By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ನೈಸರ್ಗಿಕ ಕೃಷಿ ಕಾರ್ಯಾಗಾರ
    ನೈಸರ್ಗಿಕ ಕೃಷಿಗೆ ಉತ್ತೇಜನ | ಜಿಲ್ಲೆಯಲ್ಲಿ 500 ಬಯೋಡೈಜೆಸ್ಟರ್ ಘಟಕ ಸ್ಥಾಪನೆ ಗುರಿ
    7 hours ago
    DC ramya
    ಮಾಧ್ಯಮ ವರದಿಗಳಿಗೆ ಜಿಲ್ಲಾಡಳಿತದ ಸಂಪೂರ್ಣ ಸಹಕಾರ | ಡಿಸಿ ರಮ್ಯ
    7 hours ago
    ಭದ್ರೆಗೆ ಸಾಣೇಹಳ್ಳಿ ಬಳಿ ಬಾಗೀನ ಅರ್ಪಿಸಿದ ಪಂಡಿತಾರಾಧ್ಯ ಶ್ರೀ
    8 hours ago
    ಎಲ್ಲೀವರೆಗೆ ಹರಿದು ಬಂದಳು ಗೊತ್ತಾ ಭದ್ರೆ | ಬಯಲು ಸೀಮೆಯಲ್ಲಿ ಸಂಭ್ರಮ
    11 hours ago
    ವಚನಾಭಿಷೇಕ ಕಾರ್ಯಕ್ರಮ
    ರಾಜ್ಯ, ರಾಷ್ಟ್ರಮಟ್ಟದ ಪ್ರಖ್ಯಾತರು, ರಾಷ್ಟ್ರಕವಿಗಳು ಎಸ್‌ಜೆಎಂ ಸಂಸ್ಥೆಯಲ್ಲಿ ಅಧ್ಯಯನ ಮಾಡಿದ್ದಾರೆ | ಡಾ.ಬಸವಕುಮಾರ ಸ್ವಾಮೀಜಿ
    20 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    3 weeks ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    4 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    5 days ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    1 day ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    4 days ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    5 days ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಸೆಪ್ಟೆಂಬರ್ 08 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ಹಠಾತ್ ಆರ್ಥಿಕ ಲಾಭ
    20 hours ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 07 | ಉದ್ಯೋಗದಲ್ಲಿ ಅಧಿಕಾರಿಗಳಿಂದ ಬೆಂಬಲ, ಅರೋಗ್ಯದಲ್ಲಿ ಎಚ್ಚರ
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 06 | ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ, ಹಠಾತ್ ಆರ್ಥಿಕ ಲಾಭದ ಸೂಚನೆ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 05 | ಶ್ರಮಕ್ಕೆ ತಕ್ಕ ಫಲಿತಾಂಶ ಅರೋಗ್ಯದಲ್ಲಿ ಜಾಗೃತಿ ವಹಿಸಿ
    4 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 04 | ಉದ್ಯೋಗಗಳಲ್ಲಿ ಕೆಲಸದ ಒತ್ತಡ, ದೂರದ ಪ್ರಯಾಣ ಬೇಡ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 08 | ಹತ್ತಿ ರೇಟ್ ಎಷ್ಟಿದೆ?
    12 hours ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 07 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 05 | ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 04 | ರಾಗಿ, ಶೇಂಗಾ ರೇಟ್…..
    5 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    3 days ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    3 days ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    1 week ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    3 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    3 months ago
  • Life Style
    Life StyleShow More
    H1N1
    ಹಂದಿ ಜ್ವರ (ಪ್ಲೂ)ಬಂದರೆ ಏನು ತಿನ್ನಬೇಕು? ತಿಳಿಯಿರಿ
    19 hours ago
    hair loss in men
    ಪುರುಷರ ಕೂದಲು ಉದುರುವುದನ್ನು ತಡೆಯಲು ಯಾವ ಎಣ್ಣೆ ಹೆಚ್ಚು ಪರಿಣಾಮಕಾರಿ?
    20 hours ago
    Women's breasts
    ಮಹಿಳೆಯರು ಸ್ತನಗಳನ್ನು ಆರೋಗ್ಯವಾಗಿಡಲು ಪ್ರತಿದಿನ ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಿ
    2 days ago
    Pineapple
    ಅನಾನಸ್‌ನ ಹಣ್ಣಿನ ಮಧ್ಯದಲ್ಲಿರುವ ಗಟ್ಟಿ ಭಾಗ ತಿಂದರೆ ಏನಾಗುತ್ತದೆ ಗೊತ್ತಾ?
    2 days ago
    white and blue conch flowers
    ಬಿಳಿ ಮತ್ತು ನೀಲಿ ಶಂಖಪುಷ್ಪ ಹೂಗಳಲ್ಲಿ ಸೇವಿಸಲು ಯಾವುದು ಉತ್ತಮ?
    3 days ago
Reading: ಸಾಣೇಹಳ್ಳಿ ಮಠದಲ್ಲಿ ಇಷ್ಟಲಿಂಗ ದೀಕ್ಷೆ | ಪಂಡಿತಾರಾಧ್ಯ ಶ್ರೀ ನೇತೃತ್ವ 
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಹೊಸದುರ್ಗ

ಸಾಣೇಹಳ್ಳಿ ಮಠದಲ್ಲಿ ಇಷ್ಟಲಿಂಗ ದೀಕ್ಷೆ | ಪಂಡಿತಾರಾಧ್ಯ ಶ್ರೀ ನೇತೃತ್ವ 

News Desk Chitradurga News
Last updated: 1 May 2025 19:40
News Desk Chitradurga News
1 year ago
Share
ಸಾಣೇಹಳ್ಳಿ ಮಠದಲ್ಲಿ ಇಷ್ಟಲಿಂಗ ದೀಕ್ಷೆ | ಪಂಡಿತಾರಾಧ್ಯ ಶ್ರೀ ನೇತೃತ್ವ
SHARE

CHITRADURGA NEWS | 01 MAY 2025

ಹೊಸದುರ್ಗ: ಇಲ್ಲಿನ ಸಾಣೇಹಳ್ಳಿ ಶ್ರೀಮಠದಲ್ಲಿ ಆಯೋಜಿಸಿದ್ದ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮದ ಸಾನಿಧ್ಯ ವಹಿಸಿ, ಧರ್ಮಾಸಕ್ತರಿಗೆ ಇಷ್ಟಲಿಂಗ ದೀಕ್ಷೆ ನೀಡಿ ಮಾತನಾಡಿದ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳವರು, ದೇವರ ಬಗ್ಗೆ ಸರಿಯಾದ ಅರಿವು ನೀಡುವ ಕಾರ್ಯವೇ ದೀಕ್ಷೆ. ಎಲ್ಲರೂ ದೇವರು, ಧರ್ಮದ ಬಗ್ಗೆ ನಂಬಿಕೆ ಇರುವಂಥವರೇ. ಅವರನ್ನು ಆಸ್ತಿಕರು ಎನ್ನುವರು.

Also Read: ನಾಳೆ SSLC RESULT | ನಿಮ್ಮ ಫಲಿತಾಂಶ ತಿಳಿಯಲು ಈ ಲಿಂಕ್ ಕ್ಲಿಕ್ ಮಾಡಿ..

ದೇವರು ಧರ್ಮದ ಬಗ್ಗೆ ಹೊಸ ರೀತಿ ವ್ಯಾಖ್ಯಾನ ನೀಡಿದವರು 12ನೇ ಶತಮಾನದ ಶರಣರು. ದೇವನೊಬ್ಬ ನಾಮ ಹಲವು. ವಿಶ್ವ ಚೈತನ್ಯ ಒಂದೇ. ದೇವರಲ್ಲಿ ಹೆಣ್ಣು, ಗಂಡೆಂಬ ಭೇದವಿಲ್ಲ. ದೇವರು ನಿರಾಕಾರ, ವಿಶ್ವವ್ಯಾಪಿ. ಇಂಥ ದೇವರನ್ನು ಹೊರಗಿನ ಕಣ್ಣುಗಳಿಂದ ನೋಡಲು ಸಾಧ್ಯವಿಲ್ಲ. ಸ್ಥಾವರ ಗುಡಿಗಳು ದೇವರ ತಾಣಗಳಲ್ಲ. ಪ್ರತಿಯೊಬ್ಬರ ಅಂತರಂಗದಲ್ಲಿರುವ ಚೈತನ್ಯವನ್ನೇ ಗುರು ಇಷ್ಟಲಿಂಗದ ಮೂಲಕ ಅಂಗೈಗೆ ಕರುಣಿಸುವರು. ಆದರೆ ಶರಣರು ಇರುವುದನ್ನು ದೇವರು ಎನ್ನುವರು.

ಆದರೆ ಗುಡಿಯಲ್ಲಿರುವ ದೇವರಿಗೆ ಇವ್ಯಾವ ಗುಣಗಳು ಇಲ್ಲ. ಆದರೆ ನಮ್ಮೊಳಗೆ ಇರುವ ಚೈತನ್ಯವೇ ದೇವರೆಂದು ಭಾವಿಸಿ ಅಂಗೈಯಲ್ಲಿ ಇಷ್ಟಲಿಂಗವನ್ನು ಕರುಣಿಸಿ ಈ ದೇಹಕ್ಕೆ ಚೈತನ್ಯ ನೀಡಿದರ ಬಸವಣ್ಣನವರು. ಆದ್ದರಿಂದ ಬಸವಣ್ಣನವರು ಇಷ್ಟಲಿಂಗದ ಜನಕ. ಬಸವಣ್ಣ ಜಗದ ಗುರು. ವಿಶ್ವಗುರು. ಅವರನ್ನು ಸಾಂಸ್ಕೃತಿಕ ನಾಯಕ ಎಂದು ಕರೆಯುವರು. ಪ್ರತಿಯೊಬ್ಬ ವ್ಯಕ್ತಿಗೂ ಸಂಸ್ಕಾರ ಬಹಳ ಮುಖ್ಯ. ಸಂಸ್ಕಾರದಿಂದ ಮಾತ್ರ ಏನಾದರೂ ಬದಲಾವಣೆ ಸಾಧ್ಯ. ಮಾನವನಿಗೆ ಸರಿಯಾದ ಸಂಸ್ಕಾರ ಸಿಕ್ಕರೆ ಮಹಾಮಾನವನಾಗುವನು.

ಬಸವಣ್ಣನವರು ಮನಸ್ಸು ಮಾಡಿದರೆ ವೈಭವದ ದೇವಸ್ಥಾನವನ್ನು ಕಟ್ಟಿಸಬಹುದಿತ್ತು. ಆದರೆ ಅದರಿಂದ ಜನರನ್ನು ದಿಕ್ಕು ತಪ್ಪಿಸಿ ದುರ್ಮಾರ್ಗದ ಕಡೆಗೆ ಕರೆದುಕೊಂಡು ಹೋಗುವುದನ್ನು ಗಮನಿಸಿ ತನ್ನ ದೇಹವನ್ನೇ ದೇವಾಲಯವನ್ನಾಗಿ ಮಾಡಿಕೊಂಡರು. ಹೊರಗಿರುವ ದೇವರನ್ನು ನಮ್ಮೊಳಗಡೆ ಚೈತನ್ಯದ ಮೂಲಕ ತಂದುಕೊಂಡರು.

Also Read: ಅಕ್ಷಯ ತೃತೀಯವು ಈ ರಾಶಿಯವರಿಗೆ ಶುಭ ಯೋಗ ತರಲಿದೆಯಂತೆ

ಭಗವಂತನೇ ತಂದೆ, ತಾಯಿ, ಬಂಧು ಬಳಗವಾಗುವನು. ಅರಿವನ್ನು ಮೂಡಿಸುವವರೇ ನಿಜವಾದ ಗುರು. ಅಲ್ಲಮಪ್ರಭುಗಳು ಬಸವಣ್ಣನವರನ್ನು ಜಗದ ಗುರು ಎಂದು ಒಪ್ಪಿಕೊಂಡಿದ್ದರು. ಆದ್ದರಿಂದಲೇ ಅವರು ವಿಶ್ವದ ಗುರುವಾದರು. ದೇವರು ಬೇರೆ ಅಲ್ಲ, ನಾನು ಬೇರೆ ಅಲ್ಲ ಎನ್ನುವ ಏಕಭಾವ ಪ್ರತಿಯೊಬ್ಬರಲ್ಲು ಬರಬೇಕು.

ವಿಪತ್ತು ಬಂದಾಗ ಮಾತ್ರ ಭಗವಂತನನ್ನು ಪೂಜೆ ಮಾಡದೇ ನಿತ್ಯವೂ ಪೂಜೆ, ಸ್ಮರಣೆ ಮಾಡಿಕೊಳ್ಳಬೇಕು. ದೇವರನ್ನು ಮರೆತರೆ ಹೊಡೆದ ಮಡಿಕೆಯಂತಾಗುವುದು. ಯಾವಾಗಲೂ ದೇವಸ್ಮರಣೆ ಮಾಡಬೇಕೆಂದರು. ದೇವರನ್ನು ಗುಡಿಯಲ್ಲಿ ನದಿಯಲ್ಲಿ, ಮರದಲ್ಲಿ ಕಾಣುವುದಲ್ಲ. ನಮ್ಮೊಳಗಡೆಯೇ ದೇವರನ್ನು ಕಂಡುಕೊಳ್ಳಬೇಕು.

ಬತ್ತುವ ಜಲ ಒಣಗುವ ಮರದ ಪೂಜೆಯನ್ನು ಶರಣರು ವಿರೋಧಿಸಿದರು. ಮೌಢ್ಯಗಳನ್ನು ಪ್ರಶ್ನೆ ಮಾಡುವುದರ ಮೂಲಕ ನಿಜಾಚರಣೆಯ ಬಗ್ಗೆ ಅರಿವು ಮೂಡಿಸಿದರು.

ಲಿಂಗಾಯತ ಧರ್ಮದ ನೀತಿ ಸಿದ್ಧಾಂತಗಳು ಅಷ್ಟಾವರಣ, ಪಂಚಾಚಾರ, ಷಟ್ ಸ್ಥಲಗಳು. ಲಿಂಗಾವಂತರು ಇದರ ಬಗ್ಗೆ ಅರಿವನ್ನು ಬೆಳೆಸಿಕೊಳ್ಳಬೇಕು. ಗುರು ಅರಿವನ್ನು ಮೂಡಿಸಿ ಇಷ್ಟಲಿಂಗವನ್ನು ಕರುಣಿಸುವನು. ಜಂಗಮ ಭಕ್ತರಿಗೆ ಸರಿಯಾದ ಮಾರ್ಗವನ್ನು ತೋರಿಸುವನು. ಪ್ರಸಾದ ಎಂದರೆ ಸರಿಯಾದ ತಿಳಿವಳಿಕೆಯನ್ನು ಪಡಪಡೆದುಕೊಳ್ಳುವುದು.

Also Read: ಪಿತ್ತದೋಷವಿರುವವರ ಆಹಾರ ಹೀಗಿರಲಿ

ಮನಸ್ಸಿನ ಶುದ್ಧಿಯಿಂದ ಆಡುವ ಮಾತುಗಳೆಲ್ಲವೂ ಮಂತ್ರಗಳಾಗುವವು. ಮನುಷ್ಯನಿಗೆ ನೀತಿ ಸಂಹಿತೆ ಇಲ್ಲದೇ ಹೋದರೆ ದಾರಿತಪ್ಪುವನು. ಕಾಯ ಶುದ್ದಿ ಹಾಗೂ ಕಾಯಕ ಶ್ರದ್ಧೆಯನ್ನು ಬೆಳೆಸಿಕೊಂಡರೆ ಮನುಷ್ಯ ನೆಮ್ಮದಿಯ ಬದುಕನ್ನು ಸಾಗಿಸುವನು.

ಇಷ್ಟಲಿಂಗ ಧರಿಸಿದವನು ಕುಲ ಅಳಿಸಿ ಶಿವಕುಲನಾಗುವನು. ನಾವೆಲ್ಲರೂ ಶಿವನ ಮಕ್ಕಳೆಂದು ಭಾವಿಸಿ .ಜಾತ್ಯಾತೀತ ಮನೋಭಾವನೆ ಬೆಳೆಸಿಕೊಳ್ಳಬೇಕು. ಗಣಾಚಾರ ಪ್ರವೃತ್ತಿ ಬೆಳೆಸಿಕೊಳ್ಳಬೇಕು. ಬಾಗಿದ ತಲೆ ಮುಗಿದ ಕೈಯಾಗಿಸುವ ಭಾಗ ಬೆಳೆಸಿಕೊಳ್ಳಬೇಕು.

ದೀಕ್ಷೆಯನ್ನು ಪಡೆಯುವ ಉದ್ದೇಶ ಅಂತರಂಗ, ಬಹಿರಂಗ ಶುದ್ದಿಯನ್ನು ಮಾಡಿಕೊಳ್ಳುವುದು. ಮೌಢ್ಯವನ್ನು ದೂರ ಮಾಡಿಕೊಂಡು ಸತ್ ಚಿಂತನೆ ಮಾಡಿಕೊಳ್ಳುವುದು. ದುರ್ಬುದ್ಧಿಯನ್ನು ಬಿಟ್ಟು ಸುಬುದ್ಧಿಯನ್ನು ಬೆಳೆಸಿಕೊಳ್ಳುವುದು.

12ನೇ ಶತಮಾನದಲ್ಲಿ ಬಸವಾದಿ ಶಿವಶರಣರು ಸಂಸ್ಕಾರ ನೀಡುವ ಸಲುವಾಗಿ `ಅನುಭವ ಮಂಟಪ’ ಸ್ಥಾಪಿಸಿದರು. ಅನುಭವ ಮಂಟಪ ಕಟ್ಟಡವಲ್ಲ; ವಿಚಾರ ವಿನಿಮಯಗಳ ಮಥನ. ಆ ಸಂಸ್ಕಾರದ ಫಲವಾಗಿ ಸಾಮಾನ್ಯನೂ ಅಸಾಮಾನ್ಯ, ಶರಣ, ಶರಣೆ, ಅನುಭಾವಿಗಳಾದರು. ಅಂಥವರೆಲ್ಲರೂ ಸೇರಿ ಹೊಸ ಸಮಾಜವನ್ನು ಸೃಷ್ಟಿಸಲು ಸಾಧ್ಯವಾಯಿತು. ಹದಗೆಡುವ, ಅಧೋಗತಿಗೆ ಹೋಗುವ ಬದುಕನ್ನು ವಿಕಾಸಗೊಳಿಸುವ ನಿಟ್ಟಿನಲ್ಲಿ ಈರೀತಿಯ ಸಂಸ್ಕಾರದ ಅಗತ್ಯವಿದೆ. ಅರಿವಿನ ಮೂಲಕ ಅಜ್ಞಾನವನ್ನು ನಿವಾರಿಸಿಕೊಳ್ಳಬೇಕು. ದೈಹಿಕ ಸ್ವಚ್ಛತೆ ಮುಖ್ಯ.

Also Read: ಚರ್ಮದ ಅಲರ್ಜಿ ಮತ್ತು ಶಿಲೀಂಧ್ರಗಳ ಸೋಂಕಿಗೆ ರೋಸ್ ವಾಟರ್ ಒಳ್ಳೆಯದೇ? 

ಮೌಢ್ಯವನ್ನು ನಂಬುವ, ಭವಿಷ್ಯ ಹೇಳುವ, ಕೇಳುವುದರ ಮೂಲಕ ಬದುಕನ್ನು ಬದಲಾಯಿಸಲಾಗುವುದಿಲ್ಲ. ಇಷ್ಟಲಿಂಗ ದೀಕ್ಷೆ ಕಡೆದುಕೊಂಡವರು ಲಿಂಗಾವಂತರಾಗಿ ವೈಜ್ಞಾನಿಕವಾಗಿ ಆಲೋಚನೆ ಮಾಡುವ ಶಕ್ತಿಯನ್ನು ಬೆಳೆಸಿಕೊಂಡರೆ ಖಂಡಿತ ಬದುಕನ್ನು ಬದಲಾಯಿಸಿಕೊಳ್ಳಬಹುದು.

ಪಂಚಾಚಾರಗಳೆಂದರೆ ಲಿಂಗಾಚಾರ, ಶಿವಾಚಾರ, ಸದಾಚಾರ, ಗಣಾಚಾರ, ಭೃತ್ಯಾಚಾರ. ಇವು ಬದುಕಿನ ನೀತಿಸಂಹಿತೆಗಳು. ಇವುಗಳ ಅನುಸಾರವಾಗಿ ಬದುಕನ್ನು ಸಾಗಿಸಿದರೆ ಬದುಕು ಸಾರ್ಥಕವಾಗುವುದು ಎಂದರು.

ಸಿರಿಮಠ ದೀಕ್ಷಾ ಕಾರ್ಯಕ್ರಮ ನಡೆಸಿಕೊಟ್ಟರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsChitradurga UpdatesHosadurgaIshtalinga initiationKannada Latest NewsKannada NewsPanditaradhya Shivacharya Srisanehalliಇಷ್ಟಲಿಂಗ ದೀಕ್ಷೆಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಪಂಡಿತಾರಾಧ್ಯ ಶಿವಾಚಾರ್ಯ ಶ್ರೀಸಾಣೇಹಳ್ಳಿಹೊಸದುರ್ಗ
Share This Article
Facebook Email Print
Previous Article AI IMAGE ನಾಳೆ SSLC RESULT | ನಿಮ್ಮ ಫಲಿತಾಂಶ ತಿಳಿಯಲು ಈ ಲಿಂಕ್ ಕ್ಲಿಕ್ ಮಾಡಿ..
Next Article ನಕಲಿ ಕಾರ್ಮಿಕ ಕಾರ್ಡ್ ಪತ್ತೆ ಮಾಡಿ | ಶಾಸಕ ವೀರೇಂದ್ರ (ಪಪ್ಪಿ)
Leave a Comment

Leave a Reply Cancel reply

Your email address will not be published. Required fields are marked *

ನೈಸರ್ಗಿಕ ಕೃಷಿ ಕಾರ್ಯಾಗಾರ
ನೈಸರ್ಗಿಕ ಕೃಷಿಗೆ ಉತ್ತೇಜನ | ಜಿಲ್ಲೆಯಲ್ಲಿ 500 ಬಯೋಡೈಜೆಸ್ಟರ್ ಘಟಕ ಸ್ಥಾಪನೆ ಗುರಿ
ಮುಖ್ಯ ಸುದ್ದಿ
DC ramya
ಮಾಧ್ಯಮ ವರದಿಗಳಿಗೆ ಜಿಲ್ಲಾಡಳಿತದ ಸಂಪೂರ್ಣ ಸಹಕಾರ | ಡಿಸಿ ರಮ್ಯ
ಮುಖ್ಯ ಸುದ್ದಿ
ಭದ್ರೆಗೆ ಸಾಣೇಹಳ್ಳಿ ಬಳಿ ಬಾಗೀನ ಅರ್ಪಿಸಿದ ಪಂಡಿತಾರಾಧ್ಯ ಶ್ರೀ
ಮುಖ್ಯ ಸುದ್ದಿ
ಎಲ್ಲೀವರೆಗೆ ಹರಿದು ಬಂದಳು ಗೊತ್ತಾ ಭದ್ರೆ | ಬಯಲು ಸೀಮೆಯಲ್ಲಿ ಸಂಭ್ರಮ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up