
CHITRADURGA NEWS | 17 FEBRUARY 2026
ಚಿತ್ರದುರ್ಗ: ನಗರದ ಮುರುಘಾ ಮಠದ ವತಿಯಿಂದ ಕಳೆದ 70ವರ್ಷಗಳಿಂದ ನಡೆಯುತ್ತಿರುವ ಮುರುಘಾ ಪರಂಪರೆಯ ಪೀಠಾಧಿಪತಿಗಳಾಗಿದ್ದ ಶ್ರೀ ಗುರುಪಾದ ಮುರುಘರಾಜೇಂದ್ರ ಸ್ವಾಮಿಗಳವರ ಹಾಗೂ ಮೈಲಾರಲಿಂಗೇಶ್ವರ ಸ್ವಾಮಿಯ ಸ್ಮರಣಾರ್ಥ ಚಿತ್ರದುರ್ಗ ಹೊರವಲಯದ ಸೀಬಾರದಲ್ಲಿ ಈ ಬಾರಿಯೂ 71ನೇ ವರ್ಷದ ಭಾರಿ ದನಗಳ ಜಾತ್ರೆಗೆ ರಥೋತ್ಸವ ನೆರವೇರಿಸುವ ಮೂಲಕ ಶಿವರಾತ್ರಿಯ ದಿನದಂದು ಭಕ್ತರ ಭಕ್ತಿಯಲ್ಲಿ ಚಾಲನೆ ನೀಡಲಾಯಿತು.
ಇದನ್ನೂ ಓದಿ: PM-SYM ಯೋಜನೆ | ಜಿಲ್ಲೆಯಲ್ಲಿ ಅಸಂಘಟಿತ ಕಾರ್ಮಿಕರನ್ನು ನೋಂದಾಯಿಸಿ | ADC
ರಥೋತ್ಸವದಲ್ಲಿ ಅಲಂಕರಿಸಿದ್ದ ಸ್ವಾಮಿಗಳ ಭಾವಚಿತ್ರ ಹಾಗೂ ಮೈಲಾರಲಿಂಗೇಶ್ವರ ಉತ್ಸವಮೂರ್ತಿಗಳಿಗೆ ಪುಷ್ಪ ನಮನ ಸಲ್ಲಿಸಿ ಡಾ.ಬಸವಕುಮಾರ ಸ್ವಾಮೀಜಿ ಮಾತನಾಡಿ, ಮುರುಘಾ ಪರಂಪರೆಯ ಸ್ವಾಮಿಗಳವರಲ್ಲಿ ಗುರುಪಾದ ಮುರುಘರಾಜೇಂದ್ರ ಸ್ವಾಮಿಗಳವರು ತಮ್ಮ ತಪಸ್ಸಶಕ್ತಿ, ಸಮಾಜ ಸುಧಾರಣೆಯ ಕೈಂಕರ್ಯ ಬಲದಿಂದ ಪೀಠಕ್ಕೆ ಘನತೆ ತಂದುಕೊಟ್ಟ ಪುಣ್ಯಪುರುಷರು. ಅವರ ಹೆಸರಿನಲ್ಲಿ ಶ್ರೀಮಠದ ವತಿಯಿಂದ ಜಾನುವಾರು ಜಾತ್ರೆ ಮಧ್ಯಕರ್ನಾಟಕದ ಚಿತ್ರದುರ್ಗದಲ್ಲಿ 70 ವರ್ಷಗಳಿಂದ ಪ್ರತಿವರ್ಷ ನಡೆಯುತ್ತ ಬಂದಿದ್ದು, ಕೃಷಿಕ ರೈತಾಪಿ ವರ್ಗಕ್ಕೆ ಸದುಪಯೋಗವಾಗಿದೆ ಎಂದರು.
ದಾವಣಗೆರೆ ವಿರಕ್ತಮಠದ ಡಾ.ಬಸವಪ್ರಭು ಸ್ವಾಮೀಜಿ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ರಥೋತ್ಸವಕ್ಕೆ ಚಾಲನೆ ನೀಡಿದರು.
ಆರಂಭವಾಗಿರುವ ಜಾತ್ರೆಯು ಬರುವ ಮಾರ್ಚ್ 10ರವರೆಗೆ ನಡೆಯಲಿದೆ. ಈ ಜಾತ್ರೆಯಲ್ಲಿ ರಾಜ್ಯ ಸೇರಿದಂತೆ ನೆರೆಯ ರಾಜ್ಯಗಳಾದ ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡುಗಳಿಂದ ರೈತರು ವಿವಿಧ ತಳಿಯ ರಾಸುಗಳನ್ನು ತಂದು ಕೊಡುವ-ತೆಗೆದುಕೊಳ್ಳುವ ವ್ಯಾಪಾರ ನಡೆಯುತ್ತದೆ.
ಇದನ್ನೂ ಓದಿ: ಬೇಸಿಗೆ ಆರಂಭ | ಕುಡಿಯುವ ನೀರಿನ ಸಮಸ್ಯೆ ಉದ್ಭವಿಸದಂತೆ ಮುನ್ನೆಚ್ಚರಿಕೆ ವಹಿಸಿ | ಡಿಸಿ ವೆಂಕಟೇಶ್ ಸೂಚನೆ
ಸುಂದರ ಪರಿಸರ, ನೀರು, ನೆರಳು, ರಾತ್ರಿವೇಳೆ ಬೆಳಕು, ಪಶುವೈದ್ಯಕೀಯ ಸೌಲಭ್ಯ, ಸಾರಿಗೆ ವ್ಯವಸ್ಥೆ ಸೇರಿದಂತೆ ಎಲ್ಲದಕ್ಕೂ ಪ್ರಾಶಸ್ತ್ಯ ತಾಣವಾಗಿದ್ದು, ಕೃಷಿಕರು ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ಅವಕಾಶ ನೀಡದೆ, ಶಿಸ್ತು, ಸ್ವಚ್ಚತೆ, ಸಂಯಮದಿಂದ ನಡೆದುಕೊಳ್ಳಬೇಕೆಂದು ಜಾತ್ರಾ ಸಮಿತಿ ಸದಸ್ಯ ಸತೀಶ್ ಡಿ.ಎಂ. ಹೇಳಿದರು.
ಗುತ್ತಿನಾಡು, ಸೀಬಾರ ಸುತ್ತಮುತ್ತಲು ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಭಕ್ತರು ಉತ್ಸವಮೂರ್ತಿ ಹೊತ್ತ ರಥೋತ್ಸವವನ್ನು ಜಯಕಾರ ಹಾಕುತ್ತ ಎಳೆದರು.
ಈ ಸಂದರ್ಭದಲ್ಲಿ ಬೃಹನ್ಮಠದ ವತಿಯಿಂದ ಸೂಕ್ತ ವ್ಯವಸ್ಥೆಯನ್ನು ಗ್ರಾಮಸ್ಥರುಗಳ ಅಪೇಕ್ಷೆಯಂತೆ ಆಡಳಿತ ಮಂಡಳಿಯ ಅಧ್ಯಕ್ಷರಾದ ಶಿವಯೋಗಿ ಸಿ. ಕಳಸದ ಅವರು ವ್ಯವಸ್ಥೆ ಮಾಡಿದ್ದರು.
ಇದನ್ನೂ ಓದಿ: SC, ST ಹಿಂದುಳಿದ ವರ್ಗದವರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಅನ್ಯಾಯ | ಮಾಜಿ ಸಂಸದ ಉಗ್ರಪ್ಪ
ಜಾತ್ರಾ ಸಮಿತಿ ಮುಖ್ಯಸ್ಥರುಗಳಾದ ಕುಮಾರ, ಜಯದೇವ ಗೌಡ್ರು, ಮುರಿಗೇಂದ್ರಪ್ಪ, ಜೆ.ಕೆ. ಶಿವಮೂರ್ತಿ, ಶಿವಲಿಂಗಪ್ಪ, ಚಿದಾನಂದಪ್ಪ, ನರಸಿಂಹಮೂರ್ತಿ, ಪುಟ್ಟಸ್ವಾಮಿ, ನರಸಿಂಹಮೂರ್ತಿ, ಗ್ರಾ.ಪಂ. ಸದಸ್ಯರಾದ ಶ್ರೀಮತಿ ಶಂಕ್ರಮ್ಮ, ಕಲ್ಲೇಶ್, ಜಂಬುನಾಥ, ಜಿ.ಟಿ. ಲಿಂಗೇಶ್, ತಿಪ್ಪೇಸ್ವಾಮಿ ಸೇರಿದಂತೆ ಸುತ್ತಮುತ್ತಲು ಗ್ರಾಮಗಳ ಭಕ್ತರು ಸೇರಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
