CHITRADURGA NEWS | 21 JANUARY 2026
ಚಿತ್ರದುರ್ಗ: ಜೀವ ಅಮೂಲ್ಯವಾದುದು, ರಸ್ತೆ ಸುರಕ್ಷತಾ ನಿಯಮಗಳ್ನು ಪಾಲಿಸುವ ಮೂಲಕ ಜೀವನದ ಅಮೂಲ್ಯ ಕ್ಷಣಗಳನ್ನು ಅನುಭವಿಸಿರಿ ಎಂದು ತುರುವನೂರು ಪೊಲೀಸ್ ಠಾಣೆಯ ಕರಿಬಸವರಾಜು ಹೇಳಿದರು.
ಇದನ್ನೂ ಓದಿ: ಜನರನ್ನು ಆರ್ಥಿಕವಾಗಿ ಮುಂದೆ ಬರುವಂತೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಾಡುತ್ತಿದೆ | ಶಾಂತವೀರ ಶ್ರೀ
ಚಿತ್ರದುರ್ಗ ತಾಲ್ಲೂಕಿನ ಕೂನಬೇವು ಸರ್ಕಾರಿ ಪ್ರೌಢಶಾಲೆಯಲ್ಲಿ ಮಂಗಳವಾರ ತೆರೆದ ಮನೆ ಕಾರ್ಯಕ್ರಮದಲ್ಲಿ ಅವರು ರಸ್ತೆ ಸುರಕ್ಷತಾ ಸಪ್ತಾಹದ ಅಡಿಯಲ್ಲಿ ರಸ್ತೆಯ ನಿಯಮಗಳನ್ನು ತಿಳಿಸಿದರು.
ಮಾದಕ ವಸ್ತುಗಳ ಬಳಕೆ ನಿಷೇಧ ಕಾನೂನಿನ ಸಂಪೂರ್ಣ ಮಾಹಿತಿಯನ್ನು ನೀಡಿ, ಮಾನವ ನರಮಂಡಲ ಸಂಪೂರ್ಣ ಹಾನಿಯಾಗಿ, ಅಪರಾಧ ಕೃತ್ಯ ಹೆಚ್ಚಾಗುತ್ತಿವೆ ಎಂದು ತಿಳಿಸಿದ ಅವರು, ಪೋಕ್ಸೊ ಕಾಯಿದೆ ಕುರಿತು ವಿಸ್ತಾರವಾಗಿ ಮಾಹಿತಿ ನೀಡಿದರು.
ಕೂನಬೇವು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಎಸ್.ಹನುಮಂತಪ್ಪ ಮಾತನಾಡಿ, ಮಕ್ಕಳು ಕಾನೂನುಗಳ ಅರಿವು ಪಡೆದುಕೊಂಡು ಉತ್ತಮ ಪ್ರಜೆಗಳಾಗಬೇಕು. ಮಾದಕ ವ್ಯಸನಗಳಾಗದೇ ಬಾಲ್ಯವಿವಾಹ ಮುಂತಾದ ದೌರ್ಜನ್ಯಗಳು ಕಂಡುಬಂದಲ್ಲಿ ಮಕ್ಕಳ ಸಹಾಯವಾಣಿ ಸಂಖ್ಯೆ 1098ಕ್ಕೆ ಕರೆ ಮಾಡಿ ಎಂದು ಸಲಹೆ ನೀಡಿದರು.
ಇದನ್ನೂ ಓದಿ: ಅಡಿಕೆ ಧಾರಣೆ | 21 ಜನವರಿ | ರಾಜ್ಯದ ಅಡಿಕೆ ಮಾರುಕಟ್ಟೆ ವಿವರ
ಕಾರ್ಯಕ್ರಮದಲ್ಲಿ ತುರುವನೂರು ಪೊಲೀಸ್ ಠಾಣೆಯ ಹಿರಿಯ ಪೊಲೀಸರಾದ ಟಿ.ಹೆಚ್.ತಳವಾರ್, ವೆಂಕಟೇಶ್ ಮತ್ತು ಶಾಲಾ ಸಿಬ್ಬಂದಿ ವರ್ಗದವರು ಇದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

