ಕ್ರೈಂ ಸುದ್ದಿ
ವಾಹನ ಡಿಕ್ಕಿ | ಹೆದ್ದಾರಿ ದಾಟುತ್ತಿದ್ದ ಚಿರತೆ ಸಾವು

Published on
CHITRADURGA NEWS | 10 MARCH 2025
ಚಿತ್ರದುರ್ಗ: ಹೆದ್ದಾರಿ ದಾಟುತ್ತಿದ್ದ ಚಿರತೆಗೆ ವಾಹನವೊಂದು ಡಿಕ್ಕಿಯಾಗಿ ಮೃತಪಟ್ಟಿರುವ ಘಟನೆ ಚಿಕ್ಕಗೊಂಡನಹಳ್ಳಿ ಸಮೀಪ ನಡೆದಿದೆ.
ಚಿತ್ರದುರ್ಗ ತಾಲೂಕು ಚಿಕ್ಕಗೊಂಡನಹಳ್ಳಿ ಸಮೀಪದಲ್ಲಿ ಹೆದ್ದಾರಿ ದಾಟಲು ಮುಂದಾಗಿದ್ದ ಚಿರತೆಗೆ ಯಾವುದೋ ವಾಹನ ಡಿಕ್ಕಿಯಾಗಿ ಹೋಗಿದೆ.
ಇದನ್ನೂ ಓದಿ: APMC: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ?
ಅಪಘಾತದ ರಭಸಕ್ಕೆ ಚಿರತೆ ಸ್ಥಳದಲ್ಲೇ ಪ್ರಾಣ ಬಿಟ್ಟಿದೆ. ಅಪಘಾತದ ಬಳಿಕ ವಾಹನ ನಿಲ್ಲಿಸದೇ ಚಾಲಕ ಪರಾರಿಯಾಗಿದ್ದಾನೆ.
ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿ, ಸಿಬ್ಬಂದಿಗಳು ಭೇಟಿ ನೀಡಿ ಚಿರತೆ ಕಳೆಬರವನ್ನು ತೆಗೆದುಕೊಂಡು ಹೋಗಿದ್ದಾರೆ.
ಇದನ್ನೂ ಓದಿ: ಭೀಕರ ಅಪಘಾತ | ಐದು ಜನ ಸ್ಥಳದಲ್ಲೇ ಸಾವು | ತಮಟಕಲ್ಲು ಬಳಿ ಘಟನೆ
ತುರುವನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ವರದಿಯಾಗಿದೆ.
Continue Reading
You may also like...
Related Topics:accident, Cheetah, Chitradurga Latest, Chitradurga news, death, Highway, Kannada News, ಅಪಘಾತ, ಕನ್ನಡ ಸುದ್ದಿ, ಚಿತ್ರದುರ್ಗ ನ್ಯೂಸ್, ಚಿತ್ರದುರ್ಗ ಲೇಟೆಸ್ಟ್, ಚಿರತೆ, ಸಾವು, ಹೆದ್ದಾರಿ

Click to comment