By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಮುಸ್ಲೀಂ ಸಮುದಾಯದಿಂದ ಪ್ರತಿಭಟನೆ
    ಜಮೀರ್‌ ಅಹಮ್ಮದ್‌ ಅವರಿಗೆ ಡಿಸಿಎಂ ಸ್ಥಾನಕ್ಕೆ ಒತ್ತಾಯ | ಮುಸ್ಲೀಂ ಮುಖಂಡರಿಂದ ಪ್ರತಿಭಟನೆ
    11 hours ago
    Municipal Council
    ಚಿತ್ರದುರ್ಗಕ್ಕೆ ಐದು ದಿನ ಶಾಂತಿಸಾಗರ ನೀರು ಸ್ಥಗಿತ 
    13 hours ago
    MLC KS NAVEEN
    ಪದವೀಧರ ಕ್ಷೇತ್ರದ ಚುನಾವಣೆ | ಉಸ್ತುವಾರಿಗಳಾಗಿ ಕೆ.ಎಸ್.ನವೀನ್, ರಘು ಚಂದನ್ ನೇಮಕ
    13 hours ago
    ಅರ್ಜಿ ಅಹ್ವಾನ
    ತೋಟಗಾರಿಕೆ ಬೆಳೆಗಳಿಗೆ ಸಹಾಯಧನ | ಅರ್ಜಿ ಆಹ್ವಾನ
    20 hours ago
    ವಾರ್ಷಿಕ ಮಹಾಸಭೆ ಮತ್ತು ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭದಲ್ಲಿ ಮಾಲತೇಶ್ ಮುದ್ದಜ್ಜಿ ಮಾತನಾಡಿದರು
    ಸರ್ಕಾರಿ ನೌಕರರ ಸಂಘಕ್ಕೆ ಜಿಲ್ಲಾಡಳಿತದಿಂದ 2 ಎಕರೆ ಜಮೀನು | ಭವ್ಯ ನೌಕರ ಭವನ ನಿರ್ಮಾಣಕ್ಕೆ ಯೋಜನೆ | ಮಾಲತೇಶ್ ಮುದ್ದಜ್ಜಿ
    22 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 days ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    1 week ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    1 week ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    2 weeks ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    2 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    5 days ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    5 days ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    2 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    2 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    12 hours ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    1 day ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 days ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    3 days ago
    Adike rate
    ಅಡಿಕೆ ಧಾರಣೆ | 2 ಜೂನ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    4 days ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 07 | ಪ್ರಯಾಣದಲ್ಲಿ ಅಡೆತಡೆಗಳು, ಆರೋಗ್ಯದ ಕಡೆ ಜಾಗೃತಿ ವಹಿಸಿ
    23 minutes ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 06 | ಉದ್ಯೋಗಗಳಲ್ಲಿ ನಿರುತ್ಸಾಹ ವಾತಾವರಣ, ಕೈಗೊಂಡ ಕೆಲಸದಲ್ಲಿ ಯಶಸ್ಸು
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 05 | ಉದ್ಯೋಗಿಗಳಿಗೆ ಅಧಿಕಾರಿಗಳ ಬೆಂಬಲ, ವ್ಯವಹಾರದಲ್ಲಿ ನಿರೀಕ್ಷಿತ ಪ್ರಗತಿ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 04 | ವೃತ್ತಿಪರ ವ್ಯವಹಾರಗಳಲ್ಲಿ ಲಾಭ, ದೂರ ಪ್ರಯಾಣದ ಸೂಚನೆ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 03 | ಮಾನಸಿಕ ಒತ್ತಡ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 05 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 01 | ಮೆಕ್ಕೆಜೋಳ, ರಾಗಿ ರೇಟ್..
    6 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.29 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.27 | ರಾಗಿ, ಶೇಂಗಾ ರೇಟ್..
    2 weeks ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    2 days ago
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    1 week ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    1 month ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 weeks ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    5 days ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    5 days ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    2 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    2 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    4 weeks ago
  • Life Style
    Life StyleShow More
    rose water
    ರೋಸ್ ವಾಟರ್ ಬೆರೆಸಿದ ನೀರಿನಲ್ಲಿ ಸ್ನಾನ ಮಾಡಿದರೆ ಈ ಪ್ರಯೋಜನ ಪಡೆಯಬಹುದು
    31 minutes ago
    Apply beetroot to your hair
    ಕೂದಲಿಗೆ ಬೀಟ್‌ರೂಟ್ ಹಚ್ಚಿ ಈ ಅದ್ಭುತ ಪ್ರಯೋಜನಗಳನ್ನು ಪಡೆಯಿರಿ
    24 hours ago
    eat mango during pregnancy
    ಗರ್ಭಾವಸ್ಥೆಯಲ್ಲಿ ಮಾವು ತಿನ್ನುವುದು ಸುರಕ್ಷಿತವೇ? 
    1 day ago
    mango or mango fruit
    ಮಾವಿನ ಕಾಯಿ ಮತ್ತು ಮಾವಿನ ಹಣ್ಣಿನಲ್ಲಿ ಯಾವುದು ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ?
    2 days ago
    Applying this mixture with almond oil will increase the radiance of the face
    ಬಾದಾಮಿ ಎಣ್ಣೆಗೆ ಈ ವಸ್ತುವನ್ನು ಬೆರೆಸಿ ಹಚ್ಚಿದರೆ ಮುಖದ ಕಾಂತಿ ಹೆಚ್ಚಾಗುತ್ತದೆ
    2 days ago
Reading: ಜಾತಿ ಗಣತಿ ಬದಲಿಗೆ ಆರ್ಥಿಕ, ಶೈಕ್ಷಣಿಕ, ಔದ್ಯೋಗಿಕ ಸೌಲಭ್ಯ ನೀಡಲಿ | ತರಳಬಾಳು ಶ್ರೀ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಜಾತಿ ಗಣತಿ ಬದಲಿಗೆ ಆರ್ಥಿಕ, ಶೈಕ್ಷಣಿಕ, ಔದ್ಯೋಗಿಕ ಸೌಲಭ್ಯ ನೀಡಲಿ | ತರಳಬಾಳು ಶ್ರೀ

News Desk Chitradurga News
Last updated: 24 September 2025 20:03
News Desk Chitradurga News
9 months ago
Share
ಲಿಂ.ಶ್ರೀ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿಯವರ 34ನೇ ಶ್ರದ್ಧಾಂಜಲಿಯ ಸಮಾರೋಪ ಸಮಾರಂಭ
SHARE

CHITRADURGA NEWS | 24 SEPTEMBER 2025

ಚಿತ್ರದುರ್ಗ: ಮೀಸಲಾತಿ ಇಲ್ಲದೇ ಹೋಗಿದ್ದರೆ ಯಾರು ಸಹ ಜಾತಿ ಗಣತಿಯ ಬಗ್ಗೆ ಚರ್ಚೆ ನಡೆಸುತ್ತಿರಲಿಲ್ಲ. ನಮ್ಮದು ಜಾತ್ಯತೀತ ರಾಷ್ಟ್ರ. ಜಾತಿ ಗಣತಿಯಿಂದ ಜಾತಿಗಳ ಸಂಘರ್ಷಕ್ಕೆ ಕಾರಣವಾಗುತ್ತದೆ. ಸರ್ಕಾರವು ರಾಜ್ಯದ ಜನರ ಆರ್ಥಿಕ, ಶೈಕ್ಷಣಿಕ, ಔದ್ಯೋಗಿಕ ಸೌಲಭ್ಯಗಳನ್ನು ನೀಡಲು ಗಮನ ಹರಿಸಬೇಕು ಎಂದು ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಯವರು ಹೇಳಿದರು.

ಇದನ್ನೂ ಓದಿ: ಹಿರಿಯೂರು | ನಾಳೆ ವಿದ್ಯುತ್ ವ್ಯತ್ಯಯ

ಸಿರಿಗೆರೆಯಲ್ಲಿ ಬುಧವಾರ ಜರುಗಿದ ಲಿಂ.ಶ್ರೀ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿಯವರ 34ನೇ ಶ್ರದ್ಧಾಂಜಲಿಯ ಸಮಾರೋಪ ಸಮಾರಂಭದಲ್ಲಿ ದಿವ್ಯಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. 

ತಾತ್ವಿಕ ನೆಲೆಗಟ್ಟಿನಲ್ಲಿ ಬಸವಪಂಥಿಯವರು ಮೀಸಲಾತಿ ಕೇಳಬಾರದು. ಸಾಮಾಜಿಕವಾಗಿ ಕೆಳಸ್ತರವಾಗಿರುವವರಿಗೆ ಮೀಸಲಾತಿ ಸಿಗಲಿ. ಸರ್ಕಾರ ಜಾತಿಗಳ ವರ್ಗಿಕರಣ ಮಾಡದೇ ಬಡತನದ ಮೇಲೆ ವರ್ಗೀಕರಣ ಮಾಡಿಲಿ. ಸಾಮಾಜಿಕವಾಗಿ ಜಾತಿ ಗಣತಿಯಿಂದ ಯಾವುದೇ ಉಪಯೋಗವಿಲ್ಲ. ಸರ್ಕಾರವು ಬಸವಣ್ಣನವರ ಭಾವಚಿತ್ರದ ಜೊತೆಗೆ ವಚನ ಸಾಹಿತ್ಯ ತತ್ವಗಳನ್ನು ಜಾತಿಗಣತಿಯಲ್ಲಿ ಅಳವಡಿಸಿಕೊಳ್ಳಬೇಕು. ಗ್ಯಾರಂಟಿಯೋಜನೆಗಳಲ್ಲಿ ಜಾತಿ ಇಲ್ಲ. ಹಾಗೆ ಗಣತಿಯಲ್ಲಿ ಜಾತಿಯನ್ನು ಪರಿಗಣಿಸಬಾರದು.

ಭಕ್ತಿಸಂಪನ್ನ ಶಿಷ್ಯರು ಮಠಕ್ಕೆ ಹತ್ತಿರವಾಗುತ್ತಿದ್ದರೆ, ವ್ಯವಹಾರಿಕ ಸಂಬಂಧ ಇರುವವರು ಮಠದಿಂದ ದೂರ ಸರಿಯುತ್ತಿದ್ದಾರೆ. ಎಲ್ಲಾ ಸರ್ಕಾರಗಳು ನೀರಾವರಿ ಯೋಜನೆಗಳಿಗೆ ಸಂಪೂರ್ಣವಾಗಿ ಸ್ಪಂದಿಸಿವೆ. ಶಿವಕುಮಾರ ಶ್ರೀಗಳು ಮಠವನ್ನು ನೈತಿಕ ಶಕ್ತಿಯಿಂದ ಮುನ್ನಡೆಸಿದ್ದಾರೆ. ಶಿಷ್ಯರು ಶ್ರೀಮಂತರಾದರೆ ಮಠವು ತಾನಗೆ ಶ್ರೀಮಂತವಾಗುತ್ತದೆ. ಎಂದರು.

ಇದನ್ನೂ ಓದಿ: ಕರಾಟೆ ತರಬೇತಿ ನೀಡಲು ಮಹಿಳಾ ತರಬೇತಿದಾರರಿಂದ ಅರ್ಜಿ

ಮಾಜಿ ಮುಖ್ಯಮಂತ್ರಿ ಹಾಗೂ ಸಂಸದರಾದ ಬಸವರಾಜ ಬೊಮ್ಮಾಯಿ ಮಾತನಾಡಿ, ಸಿರಿಗೆರೆ ಮಠವು ಸಂಸ್ಕೃತಿ ಮತ್ತು ಸಂಸ್ಕಾರ ಕಲಿಸುತ್ತಿದ್ದು, ಪ್ರಚಲಿತ ವರ್ತಮಾನಗಳಿಗೆ ತಕ್ಕಂತೆ ಸಹಕಾರ ನೀಡುತ್ತಿದೆ. ಗುರುಪರಂಪರೆಯನ್ನು ಆಚರಿಸುವುದು ಈ ಮಠದ ವೈಶಿಷ್ಟ್ಯ. ಲಿಂ.ಶ್ರೀಗಳು ನಡೆದಾಡುವ ದೇವರು. 

ಸಾಧಕರಿಗೆ ಸಾವು ಅಂತ್ಯವಲ್ಲ, ಸಾವಿನ ನಂತರವೂ ಅವರ ಬದುಕು ಜೀವಂತವಾಗಿರುತ್ತದೆ. ಮಠ ಶ್ರೀಮಂತವಾಗಿಲ್ಲ, ಆದರೆ ಮಠವನ್ನು ನಂಬಿದ ಭಕ್ತರು ಶ್ರೀಮಂತರಾಗಿದ್ದಾರೆ. ಶ್ರೀಗಳ ಹೃದಯ ತಾಯಿಯ ಹೃದಯದಂತೆ, ಶುದ್ಧ ಮನಸ್ಸಿನಂತೆ. ಮಾನವ ತತ್ವದ ಮೇಲೆ ನಡೆದು ಆತ್ಮಸಾಕ್ಷಾತ್ಕಾರವನ್ನು ಸಾಧಿಸುವುದು ಮುಖ್ಯ. ಇಂದಿನ ಸಂಘರ್ಷಮಯ ಬದುಕಿನಲ್ಲಿ ವೈಚಾರಿಕತೆ ಕೊರತೆಯಿಂದ ಸಮಾಜ ಗೊಂದಲದಲ್ಲಿದೆ ಎಂದರು.

ಸಭಾಪತಿಗಳಾದ ಬಸವರಾಜ ಹೊರಟ್ಟಿ ಮಾತನಾಡಿ ಸರ್ಕಾರ ಮಾಡದ ಜನಪರ ಕೆಲಸಗಳನ್ನು ತರಳಬಾಳು ಶ್ರೀಗಳು ಮಾಡಿದ್ದಾರೆ. ರೈತಪರ ಮತ್ತು ನೀರಾವರಿ ಯೋಜನೆಗಳನ್ನು ಜಾರಿಗೆ ತಂದು ಹಲವರ ಬಾಳಿಗೆ ಬೆಳಕಾಗಿದ್ದಾರೆ. ಅನ್ನ, ಅಕ್ಷರ ದಾಸೋಹದ ಮೂಲಕ ಮಕ್ಕಳಲ್ಲಿ ಶಿಸ್ತು, ಸಮಯಪಾಲನೆ ಹಾಗೂ ಸಂಸ್ಕಾರ ಬೆಳೆಸಿರುವುದು ಮಠದ ಹೆಗ್ಗಳಿಕೆ. ಈಡೀ ದೇಶಕ್ಕೆ ಮಾದರಿಯಾದ ಮಠವೆಂದರೆ ಅದು ತರಳಬಾಳು ಮಠ. ಮಠಕ್ಕಿಂತ ಮಠದ ಭಕ್ತರು ಶ್ರೀಮಂತರಾಗಲಿ ಎಂಬುದು ಶ್ರೀಗಳ ನಿಜವಾದ ಆಶಯ ಎಂದರು.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 24 | ಮೆಕ್ಕೆಜೋಳ ರೇಟ್ ಎಷ್ಟಿದೆ?

ಶಾಸಕರಾದ ಶಿವಗಂಗಾ ಬಸವರಾಜ್ ಮಾತನಾಡಿ, ಇವತ್ತಿನ ದುಷ್ಟ ಶಕ್ತಿಗಳು ನಮ್ಮನ್ನು ಹಾಳು ಮಾಡಲು ಯತ್ನಿಸುತ್ತಿವೆ. ಆದರೆ ಲಿಂ. ಶಿವಕುಮಾರ ಶ್ರೀಗಳು ಕಟ್ಟಿಬೆಳೆಸಿದ ಸಮಾಜ ಉಳಿಯಬೇಕಾದರೆ ಎಲ್ಲರೂ ಶ್ರಮಿಸಿ ಅವರ ಮಾರ್ಗದರ್ಶನದಲ್ಲಿ ನಾವೆಲ್ಲ ನಡೆಯಬೇಕಾಗಿದೆ. ತರಳಬಾಳು ಮಠ ಆಧುನಿಕ ಭಗೀರಥ ಪೀಠವಾಗಿದೆ. ಹಿರಿಯ ಗುರುಗಳ ದಿಟ್ಟತನ, ಆಶೀರ್ವಾದ ಮತ್ತು ಭಕ್ತಿಯ ಭಾವನೆ ಎಲ್ಲರ ಮೇಲೂ ಹರಿಯುತ್ತಿವೆ. ಹೀಗಾಗಿ ಸಮಾಜ ಉಳಿವಿಗೆ ಸದ್ಭಕ್ತರ ಸಮರ್ಪಣೆ ಅಗತ್ಯ ಎಂದರು.

ಮಾಜಿ ಸಚಿವರಾದ ಹೆಚ್.ಆಂಜನೇಯ ಮಾತನಾಡಿ ಲಿಂ. ಶಿವಕುಮಾರ ಶ್ರೀಗಳು ಗ್ರಾಮೀಣ ಭಾಗಗಳಲ್ಲಿ ಶಾಲಾ-ಕಾಲೇಜುಗಳನ್ನು ತೆರೆದು ಬಡವರ ಬದುಕಿಗೆ ಬೆಳಕಾಗಿದ್ದಾರೆ. ಸಿರಿಗೆರೆ ಮಠ ಜಾತಿಯತೆ, ಅಸ್ಪೃಶ್ಯತೆಯನ್ನು ಹೊಗಲಾಡಿಸಿದೆ. ಇಲ್ಲಿ ಭಕ್ತರು ಶಿಸ್ತುವಂತರು, ಹೃದಯಂತರೂ, ಭಕ್ತಿವಂತರೂ ಆಗಿದ್ದಾರೆ. ಡಾ. ಶ್ರೀಗಳ ಇಚ್ಚಾಶಕ್ತಿ ರೈತರ ಕಲ್ಯಾಣಕ್ಕಾಗಿ ಮುಡಿಪಾಗಿದೆ. ಹಿರಿಯ ಗುರುಗಳು ಪ್ರಾರಂಭಿಸಿದ ವಚನ ಸಾಹಿತ್ಯ ಪ್ರಸಾರದ ಕಾರ್ಯವನ್ನು ಈಗಿನ ಶ್ರೀಗಳು ತಂತ್ರಜ್ಞಾನ ಸಹಾಯದಿಂದ ಮುಂದುವರೆಸುತ್ತಿದ್ದಾರೆ. ಈ ಕಾರ್ಯಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದರು.

ಶಾಸಕರಾದ ಡಾ. ಎಂ. ಚಂದ್ರಪ್ಪ ಅವರು ಮಾತನಾಡಿ ಶಿವಕುಮಾರ ಶ್ರೀಗಳು ಸ್ವಾತಂತ್ರ‍್ಯ ಪೂರ್ವದಲ್ಲಿಯೇ ಶಿಕ್ಷಣ ಸಂಸ್ಥೆಗಳನ್ನು ನಿರ್ಮಿಸಿ ಗ್ರಾಮೀಣ ಮಕ್ಕಳಿಗೆ ಜ್ಞಾನದಾಸೋಹ, ಅನ್ನದಾಸೋಹ ಒದಗಿಸಿದರು. ಅವರು ಬಸವಣ್ಣನ ಆದರ್ಶಗಳನ್ನು ಮೈಗೂಡಿಸಿಕೊಂಡು ಭೇದಭಾವವಿಲ್ಲದೆ ಎಲ್ಲರನ್ನೂ ಪ್ರೀತಿಯಿಂದ ಕಾಣುತ್ತಿದ್ದರು. ಅವರ ಕಾಯಕಶೀಲತೆ ಒಂದು ವಿಶೇಷತೆ. ಇಂದಿನ ಶ್ರೀಗಳು ರೈತರ ಬದುಕಿಗೆ ದಾರಿದೀಪವಾಗಿ ಸಮಾಜವನ್ನು ಉನ್ನತ ಮಟ್ಟಕ್ಕೆ ತರುವ ಕಾರ್ಯಗಳಲ್ಲಿ ಶ್ರಮಿಸುತ್ತಿದ್ದಾರೆ ಎಂದರು.

ಇದನ್ನೂ ಓದಿ: ಶಿಕ್ಷಕರ ಸೇವಾ ಮನೋಭಾವ ವಿದ್ಯಾರ್ಥಿಗಳ ಭವಿಷ್ಯಕ್ಕೆ ದಾರಿದೀಪ | ಡಾ.ಶಿವಮೂರ್ತಿ ಶಿವಾಚಾರ್ಯ ಶ್ರೀ

ಶಾಸಕರಾದ ಯು.ಬಿ.ಬಣಕಾರ್ ಮಾತನಾಡಿ ಶ್ರೀಗಳ ಶ್ರದ್ಧಾಂಜಲಿಯು ಸಮಾಜ ಚಿಂತನೆಯ ಕಾರ್ಯಕ್ರಮವಾಗಿದೆ. ಎಲ್ಲಾ ಸರ್ಕಾರಗಳು ಶ್ರೀಗಳ ಜನಪರ ಕೆಲಸಗಳಿಗೆ ಸ್ಪಂದಿಸಿವೆ. ಸ್ವಾತಂತ್ರ‍್ಯ ಪೂರ್ವದಲ್ಲಿಯೇ ಶಿವಕುಮಾರ ಶ್ರೀಗಳು ಗ್ರಾಮೀಣ ಭಾಗಗಳಲ್ಲಿ ಶಾಲೆಗಳನ್ನು ತೆರೆದು ಸಮಾನ ಶಿಕ್ಷಣ, ಸಹಪಂಕ್ತಿ ಭೋಜನಕ್ಕೆ ಅವಕಾಶ ನೀಡಿದರು. 

ಡಾ. ಶ್ರೀಗಳು ನೀರಾವರಿ ಯೋಜನೆಗಳ ಮೂಲಕ ರೈತರಿಗೆ ನೆರವಾಗಿದ್ದಾರೆ. ಬರುವ ದಿನಗಳಲ್ಲಿ ಪರಮಪೂಜ್ಯರ ಅಣತಿಯಂತೆ, ಆಶೀರ್ವಾದದಂತೆ ನಡೆಯೋಣ ಎಂದರು. 

ಶಾಸಕರಾದ ಟಿ.ರಘುಮೂರ್ತಿ ಮಾತನಾಡಿ, ಹಿರಿಯ ಗುರುಗಳ ಮಾರ್ಗದರ್ಶನ, ಚಿಂತನೆಗಳು ನಮ್ಮೆಲ್ಲರ ಬಾಳಿಗೆ ಬೆಳಕಾಗಲಿ. ಸಮಾಜದ ಸಂಸ್ಕೃತಿ, ಆಚರಣೆಗೆ ಅವರು ನೀಡುತ್ತಿರುವ ಸಹಕಾರ ಸಂತೋಷ ತಂದಿದೆ. ಶ್ರೀಗಳು ವಿಶ್ವಕ್ಕೆ ವಚನ ಸಾಹಿತ್ಯವನ್ನು ಪಸರಿಸಿದ್ದಾರೆ. ಬಿಸಿಲು ಬೆಳದಿಂಗಳು ಅಂಕಣದ ಮೂಲಕ ಸಮಾಜದ ಅಂಕುಡೊAಕುಗಳನ್ನು ತಿದ್ದುತ್ತಿದ್ದಾರೆ. ಸಮಾಜದಲ್ಲಿ ಕಾಲಕಾಲಕ್ಕೆ ನಡೆಯುವ ದೋಷಗಳನ್ನು ತಿದ್ದಿ, ಭಕ್ತರನ್ನು ಜಾಗೃತಗೊಳಿಸುತ್ತಿದ್ದಾರೆ ಎಂದರು.

ಶ್ರೀಮಠ ಸಾಧುಸದ್ಧರ್ಮ ವೀರಶೈವ ಸಂಘದ ಅಧ್ಯಕ್ಷರಾದ ಹೆಚ್.ಆರ್.ಬಸವರಾಜಪ್ಪ ಅವರು ಮಾತನಾಡಿ, ಸಿರಿಗೆರೆ ಮಠವು ಜಾತ್ಯತೀತ ಮಠವಾಗಿದೆ. ಕಾಲ ಕಾಲಕ್ಕೂ ಮಠಕ್ಕೆ ಒಳ ಶತ್ರುಗಳು ಇದ್ದರೂ, ಅವರಿಂದ ಮಠದ ಕೀರ್ತಿಗೆ ಧಕ್ಕೆ ಬರುವುದಿಲ್ಲ. ಉದ್ಯಮಿಗಳ ಪಾಲಾಗುತ್ತಿರುವ ರೈತರ ಭೂಮಿ, ಭೂಸ್ವಾದೀನದ ವಿರುದ್ದ ಸರ್ಕಾರ ಸೂಕ್ತಕ್ರಮ ಕೈಗೊಳ್ಳಬೇಕು. ರೈತನೇ ದೇಶದ ಮಾಲೀಕ. ವಯೋವೃದ್ಧ ತಂದೆ-ತಾಯಿಯರನ್ನು ಕೊನೆಯವರೆಗೂ ನೋಡಿಕೊಳ್ಳುವವರು ರೈತ ಮಾತ್ರ ಎಂದರು.

ಐಕ್ಯಮಂಟಪದಲ್ಲಿ ಲಿಂ. ಶಿವಕುಮಾರ ಶ್ರೀಗಳ ಕತೃ ಗದ್ದಿಗೆಯಲ್ಲಿ ವಿಶೇಷ ಪೂಜೆ ಹಾಗೂ ಮಹಾರುದ್ರಾಭಿಷೇಕ, ಶ್ರೀಗಳಿಂದ ಪುಷ್ಪ ನಮನ, ಶಿವ ಧ್ವಜಾರೋಹಣ ಕಾರ್ಯಕ್ರಮಗಳು ಜರುಗಿದವು. ತರಳಬಾಳು ಪ್ರಕಾಶನದ ಸಾಹಿತ್ಯ ಸಿರಿ ಮಾಲಿಕೆಯ ಕೃತಿಗಳಾದ ಕದಲಿ.ಕ.ಕರ್ಪೂರ್, ಶಿವಸಿರಿ ಮಹಾಕಾವ್ಯ, ಭರಮಸಾಗರ ತರಳಬಾಳು ಹುಣ್ಣಿಮೆ ಸ್ಮರಣ ಸಂಚಿಕೆ 2025 ಕೃತಿಗಳು ಲೋಕಾರ್ಪಣೆಗೊಂಡವು.

ಇದನ್ನೂ ಓದಿ: ಪ್ರಧಾನಿ ಮೋದಿ ಜೀವನ ಆಧಾರಿತ ವಸ್ತು ಪ್ರದರ್ಶನ | ಸಂಸದ ಗೋವಿಂದ ಕಾರಜೋಳ ಉದ್ಘಾಟನೆ

ನಿವೃತ್ತ ಪ್ರಾಚಾರ್ಯರಾದ ಡಾ.ನಾ.ಲೋಕೇಶಒಡೆಯರ್ ಅವರು ಶ್ರೀ ಶಿವಕುಮಾರ ಶಿವಾಚಾರ್ಯ ಸ್ವಾಮಿಗಳವರ ಅಸಾಧಾರಣ ಸಾಧನೆಯ ವಿಷಯದ ಕುರಿತು ಉಪನ್ಯಾಸ ನೀಡಿದರು. ಕರ್ನಾಟಕ ಕಲಾಶ್ರೀ ಪುರಸ್ಕೃತರಾದ ತೋಟಪ್ಪ ಉತ್ತಂಗಿ ಅವರಿಂದ ವಚನ ಗಾಯನ ಹಾಗೂ ತರಳಬಾಳು ಕಲಾ ಸಂಘದಿಂದ ವಚನ ನೃತ್ಯಗಳು ಪ್ರದರ್ಶನಗೊಂಡವು.

ಕಾರ್ಯಕ್ರಮದಲ್ಲಿ ಮಾಜಿ ಲೋಕಸಭಾ ಸದಸ್ಯರಾದ ಜಿ.ಎಂ.ಸಿದ್ದೇಶ್ವರ, ಶಾಸಕರಾದ ಹೆಚ್.ಡಿ.ತಮ್ಮಯ್ಯ, ಪ್ರಕಾಶ್ ಕೋಳಿವಾಡ, ಕವಿ ಪ್ರದೀಪ್ ಕುಮಾರ್ ಹೆಬ್ರಿ, ಪ್ರದೀಪ್ ಶಾಂತನಗೌಡ, ನೀರಾವರಿ ನಿಗಮದ ಅಭಿಯಂತರಾದ ಮಲ್ಲಿಕಾರ್ಜುನ ಗುಂಗೆ ಹಾಗೂ ಅಪಾರ ಭಕ್ತಾಧಿಗಳು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsShraddhanjaliSirigereSri Shivakumar Shivacharya Swamijiಚಿತ್ರದುರ್ಗಚಿತ್ರದುರ್ಗ ನ್ಯೂಸ್ಶ್ರದ್ಧಾಂಜಲಿಶ್ರೀ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿಸಿರಿಗೆರೆ
Share This Article
Facebook Email Print
Previous Article Power Cut chitradurga News (3) ಹಿರಿಯೂರು | ನಾಳೆ ವಿದ್ಯುತ್ ವ್ಯತ್ಯಯ
Next Article ಆಯುರ್ವೇದ ಎಲ್ಲ ಮದ್ದುಗಳ ತಾಯಿ | ಎಂ.ಸಿ.ರಘುಚಂದನ್
Leave a Comment

Leave a Reply Cancel reply

Your email address will not be published. Required fields are marked *

ದಿನ ಭವಿಷ್ಯ
ದಿನ ಭವಿಷ್ಯ | ಜೂನ್ 07 | ಪ್ರಯಾಣದಲ್ಲಿ ಅಡೆತಡೆಗಳು, ಆರೋಗ್ಯದ ಕಡೆ ಜಾಗೃತಿ ವಹಿಸಿ
Dina Bhavishya
rose water
ರೋಸ್ ವಾಟರ್ ಬೆರೆಸಿದ ನೀರಿನಲ್ಲಿ ಸ್ನಾನ ಮಾಡಿದರೆ ಈ ಪ್ರಯೋಜನ ಪಡೆಯಬಹುದು
Life Style
ಮುಸ್ಲೀಂ ಸಮುದಾಯದಿಂದ ಪ್ರತಿಭಟನೆ
ಜಮೀರ್‌ ಅಹಮ್ಮದ್‌ ಅವರಿಗೆ ಡಿಸಿಎಂ ಸ್ಥಾನಕ್ಕೆ ಒತ್ತಾಯ | ಮುಸ್ಲೀಂ ಮುಖಂಡರಿಂದ ಪ್ರತಿಭಟನೆ
ಮುಖ್ಯ ಸುದ್ದಿ
ARECANUT RATE
ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
ಅಡಕೆ ಧಾರಣೆ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up