
CHITRADURGA NEWS | 15 SEPTEMBER 2025
ಚಿತ್ರದುರ್ಗ: ಡಿ.ಗ್ಯಾಂಗ್ನಿಂದ ಕೊಲೆಯಾದ ಚಿತ್ರದುರ್ಗದ ರೇಣುಕಾಸ್ವಾಮಿ ಕುಟುಂಬಕ್ಕೆ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಒಂದು ಲಕ್ಷ ರೂ. ಆರ್ಥಿಕ ನೆರವು ನೀಡಿ ಉದ್ಯೋಗ ಕೊಡಿಸುವ ಭರವಸೆ ನೀಡಿದ್ದಾರೆ.
ಇದನ್ನೂ ಓದಿ: ಹೆದ್ದಾರಿಗೆ ಮತ್ತೊಂದು ಕರಡಿ ಬಲಿ

ನಗರದ ವಿಆರ್ಎಸ್ ಬಡಾವಣೆಯಲ್ಲಿರುವ ರೇಣುಕಾಸ್ವಾಮಿ ಮನೆಗೆ ಭೇಟಿ ನೀಡಿದ ಟಿ.ರಘುಮೂರ್ತಿ, ಕುಟುಂಬದ ಸ್ಥಿತಿಗತಿ ವಿಚಾರಿಸಿ ಮುರುಘಾ ಮಠದಲ್ಲಿ ಉದ್ಯೋಗ ನೀಡುವಂತೆ ಮಠದ ಅಧ್ಯಕ್ಷರಾದ ಶಿವಯೋಗಿ ಸಿ.ಕಳಸದ್ ಅವರ ಜೊತೆಗೆ ದೂರವಾಣಿ ಮೂಲಕ ಮಾತನಾಡಿದರು.
ನಂತರ ಸಿರಿಗೆರೆ ಮಠದ ಸಂಸ್ಥೆಗಳಲ್ಲೂ ಉದ್ಯೋಗಕ್ಕೆ ಪ್ರಯತ್ನಿಸಲಾಗುವುದು. ಕೊನೆ ಪಕ್ಷ ಸರ್ಕಾರಿ ಅನುದಾನಿತ ಸಂಸ್ಥೆಯಲ್ಲಿ ಉದ್ಯೋಗ ಒದಗಿಸಿಕೊಡುವ ಭರವಸೆ ನೀಡಿದ್ದಾರೆ ಎಂದು ರೇಣುಕಾಸ್ವಾಮಿ ತಂದೆ ಕಾಶಿನಾಥ ಶಿವನಗೌಡ್ರು ತಿಳಿಸಿದ್ದಾರೆ.
ಇದನ್ನೂ ಓದಿ: ನರೇಂದ್ರ ಮೋದಿ ದಿಟ್ಟ ನಡೆಗೆ ಮೆತ್ತಗಾದ ಅಮೇರಿಕಾ | ಜಿ.ಎಚ್.ತಿಪ್ಪಾರೆಡ್ಡಿ
ಇದೇ ವೇಳೆ ರೇಣುಕಾಸ್ವಾಮಿ ಕೆಲಸ ಮಾಡುತ್ತಿದ್ದ ಅಪೊಲೋ ಮೆಡಿಸಿನ್ ಸಂಸ್ಥೆಯವರು 10.02 ಲಕ್ಷ ರೂ. ವಿಮಾ ಹಣವನ್ನು ನೀಡಿರುವುದು ತಿಳಿದು ಬಂದಿದೆ.
ಈ ವೇಳೆ ಜಿಪಂ ಮಾಜಿ ಅಧ್ಯಕ್ಷ ರವಿಕುಮಾರ್, ಮಾಜಿ ಸದಸ್ಯ ಜಿ.ಟಿ.ಬಾಬುರೆಡ್ಡಿ, ಲಿಂಗರಾಜು ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
