲೈ 26 | ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ, ಆಧ್ಯಾತ್ಮಿಕ ಚಿಂತನೆ ಹೆಚ್ಚು
    3 days ago
    today bhavishya
    ದಿನ ಭವಿಷ್ಯ | ಜುಲೈ 25 | ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು, ಹಠಾತ್ ಧನಲಾಭ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    20 hours ago
    ಮಾರುಕಟ್ಟೆ ಧಾರಣೆ | ಜುಲೈ 27 | ರಾಗಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಜುಲೈ 25 | ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಜುಲೈ 24 | ಮೆಕ್ಕೆಜೋಳ, ರಾಗಿ ರೇಟ್….
    5 days ago
    ಮಾರುಕಟ್ಟೆ ಧಾರಣೆ | ಜುಲೈ 23 | ಹತ್ತಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    5 days ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    1 week ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    2 weeks ago
    ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    ಹೊಳಲ್ಕೆರೆ : ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    2 weeks ago
    ಪುರಾತನ ದೇವಾಲಯದ ಜೀರ್ಣೋದ್ಧಾರ, ವಿಶೇಷ ಪೂಜಾ ಕಾರ್ಯಕ್ರಮ
    ಈಗೀಗ ಮನುಷ್ಯ- ಮನುಷ್ಯರ ನಡುವೆ ಹೊಂದಾಣಿಕೆ, ಸಹಬಾಳ್ವೆ ಇಲ್ಲ | ಡಾ.ಕೇದಾರಲಿಂಗ ಶ್ರೀಗಳು
    2 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    1 month ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    1 month ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    4 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    5 months ago
  • ಹೊಸದುರ್ಗ
    ಹೊಸದುರ್ಗShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    4 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    2 months ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 months ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 months ago
  • Life Style
    Life StyleShow More
    Clove
    ಕೆಮ್ಮು ನಿವಾರಿಸಲು ಲವಂಗಗಳು ಪ್ರಯೋಜನಕಾರಿ; ಅದನ್ನು ಬಳಸುವುದು ಹೇಗೆ ಗೊತ್ತಾ?
    2 hours ago
    darken your hair naturally
    ಕೂದಲನ್ನು ನೈಸರ್ಗಿಕವಾಗಿ ಕಪ್ಪಾಗಿಸಲು ಈ ಸಲಹೆ ಪಾಲಿಸಿರಿ
    3 hours ago
    spine
    ಈ 5 ಕೆಟ್ಟ ಅಭ್ಯಾಸಗಳು ನಿಮ್ಮ ಬೆನ್ನುಮೂಳೆಯನ್ನು ದುರ್ಬಲಗೊಳಿಸುತ್ತವೆ
    1 day ago
    banana hair mask
    ಮಳೆಗಾಲದಲ್ಲಿ ನಿಮ್ಮ ಕೂದಲಿನ ಜಿಗುಟುತನವನ್ನು ತೆಗೆದುಹಾಕಲು ಬಾಳೆಹಣ್ಣಿನ ಹೇರ್ ಮಾಸ್ಕ್ ಹಚ್ಚಿ
    1 day ago
    lose weight eat potatoes
    ತೂಕ ಇಳಿಸಲು ಬಯಸುವವರು ಆಲೂಗಡ್ಡೆ ತಿನ್ನಬಹುದೇ?
    2 days ago
Reading: 13ನೇ ಶರಣ ಸಾಹಿತ್ಯ ಸಮ್ಮೇಳನ | ಕೋಟೆ ನಾಡಲ್ಲಿ ವಿದ್ಯುಕ್ತ ಚಾಲನೆ | ಯಾರು ಏನು ಹೇಳಿದ್ರು ?
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

13ನೇ ಶರಣ ಸಾಹಿತ್ಯ ಸಮ್ಮೇಳನ | ಕೋಟೆ ನಾಡಲ್ಲಿ ವಿದ್ಯುಕ್ತ ಚಾಲನೆ | ಯಾರು ಏನು ಹೇಳಿದ್ರು ?

chitradurganews.com
Last updated: 18 January 2025 22:13
chitradurganews.com
2 years ago
Share
harans sahithya sammelana
13ನೇ ಶರಣ ಸಾಹಿತ್ಯ ಸಮ್ಮೇಳನ
SHARE

CHITRADURGA NEWS | 18 JANUARY 2025

ಚಿತ್ರದುರ್ಗ: ಐತಿಹಾಸಿಕ ಜಿಲ್ಲೆ, ಕೋಟೆನಾಡು, ಮಠಗಳ ಬೀಡು ಎಂಬ ಖ್ಯಾತಿ ಹೊಂದಿರುವ ಚಿತ್ರದುರ್ಗ ಜಿಲ್ಲೆಯಲ್ಲಿ ಮೊಟ್ಟ ಮೊದಲನೇ ಬಾರಿಗೆ, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ 13ನೇ ಶರಣ ಸಾಹಿತ್ಯ ಸಮ್ಮೇಳನ ವಿಜೃಂಭಣೆಯಿಂದ ಜರುಗಿತು.

ಚಿತ್ರದುರ್ಗದ ಮುರುಘರಾಜೇಂದ್ರ ಬೃಹನ್ಮಠದ ಅನುಭವ ಮಂಟಪದಲ್ಲಿ ಎರಡು ದಿನಗಳ ಕಾಲ ನಡೆಯುವ ಶರಣ ಸಾಹಿತ್ಯ ಸಮ್ಮೇಳನಕ್ಕೆ, ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಚಾಲನೆ ನೀಡಿದರು.

ಬಸವಣ್ಣನವರ ಆಚಾರ ವಿಚಾರಗಳನ್ನು ನಾವು ಅಳವಡಿಸಿಕೊಂಡು ಅರ್ಥಪೂರ್ಣವಾಗಿ ಜೀವನ ಮಾಡುವುದು ನಮ್ಮ ನಿಮ್ಮ ಕರ್ತವ್ಯವಾಗಿದೆ. ಬಸವಣ್ಣನವರು ವಿಚಾರಗಳು ಎಲ್ಲ ಕಡೆಗಳಲ್ಲಿ ವಿಸ್ತಾರವಾಗುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು.

| ಶ್ರೀ ಮಾದಾರ ಚನ್ನಯ್ಯ ಸ್ವಾಮೀಜಿ.

13ನೇ ಶರಣ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿದ್ದ ಬೀದರ್‍ನ ಡಾ.ಸಿದ್ಧರಾಮ ಬೆಲ್ದಾಳ ಶರಣರು ಅಧ್ಯಕ್ಷೀಯ ನುಡಿಯಲ್ಲಿ, ಶರಣ ಸಾಹಿತ್ಯ ಮಾನವೀಯ ಮೌಲ್ಯಗಳನ್ನು ಒಳಗೊಂಡಿದೆ. ಬಸವಾದಿ ಶರಣರು ರಚಿಸಿರುವ ಶರಣ ಸಾಹಿತ್ಯ ಸ್ವತಂತ್ರ ಸಾಹಿತ್ಯ. ಮನುಷ್ಯನ ಒಳಗಿನ ಆತ್ಮವನ್ನು ಎಚ್ಚರಿಸುವ ಶಕ್ತಿ ಶರಣ ಸಾಹಿತ್ಯವಾಗಿದೆ. ಇಂತಹ ಸಾಹಿತ್ಯವು ಮುಂದಿನ ದಿನಗಳಲ್ಲಿ ಸಮ್ಮೇಳನಗಳ ಮೂಲಕ ಹೆಚ್ಚು ಪ್ರಚಾರವಾಗಲಿ ಎಂದರು.

ಸಮ್ಮೇಳನ ಉದ್ಘಾಟಿಸಿದ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್ ಮಾತನಾಡಿ, ಸುತ್ತೂರು ಮಠದ ಹಿರಿಯ ಗುರುಗಳು ಶರಣ ಸಾಹಿತ್ಯ ಪರಿಷತ್ ಸ್ಥಾಪಿಸಿ ಈ ನಾಡಿನ ಮೂಲೆ ಮೂಲೆಗಳಿಗೆ ಬಸವಾದಿ ಶರಣರ ತತ್ತ್ವಗಳನ್ನು ಮುಟ್ಟಿಸಿದ್ದಾರೆ ಎಂದರು.

ಶರಣ ಸಾಹಿತ್ಯ ಸಮ್ಮೇಳನಕ್ಕೆ, ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಚಾಲನೆ ನೀಡಿದರು.

ಇಂದು ಅನೇಕ ಕಡೆ ಬಸವಾದಿ ಶರಣರ ಗದ್ದುಗೆಗಳು ಸುಸ್ಥಿಯಲ್ಲಿಲ್ಲ. ಗದ್ದುಗೆಗಳ ಅಭಿವೃದ್ಧಿಗಾಗಿ ಮುಂಬರುವ ರಾಜ್ಯ ಬಜಟ್‍ನಲ್ಲಿ ಅನುದಾನ ಮೀಸಲಿಡುವಂತೆ ಮುಖ್ಯಮಂತ್ರಿಗಳ ಬಳಿ ಮನವಿ ಮಾಡಲಾಗುವುದು. ಬಸವಾದಿ ಶರಣ ಸ್ಮಾರಕಗಳನ್ನು ಉಳಿಸಿ ಅಭಿವೃದ್ಧಿ ಪಡಿಸಲು ಸಮಗ್ರ ಯೋಜನೆಯನ್ನು ರೂಪಿಸಲು ನಾಡಿನ ಸ್ವಾಮೀಜಿಗಳು, ಮಠಾದೀಶರೊಂದಿಗೆ ಚರ್ಚಿಸಲಾಗುವುದು. ಮಾನ್ಯ ಮುಖ್ಯಮಂತ್ರಿಗಳು ಬಸವಣ್ಣನವರ ಹಾಗೂ ಬಸವಾದಿ ಶರಣರ ಚಿಂತನೆಗಳ ಬಗ್ಗೆ ನಮಗಿಂತ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ ಎಂದು ನುಡಿದರು.

ಬಸವಣ್ಣ ಸಾಂಸ್ಕøತಿಕ ನಾಯಕ ಎಂದು ಸರ್ಕಾರ ಘೋಷಣೆ ಮಾಡಿದೆ. ಬಸವಣ್ಣ ಎಂದೂ ಸ್ಥಾವರಕ್ಕೆ ಮಹತ್ವ ಕೊಟ್ಟಿರಲಿಲ್ಲ, ಚೈತನ್ಯಕ್ಕೆ ಮಹತ್ವ ಕೊಟ್ಟಿದ್ದರು. ಯಡಿಯೂರಪ್ಪ ಅವರು ಬಸವ ಕಲ್ಯಾಣದ ಅಭಿವೃದ್ಧಿಗೆ 600 ಕೋಟಿ ರೂ. ಬಿಡುಗಡೆ ಮಾಡಿದ್ದು, ಕಟ್ಟಡದ ಕೆಲಸ ನಡೆಯುತ್ತಿದೆ. ಅದಕ್ಕೆ ಜೀವಂತಿಕೆ ತುಂಬುವ ನಿಟ್ಟಿನಲ್ಲಿ ವಚನ ವಿಶ್ವವಿದ್ಯಾಲಯ ಮಾಡಬೇಕು.

| ಡಾ.ಬಸವಲಿಂಗ ಪಟ್ಟದ್ದೇವರು, ಬಾಲ್ಕಿ ಹಿರೇಮಠ.

ಶರಣ ಸಾಹಿತ್ಯ ಪರಿಷತ್ ಗೌರವಾಧ್ಯಕ್ಷರಾದ ಡಂಬಳದ ಡಾ.ತೋಂಟದ ಸಿದ್ದರಾಮ ಸ್ವಾಮೀಜಿ ಮಾತನಾಡಿ, ಶರಣ ಸಾಹಿತ್ಯ ಪರಿಷತ್ ನಾಡಿನ ಅದ್ಬುತ ಸಂಸ್ಥೆಯಾಗಿ ಬೆಳೆಯುತ್ತಿದೆ. ಇದೊಂದು ಅಮೂಲ್ಯ ಸಾಹಿತ್ಯ, ಕನ್ನಡ ಸಾಹಿತ್ಯದ ಆತ್ಮವಾಗಿ ಶರಣ ಸಾಹಿತ್ಯವಿದೆ ಎಂದು ವಿಶ್ಲೇಷಣೆ ಮಾಡಿದರು.

ಬಸವಾದಿ ಶಿವ ಶರಣರು ಇಂತಹ ಅಮೂಲ್ಯ ಕೊಡುಗೆಯನ್ನು ಕೊಡುವ ಮೂಲಕ ಸಮಾಜದಲ್ಲಿನ ಅಜ್ಞಾನ, ಅಂಧಶ್ರದ್ಧೆ ನಿರ್ಮೂಲನೆಗೆ ಶ್ರಮಿಸಿದ್ದಾರೆ. ವರ್ಣ, ಲಿಂಗ, ತಾರತಮ್ಯ ಮುಕ್ತ ಸರ್ವ ಸಮಾನತೆಯ ಸಮಾಜ ನಿರ್ಮಾಣ ಶರಣ ಸಾಹಿತ್ಯದ ಆಶಯವಾಗಿದೆ. ಸಕಲ ಜೀವಾತ್ಮರಿಗೆ ಲೇಸನ್ನೇ ಬಯಸುವ ಅಂಶ ಇದರಲ್ಲಿದೆ ಎಂದರು.

ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸಿದ್ದರು. ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಕಬೀರಾನಂದಾಶ್ರಮದ ಶ್ರೀ ಶಿವಲಿಂಗಾನಂದ ಸ್ವಾಮೀಜಿ, ಎಸ್‍ಜೆಎಂ ವಿದ್ಯಾಪೀಠದ ಆಡಳಿತ ಮಂಡಳಿ ಸದಸ್ಯರಾದ ಡಾ.ಬಸವಕುಮಾರ ಸ್ವಾಮೀಜಿ, ದಾವಣಗೆರೆ ವಿರಕ್ತ ಮಠದ ಡಾ.ಬಸವಪ್ರಭು ಸ್ವಾಮೀಜಿ, ಯೋಗ ಗುರು ಚನ್ನಬಸವಣ್ಣ, ಸಿದ್ದಯ್ಯನಕೋಟೆಯ ಶ್ರೀ ಬಸವಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.

ಸಮಾರಂಭದಲ್ಲಿ ನಾಡೋಜ ಗೊ.ರು.ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್, ಎಸ್.ಜೆ.ಎಂ.ವಿದ್ಯಾಪೀಠದ ಆಡಳಿತಮಂಡಳಿ ಅಧ್ಯಕ್ಷ ಶಿವಯೋಗಿ ಸಿ ಕಳಸದ, ಆಡಳಿತ ಮಂಡಳಿ ಸದಸ್ಯ ಎಸ್.ಎನ್.ಚಂದ್ರಶೇಖರ್ ಇತರರಿದ್ದರು. ಡಾ.ರೂಪ ಕಾರ್ಯಕ್ರಮ ನಿರ್ವಹಿಸಿದರು. ಜಿಲ್ಲಾಧ್ಯಕ್ಷ ಡಾ.ಕೆ.ಎಂ.ವೀರೇಶ್ ಸ್ವಾಗತಿಸಿದರು.

ಸಾಂಸ್ಕøತಿಕ ನಾಯಕ ಬಸವಣ್ಣ:

ಶರಣ ಸಾಹಿತ್ಯ ಸಮ್ಮೇಳನದ ಮೊದಲ ಚಿಂತನ ಗೋಷ್ಠಿಯಲ್ಲಿ ಸಾಂಸ್ಕøತಿಕ ನಾಯಕ ಬಸವಣ್ಣ ಕುರಿತು ವಿಚಾರ ಸಂಕಿರಣ ನಡೆಯಿತು.
ಬೇಲಿ ಮಠದ ಶ್ರೀ ಶಿವರುದ್ರ ಸ್ವಾಮೀಜಿ ಮಾತನಾಡಿ, ಬಸವಣ್ಣನವರು ನಿರ್ಮಿಸಿದ ಅನುಭವ ಮಂಟಪಕ್ಕೆ ಕಾಶ್ಮೀರದಿಂದ ಕನ್ಯಾಕುಮಾರಿವರೆಗಿನ ಜನ ಬಂದು ಸೇರಿದರು. ಬಸವಣ್ಣ ಒಬ್ಬರು ಮಾಡಿದ ಕಾರ್ಯವನ್ನು ನಾವೆಲ್ಲರೂ ಸೇರಿ ಮಾಡಲು ಸಾಧ್ಯವಿಲ್ಲ. ಬಸವಣ್ಣನವರು ನಡೆ-ನುಡಿ ಒಂದೇ ಆಗಿತ್ತು. ಬಸವಣ್ಣನವರ ಹೆಜ್ಜೆಯ ಜೊತೆಗೆ ನಾವೆಲ್ಲರೂ ಸಾಗುತ್ತೇವೆ ಎಂಬುದು ಗೋಷ್ಠಿಯ ಮೂಲ ಉದ್ದೇಶವಾಗಬೇಕು ಎಂದು ನುಡಿದರು.

ಶರಣರ ವಚನಗಳನ್ನು ಪಾಲಿಸಿ ಒಳ್ಳೆಯ ಜೀವನ ನಡೆಸುವಂತೆ ಶರಣರು ಸಂದೇಶ ನೀಡುರುತ್ತಾರೆ. ಶರಣ ತತ್ತ್ವಗಳು, ಸಂದೇಶಗಳು ಸಮಾಜಕ್ಕೆ ಈ ಸಮ್ಮೇಳನದ ಮೂಲಕ ತಲುಪುವಂತಾಗಲಿ.

| ಡಾ.ಎಸ್.ಆರ್.ಗುಂಜಾಳ, ನಿಕಟಪೂರ್ವ ಸಮ್ಮೇಳನಾಧ್ಯಕ್ಷರು.

ಧಾರವಾಡ ಮುರುಘಾ ಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮಿಗಳು ಮಾತನಾಡಿ, ಎನಗಿಂತ ಕಿರಿಯರಿಲ್ಲ ಶರಣರಿಗಿಂತ ಹಿರಿಯರಿಲ್ಲ ಎಂದು ಹೇಳಿದ ಮಹಾನ್ ವ್ಯಕ್ತಿ ಬಸವಣ್ಣನವರು. ನುಡಿದಂತೆ ನಡೆ, ಈ ರೀತಿಯಾಗಿ ನುಡಿದು ನಡೆದ ಏಕೈಕ ವ್ಯಕ್ತಿಯೆಂದರೆ ಬಸವಣ್ಣನವರು. ಈ ಕಾರಣಕ್ಕಾಗಿ ಬಸವಣ್ಣನವರನ್ನು ಸಾಂಸ್ಕøತಿಕ ನಾಯಕ ಎನ್ನುತ್ತಾರೆ ಎಂದರು.

ಅಧ್ಯಕ್ಷತೆ ವಹಿಸಿದ್ದ ದಾವಣಗೆರೆ ವಿವಿ ಕುಲಪತಿ ಪ್ರೊ.ಬಿ.ಡಿ.ಕುಂಬಾರ ಮಾತನಾಡಿ, ಬಸವಣ್ಣನವರು ಬರಿ ಕರ್ನಾಟಕಕ್ಕೆ ಸಾಂಸ್ಕøತಿಕ ನಾಯಕರಲ್ಲ. ಅವರು ಇಡೀ ವಿಶ್ವಕ್ಕೆ ಸಾಂಸ್ಕøತಿಕ ನಾಯಕ. ಬಸವಣ್ಣನವರ ಪ್ರತಿಮೆಗಳನ್ನು ವಿಶ್ವದ ಹಲವು ಭಾಗಗಳಲ್ಲಿ ನಿರ್ಮಾಣ ಮಾಡಲಾಗಿದೆ ಎಂದು ಹೇಳಿದರು.

Sharana sahitya sammelena
ಶರಣ ಸಾಹಿತ್ಯ ಸಮ್ಮೇಳನಕ್ಕೆ, ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಚಾಲನೆ ನೀಡಿದರು

ಸಾಂಸ್ಕøತಿಕ, ಶೈಕ್ಷಣಿಕ, ಧಾರ್ಮಿಕ, ಸಾಮಾಜಿಕ ಕ್ರಾಂತಿಯನ್ನು ಮಾಡಿದವರು ಬಸವಣ್ಣ. ಕಾಯಕದಿಂದ ಬಂದ ಹಣದಿಂದ ದಾಸೋಹ ಮಾಡುವ ಪರಿಕಲ್ಪನೆ ಬಂದಿದ್ದು ಬಸವಣ್ಣನವರಿಂದ. ಬಸವಣ್ಣನವರು ಹಾಕಿಕೊಟ್ಟ ಭದ್ರಬುನಾದಿಯನ್ನು ಮಠಮಾನ್ಯಗಳು ಶಿಕ್ಷಣದ ಮೂಲಕ ಮುಂದುವರೆಸಿಕೊಂಡು ಹೋಗುತ್ತಿವೆ. ಜೀವನಕ್ಕೆ ಕಾಯಕವೇ ಆಧಾರ. ನಮ್ಮ ಕಾಯಕದ ಹಣದಿಂದ ಸಮಾಜಕ್ಕೆ ಕೊಡುಗೆಂiÀiನ್ನು ನಾವು ಸಹ ನೀಡಬೇಕು. 12ನೇ ಯ ಶತಮಾನದ ಬಸವಾದಿ ಶರಣರು ನಮ್ಮ ಜೀವನಕ್ಕೆ ಮಾದರಿಯಾಗಿದ್ದಾರೆ. ಅವರ ಕಾಯಕ ನಿಷ್ಠೆಯನ್ನು ನಾವು ಸಹ ಜೀವನದಲ್ಲಿ ಅಳವಡಿಸಿಕೊಳ್ಳೋಣ ಎಂದು ನುಡಿದರು.

ಜಾನಪದ ತಜ್ಞ ಡಾ.ಬಸವರಾಜ ನೆಲ್ಲಿಸರ ಮಾತನಾಡಿ, ಬಸವಣ್ಣನವರು ಕಟ್ಟಿದ ಮಹಾಮನೆಗೆ ಬಾಗಿಲುಗಳಿರಲಿಲ್ಲ. ಸರ್ವರಿಗೂ ಪ್ರವೇಶವಿತ್ತು. ಪ್ರಜಾಪ್ರಭುತ್ವದ ನಿಲುವು ಹೊಂದಿದ್ದ ಬಸವಣ್ಣನವರು ಕ್ರಿಯಾಶೀಲತೆ, ಪ್ರಾಮಾಣಿಕತೆ, ವೈಚಾರಿಕತೆಗಳನ್ನು ಹೊಂದಿದ್ದವರು. ಲೋಕದ ಡೊಂಕು ತಿದ್ದುವ ಮೊದಲು ನಿಮ್ಮೊಳಗಿನ ಡೊಂಕನ್ನು ತಿದ್ದುಕೊಳ್ಳಿ ಎಂದು ಹೇಳಿ ಸ್ತ್ರೀ ಸಮಾನತೆ, ನಿಷ್ಕಲ್ಮಷ ದುಡಿಮೆಯನ್ನು ತಿಳಿಸಿದವರು ಬಸವಣ್ಣ ಎಂದು ಬಣ್ಣಿಸಿದರು.

ಟಿ.ಪಿ.ಗಣೇಶ್, ನಿವೃತ್ತ ಪ್ರಾಧ್ಯಾಪಕ ಡಾ.ಕೆ.ರವೀಂದ್ರನಾಥ, ಪ್ರೊ.ಡಿ.ಎಂ.ಹಿರೇಮಠ, ಹಿರಿಯ ಪತ್ರಕರ್ತ ಜಿ.ಎಸ್.ಉಜ್ಜಿನಪ್ಪ, ನಿವೃತ್ತ ಪ್ರಾಚಾರ್ಯ ಜೆ.ಯಾದವರೆಡ್ಡಿ ಉಪಸ್ಥಿತರಿದ್ದರು.

ಶರಣ ಸಾಹಿತ್ಯದಲ್ಲಿ ಮಹಿಳಾ ಸಂವೇದನೆ:

ಶರಣ ಸಾಹಿತ್ಯದಲ್ಲಿ ಮಹಿಳಾ ಸಂವೇದನೆ ವಿಚಾರ ಕುರಿತ ಚಿಂತನ ಗೋಷ್ಠಿಯ ಅಧ್ಯಕ್ಷತೆ ವಹಿಸಿದ್ದ ಡಾ.ವಿಜಯಶ್ರೀ ಸಬರದ ಮಾತನಾಡಿ, ಸರ್ಕಾರ ವಚನ ಸಾಹಿತ್ಯ ಪ್ರಾಧಿಕಾರ ರಚಿಸಬೇಕು. ವಚನ ಸಾಹಿತ್ಯದಲ್ಲಿ 39 ವಚನಕಾರ್ತಿಯರಿದ್ದಾರೆ ಎಂದರು.

ಶರಣೆಯರ ವಿಚಾರಧಾರೆಗಳು ನಮಗೆ ಇಂದು ಬದುಕಿಗೆ ಮಾರ್ಗದರ್ಶನವಾಗಿವೆ. ಭಕ್ತಿಗೆ ಹೊಸ ಆಯಾಮವನ್ನು ನೀಡಿ ಅಂಧ ಭಕ್ತಿಯನ್ನು ತಿರಸ್ಕರಿಸಿದವರು. ಭಕ್ತಿಯೆಂದರೆ ಅಂತರಿಕ ಶುದ್ಧತೆ ಎಂದು ಶರಣೆಯರು ಹೇಳಿದ್ದಾರೆ. ಲೋಕವೇ ತಾನಾಗುವ ಮೂಲಕ ಸಂಸಾರದಲ್ಲಿದ್ದು ಶಾಂತಿ ಪಡೆದಾಗ ಏಕಾಂತದ ಹಂಗು ಇರುವುದಿಲ್ಲ ಎಂದು ಅಕ್ಕಮಹಾದೇವಿ ಹೇಳಿದ್ದಾರೆ ಎಂದು ವಿವರಿಸಿದರು.

ಭದ್ರಾವತಿಯ ಡಾ| ವಿಜಯದೇವಿ ಮಾತನಾಡಿ, 12ನೇ ಶತಮಾನದಲ್ಲಿ ಮಹಿಳೆಯರಿಗೆ ವಿಶೇಷ ಸ್ಥಾನಮಾನವನ್ನು ನೀಡಿದವರು ಬಸವಣ್ಣ. ಆಧುನಿಕ ಸಂವಿಧಾನ ಇದನ್ನು ಮೀರುವುದಕ್ಕೆ ಸಾಧ್ಯವಾಗಿಲ್ಲ ಏಕೆ ಎಂದು ಪ್ರಶ್ನಿಸಿದರು.

ವಚನ ಸಾಹಿತ್ಯದ ಗೋಷ್ಠಿಗಳು ಈ ರೀತಿ ಪ್ರತಿವರ್ಷ ಆಗಬೇಕು. ಸ್ವಾತಂತ್ರ್ಯ, ಸಮಾನತೆ, ಮಾನವತೆ, ಸೌಭಾಗ್ಯ ಈ ಸ್ವತಂತ್ರವನ್ನು 12ನೇ ಶತಮಾನದ ವಚನಕಾರ್ತಿಯರು ಬಸವಣ್ಣನವರಿಂದ ಪಡೆದುಕೊಂಡಿದ್ದರು. ಎಲ್ಲಾ ಕ್ಷೇತ್ರಗಳಲ್ಲಿ ಮಹಿಳೆಯರು ದಾಪುಗಾಲು ಹಾಕುತ್ತಿದ್ದಾರೆ. ಆದರೂ ಸವಾಲು ಸಮಸ್ಯೆಗಳು ಸಾಕಷ್ಟಿವೆ. ಈ ಸಮಸ್ಯೆಗಳಿಗೆ ಉತ್ತರಗಳ ದೊರೆತಿದ್ದು 12ನೇ ಶತಮಾನದ ಅನುಭವಮಂಟಪದ ಗೋಷ್ಠಿಯಲ್ಲಿ ಎಂದರು.

ಈ ಬಜೆಟ್‍ನಲ್ಲಿ ಶರಣ ಸಾಹಿತ್ಯ ಪ್ರಸಾರ, ಬಸವ ಭವನಗಳಿಗೆ 500 ಕೋಟಿ ಮೀಸಲಿಡಬೇಕು. ಸಾಂಸ್ಕøತಿಕ ನಾಯಕ ಬಸವಣ್ಣ ಪರಿಕಲ್ಪನೆ ಸಾಕಾರಗೊಳಿಸಲು ಸಮಿತಿ ರಚಿಸಬೇಕು. 1 ರಿಂದ 12ನೇ ತರಗತಿ ಪಠ್ಯದಲ್ಲಿ ಶರಣ ಸಾಹಿತ್ಯ ಅಳವಡಿಸಬೇಕು. ದಾವಣಗೆರೆ ವಿವಿಗೆ ಎಸ್.ನಿಜಲಿಂಗಪ್ಪ ಹೆಸರು ನಾಮಕರಣ ಆಗಬೇಕು.

| ಡಾ.ಸಿ.ಸೋಮಶೇಖರ್, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷರು.

ಬೆಲ್ದಾಳ ಶರಣರಿಗೆ ಕೋಟೆನಾಡಿನ ಸ್ವಾಗತ:

ಕೋಟೆನಾಡು ಚಿತ್ರದುರ್ಗದಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ 13ನೇ ಶರಣ ಸಾಹಿತ್ಯ ಸಮ್ಮೇಳನಕ್ಕೆ ಅದ್ದೂರಿ ಚಾಲನೆ ದೊರೆಯಿತು.
ಸಮ್ಮೇಳನದ ಸರ್ವಾಧ್ಯಕ್ಷರಾದ ಬೀದರ್‍ನ ಡಾ. ಸಿದ್ಧರಾಮ ಬೆಲ್ದಾಳ ಶರಣರನ್ನು ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಸ್ವಾಗತಿಸಿ ಮೆರವಣಿಗೆ ಮೂಲಕ ಮುರುಘಾ ಮಠಕ್ಕೆ ಕರೆತರಲಾಯಿತು.

ಶನಿವಾರ ಬೆಳಗ್ಗೆ 8 ಗಂಟೆಗೆ ಮಠದ ಮುಂಭಾಗದಲ್ಲಿ ಪರಿಷತ್ ಹಾಗೂ ರಾಷ್ಟ್ರಧ್ವಜಾರೋಹಣ ಕಾರ್ಯಕ್ರಮದ ಮೂಲಕ ಅಧಿಕೃತವಾಗಿ ಚಾಲನೆ ದೊರೆಯಿತು.

ಎಸ್.ಜೆ.ಎಂ.ವಿದ್ಯಾಪೀಠದ ಆಡಳಿತ ಮಂಡಳಿ ಅಧ್ಯಕ್ಷ ಶಿವಯೋಗಿ ಸಿ ಕಳಸದ ಹಾಗೂ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ.ಸಿ.ಸೋಮಶೇಖರ್ ಧ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭದಲ್ಲಿ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ, ಹೆಬ್ಬಾಳು ರುದ್ರೇಶ್ವರ ವಿರಕ್ತಮಠದ ಶ್ರೀ ಮಹಾಂತರುದ್ರೇಶ್ವರ ಸ್ವಾಮೀಜಿ, ರಾವಂದೂರು ಮಠದ ಶ್ರೀ ಮೋಕ್ಷಪತಿ ಸ್ವಾಮೀಜಿ, ಮಡಿವಾಳ ಮಾಚಿದೇವ ಗುರುಪೀಠದ ಶ್ರೀ ಬಸವ ಮಾಚಿದೇವ ಸ್ವಾಮೀಜಿ, ಅಥಣಿ ಗಚ್ಚಿನಮಠದ ಶ್ರೀ ಶಿವಬಸವ ಸ್ವಾಮೀಜಿ, ಬ್ಯಾಡಗಿಯ ಶ್ರೀ ಚನ್ನಮಲ್ಲಿಕಾರ್ಜುನ ಸ್ವಾಮೀಜಿ, ಮಾಜಿ ಸಚಿವ ಎಸ್.ಎಸ್.ಪಾಟೀಲ್. ಕದಳೀ ವೇದಿಕೆ ಪದಾಧಿಕಾರಿಗಳು, ಎಸ್.ಜೆ.ಎಂ.ವಿದ್ಯಾಪೀಠದ ವಿವಿಧ ಶಾಲಾ-ಕಾಲೇಜುಗಳ ಮುಖ್ಯಸ್ಥರು, ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:13th Sharan Sahitya Sammelna13ನೇ ಶರಣ ಸಾಹಿತ್ಯ ಸಮ್ಮೇಳನAkhil Bharat Sharan Sahitya ParishadAnubhav MantapaChitradurgaChitradurga LatestChitradurga newsfeaturedKannada NewsMB PatilMuruga MathSattur Sriಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ಅನುಭವ ಮಂಟಪಎಂ.ಬಿ.ಪಾಟೀಲ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಲೇಟೆಸ್ಟ್ಮುರುಘಾ ಮಠಸುತ್ತೂರು ಶ್ರೀ
Share This Article
Facebook Email Print
Previous Article Gnangangotri PG Center ಜ್ಞಾನಗಂಗೋತ್ರಿ ಪಿಜಿ ಸೆಂಟರ್ | ವಿದ್ಯಾರ್ಥಿಗಳ ಕ್ರೀಡಾಕೂಟ
Next Article today bhavishya Astrology: ದಿನ ಭವಿಷ್ಯ | ಜನವರಿ 19 | ಹೊಸ ವಸ್ತ್ರ, ಆಭರಣ ಖರೀದಿ, ನಿರುದ್ಯೋಗಿಗಳಿಗೆ ಶುಭ ಸುದ್ದಿ
Leave a Comment

Leave a Reply Cancel reply

Your email address will not be published. Required fields are marked *

Clove
ಕೆಮ್ಮು ನಿವಾರಿಸಲು ಲವಂಗಗಳು ಪ್ರಯೋಜನಕಾರಿ; ಅದನ್ನು ಬಳಸುವುದು ಹೇಗೆ ಗೊತ್ತಾ?
Life Style
ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ
ಜಿಲ್ಲಾ ಕೃಷಿಕ ಸಮಾಜ ಕಾರ್ಯಕಾರಿ ಸಮಿತಿ ಸಭೆ ಜುಲೈ 30ಕ್ಕೆ 
ಮುಖ್ಯ ಸುದ್ದಿ
darken your hair naturally
ಕೂದಲನ್ನು ನೈಸರ್ಗಿಕವಾಗಿ ಕಪ್ಪಾಗಿಸಲು ಈ ಸಲಹೆ ಪಾಲಿಸಿರಿ
Life Style
Agniveer
ಸಿಕಂದರಾಬಾದ್‍ನಲ್ಲಿ ಅಗ್ನಿವೀರ್ ನೇಮಕಾತಿ ರ್ಯಾಲಿ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Loading Comments...
Welcome Back!

Sign in to your account

Username or Email Address
Password

Lost your password?

Not a member? Sign Up