CHITRADURGA NEWS | 12 JUNE 2025
ಚಿತ್ರದುರ್ಗ: ಕಾಲ್ತುಳಿತ ಪ್ರಕರಣವನ್ನು ಮರೆಮಾಚಲು ಹೈಕಮಾಂಡ್ ಸಿದ್ದರಾಮಯ್ಯ, ಡಿ.ಕೆ.ಶಿ.ಯವರನ್ನು ದೆಹಲಿಗೆ ಕರೆಸಿಕೊಂಡು ಮರು ಜಾತಿಗಣತಿ ಮಾಡುವಂತೆ ಉಪಾಯ ಹೇಳಿಕೊಟ್ಟು ಜನರ ಗಮನವನ್ನು ಬೇರೆಡೆ ಸೆಳೆಯುವ ಕುತಂತ್ರ ಮಾಡುತ್ತಿದೆ ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದರು.
Also Read: ಹಾವೇರಿಯಲ್ಲಿ ಪೌರ ಕಾರ್ಮಿಕರ ಮೇಲೆ ಹಲ್ಲೆ | ಸೂಕ್ತ ಕ್ರಮಕ್ಕೆ ಚಿತ್ರದುರ್ಗದಲ್ಲಿ ಪ್ರತಿಭಟನೆ

ಪ್ರವಾಸಿ ಮಂದಿರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಲ್ತುಳಿತದಿಂದ ಹನ್ನೊಂದು ಮಂದಿ ಬಲಿಯಾಗಿದ್ದಕ್ಕೆ ಐವರು ಪೊಲೀಸ್ ಅಧಿಕಾರಿಗಳನ್ನು ಅಮಾನತ್ತುಗೊಳಿಸಿರುವುದು ಯಾವ ನ್ಯಾಯ?
ರಾಜ್ಯ ಕಾಂಗ್ರೆಸ್ ಸರ್ಕಾರ ದಿನಕ್ಕೊಂದು ಹಗರಣದಲ್ಲಿ ಸಿಲುಕುತ್ತಿದೆ. ವಾಲ್ಮೀಕಿ ನಿಗಮ, ಮುಡಾ ಕೇಸ್ನಲ್ಲಿ 100 ಕೋಟಿ ರೂ. ಭ್ರಷ್ಟಾಚಾರ. ಈಗ ಆರ್.ಸಿ.ಬಿ. ಕಪ್ ಗೆದ್ದಿದ್ದಕ್ಕಾಗಿ ತರಾತುರಿಯಲ್ಲಿ ಸಂಭ್ರಮಾಚರಣೆ ನಡೆಸಿದ್ದಕ್ಕೆ ಹನ್ನೊಂದು ಮಂದಿ ಕಾಲ್ತುಳಿತದಲ್ಲಿ ಬಲಿಯಾಗಿದ್ದಾರೆ.
ಇದಕ್ಕೆ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು.
Also Read: ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಕೆ.ಟಿ.ಕುಮಾರಸ್ವಾಮಿ ಆಯ್ಕೆ
ದೇಶದ ಪ್ರಧಾನಿ ನರೇಂದ್ರಮೋದಿರವರು ಹನ್ನೊಂದು ವರ್ಷಗಳ ಜನಸೇವೆಯಲ್ಲಿ ದಾಪುಗಾಲಿಡುತ್ತಿದ್ದಾರೆ. ಕಳಂಕವಿಲ್ಲದ ನಾಯಕತ್ವ ಅವರದು. ರಾಜನೀತಿ ಏನೆಂಬುದನ್ನು ತೋರಿಸಿಕೊಟ್ಟಿದ್ದಾರೆ ಎಂದು ಪ್ರಶಂಶಿಸಿದರು.
ಸಬ್ಕಾ ಸಾತ್ ಸಬ್ಕಾ ವಿಕಾಸ್ ಎನ್ನುವ ತತ್ವದಡಿ ದೇಶವನ್ನು ಮುನ್ನಡೆಸಿಕೊಂಡು ಹೋಗುತ್ತಿರುವುದರಿಂದ ದೇಶ ಸರ್ವತೋಮುಖ ಅಭಿವೃದ್ದಿಯತ್ತ ಸಾಗುತ್ತಿದೆ. ವಿರೋಧ ಪಕ್ಷದವರು ಟೀಕಿಸುವುದು ಸಹಜ. ಸತ್ಯ ಮರೆಮಾಚಿ ಆಪಾದನೆ ಮಾಡುತ್ತಿರುವುದನ್ನು ಯಾರು ಒಪ್ಪುವುದಿಲ್ಲ.
ಈಗಾಗಲೆ ಜಾತಿ ಗಣತಿಗೆ 250 ಕೋಟಿ ರೂ.ಗಳ ಖರ್ಚಾಗಿದೆ. ಹೈಕಮಾಂಡ್ ಹೇಳಿದಂತೆ ರಾಜ್ಯ ಸರ್ಕಾರ ಮರು ಜಾತಿ ಗಣತಿ ನಡೆಸುವಂತಿಲ್ಲ. ಸಂವಿಧಾನದ ಪ್ರಕಾರ ಜಾತಿ ಗಣತಿಯಾಗಬೇಕು.
ಕೇಂದ್ರ ಸರ್ಕಾರ ಅನೇಕ ಯೋಜನೆಗಳನ್ನು ದೇಶದ ಜನತೆಗೆ ನೀಡುತ್ತಿದೆ. ರಾಜ್ಯ ಸರ್ಕಾರ ಹಗರಣಗಳಲ್ಲಿ ಮುಳುಗಿದೆ. ಅಧಿಕಾರದ ದಾಹ ಬಿಡುತ್ತಿಲ್ಲ. 40 ಕೋಟಿ ಜನರಿಗೆ ಕೇಂದ್ರ ಸರ್ಕಾರ ಜನಧನ್ ಬ್ಯಾಂಕ್ ಖಾತೆಯನ್ನು ತೆರೆದಿದೆ. ರೈತರಿಗೆ ಆರು ಸಾವಿರ ರೂ.ಪಿಂಚಣಿ ಕೊಡುತ್ತಿದೆ.
Also Read: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
ನಲ್ಸೆ ಜಲ್, ಹೆದ್ದಾರಿ ನಿರ್ಮಾಣ, ರೈಲ್ವೆ ಮತ್ತು ರೈಲು ನಿಲ್ದಾಣಗಳ ಪರಿವರ್ತನೆ, ಬೆಂಗಳೂರಿಗೆ ಮೆಟ್ರೊ, ವಿಕಸಿತ ಭಾರತ ಇವೆಲ್ಲಾ ಕೇಂದ್ರ ಸರ್ಕಾರದ ಕೊಡುಗೆಗಳು. ಬಿಜೆಪಿಗೆ ದೇಶ ಮೊದಲು. ಬ್ರಿಟೀಷ್ನವರು ಜನ್ಮ ಕೊಟ್ಟಿರುವ ಕಾಂಗ್ರೆಸ್ ಪಕ್ಷದಿಂದ ಜನ ಏನನ್ನು ನಿರೀಕ್ಷಿಸುವಂತಿಲ್ಲ. ಹೊರ ದೇಶದವರು ಪ್ರಶಂಶಿಸುವಷ್ಟರ ಮಟ್ಟಿಗೆ ಭಾರತ ಬೆಳೆಯುತ್ತಿದೆ ಎಂದು ಹೇಳಿದರು.
ಸುದ್ದಿಗೊಷ್ಟಿಯಲ್ಲಿ ಮಾಜಿ ಶಾಸಕರುಗಳಾದ ಜಿ.ಹೆಚ್.ತಿಪ್ಪಾರೆಡ್ಡಿ, ಎಸ್.ಕೆ.ಬಸವರಾಜನ್, ಬಿಜೆಪಿ ನೂತನ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ, ನಿಕಟಪೂರ್ವ ಅಧ್ಯಕ್ಷ ಎ.ಮುರಳಿ, ಪ್ರಧಾನ ಕಾರ್ಯದರ್ಶಿ ಸುರೇಶ್ಸಿದ್ದಾಪುರ, ರಾಂದಾಸ್, ಜೈಪಾಲಯ್ಯ, ಲೋಕೇಶ್, ನಾಗರಾಜ್, ವಕ್ತಾರ ನಾಗರಾಜ್ಬೇದ್ರೆ ಇದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
