CHITRADURGA NEWS | 17 OCTOBER 2025
ಚಿತ್ರದುರ್ಗ: ತೋಟಗಾರಿಕೆ ಸಹಕಾರ ಸಂಘಗಳು ಮತ್ತು ತಾಲ್ಲೂಕು ಕೃಷಿ ಮಾರಾಟ ಸಹಕಾರ ಸಂಘಗಳಿಂದ ಹಾಪ್ ಕಾಮ್ಸ್ (ಜಿಲ್ಲಾ ತೋಟದ ಉತ್ಪನ್ನಗಳ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘ) ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಗಳಿಗೆ 13 ಜನರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇದನ್ನೂ ಓದಿ: 30 ಲಕ್ಷ ಪಡೆದು ನಕಲಿ ಚಿನ್ನ ಮಾರಿದ್ದ ಇಬ್ಬರ ಬಂಧನ | ತಳಕು ಪೊಲೀಸರ ಕಾರ್ಯಾಚರಣೆ
ಚಿತ್ರದುರ್ಗ ತಾಲ್ಲೂಕಿನಿಂದ ಎಸ್.ಪಿ.ಲತಾ, ಹೆಚ್.ಎನ್.ತಿಪ್ಪೇಸ್ವಾಮಿ, ಎನ್.ಡಿ.ಚಂದ್ರಶೇಖರ ರೆಡ್ಡಿ, ಹಿರಿಯೂರಿರು ತಾಲ್ಲೂಕಿನಿಂದ ಆರ್.ಕೀರ್ತಿಕುಮಾರಿ, ಎಸ್.ಜೆ.ಹನುಮಂತರಾಯ, ಚಳ್ಳಕೆರೆ ತಾಲ್ಲೂಕಿನಿಂದ ಮಲ್ಲಿಕಾರ್ಜುನ, ಹೆಚ್.ಟಿ.ಶಶಿಧರ, ಮೊಳಕಾಲ್ಮೂರು ತಾಲ್ಲೂಕಿನಿಂದ ಹೆಚ್.ಟಿ.ನಾಗರೆಡ್ಡಿ, ಎ.ಚನ್ನಬಸಪ್ಪ, ಹೊಳಲ್ಕೆರೆ ತಾಲ್ಲೂಕಿನಿಂದ ಟಿ.ತಿಮ್ಮಪ್ಪ, ಅರುಣಕುಮಾರ್.ಎಂ.ಬಿ. ಹೊಸದುರ್ಗ ತಾಲ್ಲೂಕಿನಿಂದ ಟಿ.ಎಸ್.ಶಂಕರಮೂರ್ತಿ, ಜೆ.ಡಿ.ಕೆಂಚವೀರಪ್ಪ ನಿದೇಶಕರಾಗಿ ಆಯ್ಕೆಯಾಗಿದ್ದಾರೆ.
ಆಡಳಿತ ಮಂಡಳಿ ನಿರ್ದೇಶಕರ ಆಯ್ಕೆಗೆ ಅ.19 ರಂದು ಚುನಾವಣೆ ದಿನಾಂಕ ನಿಗದಿ ಪಡಿಸಲಾಗಿತ್ತು. ಆದರೆ ಅ.14 ರಂದು ನಾಮಪತ್ರ ಪರಿಶೀಲನೆ ನಂತರ 13 ಸದಸ್ಯರು ಅವಿರೊಧ ಆಯ್ಕೆಯಾಗಿದ್ದಾರೆ ಎಂದು ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
