By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ತಾಲೂಕು ಮಟ್ಟದ ದಸರಾ ಕ್ರೀಡಾಕೂಟ | ಆನ್‌ಲೈನ್ ನೋಂದಣಿ ಕಡ್ಡಾಯ
    3 hours ago
    ನಾಳೆಯಿಂದ ಅಂತರ ಕಾಲೇಜು ಬಾಸ್ಕೆಟ್‌ಬಾಲ್ ಪಂದ್ಯಾವಳಿ
    3 hours ago
    ಚಿತ್ರದುರ್ಗ ಶಾಖಾ ಕಾಲುವೆ
    ಭದ್ರ ಹರಿವು ಮತ್ತೆ ಆರಂಭ | ಸಮಸ್ಯೆ ಬಗೆಹರಿಸಿದ ಸಚಿವ ಟಿ.ರಘುಮೂರ್ತಿ
    4 hours ago
    ಮಂಟೇಸ್ವಾಮಿ ಅವರ ಜೀವನ ಹಾಗೂ ಸಾಧನೆ ಕುರಿತು ಡಾ. ಪಿ.ಎಸ್. ಶಂಕರ್ ಮಾತನಾಡಿದರು
    ಮಂಟೇಸ್ವಾಮಿಯವರ ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು | ಡಾ.ಪಿ.ಎಸ್. ಶಂಕರ್
    14 hours ago
    ಟೌನ್ ಕೋ-ಆಪರೇಟಿವ್ ಸೊಸೈಟಿ ವಾರ್ಷಿಕ ಸಾಮಾನ್ಯ ಮಹಾಸಭೆ
    ಚಿತ್ರದುರ್ಗ ಟೌನ್ ಕೋ-ಆಪರೇಟಿವ್ ಸೊಸೈಟಿಗೆ ₹22.11 ಲಕ್ಷ ನಿವ್ವಳ ಲಾಭ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    3 weeks ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    3 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    4 days ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    2 hours ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    3 days ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    4 days ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 07 | ಉದ್ಯೋಗದಲ್ಲಿ ಅಧಿಕಾರಿಗಳಿಂದ ಬೆಂಬಲ, ಅರೋಗ್ಯದಲ್ಲಿ ಎಚ್ಚರ
    15 hours ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 06 | ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ, ಹಠಾತ್ ಆರ್ಥಿಕ ಲಾಭದ ಸೂಚನೆ
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 05 | ಶ್ರಮಕ್ಕೆ ತಕ್ಕ ಫಲಿತಾಂಶ ಅರೋಗ್ಯದಲ್ಲಿ ಜಾಗೃತಿ ವಹಿಸಿ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 04 | ಉದ್ಯೋಗಗಳಲ್ಲಿ ಕೆಲಸದ ಒತ್ತಡ, ದೂರದ ಪ್ರಯಾಣ ಬೇಡ
    4 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 03 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಉದ್ಯೋಗದಲ್ಲಿ ಗೊಂದಲದ ಪರಿಸ್ಥಿತಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 07 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್ ಎಷ್ಟಿದೆ?
    8 hours ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 05 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 04 | ರಾಗಿ, ಶೇಂಗಾ ರೇಟ್…..
    3 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 02 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    2 days ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    2 days ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    1 week ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    3 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    4 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    3 months ago
  • Life Style
    Life StyleShow More
    Women's breasts
    ಮಹಿಳೆಯರು ಸ್ತನಗಳನ್ನು ಆರೋಗ್ಯವಾಗಿಡಲು ಪ್ರತಿದಿನ ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಿ
    14 hours ago
    Pineapple
    ಅನಾನಸ್‌ನ ಹಣ್ಣಿನ ಮಧ್ಯದಲ್ಲಿರುವ ಗಟ್ಟಿ ಭಾಗ ತಿಂದರೆ ಏನಾಗುತ್ತದೆ ಗೊತ್ತಾ?
    15 hours ago
    white and blue conch flowers
    ಬಿಳಿ ಮತ್ತು ನೀಲಿ ಶಂಖಪುಷ್ಪ ಹೂಗಳಲ್ಲಿ ಸೇವಿಸಲು ಯಾವುದು ಉತ್ತಮ?
    2 days ago
    coconut oil to your hair
    ಕೂದಲಿಗೆ ತೆಂಗಿನ ಎಣ್ಣೆ ಹಚ್ಚುವಾಗ ಈ ತಪ್ಪು ಮಾಡಿದರೆ ನಿಮ್ಮ ಕೂದಲಿಗೆ ಹಾನಿಯಾಗಬಹುದು
    2 days ago
    PCOS
    ಪಿಸಿಓಎಸ್‍ನಿಂದ ಬಳಲುತ್ತಿರುವವರು ಈ ಹಣ್ಣುಗಳನ್ನು ತಿನ್ನಿ
    3 days ago
Reading: ಭದ್ರಾ ಮೇಲ್ದಂಡೆ ಕಾಮಗಾರಿಗಳು ಸ್ಥಗಿತವಾಗಿಲ್ಲ |ಗುತ್ತಿಗೆದಾರಿಗೆ ಈ ವರ್ಷ 800 ಕೋಟಿ ಪಾವತಿಸಲಾಗಿದೆ | ಸಿಎಂ ಸಿದ್ದರಾಮಯ್ಯ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಭದ್ರಾ ಮೇಲ್ದಂಡೆ ಕಾಮಗಾರಿಗಳು ಸ್ಥಗಿತವಾಗಿಲ್ಲ |ಗುತ್ತಿಗೆದಾರಿಗೆ ಈ ವರ್ಷ 800 ಕೋಟಿ ಪಾವತಿಸಲಾಗಿದೆ | ಸಿಎಂ ಸಿದ್ದರಾಮಯ್ಯ

News Desk Chitradurga News
Last updated: 23 January 2025 18:53
News Desk Chitradurga News
2 years ago
Share
ವಿವಿ ಸಾಗರಕ್ಕೆ ಬಾಗೀನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ
SHARE

CHITRADURGA NEWS | 23 JANUARY 2025

ಚಿತ್ರದುರ್ಗ: ಭದ್ರಾ ಮೇಲ್ದಂಡೆ ಕಾಮಗಾರಿಗಳು ಸ್ಥಗಿತವಾಗಿಲ್ಲ ಆದರೆ ಶೀಘ್ರಗತಿಯಲ್ಲಿ ಕಾಮಗಾರಿಗಳು ನಡೆಯುತ್ತಿಲ್ಲ. ಗುತ್ತಿಗೆದಾರಿಗೆ ಈ ವರ್ಷ 800 ಕೋಟಿಗಳನ್ನು ಪಾವತಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Also Read: ವಿವಿ ಸಾಗರಕ್ಕೆ ಬಾಗೀನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ

ಅವರು ಇಂದು ಚಿತ್ರದುರ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಭದ್ರಾ ಮೇಲ್ದಂಡೆ ಯೋಜನೆಗೆ ಹಣ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಡ:

ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂ.ಗಳನ್ನು ನೀಡುವುದಾಗಿ 2023-24 ರ ಕೇಂದ್ರ ಬಜೆಟ್ನಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಘೋಷಿಸಿದ್ದರು. ಅದೇ ಸಂದರ್ಭದಲ್ಲಿ ಮುಖ್ಯಮಂತ್ರಿಯಾಗಿದ್ದ ಬಸವರಾಜ ಬೊಮ್ಮಾಯಿಯವರು ತಮ್ಮ ಬಜೆಟ್ ನಲ್ಲಿಯೂ ಇದನ್ನು ಪುನರುಚ್ಚರಿಸಿದ್ದರು.

ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಮಾಡುವುದಾಗಿ ಹೇಳಿದ್ದರು. ಇಷ್ಟು ವರ್ಷಗಳಾದರೂ ಒಂದು ಪೈಸೆಯೂ ರಾಜ್ಯಕ್ಕೆ ಬಂದಿಲ್ಲ. ಸರ್ಕಾರ ಅನೇಕ ಬಾರಿ ಕೇಂದ್ರ ಸರ್ಕಾರಕ್ಕೆ ಮನವಿಯನ್ನು ನೀಡಿದ್ದು, ಪ್ರಧಾನಿಗಳು, ನಿರ್ಮಲಾ ಸೀತಾರಾಮನ್, ಅಮಿತ್ ಶಾ ಅವರನ್ನೂ ಭೇಟಿ ಮಾಡಲಾಗಿದೆ. ಅವರೇ ಬಜೆಟ್ ನಲ್ಲಿ ಘೋಷಣೆ ಮಾಡಿರುವುದನ್ನು ಕೊಡಿ ಎಂದರೂ ಬಿಡುಗಡೆ ಮಾಡಿಲ್ಲ ಎಂದರು..

Also Read: KSRTC ಬಸ್ ನಿಲ್ದಾಣಕ್ಕೆ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಭೇಟಿ | ಅವ್ಯವಸ್ಥೆ ಕಂಡು ತೀವ್ರ ಅಸಮಾಧಾನ 

 ನನ್ನನ್ನೂ ಒಳಗೊಂಡಂತೆ ಉಪಮುಖ್ಯಮಂತ್ರಿಗಳು ಭೇಟಿಯಾಗಿ ಬಂದಿದ್ದೇವೆ. ನಬಾರ್ಡ್ ನಲ್ಲಿ ರಾಜ್ಯಕ್ಕೆ ಬರಬೇಕಾದ ಸಾಲದ ಮೊತ್ತ ಕಡಿತವಾಗಿರುವ ಹಿನ್ನೆಲೆಯಲ್ಲಿ ಇತ್ತೀಚೆಗೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿದಾಗಲೂ ಈ ವಿಷಯವನ್ನು ಪ್ರಸ್ತಾಪಿಸಲಾಯಿತು . ಆದರೆ ಇಂದಿನವರೆಗೂ ಒಂದು ರೂಪಾಯಿ ಬಿಡುಗಡೆಯಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಬಜೆಟ್ ನಲ್ಲಿಯಾದರೂ ಹಣ ಮೀಸಲಿಟ್ಟು ಬಿಡುಗಡೆ ಮಾಡಲಿ ಎಂದು ಪತ್ರವನ್ನು ಕೇಂದ್ರಕ್ಕೆ ಬರೆದು ಒತ್ತಡ ಹಾಕಲಾಗುತ್ತಿದೆ.

ರೈತರ ಜಮೀನು ಮುಳುಗಡೆಯಾಗದಂತೆ ತಡೆಯಲು ಪ್ರಯತ್ನ:

ಹೊಸದುರ್ಗ ತಾಲ್ಲೂಕಿನ ಹಿನ್ನೀರಿನಲ್ಲಿ ರೈತರ ಜಮೀನು ಮುಳುಗಡೆಯಾಗಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಮುಳುಗಡೆಯಾಗದ ರೀತಿಯಲ್ಲಿ ತಡೆಯುವ ಪ್ರಯತ್ನವನ್ನು ಸರ್ಕಾರ ಮಾಡಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

Also Read: APMC: ಮಾರುಕಟ್ಟೆ ಧಾರಣೆ | ಇಂದಿನ ಹತ್ತಿ ರೇಟ್ ಎಷ್ಟಿದೆ? 

ವಾಣಿ ವಿಲಾಸ ಸಾಗರ ಅಣೆಕಟ್ಟೆಗೆ 115 ವರ್ಷಗಳ ಇತಿಹಾಸವಿದೆ. ಇಷ್ಟು ವರ್ಷಗಳಲ್ಲಿ ಈ ಅಣೆಕಟ್ಟು ಕೋಡಿ ಬಿದ್ದಿರುವುದು ಮೂರು ಬಾರಿ ಮಾತ್ರ. ಅಂದರೆ 1933, 2022 ಹಾಗೂ ಜನವರಿ 14, 2025 ರಲ್ಲಿ ಕೋಡಿ ಬಿದ್ದಿದೆ. ಕರ್ನಾಟಕದ ಮೊದಲನೇ ಜಲಾಶಯ ಇದಾಗಿದ್ದು, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ತಾಯಿ ಸಂಪಾಜಮ್ಮಣಿಯವರ ಹೆಸರಿನಲ್ಲಿ ಕಟ್ಟಿಸಿದ್ದು, ವಾಣಿ ವಿಲಾಸ ಸಾಗರ ಎಂದು ಕರೆಯಲಾಗಿದೆ.

1898 ನೇ ಇಸವಿಯಲ್ಲಿ ಪ್ರಾರಂಭವಾಗಿ 1907 ರಲ್ಲಿ ಅಣೆಕಟ್ಟು ನಿರ್ಮಾಣ ಮುಕ್ತಾಯವಾಯಿತು. 30.ಟಿ.ಎಂ.ಸಿ ನೀರು ಶೇಖರಣೆ ಮಾಡುವ ಸಾಮರ್ಥ್ಯವಿರುವ ಅಣೆಕಟ್ಟು 33 ಸಾವಿರ ಎಕರೆಗೆ ನೀರುಣಿಸುತ್ತದೆ ಎಂದು ಸಿಎಂ ವಿವರಿಸಿದರು.

ಈ ಜಿಲ್ಲೆಯ ಅನೇಕ ತಾಲ್ಲೂಕುಗಳು ಬರಪೀಡಿತ ಎಂದು ಆಗ ಹಳೇ ಮೈಸೂರಿನಲ್ಲಿ ರಾಜರ ಪ್ರತಿನಿಧಿಯಾಗಿದ್ದ ಸಂಪಾಜಮ್ಮಣ್ಣಿಯವರು ಈ ಕೆರೆಯನ್ನು ನಿರ್ಮಾಣ ಮಾಡಿದರು .ಈ ಭಾಗದಲ್ಲಿ ಮಳೆ ಕಡಿಮೆಯಿರುವುದರಿಂದ ಅಣೆಕಟ್ಟು ನಿರ್ಮಿಸಿದರೆ ಈ ಭಾಗದ ಜನರಿಗೆ ನೀರು ದೊರೆಯಲಿದೆ ಎಂಬ ಉದ್ದೇಶದಿಂದ ಅವರ ಒಡವೆಗಳನ್ನು ಅಡವಿಟ್ಟು ಸುಮಾರು 45 ಲಕ್ಷ ರೂ.ಗಳನ್ನು ವೆಚ್ಚ ಮಾಡಿದ್ದರು ಎಂದು ತಿಳಿಸಿದರು.

ಸಮೃದ್ಧ ಮಳೆಗಾಗಿ ಪ್ರಾರ್ಥನೆ:

ಇಂದು ಗಂಗಾಪೂಜೆಯನ್ನು ಮಾಡಿ ಬಾಗಿನ ಅರ್ಪಿಸಿದ್ದೇವೆ. ಪ್ರತಿ ವರ್ಷವೂ ರೈತರ ಜಮೀನುಗಳಿಗೆ ನೀರು ಸಿಗುವಂತಾಗಲಿ ಒಳ್ಳೆ ಮಳೆ, ಬೆಳೆಯಾಗಿ ಪ್ರತಿ ವರ್ಷವೂ ಕೋಡಿ ಬೀಳುವಂತೆ ಕೆರೆಗೆ ನೀರು ಬರಲಿ ಎಂದು ದೇವರಲ್ಲಿ ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

Also Read: ಬಿಜೆಪಿಗೆ ನೂತನ ಮಂಡಲ ಅಧ್ಯಕ್ಷರ ಆಯ್ಕೆ

ಭದ್ರಾ ಮೇಲ್ದಂಡೆ ಯೋಜನೆ ಅನುಷ್ಠಾನವಾದರೆ ಪ್ರತಿ ವರ್ಷವೂ ಅಣೆಕಟ್ಟಿಗೆ ನೀರು ಹರಿಯಲಿದೆ ಎಂದರು.

ಕಾಂಗ್ರೆಸ್ ಪಕ್ಷದಲ್ಲಿ ಒಗ್ಗಟ್ಟಿದೆ, ಸರ್ಕಾರ ಸುಭದ್ರವಾಗಿದೆ:

ಬಿಜೆಪಿಯಲ್ಲಿ ಎರಡು ಮೂರು, ನಾಲ್ಕು ಗುಂಪುಗಳಿವೆ, ನಮ್ಮ ಪಕ್ಷದಲ್ಲಿ ಯಾವುದೇ ಗುಂಪುಗಳಿಲ್ಲ. ನಾನು ಮತ್ತು ಡಿ.ಕೆ ಶಿವಕುಮಾರ್ ಇಲ್ಲಿಯೇ ಇದ್ದೇವೆ. ನಮ್ಮಲ್ಲಿ ಗುಂಪುಗಳಿಲ್ಲ. ಬಿಜೆಪಿಯಲ್ಲಿ ಕಚ್ಚಾಟ ನಡೆದಿದೆ. ಆದರೆ ಕಾಂಗ್ರೆಸ್ ಪಕ್ಷದಲ್ಲಿ ಒಗ್ಗಟ್ಟಿದೆ. ಸರ್ಕಾರ ಸುಭದ್ರವಾಗಿದ್ದು, ನಾವು ಐದು ವರ್ಷ ಅಧಿಕಾರ ನಡೆಸಿ 2028 ನಡೆಯುವ ಚುನಾವಣೆಯಲ್ಲಿ ಗೆದ್ದು ಮತ್ತೆ ಅಧಿಕಾರಕ್ಕೆ ಬರಲಿದ್ದೇವೆ ಎಂದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:BJPChitradurgaChitradurga newsChitradurga UpdatesCM SiddaramaiahcongressKannada Latest NewsKannada NewsUpper BhadraUpper Bhadra ProjectVani Vilasa Sagarworkಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಕಾಂಗ್ರೆಸ್ಕಾಮಗಾರಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಬಿಜೆಪಿಭದ್ರಾ ಮೇಲ್ದಂಡೆವಾಣಿ ವಿಲಾಸ ಸಾಗರಸಿಎಂ ಸಿದ್ದರಾಮಯ್ಯ
Share This Article
Facebook Email Print
Previous Article KSRTC ಬಸ್ ನಿಲ್ದಾಣಕ್ಕೆ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಭೇಟಿ | ಅವ್ಯವಸ್ಥೆ ಕಂಡು ತೀವ್ರ ಅಸಮಾಧಾನ 
Next Article Dk Shivakumar clik photo to KaniveMaramma ಕಣಿವೆ ಮಾರಮ್ಮನ ಪೋಟೋ ಕ್ಲಿಕ್ಕಿಸಿಕೊಂಡ ಡಿಕೆಶಿ
Leave a Comment

Leave a Reply Cancel reply

Your email address will not be published. Required fields are marked *

arecanut price list
ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
ಅಡಕೆ ಧಾರಣೆ
ತಾಲೂಕು ಮಟ್ಟದ ದಸರಾ ಕ್ರೀಡಾಕೂಟ | ಆನ್‌ಲೈನ್ ನೋಂದಣಿ ಕಡ್ಡಾಯ
ಮುಖ್ಯ ಸುದ್ದಿ
ನಾಳೆಯಿಂದ ಅಂತರ ಕಾಲೇಜು ಬಾಸ್ಕೆಟ್‌ಬಾಲ್ ಪಂದ್ಯಾವಳಿ
ಮುಖ್ಯ ಸುದ್ದಿ
ಚಿತ್ರದುರ್ಗ ಶಾಖಾ ಕಾಲುವೆ
ಭದ್ರ ಹರಿವು ಮತ್ತೆ ಆರಂಭ | ಸಮಸ್ಯೆ ಬಗೆಹರಿಸಿದ ಸಚಿವ ಟಿ.ರಘುಮೂರ್ತಿ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up