
CHITRADURGA NEWS | 15 JULY 2025
ಚಿತ್ರದುರ್ಗ: ಜಿಲ್ಲೆಯಲ್ಲಿ ಬಾಲ ಗರ್ಭಿಣಿಯರ ಪ್ರಮಾಣ ಕಡಿಮೆ ಮಾಡಲು ಸಾಮಾಜಿಕ ಅರಿವು ಕಾರ್ಯಯೋಜನೆ ರೂಪಿಸಿ, ಸಾಮಾಜಿಕ ಅನಿಷ್ಟ ತಪ್ಪಿಸಿ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್ ಹೇಳಿದರು.
ಇದನ್ನೂ ಓದಿ: ಗಣಿಬಾಧಿತ ಪ್ರದೇಶಗಳಿಗೆ ರವಿಕೃಷ್ಟಾರೆಡ್ಡಿ | ಜು.17 ರಂದು ಭೇಟಿ
ನಗರದ ಭಾರತೀಯ ವೈದ್ಯಕೀಯ ಸಂಘದ ಸಭಾಂಗಣದಲ್ಲಿ ಆರೋಗ್ಯ ಇಲಾಖೆ ಸಹಯೋಗದೊಂದಿಗೆ ಸ್ವಾಸ್ಥ್ಯ ಸರ್ಕಲ್ ಫೌಂಡೇಷನ್ನ 5ನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸಾರ್ವಜನಿಕ ಆರೋಗ್ಯ ಸೇವೆ ಒದಗಿಸುವಲ್ಲಿ ಸ್ವಾಸ್ಥ್ಯ ಸರ್ಕಲ್ ಫೌಂಡೇಷನ್ ಕಳೆದ 5 ವರ್ಷದಲ್ಲಿ ಒಂದಲ್ಲ ಒಂದು ಸೇವಾ ಯೋಜನೆ ರೂಪಿಸಿ ಕಾರ್ಯನಿರ್ವಹಿಸುತ್ತಿದೆ.
ಕರೋನ ಸಂದರ್ಭದಲ್ಲಿ ಮಾಸ್ಕ್, ರಕ್ಷಾ ಕವಚ ಸರಬರಾಜು ಕೊರತೆಯಿದ್ದಾಗ ಆರೋಗ್ಯ ಸೇವೆ ಒದಗಿಸುವ ಕಾರ್ಯಕರ್ತರಿಗೆ ಪರಿಕರಗಳನ್ನು ಒದಗಿಸಿದರು. ಕ್ಯಾನ್ಸರ್ ಪತ್ತೆ ಹಚ್ಚುವಲ್ಲಿ ಆಯ್ದ ವೈದ್ಯಾಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ ನಡೆಸಿ, ಕೌಶಲ್ಯಾಭಿವೃದ್ಧಿ ಮತ್ತು ರೋಗಪತ್ತೆ ಹಚ್ಚುವಲ್ಲಿ ಕಾರ್ಯ ನಿರ್ವಹಿಸಿದ್ದಾರೆ ಎಂದು ತಿಳಿಸಿದರು.
ಇದನ್ನೂ ಓದಿ: ಪ್ರತಿಭಾ ಪುರಸ್ಕಾರಕ್ಕೆ ಕುಂಚಿಗ ವೀರಶೈವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
ಫೌಂಡೇಷನ್ ಅಧ್ಯಕ್ಷೆ ಡಾ.ತೋಯಿಜಾಕ್ಷಿ ಬಾಯಿ ಮಾತನಾಡಿ, ಕಳೆದ 5 ವರ್ಷಗಳಿಂದ ಸ್ವಾಸ್ಥ್ಯ ಸರ್ಕಲ್ ಫೌಂಡೇಷನ್ ಆರೋಗ್ಯ ಇಲಾಖೆಯೊಂದಿಗೆ ಸಾರ್ವಜನಿಕ ಆರೋಗ್ಯ ಬಲಪಡಿಸುವಲ್ಲಿ ಪರಿಸರ ಸಂರಕ್ಷೆಣೆ ನಿರ್ವಹಣೆಯಲ್ಲಿ ಮತ್ತು ಸಾಮಾಜಿಕ ಪಿಡುಗಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವುದರೊಂದಿಗೆ ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದರು.
ಬೆಂಗಳೂರು ಮೆಡಿಕಲ್ ಕಾಲೇಜು ಪ್ರಾಧ್ಯಾಪಕಿ ಡಾ.ಸರಸ್ವತಿ ಮಾತನಾಡಿ ಆರೋಗ್ಯ , ಸಾಮಾಜಿಕ, ಆರ್ಥಿಕ, ಪರಿಸರ ಮಾನದಂಡಗಳನ್ನು ಆಧರಿಸಿ ಜೀಯೋ ಬೇಸಡ್ ಮೊಬೈಲ್ ಆಧಾರಿತ ಅಪ್ಲಿಕೇಶನ್ ಸಿದ್ದಪಡಿಸಿ ಚಿತ್ರದುರ್ಗ, ಹೊಳಲ್ಕೆರೆ ಮತ್ತು ಹಿರಿಯೂರು ತಾಲ್ಲೂಕುಗಳಲ್ಲಿ ಆರೋಗ್ಯ ಇಲಾಖೆಯ ಸಹಕಾರದಿಂದ ಆರೋಗ್ಯ ಸೇವಾ ವಂಚಿತ ದುಸ್ಥರ ಪ್ರದೇಶದ ಗ್ರಾಮಗಳನ್ನು ಆಯ್ದು ದತ್ತಾಂಶ ಸಂಗ್ರಹ ಕಾರ್ಯ ಈಗಾಗಲೇ ಚಾಲ್ತಿಯಲ್ಲಿದೆ.
ಯೋಜನೆ ಆಡಳಿತ ಮತ್ತು ಉತ್ತಮ ಸೇವೆ ಒದಗಿಸುವಲ್ಲಿ ಇದು ಇಲಾಖೆಗೆ ಸಾರ್ವಜನಿಕರಿಗೆ ಅನುಕೂಲವಾಗುತ್ತದೆ. ಈಗಾಗಲೇ 2 ಸಾವಿರ ಮನೆ ಮನೆ ಭೇಟಿ, 10 ಸಾವಿರಕ್ಕೂ ಅಧಿಕ ಸಾರ್ವಜನಿಕರ ಆರೋಗ್ಯ ಮತ್ತು ಇತರ ಕುಟುಂಬ ಮಾಹಿತಿ ತಂತ್ರಜ್ಞಾನದ ಮೂಲಕ ದತ್ತಾಂಶ ಸಂಗ್ರಹಿಸಲಾಗಿದೆ. ಮುಂದಿನ ದಿನಗಳಲ್ಲಿ ಸುಸ್ಥಿರ ಅಭಿವೃದ್ಧಿ ಮಾನದಂಡ ಆಧಾರಿಸಿ ಕ್ರಿಯಾಯೋಜನೆ ತಯಾರಿಸಿ ಸರ್ಕಾರದ ಮಾರ್ಗದರ್ಶನದಂತೆ ಆರೋಗ್ಯ ಸೇವೆ ಒದಗಿಸಲಾಗುತ್ತದೆ ಎಂದರು.
ಜಿಲ್ಲಾ ಕ್ಷಯರೋಗ ನಿಯಂತ್ರಣ ಅಧಿಕಾರಿ ಡಾ.ಸಿ.ಒ.ಸುಧಾ ಮಾತನಾಡಿ, ಪ್ರಧಾನಮಂತ್ರಿ ನಿಕ್ಷಯ ಮಿತ್ರಯೋಜನೆ ಅನುಷ್ಠಾನ ಸಮಯದಲ್ಲಿ ಆಯ್ದ 10 ಕ್ಷಯರೋಗಿಗಳನ್ನು ದತ್ತು ಪಡೆದು ಪ್ರತಿ ತಿಂಗಳು ಅವರಿಗೆ ಪೌಷ್ಟಿಕಾಹಾರ ಪಟ್ಟಣ ನೀಡಿ ಅವರ ಯೋಗಕ್ಷೇಮ ಮೌಲ್ಯಮಾಪನ ಮಾಡಿ ಸಂಪೂರ್ಣ ಗುಣಮುಖರಾಗುವಂತೆ ಕಾರ್ಯ ನಿರ್ವಹಿಸಿದ ಕೀರ್ತಿ ಸ್ವಾಸ್ಥ್ಯ ಸರ್ಕಲ್ ಫೌಂಡೇಷನ್ ಅವರಿಗೆ ಸಲ್ಲುತ್ತದೆ ಎಂದರು.
ಇದನ್ನೂ ಓದಿ: ಗ್ರಾಮಾಂತರ ಪೊಲೀಸ್ ಠಾಣೆ | ವಾಹನಗಳ ಬಹಿರಂಗ ಹರಾಜು
ಇದೇ ಸಂದರ್ಭದಲ್ಲಿ ಪ್ರತಿಭಾನ್ವಿತ ಕಾಲೇಜು ಮತ್ತು ಪ್ರೌಢಶಾಲೆಯ 5 ಜನ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ನಿವೃತ್ತ ಆರೋಗ್ಯ ಶಿಕ್ಷಣಾಧಿಕಾರಿ ಮೂರ್ತಪ್ಪ ಅವರಿಗೆ ಗೌರವ ಅಭಿನಂದನೆ ಸಲ್ಲಿಸಲಾಯಿತು.
ಕಾರ್ಯಕ್ರಮದಲ್ಲಿ ಆರೋಗ್ಯ ಶಿಕ್ಷಣಾಧಿಕಾರಿ ಎಂ.ಹೆಚ್.ಚಂದ್ರಶೇಖರ್ ನಾಯ್ಕ್, ನಿವೃತ್ತ ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ್, ಸ್ವಾಸ್ಥ್ಯ ಸರ್ಕಲ್ ಫೌಂಡೇಷನ್ ಸರ್ವ ಸದಸ್ಯರು, ಡಾ.ಕವಿತ, ಡಾ.ಲೀಲಾವತಿ, ಡಾ. ಜಮುನಾ, ಡಾ.ಅನಿತಾ ಇದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
