
CHITRADURGA NEWS | 16 JULY 2025
ಹಿರಿಯೂರು: ಹಿರಿಯೂರು ಪಟ್ಟಣದ ಜನನಿಬಿಡ ಪ್ರದೇಶದ ರಸ್ತೆಯಲ್ಲಿ ರಾತ್ರಿ ಊಟದ ನಂತರ ವಾಕ್ ಮಾಡುತ್ತಿದ್ದ ಮಹಿಳೆಯ ಬಂಗಾರದ ಸರ ಕದ್ದು ಕಳ್ಳರು ಪರಾರಿಯಾಗಿರುವ ಘಟನೆ ನಡೆದಿದೆ.
ಪೊಲೀಸ್ ಇಲಾಖೆಯ ನಿವೃತ್ತ ಎಎಸ್ಐ ತಿಪ್ಪೇಸ್ವಾಮಿ ಅವರ ಪತ್ನಿ ವಿನೋದಮ್ಮ ಹಿರಯೂರಿನ ಶ್ರೀನಿವಾಸ ಬಡಾವಣೆಯ ತಮ್ಮ ಮನೆಯ ಬಳಿ ರಾತ್ರಿ ಊಟದ ನಂತರ ವಾಕ್ ಮಾಡುತ್ತಿದ್ದಾಗ ಬೈಕಿನಲ್ಲಿ ಬಂದ ಇಬ್ಬರು ಕಳ್ಳರು ಸರ ಕದ್ದು ಪರಾರಿಯಾಗಿದ್ದಾರೆ.
ಇದನ್ನೂ ಓದಿ: BNS ಕಾಯ್ದೆಯಡಿ ಜಿಲ್ಲೆಯಲ್ಲಿ ಮೊದಲ ಶಿಕ್ಷೆ | ಕಳ್ಳತನ ಮಾಡಿದ ಆರೋಪಿಗೆ ಜೈಲುವಾಸ | ಹೊಳಲ್ಕೆರೆ ನ್ಯಾಯಾಲಯ
ಕಳ್ಳತನದ ದೃಶ್ಯ ಸಿ.ಸಿ.ಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸರ ಕದ್ದ ವೇಳೆ ವಿನೋದಮ್ಮ ಜೋರಾಗಿ ಕೂಗಿಕೊಂಡಿದ್ದಾರೆ. ಈ ವೇಳೆ ಅಕ್ಕ, ಪಕ್ಕದ ಮನೆಯವರು ಬಂದು ಕಳ್ಳರನ್ನು ಹಿಡಿಯಲು ಯತ್ನಿಸಿದಾಗ ಚಾಕು ತೋರಿಸಿ ಬೆದರಿಸಿ ತಪ್ಪಿಸಿಕೊಂಡಿದ್ದಾರೆ.
ವಿನೋದಮ್ಮ ಧರಿಸಿದ್ದ ಮಾಂಗಲ್ಯ ಸರ 60 ಗ್ರಾಂ ತೂಕವಿತ್ತು, ಈ ಬಗ್ಗೆ ದೂರು ದಾಖಲಾಗಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
