CHITRADURGA NEWS | 28 JUNE 2025
ಹೊಸದುರ್ಗ: ಭದ್ರಾ ಜಲಾಶಯದಿಂದ ಹೊಸದುರ್ಗ ತಾಲೂಕಿಗೆ ಕುಡಿಯುವ ನೀರು ತರುವ ಕಾಮಗಾರಿಗೆ ಅಡ್ಡಿಪಡಿಸುವುದು ಕಿಡಿಗೇಡಿ ಕೃತ್ಯ ಎಂದು ಬಿಜೆಪಿ ಮುಖಂಡ ಎಸ್.ಲಿಂಗಮೂರ್ತಿ ಆಕ್ರೋಶ ವ್ಯಕ್ತಪಡಿಸಿದರು.
Also Read: ಹೊಸದುರ್ಗ ಬಂದ್ | ಶಾಸಕ ಬಿ.ಜಿ.ಗೋವಿಂದಪ್ಪ ನೇತೃತ್ವದಲ್ಲಿ ಹೋರಾಟ

ಬಂದ್ ನಲ್ಲಿ ಭಾಗವಹಿಸಿದ್ದ ಅವರು, ಪ್ರತಿಭಟನೆ ಉದ್ದೇಶಿಸಿ ಮಾತನಾಡುತ್ತಾ, ಶಾಸಕರಾದ ಬಿ.ಜಿ.ಗೋವಿಂದಪ್ಪ ಅವರ ನೇತೃತ್ವದಲ್ಲಿ ಮುಂದಿನ ಮೂರು ದಿನಗಳಲ್ಲಿ ಈ ಸಮಸ್ಯೆ ಬಗೆಹರಿಯುವ ಭರವಸೆಯಿದೆ. ಒಂದು ವೇಳೆ ಅಡ್ಡಿ ಮುಂದುವರೆದರೆ ವಿಧಾನಸೌಧದವರೆಗೆ ಪಾದಯಾತ್ರೆ ಮಾಡಲು ಸಿದ್ಧ ಎಂದು ಘೋಷಿಸಿದರು.
ಕಾವೇರಿ ಕೊಳ್ಳದ ನೀರನ್ನು ಅಲ್ಲಿನ ಸುತ್ತಮುತ್ತಲ ಜಿಲ್ಲೆಗಳಿಗೆ ಬಳಸಿಕೊಳ್ಳಲು ಅವಕಾಶ ನೀಡಿರುವ ನಿದರ್ಶನಗಳು ನಮ್ಮ ಮುಂದಿವೆ. ಆದರೆ, ಚಿಕ್ಕಮಗಳೂರು ಜಿಲ್ಲೆಯಲ್ಲಿರುವ ಭದ್ರಾ ನೀರು ತರಲು ದಾವಣಗೆರೆಯವರು ಅಡ್ಡಿ ಮಾಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.
ಹೊಸದುರ್ಗಕ್ಕೆ ಕುಡಿಯುವ ನೀರು ಕೊಡುವ ಕೆಲಸಕ್ಕೆ ಅಡ್ಡಿ ಮಾಡಿರಯವುದು ಸಂಪೂರ್ಣ ಅವೈಜ್ಞಾನಿಕ ಎಂದು ಖಂಡಿಸಿದ ಅವರು, ಇಂತಹ ಸತ್ವ ಇಲ್ಲದ ಹೋರಾಕ್ಕೆ ದಾವಣಗೆರೆ ರೈತರು ಸಹಕಾರ ನೀಡಬಾರದು ಎಂದು ಮನವಿ ಮಾಡಿದರು.
Also Read: ಹೊಸದುರ್ಗ ಸ್ಥಬ್ದ | ಸ್ವಯಂ ಪ್ರೇರಿತವಾಗಿ ಅಂಗಡಿ ಮುಂಗಟ್ಟು ಬಂದ್
ಮುಖಂಡ ಹೆಬ್ಬಳ್ಳಿ ಮಲ್ಲಿಕಾರ್ಜುನ್ ಮಾತನಾಡಿ, ಕುಡಿಯುವ ನೀರಿಗೆ ಅಡ್ಡಿ ಮಾಡುವ ದಾವಣಗೆರೆ ರೈತರ ನಿಲುವು ಸರಿಯಾಗಿಲ್ಲ. ಕುಡಿಯುವ ನೀರಿಗೆ ಯಾರಾದರೂ ತೊಂದರೆ ಮಾಡುತ್ತಾರಾ. ಇದು ಸರಿಯಲ್ಲ ಹೊಸದುರ್ಗ ಜನತೆ ಸಿಡಿದೇಳಬೇಕು ಎಂದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number

ವಾಟ್ಸಾಪ್ ನಂಬರ್ ಕೊಡಿ ನಿಮ್ಮದು
9008943015