
CHITRADURGA NEWS | 30 JULY 2025
ಚಿತ್ರದುರ್ಗ: ವಿದ್ಯಾರ್ಥಿ ವೇತನ ಬಿಡುಗಡೆ ಹಾಗೂ ಹಾಸ್ಟೆಲ್ ಗಳಲ್ಲಿ ಮೂಲ ಸೌಲಭ್ಯವನ್ನು ಸರಿಪಡಿಸುವಂತೆ ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಇದನ್ನೂ ಓದಿ: ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯಲ್ಲಿ ಸ್ಟೆಮ್ ಮತ್ತು ಲಾಂಗ್ವೇಜ್ ಲ್ಯಾಬ್ಸ್ ಉದ್ಘಾಟನೆ
ದೇಶ ಹಾಗೂ ರಾಜ್ಯ ಅಭಿವೃದ್ಧಿಯಾಗಬೇಕಾದರೆ ಅಲ್ಲಿನ ಶಿಕ್ಷಣ ವ್ಯವಸ್ಥೆಗೆ ಅಗತ್ಯವಿರುವ ಸೌಲಭ್ಯಗಳನ್ನು ವಿದ್ಯಾರ್ಥಿಗಳಿಗೆ ಒದಗಿಸಬೇಕು. ಇದು ಯಾವುದೇ ಸರ್ಕಾರದ ಆಧ್ಯ ಕರ್ತವ್ಯ. ಗ್ರಾಮೀಣ ಮತ್ತು ಬಡ ಪ್ರತಿಭಾವಂತ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ಕಾರಣಕ್ಕೆ ಸರ್ಕಾರ ಅನೇಕ ಯೋಜನೆಗಳನ್ನ ಜಾರಿಗೆ ತರುತ್ತಿದೆ. ಆದರೆ, ಸಮರ್ಪಕ ಅನುಷ್ಠಾನವಾಗದೆ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದಾರೆ ಎಂದು ದೂರಿದರು.
ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೆ ಸರಿಯಾದ ಹಾಸ್ಟೆಲ್ ವ್ಯವಸ್ಥೆ ಹಾಗೂ ವಿದ್ಯಾರ್ಥಿ ವೇತನ ನೀಡದೆ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡುತ್ತಿದೆ. ಕರ್ನಾಟಕದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ1,258 ಹಾಸ್ಟೆಲ್ ಗಳಿದ್ದು 1,68,833 ವಿದ್ಯಾರ್ಥಿಗಳು ವಸತಿ ನಿಲಯಗಳಲ್ಲಿದ್ದಾರೆ.
ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ 1972 ವಸತಿ ನಿಲಯಗಳಿದ್ದು 1,87,200 ವಿದ್ಯಾರ್ಥಿಗಳಿಗೆ ವಸತಿ ನಿಲಯಗಳಲ್ಲಿ ಉಳಿಯಲು ಅವಕಾಶ ನೀಡಬಹುದಾಗಿದೆ, ಆದರೆ, ರಾಜ್ಯದಲ್ಲಿ ಹಿಂದಿನ 3 ವರ್ಷಗಳ ವರದಿ ಪ್ರಕಾರಅರ್ಜಿ ಸಲ್ಲಿಸಿದ 100 ವಿದ್ಯಾರ್ಥಿಗಳಲ್ಲಿ 40 ರಿಂದ 50 ವಿದ್ಯಾರ್ಥಿಗಳಿಗೆ ಮಾತ್ರ ವಸತಿ ನಿಲಯಗಳಲ್ಲಿ ಅವಕಾಶ ಸಿಗುತ್ತಿದೆ. ಇನ್ನುಳಿದ ವಿದ್ಯಾರ್ಥಿಗಳು ವಸತಿ ನಿಲಯಗಳಿಂದ ವಂಚಿತರಾಗುತ್ತಿದ್ದಾರೆ ಎಂದು ವಿದ್ಯಾರ್ಥಿಗಳು ತಿಳಿಸಿದರು.
ಇದನ್ನೂ ಓದಿ: ಒಳ ಮೀಸಲಾತಿ ಜಾರಿಗೆ ಆಗಸ್ಟ್ 1 ರಂದು ಬೃಹತ್ ಪ್ರತಿಭಟನೆ | ದಲಿತ ಮುಖಂಡ ಚಳ್ಳಕೆರೆ ಶ್ರೀನಿವಾಸ್
ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಆಯಾ ಜಿಲ್ಲೆಗಳಿಗೆ ಹೊಸ ವಸತಿ ನಿಲಯಗಳನ್ನು ಘೋಷಣೆ ಮಾಡಬೇಕೆಂದು ಎಬಿವಿಪಿ ಆಗ್ರಹಿಸಿದೆ.
ರಾಜ್ಯದಲ್ಲಿ ಕಳೆದ ನಾಲ್ಕು ತಿಂಗಳುಗಳಿಂದ ವಿದ್ಯಾರ್ಥಿಗಳಿಗೆ ವಸತಿ ನಿಲಯಗಳಲ್ಲಿ ನೀಡುತ್ತಿದ್ದ ಕಿಟ್ ಗಳು ತಲುಪುತ್ತಿಲ್ಲ, 40 – 50 ವಿದ್ಯಾರ್ಥಿಗಳಿಗೆ ಸೇರಿ 2-3 ಶೌಚಾಲಯಗಳು ಇವೆ. 100 ವಿದ್ಯಾರ್ಥಿಗಳು ಇರಬೇಕಾದ ವಸತಿ ನಿಲಯಗಳಲ್ಲಿ 140 – 150 ವಿದ್ಯಾರ್ಥಿಗಳನ್ನ ಇರಿಸುವಂತಾಗಿದೆ, ಪ್ರತಿ ತಿಂಗಳು ಊಟದ ವೆಚ್ಚಕ್ಕೆ ಪ್ರತಿ ವಿದ್ಯಾರ್ಥಿಗೆ 1,850ರೂ ಮಾತ್ರ ನೀಡಲಾಗುತ್ತಿದೆ.
ಈ ಹಣದಲ್ಲಿ ಡಯಟ್ ಚಾರ್ಟ್ ನಲ್ಲಿಇರುವಂತೆ ಸರಿಯಾಗಿ ಆಹಾರವನ್ನು ಕೊಡುವುದಕ್ಕೆ ಆಗುವುದಿಲ್ಲ ಕಾರಣ ಸರಕಾರ ಈ ಹಣವನ್ನು ಹೆಚ್ಚಳ ಮಾಡಬೇಕು ಎಂದು ಆಗ್ರಹಿಸಿದರು.
ರಾಜ್ಯದಲ್ಲಿ ಶಕ್ತಿ ಯೋಜನೆ ಜಾರಿಯಾದಾಗಿನಿಂದ ಸರ್ಕಾರಿ ಸಾರಿಗೆ ಬಸುಗಳಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚುತ್ತಿದೆ. ಆದ್ದರಿಂದ ಶಾಲಾ ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು ಪ್ರಯಾಸದಿಂದ ಜೀವ ಕೈಯಲ್ಲಿಡಿದು ಪ್ರಯಾಣಿಸುವ ಸಂದರ್ಭ ಎದುರಾಗಿದೆ.
ಇದನ್ನೂ ಓದಿ: ಯಡಿಯೂರಪ್ಪ ಜೊತೆ ಚಂದ್ರಪ್ಪ ಉಭಯ ಕುಶಲೋಪರಿ
ಈ ನಿಟ್ಟಿನಲ್ಲಿ ಸರ್ಕಾರ ಗಂಭೀರವಾಗಿ ಯೋಚಿಸಬೇಕು ಹಾಗೂ ವಿಶೇಷವಾಗಿ ವಿದ್ಯಾರ್ಥಿಗಳಿಗೆ ದಟ್ಟಣೆ ಹೆಚ್ಚಿರುವ ಕಡೆಗಳಲ್ಲಿಶಾಲಾ ಕಾಲೇಜುಗಳ ಸಮಯಕ್ಕೆ ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸುವಂತೆ ವಿದ್ಯಾರ್ಥಿ ಪರಿಷತ್ ಆಗ್ರಹಿಸಿದೆ.
ಲಕ್ಷಾಂತರ ಬಡ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನವನ್ನು ನಂಬಿ ಶಿಕ್ಷಣವನ್ನ ಪಡೆಯುತ್ತಿದ್ದಾರೆ. ತಮ್ಮ ಶಿಕ್ಷಣಕ್ಕೆ ಸರ್ಕಾರಗಳು ನೀಡುವ ವಿದ್ಯಾರ್ಥಿವೇತನ ಸಹಕಾರಿಯಾಗಲಿದೆ ಎಂಬ ಬಾವನೆಯೊಂದಿಗೆ ಅರ್ಜಿ ಸಲ್ಲಿಸಿದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಕಳೆದ ವರ್ಷದ ವಿದ್ಯಾರ್ಥಿ ವೇತನ ಜಮೆಯಾಗದೆ ಬಹಳಷ್ಟು ತೊಂದರೆ ಅನುಭವಿಸುತ್ತಿದ್ದಾರೆ.
ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನವನ್ನು ಕಡಿತಗೊಳಿಸಿರುವುದು, ವಿದ್ಯಾಸಿರಿ ವಿದ್ಯಾರ್ಥಿ ವೇತನ ಸರಿಯಾಗಿ ಜಮೆಯಾಗದೇ ಇರುವುದು, ರೈತ ವಿದ್ಯಾನಿಧಿಯನ್ನ ರದ್ದುಗೊಳಿಸಿರುವುದು, ಹಾಗೂ ಇನ್ನುಳಿದ ವಿದ್ಯಾರ್ಥಿ ವೇತನವು ಸರಿಯಾಗಿ ವಿದ್ಯಾರ್ಥಿಗಳಿಗೆ ಜಮೆ ಮಾಡದೆ ವಿದ್ಯಾರ್ಥಿ ವಿರೋಧಿ ನೀತಿಯನ್ನಅನುಸರಿಸುತ್ತಿದ್ದು, ತಕ್ಷಣ ಎಲ್ಲವನ್ನೂ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.
ಇದನ್ನೂ ಓದಿ: ಬೆಳೆ ವಿಮೆ | ಅಡಿಕೆ, ದಾಳಿಂಬೆ, ಮಾವು ಬೆಳೆ ನೊಂದಣಿಗೆ ಆಗಸ್ಟ್ 11 ಕೊನೆ ದಿನ
ಪ್ರತಿಭಟನೆಯಲ್ಲಿ ಎಬಿವಿಪಿ ವಿಭಾಗ ಸಂಚಾಲಕ ಗೋಪಿ, ರಾಜ್ಯ ಸಾಮಾಜಿಕ ಜಾಲತಾಣ ಆದರ್ಶ, ಜಿಲ್ಲಾ ಸಂಚಾಲಕ ಸಂಜಯ್, ನಗರ ಕಾರ್ಯದರ್ಶಿ ವಿಕಾಸ್, ರಾಜ್ಯ ಕಾರ್ಯಕಾರಿಣಿ ಸದಸ್ಯ ಧನಂಜಯ್ ಪಟೇಲ್, ಚಂದನ, ಚಂದ್ರಕಲಾ, ಕಾರ್ಯದರ್ಶಿಗಳಾದ ಕುಬೇರ ಪ್ರಶಾಂತ್, ಚರಣ್, ಪ್ರೀತಂ, ಅರುಣಕುಮಾರ್, ಪ್ರವೀಣ್ ಬೆಳಗೆರೆ, ಗೌತಮ್ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

