
CHITRADURGA NEWS | 27 February 2026
ಚಿತ್ರದುರ್ಗ: ನಗರಸಭಾ ಮಾಜಿ ಸದಸ್ಯರು ಹಾಗೂ ಜನತಾದಳದ ಹಿರಿಯ ಮುಖಂಡರಾದ ಬಾಂಡ್ ತಿಪ್ಪೇಸ್ವಾಮಿ (86) ಫೆ.26 ರಂದು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.
ಮೃತರಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ. ಇವರು ಬಿಜೆಪಿ ಕಾರ್ಯಕರ್ತ ಯಶ್ವಂತ್ ಕುಮಾರ್ ಅವರ ತಂದೆಯವರಾಗಿದ್ದಾರೆ.
ಇದನ್ನೂ ಓದಿ: NIELIT ನೇಮಕಾತಿ | ಮಾರ್ಚ್ 11 ರಂದು ಸಂದರ್ಶನ
ನಗರದ ಕರುವಿನಕಟ್ಟೆ ಬಳಿಯಲ್ಲಿನ ಕಬೀರಾನಂದ ಶಾಲೆ ಹತ್ತಿರ ಇರುವ ಅವರ ನಿವಾಸಕ್ಕೆ ಶುಕ್ರವಾರ ಮಧ್ಯಾಹ್ನ 1 ಗಂಟೆಗೆ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ಇಡಲಾಗಿತ್ತು. ತದ ನಂತರ 5 ಗಂಟೆಯಿಂದ ಜೋಗಿಮಟ್ಟಿ ರಸ್ತೆಯಲ್ಲಿನ ಕೆಂಚಮ್ಮನ ಕಟ್ಟೆ ಬಳಿಯಲ್ಲಿನ ಈಶ್ವರ ದೇವಸ್ಥಾನದ ಬಳಿಯಲ್ಲಿ ಮೃತರ ಅಂತ್ಯಕ್ರಿಯೆ ನೆರವೇರಿಸಲಾಯಿತು.
ಬಾಂಡ್ ತಿಪ್ಪೇಸ್ವಾಮಿರವರ ನಿಧನಕ್ಕೆ ಸಂಸದರಾದ ಗೋವಿಂದ ಕಾರಜೋಳರವರು ಸಂತಾಪ ಸೂಚಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
