By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಬಿ.ಡಿ.ರಸ್ತೆಗೆ ಈಗಾಗಲೇ ಡಾ.ವಿಷ್ಣುವರ್ಧನ್ ಹೆಸರು ಇಟ್ಟಾಗಿದೆ | ಮೋದಿ ಹೆಸರಿಗೆ ವಿಷ್ಣು ಬಳಗದ ಆಕ್ಷೇಪ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಬಿ.ಡಿ.ರಸ್ತೆಗೆ ಈಗಾಗಲೇ ಡಾ.ವಿಷ್ಣುವರ್ಧನ್ ಹೆಸರು ಇಟ್ಟಾಗಿದೆ | ಮೋದಿ ಹೆಸರಿಗೆ ವಿಷ್ಣು ಬಳಗದ ಆಕ್ಷೇಪ

ಮುಖ್ಯ ಸುದ್ದಿ

ಬಿ.ಡಿ.ರಸ್ತೆಗೆ ಈಗಾಗಲೇ ಡಾ.ವಿಷ್ಣುವರ್ಧನ್ ಹೆಸರು ಇಟ್ಟಾಗಿದೆ | ಮೋದಿ ಹೆಸರಿಗೆ ವಿಷ್ಣು ಬಳಗದ ಆಕ್ಷೇಪ

News Desk Chitradurga News
Last updated: 25 June 2025 19:23
News Desk Chitradurga News
3 days ago
Share
ಸುದ್ದಿಗೋಷ್ಟಿಯಲ್ಲಿ ಡಾ.ವಿಷ್ಣುವರ್ಧನ್ ಆದರ್ಶ ಬಳಗದ ರಾಜ್ಯಾಧ್ಯಕ್ಷ ಗೌಸ್‍ಪೀರ್ ಮಾತನಾಡಿದರು
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 25 JUNE 2025

ಚಿತ್ರದುರ್ಗ: ನಗರದ ಬಿ.ಡಿ.ರಸ್ತೆಗೆ ಈಗಾಗಲೇ ಡಾ.ವಿಷ್ಣುವರ್ಧನ ರಸ್ತೆ ಎಂದು 2018ರಲ್ಲಿಯೇ ಸರ್ಕಾರದ ವತಿಯಿಂದ ಅನುಮತಿ ಪಡೆಯುವುದರ ಮೂಲಕ ಪಂಚಚಾರ್ಯ ಕಲ್ಯಾಣ ಮಂಟಪದ ಎದುರು ಡಾ.ವಿಷ್ಣುವರ್ಧನ ರಸ್ತೆ ಎಂದು ನಾಮಫಲಕವನ್ನು ಹಾಕಲಾಗಿದೆ. ಈಗ ಅದೇ ರಸ್ತೆಗೆ ನರೇಂದ್ರ ಮೋದಿಯವರ ಹೆಸರು ಇಡಲು ನಗರಸಭೆ ಮುಂದಾಗಿರುವುದು ಸರಿಯಲ್ಲ ಎಂದು ಕರ್ನಾಟಕ ರಾಜ್ಯ ಡಾ.ವಿಷ್ಣುವರ್ಧನ್ ಆದರ್ಶ ಬಳಗದ ರಾಜ್ಯಾಧ್ಯಕ್ಷ ಗೌಸ್‍ಪೀರ್ ಹೇಳಿದ್ದಾರೆ.

Also Read: ಹೊಸದುರ್ಗ ಪೊಲೀಸರಿಂದ ಕೊಲೆ ಆರೋಪಿಗಳ ಬಂಧನ | ಹುಣವಿನಡು ಗ್ರಾಮದಲ್ಲಿ ನಡೆದಿದ್ದ ಭೀಕರ ಹತ್ಯೆ

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಬಿ.ಡಿ.ರಸ್ತೆಗೆ ಡಾ.ವಿಷ್ಣುವರ್ಧನ ರಸ್ತೆಯೆಂದು ನಾಮಕರಣ ಮಾಡುವಂತೆ 22-09-2015 ರಂದು ನಗರಸಭೆಗೆ ಪತ್ರವನ್ನು ನೀಡಲಾಗಿತ್ತು. ಇದರಂತೆ ಮಂಜುನಾಥ್ ಗೊಪ್ಪೆಯವರು ನಗರಸಭೆಗೆ ಅಧ್ಯಕ್ಷರಾಗಿದ್ದಾಗ ನಡೆದ ಸಮಾನ್ಯ ಸಭೆಯಲ್ಲಿ ಈ ವಿಷಯ ಚರ್ಚೆಗೆ ಬಂದು ಸದಸ್ಯರಿಂದ ಅನುಮೋದನೆ ಪಡೆದು ಪತ್ರಿಕೆಗಳಲ್ಲಿ ಇದರ ಬಗ್ಗೆ ಆಕ್ಷೇಪಣೆಯನ್ನು ಮಾಡಿದಾಗ ಯಾವುದೇ ಆಕ್ಷೇಪಣೆ ಬರದಿದ್ದಾಗ ಹಾಗೂ ಪೋಲಿಸ್ ಇಲಾಖೆಯಿಂದಲೂ ಸಹಾ ಯಾವುದೇ ರೀತಿಯ ಅಭ್ಯಂತರ ಇಲ್ಲ ಎಂದು ತಿಳಿಸಿದ್ದಾರೆ.

ಅಂತಿಮವಾಗಿ ಹೆಸರಿಡಲು ಜಿಲ್ಲಾಧಿಕಾರಿಗಳವರಿಗೆ ಶಿಫಾರಸ್ಸು ಮಾಡಲಾಯಿತು, ಅಂದಿನ ಜಿಲ್ಲಾಧಿಕಾರಿಗಳಾಗಿದ್ದ ವಿ.ವಿ.ಜ್ಯೋತ್ಸ್ನ ರವರು ಪೌರಾಯುಕ್ತರ ಅನುಮೋದನೆ ಮೇರೆಗೆ 2017 ನವೆಂಬರ್ 24 ರಂದು ಪೌರಾಡಳಿತ ನಿದೇಶನಾಯಕ್ಕೆ ಪತ್ರವನ್ನು ಬರೆದರು, ಅಲ್ಲಿಂದ ಪೌರಾಡಳಿತ ನಿದೇಶನಾಯದಿಂದ ಈ ರಸ್ತೆಗೆ ಡಾ.ವಿಷ್ಣುವರ್ಧನ್ ರಸ್ತೆ ಎಂದು ನಾಮಕರಣ ಮಾಡಬಹುದೆಂದು ಅನುಮತಿಯನ್ನು ನೀಡಲಾಯಿತು.

ತದನಂತರ ಅಲ್ಲಿಂದ ಪಂಚಚಾರ್ಯ ಕಲ್ಯಾಣ ಮಂಟಪದ ಎದುರು ಡಾ.ವಿಷ್ಣುವರ್ಧನ ರಸ್ತೆ ಎಂದು ನಾಮಫಲಕವನ್ನು ಹಾಕಲಾಯಿತು.

Also Read: ಗೈರು ಹಾಜರಿ | ಇಬ್ಬರು ಸರ್ಕಾರಿ ನೌಕರರ ಅಮಾನತು

ಈಗ ನಡೆದ ನಗರಸಭೆಯ ಸಾಮಾನ್ಯ ಸಭೆಯಲ್ಲಿ ಬಿ.ಡಿ.ರಸ್ತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಹೆಸರನ್ನು ಇಡಲು ಸದಸ್ಯರಾದ ಶಶಿಧರ್ ಪ್ರಸ್ತಾವನೆಯನ್ನು ಸಲ್ಲಿಸಿದ್ದು, ಇದರ ಬಗ್ಗೆ ಸಭೆ ಸಮ್ಮತಿಯನ್ನು ಸೂಚಿಸಿದೆ ಎಂದು ತಿಳಿದು ಬಂದಿದೆ.

ಈಗಾಗಲೇ ಒಮ್ಮೆ ರಸ್ತೆಗೆ ಹೆಸರನ್ನು ಇಡಲಾಗಿದೆ ಈಗ ಮತ್ತೋಮ್ಮೆ ಅದೇ ರಸ್ತೆಗೆ ಹೆಸರು ಇಡುವುದು ಸರಿಯಲ್ಲ ಎಂದು ಗೌಸ್‍ಪೀರ್ ತಿಳಿಸಿದ್ದಾರೆ.

ಡಾ.ವಿಷ್ಣುವರ್ಧನ್‍ರವರಿಗೆ ತುಂಬಾ ಅನ್ಯಾಯವಾಗುತ್ತಿದೆ ಅವರು ಬದುಕಿದ್ದಾಗಲೂ ಸಹಾ ಸರ್ಕಾರ ಅವರನ್ನು ಗುರುತಿಸಿ ಯಾವುದೇ ಉನ್ನತವಾದ ಪ್ರಶಸ್ತಿಯನ್ನು ನೀಡಲಿಲ್ಲ. ಈಗ ಅವರ ಮರಣದ ನಂತರ ಅವರ ಸ್ಮಾರಕವನ್ನು ಸಹಾ ಸರಿಯಾದ ರೀತಿಯಲ್ಲಿ ಅಭಿವೃದ್ಧಿ ಮಾಡದೇ ಸರ್ಕಾರ ಅವರಿಗೆ ಅನ್ಯಾಯ ಮಾಡುತ್ತಿದೆ. ಇದರ ವಿರುದ್ದ ನಾವು ಹಲವಾರು ಬಾರಿ ಹೋರಾಟವನ್ನು ಮಾಡುವುದರ ಮೂಲಕ ಸರ್ಕಾರದ ಗಮನ ಸೆಳೆದರು ಸಹಾ ಯಾವುದೇ ಕಾರ್ಯವಾಗಿಲ್ಲ ಎಂದು ಹೇಳಿದರು.

Also Read: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ ರೇಟ್ ಎಷ್ಟಿದೆ?

2025 ಸೆ.18 ರಂದು ವಿಷ್ಣುವರ್ಧನ್ ರವರಿಗೆ 75 ವರ್ಷ ತುಂಬಲಿದೆ. ಇದರ ಅಂಗವಾಗಿ ವಿಷ್ಣುವರ್ಧನ್ ಕಪ್ ಪಂದ್ಯಾವಳಿ, ಮಹಿಳೆಯರಿಗಾಗಿ ರಂಗೋಲಿ ಸ್ಪರ್ಧೆ, ತುರುವನೂರು ರಸ್ತೆಯಲ್ಲಿನ ವಿಷ್ಣುವರ್ಧನ್ ಉದ್ಯಾನವನದಲ್ಲಿ ಅವರ ಪ್ರತಿಮೆ, ಕನ್ನಡದ ಧ್ವಜ ಸ್ಥಂಭವನ್ನು ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗಿದೆ ಎಂದ ಗೌಸ್‍ಪೀರ್ ತಿಳಿಸಿದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:BD RoadChitradurgaChitradurga newsChitradurga UpdatesDr. VishnuvardhanKannada Latest NewsKannada NewsMunicipal CouncilnameNarendra ModiVishnu Balagಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಡಾ.ವಿಷ್ಣುವರ್ಧನ್ನಗರಸಭೆನರೇಂದ್ರ ಮೋದಿಬಿಡಿ ರಸ್ತೆವಿಷ್ಣು ಬಳಗಹೆಸರು
Share This Article
Facebook Email Print
Previous Article ಪೊಲೀಸ್ ಇಲಾಖೆಗೆ ಬೊಲೆರೋ ನಿಯೋ | ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಹಸ್ತಾಂತರ
Next Article ಕ್ಷಯ ರೋಗಕ್ಕೆ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ | ಭಯ ಪಡುವ ಅಗತ್ಯವಿಲ್ಲ | ಡಾ.ಪವಿತ್ರ
Leave a Comment

Leave a Reply Cancel reply

Your email address will not be published. Required fields are marked *

Sadguru Pradeep participate hosadurga bandh
ಹೊಸದುರ್ಗ ಬಂದ್‌ | ಇಂದು ಅಂತ್ಯವಲ್ಲ, ಆರಂಭ | ಸದ್ಗುರು ಪ್ರದೀಪ್‌
ಹೊಸದುರ್ಗ
ಹೊಸದುರ್ಗ ಸ್ಥಿತಿ ಸಮುದ್ರದ ನೆಂಟಸ್ಥನ, ಉಪ್ಪಿಗೆ ಬರ | ಕೆ.ಎಸ್.ನವೀನ್
ಹೊಸದುರ್ಗ
ಹೊಸದುರ್ಗ ಬಂದ್ | ನೀರಿಗೆ ಅಡ್ಡಿ ಕಿಡಿಗೇಡಿ ಕೃತ್ಯ | ಎಸ್.ಲಿಂಗಮೂರ್ತಿ
ಹೊಸದುರ್ಗ
ಹೊಸದುರ್ಗ ಬಂದ್ | ಶಾಸಕ ಬಿ.ಜಿ.ಗೋವಿಂದಪ್ಪ ನೇತೃತ್ವದಲ್ಲಿ ಹೋರಾಟ
ಹೊಸದುರ್ಗ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up