By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಡಿಎಪಿ ಬದಲಾಗಿ ಸಂಯುಕ್ತ ರಸಗೊಬ್ಬರ ಬಳಸಿ | ಬಿ.ಮಂಜುನಾಥ್
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಡಿಎಪಿ ಬದಲಾಗಿ ಸಂಯುಕ್ತ ರಸಗೊಬ್ಬರ ಬಳಸಿ | ಬಿ.ಮಂಜುನಾಥ್

ಮುಖ್ಯ ಸುದ್ದಿ

ಡಿಎಪಿ ಬದಲಾಗಿ ಸಂಯುಕ್ತ ರಸಗೊಬ್ಬರ ಬಳಸಿ | ಬಿ.ಮಂಜುನಾಥ್

News Desk Chitradurga News
Last updated: 26 May 2025 06:57
News Desk Chitradurga News
1 month ago
Share
ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 25 MAY 2025

ಚಿತ್ರದುರ್ಗ: ಡಿ.ಎ.ಪಿ ರಸಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಸುವಂತೆ ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ ರೈತರಿಗೆ ಸಲಹೆ ನೀಡಿದ್ದಾರೆ.

Also Read: ಸಿಂಹಾಸನರೂಢ ಮದಕರಿ ನಾಯಕರ ಪುತ್ಥಳಿ ಅನಾವರಣ | ಬಿ.ಎಲ್.ವೇಣು

ಸಸ್ಯಗಳ ಬೆಳವಣಿಗೆ ಮತ್ತು ಅಭಿವೃದ್ದಿಗೆ 17 ಪೋಷಕಾಂಶಗಳ ಅಗತ್ಯವಿರುತ್ತದೆ. ಇವುಗಳಲ್ಲಿ ಇಂಗಾಲ, ಜಲಜನಕ ಮತ್ತು ಆಮ್ಲಜನಕವು ಸ್ವಾಭಾವಿಕವಾಗಿ ದೊರೆಯಲಿದ್ದು, ಗಾಳಿ ಮತ್ತು ನೀರಿನ ಮೂಲಕ ಸಸ್ಯಗಳಿಗೆ ಲಭ್ಯವಾಗುತ್ತವೆ.

ಉಳಿದ 14 ಪೋಷಕಾಂಶಗಳಲ್ಲಿ ಸಾರಜನಕ, ರಂಜಕ, ಪೊಟ್ಯಾಷ್ ಹೆಚ್ಚಿನ ಪ್ರಮಾಣದಲ್ಲಿ ಬೇಕಿದ್ದು, ಇವುಗಳನ್ನು ಪ್ರಧಾನ ಪೋಷಕಾಂಶಗಳೆಂದು, ಕ್ಯಾಲ್ಸಿಯಂ, ಮೆಗ್ನೇಷಿಯಂ, ಗಂಧಕ, ಕಬ್ಬಿಣ, ಜಿಂಕ್, ಬೋರಾನ್, ತಾಮ್ರ, ಮ್ಯಾಂಗನೀಸ್, ಮಾಲಬಿಡಿನಂ, ಕ್ಲೋರಿನ್ ಮತ್ತು ನಿಕಲ್ ಕಡಿಮೆ ಪ್ರಮಾಣದಲ್ಲಿ ಬೇಕಿದ್ದು, ಇವುಗಳನ್ನು ಲಘು ಪೋಷಕಾಂಶಗಳೆಂದು ವಿಂಗಡಿಸಲಾಗಿದೆ.

ಇವುಗಳಲ್ಲಿ ಯಾವುದೇ ಒಂದು ಪೋಷಕಾಂಶದ ಕೊರತೆಯಾದರೂ ಸಸ್ಯಗಳ ಬೆಳವಣಿಗೆ ಮತ್ತು ಅಭಿವೃದ್ದಿಯ ಮೇಲೆ ಪರಿಣಾಮ ಬೀರಿ ಇಳುವರಿ ಕುಂಠಿತವಾಗುತ್ತದೆ.

Also Read: CET RESULT | SLV ಕಾಲೇಜಿಗೆ ಉತ್ತಮ ಫಲಿತಾಂಶ 

ಪ್ರಧಾನ ಪೋಷಕಾಂಶಗಳು ಮತ್ತು ಲಘು ಪೋಷಕಾಂಶಗಳಿಗೆ ಭೂಮಿಯೇ ಮುಖ್ಯ ಆಧಾರ, ಮಣ್ಣಿನಿಂದಲೇ ಎಲ್ಲಾ ಪೋಷಕಾಂಶಗಳು ಬೆಳೆಗಳಿಗೆ ಬೇಕಾದ ಪ್ರಮಾಣದಲ್ಲಿ ದೊರೆಯದಿಲ್ಲವಾದ್ದರಿಂದ ಬಾಹ್ಯವಾಗಿ ನೀಡುವುದು ಅನಿವಾರ್ಯ.

ಬೆಳೆಗಳಿಗೆ ಬೇಕಾಗುವ ಈ ಬಾಹ್ಯ ಪೋಷಕಾಂಶಗಳನ್ನು ಸಾವಯವ (ಕೊಟ್ಟಿಗೆ ಗೊಬ್ಬರ, ಹಸಿರೆಲೆ ಗೊಬ್ಬರ, ಹಿಂಡಿ ಇತ್ಯಾದಿ) ಮತ್ತು ರಸಗೊಬ್ಬರಗಳಿಂದ ಒದಗಿಸಬೇಕಾಗಿದ್ದು, ರಸಗೊಬ್ಬರಗಳಲ್ಲಿ ಪೋಷಕಾಂಶಗಳು ಹೆಚ್ಚಿನ ಪ್ರಮಾಣದಲ್ಲಿ ಮತ್ತು ನೇರವಾಗಿ ದೊರೆಯುವ ರೂಪದಲ್ಲಿದ್ದು ಅವುಗಳ ಬಳಕೆ ಅತ್ಯಗತ್ಯವಾಗಿರುತ್ತದೆ.

ರೈತರು ಕೇವಲ ಒಂದು ಅಥವಾ ಎರಡು ಪೋಷಕಾಂಶ ಒದಗಿಸುವ ಯೂರಿಯಾ ಹಾಗೂ ಡಿ.ಎ.ಪಿ.ಯನ್ನು ರೂಢಿಗತವಾಗಿ ಬಳಸುತ್ತಿದ್ದು, ಇವುಗಳಲ್ಲಿ ಸಾರಜನಕ ಮತ್ತುರಂಜಕದ ಅಂಶ ಮಾತ್ರವಿರುತ್ತದೆ. ಆದರೆ ಬೆಳೆಗಳಿಗೆ ರೋಗ ನಿರೋಧಕ ಶಕ್ತಿ ನೀಡಿ ಕಾಳಿನ ತೂಕ ಹೆಚ್ಚಿಸಲು ಅತ್ಯಂತ ಅವಶ್ಯಕವಾಗಿರುವ ಪೊಟ್ಯಾಷ್ ಲಭ್ಯವಿರುವುದಿಲ್ಲ.

Also Read: ಸಿಇಟಿ ಫಲಿತಾಂಶ | ಡಾನ್‌ಬಾಸ್ಕೊ ಕಾಲೇಜಿನ ಮಾರುತಿ ರಾಜ್ಯಕ್ಕೆ 6ನೇ ರ್ಯಾಂಕ್‌

ಮಾರುಕಟ್ಟೆಯಲ್ಲಿ ವಿವಿಧ ಶ್ರೇಣಿಯ (ಗ್ರೇಡ್) ಸಾರಜನಕ, ರಂಜಕ ಮತ್ತು ಪೊಟ್ಯಾಷ್‍ಯುಕ್ತ ಬಹಳಷ್ಟು ರಸಗೊಬ್ಬರಗಳು ಲಭ್ಯವಿದ್ದು, ಶಿಫಾರಸ್ಸಿನಂತೆ ವಿವಿಧ ರಸಗೊಬ್ಬರಗಳ ಸಂಯೋಜನೆಯೊಂದಿಗೆ ಬಳಸಬಹುದಾಗಿದೆ.

ಶಿಫಾರಸ್ಸಿನಂತೆ ಬೆಳೆಗಳಿಗೆ ಸಾರಜನಕ, ರಂಜಕ, ಪೊಟ್ಯಾಷ್ ರಸಗೊಬ್ಬರಳನ್ನು 4:2:1 ಅನುಪಾತದಲ್ಲಿ ಬಳಸಬೇಕಾಗಿರುತ್ತದೆ. ಆದರೆ ಪ್ರಸ್ತುತ ರೈತರು ಯಥೇಚ್ಚವಾಗಿ ಬಳಸುತ್ತಿರುವ ಸದರಿ ರಸಗೊಬ್ಬರಗಳ ಅನುಪಾತವು 6.0:3.9:1.0 ಆಗಿರುತ್ತದೆ. ಇದನ್ನು ಸಮತೋಲನಾತ್ಮಕ ರಸಗೊಬ್ಬರಗಳ ಬಳಕೆಯನ್ನು ಉತ್ತೇಜಿಸಿ, ಸಂಯುಕ್ತ ರಸಗೊಬ್ಬರಗಳನ್ನು ಬಳಸುವುದರಿಂದ ಸರಿದೂಗಿಸಬಹುದಾಗಿರುತ್ತದೆ.

ಅಲ್ಲದೇ ರೈತರು ರಸಗೊಬ್ಬರವನ್ನು ಕೇವಲ ಒಂದೇ ಸಂಸ್ಥೆಯ ಅಥವಾ ಒಂದೇ ರಸಗೊಬ್ಬರಕ್ಕೆ ಆದ್ಯತೆ ನೀಡದೇ ಡಿ.ಎ.ಪಿ ರಸಗೊಬ್ಬರಕ್ಕೆ ಪರ್ಯಾಯವಾಗಿ ಗಂಧಕ ಒದಗಿಸುವ 20:20:0:13, 16:200:13 ಹಾಗೂ ಇವತೆ ಸಂಯುಕ್ತ ರಸಗೊಬ್ಬರಗಳಾದ 15:15:15, 10:26:26, 12:32:16, 22:22:11, 14:35:15, 17:17:17, 14:28:14, 19:19:19, 20:10:10, 15:15:15, 15:15:15(S) ಇತ್ಯಾದಿ ಹಾಗೂ ಡಿ.ಎ.ಪಿ ರಸಗೊಬ್ಬರಕ್ಕೆ ಪರ್ಯಾಯವಾಗಿ ರಂಜಕ್ ಪೋಷಕಾಂಶ ನೀಡುವ ಪ್ರಾಮಂ (Phosphate rich organic manure), ಸಿಂಗಲ್ ಸೂಫರ್ ಪಾಸ್ಫೇಟ್ (SSP)(16% P2O5)ಮತ್ತು ಟ್ರಿಪಲ್ ಸೂಫರ್ ಪಾಸ್ಫೇಟ್ (TSP) (46% P2O5) ಹಾಗೂ ನ್ಯಾನೋ ಡಿ.ಎ.ಪಿ ರಸಗೊಬ್ಬರಗಳನ್ನು ಸಹ ಬಳಸಬಹುದಾಗಿದೆ.

ರೈತರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.

Also Read: ಮಾದಾರ ಚನ್ನಯ್ಯ ಶ್ರೀಗಳಿಗೆ ಸಾಮರಸ್ಯ ಪುರಸ್ಕಾರ | ಕೋಟಾ ಶ್ರೀನಿವಾಸ ಪೂಜಾರಿ ಲೇಖನ

ಪ್ರಸ್ತುತ ಮಾರುಕಟ್ಟೆಯಲ್ಲಿ ಕಪ್ಪು ಮತ್ತು ಬಿಳಿ ಬಣ್ಣದ ಅರಳು ರೂಪದ ಡಿ.ಎ.ಪಿ ರಸಗೊಬ್ಬರ ಲಭ್ಯವಿದ್ದು, ಇವುಗಳ ಗುಣಮಟ್ಟದಲ್ಲಿ ಮತ್ತು ಶೇಕಡ ಪೋಷಕಾಂಶಗಳಲ್ಲಿ ಯಾವುದೇ ವ್ಯಾತ್ಯಾಸವಿರುವುದಿಲ್ಲ.  ಅದುದರಿಂದ ರೈತರು ಯಾವುದೇ ಗೊಂದಲವಿಲ್ಲದೆ ಮಾರುಕಟ್ಟೆಯಲ್ಲಿ ಲಭ್ಯವಿರುವ ಕಪ್ಪು ಅಥವಾ ಬಿಳಿ ಬಣ್ಣದ ಅರಳು ರೂಪದ ಡಿ.ಎ.ಪಿ ರಸಗೊಬ್ಬರ ಬಳಸಬಹುದಾಗಿದೆ ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ ತಿಳಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:B. ManjunathChitradurgaChitradurga newsChitradurga UpdatesCompound FertilizerDAPDepartment of AgricultureFarmersKannada Latest NewsKannada Newsಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಕೃಷಿ ಇಲಾಖೆಚಿತ್ರದುರ್ಗಚಿತ್ರದುರ್ಗ ನ್ಯೂಸ್ಡಿಎಪಿಬಿ.ಮಂಜುನಾಥ್ರೈತರುಸಂಯುಕ್ತ ರಸಗೊಬ್ಬರ
Share This Article
Facebook Email Print
Previous Article ಸಿಂಹಾಸನರೂಢ ಮದಕರಿ ನಾಯಕರ ಪುತ್ಥಳಿ ಅನಾವರಣ | ಬಿ.ಎಲ್.ವೇಣು
Next Article today bhavishya Astrology: ದಿನ ಭವಿಷ್ಯ | ಮೇ. 26 | ಉದ್ಯೋಗದಲ್ಲಿ ಬಡ್ತಿ, ಹಠಾತ್ ಆರ್ಥಿಕ ಲಾಭ, ಶುಭ ಸುದ್ದಿ
Leave a Comment

Leave a Reply Cancel reply

Your email address will not be published. Required fields are marked *

ಲಿಫ್ಟ್ ಹತ್ತಿದ ತಕ್ಷಣ ತಲೆ ಸುತ್ತುವವರು ಒಮ್ಮೆ ಈ ವಿಚಾರ ತಿಳಿದಿರಿ
Life Style
ಮಳೆಗಾಲದಲ್ಲಿ ಶೀತ ಮತ್ತು ಕೆಮ್ಮು ಬಂದಾಗ ಏನು ತಿನ್ನಬೇಕು ಮತ್ತು ಏನು ತಿನ್ನಬಾರದು? ಎಂಬುದನ್ನು ತಿಳಿಯಿರಿ
Life Style
ಹೆರಿಗೆಯ ನಂತರ ಬೇಗ ಚೇತರಿಸಿಕೊಳ್ಳಲು ಈ ಲಡ್ಡುಗಳನ್ನು ತಿನ್ನಿರಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 30 | ಉದ್ಯೋಗಗಳಲ್ಲಿ ಬಡ್ತಿ, ದೂರದ ಪ್ರಯಾಣ, ಆರೋಗ್ಯದಲ್ಲಿ ಎಚ್ಚರ
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up