
CHITRADURGA NEWS | 22 JULY 2025
ಹೊಳಲ್ಕೆರೆ: ಜವಾಬ್ದಾರಿ ಸಿಕ್ಕಿರುವ ಅವಕಾಶವನ್ನು ಸಾರ್ವಜನಿಕರಿಗೆ ಧಾರೆ ಎರೆಯುವ ಮೂಲಕ ಕಾರ್ಯಕರ್ತರ ಮನಸ್ಸಿನಲ್ಲಿರುವ ನೋವನ್ನು ಅರ್ಥ ಮಾಡಿಕೊಂಡು ಹಗಲು-ರಾತ್ರಿ ಕ್ಷೇತ್ರದ ಅಭಿವೃದ್ದಿಗೆ ಪ್ರಾಮಾಣಿಕವಾಗಿ ದುಡಿಯುತ್ತಿದ್ದೇನೆಂದು ಶಾಸಕ ಡಾ.ಎಂ.ಚಂದ್ರಪ್ಪ ಹೇಳಿದರು.
ಇದನ್ನೂ ಓದಿ: ಆಗಸ್ಟ್ ತಿಂಗಳಲ್ಲೇ ಒಳಮೀಸಲಾತಿ ಜಾರಿ | ಹೋರಾಟ, ಬಂದ್ ಬೇಡ | ಎಚ್.ಆಂಜನೇಯ

ಭರಮಸಾಗರದ ಪ್ರವಾಸಿ ಮಂದಿರದಲ್ಲಿ ಭಾರತೀಯ ಜನತಾ ಪಾರ್ಟಿ ಭರಮಸಾಗರ ಮಂಡಲ ಪದಾಧಿಕಾರಿಗಳ ಸಂಘಟನಾತ್ಮಕ ಸಭೆ ಉದ್ಘಾಟಿಸಿ ಮಾತನಾಡಿದರು.
ಚುನಾವಣೆಯಲ್ಲಿ ಯಾವುದೇ ಅಳುಕಿಲ್ಲದೆ ಎದೆ ಎತ್ತಿ ಮತ ಕೇಳುವ ರೀತಿಯಲ್ಲಿ ತಾಲ್ಲೂಕಿನಾದ್ಯಂತ ಅಭಿವೃದ್ದಿ ಕಾಮಗಾರಿಗಳನ್ನು ಕೈಗೊಳ್ಳುತ್ತಿದ್ದೇನೆ. ಒಂದು ಜಾತಿಯನ್ನು ಓಲೈಸುವ ರಾಜಕಾರಣಿ ನಾನಲ್ಲ. ಎಲ್ಲರನ್ನು ಪ್ರೀತಿ ಗೌರವದಿಂದ ಕಾಣುತ್ತೇನೆ ಎಂದರು.
ಜಮ್ಮು-ಕಾಶ್ಮಿರದ ಪಹಲ್ಗಾಮ್ನಲ್ಲಿ ಉಗ್ರರು 26 ಅಮಾಯಕರನ್ನು ಬಲಿ ಪಡೆದಿದ್ದಕ್ಕೆ ಪ್ರತೀಕಾರವಾಗಿ ನಮ್ಮ ದೇಶದ ಸೈನಿಕರು ಪಾಕಿಸ್ತಾನದೊಳಗೆ ನುಗ್ಗಿ ಭಯೋತ್ಪದಾಕರ ನೆಲೆಗಳನ್ನು ಹುಡುಕಿ ಧ್ವಂಸಗೊಳಿಸಿದ್ದಾರೆ.
ದೇಶದ ಪ್ರಧಾನಿ ನರೇಂದ್ರ ಮೋದಿರವರು ಬದ್ದತೆಯಿಂದ ಕೆಲಸ ಮಾಡುತ್ತಿರುವುದರಿಂದ 140 ಕೋಟಿ ಜನರು ಸುರಕ್ಷಿತವಾಗಿದ್ದಾರೆ.
ಇದನ್ನೂ ಓದಿ: ಕಾರ್ಮಿಕ ಇಲಾಖೆಯಲ್ಲಿ ಅವ್ಯವಹಾರ | ಸಿಬಿಐ ತನಿಖೆಗೆ MLC ಕೆ.ಎಸ್. ನವೀನ್ ಒತ್ತಾಯ
ಮುಂಬರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ಕಾರ್ಯಕರ್ತರು ಸ್ಪರ್ಧಿಸಿ ಗೆದ್ದು ಅಧಿಕಾರ ಹಿಡಿಯಬೇಕು. ಇನ್ನು ಮೂರು ವರ್ಷಗಳ ಕಾಲ ಕ್ಷೇತ್ರದಲ್ಲಿ ದಿನನಿತ್ಯವೂ ಒಂದಲ್ಲ ಒಂದು ರೀತಿಯ ಅಭಿವೃದ್ದಿ ಕಾಮಗಾರಿಗಳು ನಡೆಯುವಷ್ಟು ಅನುದಾನ ತರುತ್ತೇನೆ.
ಹಿರೇಬೆನ್ನೂರು ಸರ್ಕಲ್ನಿಂದ ಸಾಸಲುವರೆಗೆ ರಸ್ತೆಗೆ ನೂರು ಕೋಟಿ ರೂ.ಗಳನ್ನು ಖರ್ಚು ಮಾಡಿದ್ದೇನೆ. ನಿರಂತರವಾಗಿ ಅಭಿವೃದ್ದಿ ಕೆಲಸಗಳು ನಡೆಯುತ್ತಿರುತ್ತವೆ ಎಂದು ತಿಳಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷಗಳಾಗಿದೆ. ಅಭಿವೃದ್ದಿ ಮಾತ್ರ ಕುಂಠಿತ. ಐದು ಉಚಿತ ಗ್ಯಾರೆಂಟಿಗಳು ಸಮರ್ಪಕವಾಗಿ ಅನುಷ್ಟಾನವಾಗುತ್ತಿಲ್ಲ. ಮುಖ್ಯಮಂತ್ರಿ ಕುರ್ಚಿಗಾಗಿ ಕಿತ್ತಾಟ ನಡೆಯುತ್ತಿದೆ.
ಮುಂದಿನ ದಿನಗಳಲ್ಲಿ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಲ್ಲಿಯೂ ಬಿಜೆಪಿ ಗೆಲ್ಲಬೇಕು. ಹನ್ನೊಂದು ವರ್ಷಗಳಿಂದ ದೇಶವನ್ನು ಮುನ್ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿರವರ ಮೇಲೆ ಯಾವುದೇ ಕಪ್ಪು ಚುಕ್ಕೆಯಿಲ್ಲ. ವಿಶ್ವವೇ ಭಾರತದ ಕಡೆ ತಿರುಗಿ ನೋಡುವ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ನಾನು ಕೂಡ ಹಿರಿಯರ ಮಾರ್ಗದರ್ಶನ ಪಡೆದು ಜಿಲ್ಲೆಯಾದ್ಯಂತ ಪಕ್ಷ ಸಂಘಟನೆಯಲ್ಲಿ ಪ್ರಾಮಾಣಿಕವಾಗಿ ಶ್ರಮಿಸುತೆನೆ ಎಂದು ಭರವಸೆ ನೀಡಿದರು.
ಇದನ್ನೂ ಓದಿ: ಮಗಳು ನಾಪತ್ತೆ | ತಂದೆ ಆತ್ಮಹತ್ಯೆ | ಪೋಕ್ಸೋ ಕೇಸ್ ದಾಖಲಿಸದ ಪೊಲೀಸರ ವಿರುದ್ಧ ಆಕ್ರೋಶ
ಸಭೆಯಲ್ಲಿ ಜಿಲ್ಲಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ವೆಂಕಟೇಶ್ಯಾದವ್, ಭರಮಸಾಗರ ಬಿಜೆಪಿ. ಮಂಡಲ ಅಧ್ಯಕ್ಷ ಶೈಲೇಶ್, ಕುಮಾರಸ್ವಾಮಿ, ಡಿ.ಎಸ್.ಪ್ರವೀಣ್ಕುಮಾರ್, ಕೋಗುಂಡೆ ಮಂಜುನಾಥ್, ತಿಪ್ಪೇಸ್ವಾಮಿ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಕಲ್ಲೇಶ್, ಬಸಣ್ಣ, ಶೇಖರ್, ಮಲ್ಲಣ್ಣ, ಮೋಹನ್, ಮಲ್ಲಿಕಾರ್ಜುನಸ್ವಾಮಿ, ನಾಗರಾಜ್ ಬೇದ್ರೆ, ಪಕ್ಷದ ಮುಖಂಡರು, ಕಾರ್ಯಕರ್ತರು ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
