CHITRADURGA NEWS | 05 MARCH 2026
ಚಿತ್ರದುರ್ಗ: ಕರ್ನಾಟಕ ರಾಜ್ಯ ಬೀಜ ನಿಗಮದ ಅಧ್ಯಕ್ಷರಾದ ಅಂಜಿನಪ್ಪ ಅವರು ಚಿತ್ರದುರ್ಗ ನಗರದ ಬೀಜ ನಿಗಮದ ಕಚೇರಿ ಹಾಗೂ ಗೋದಾಮುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇದನ್ನೂ ಓದಿ: 4ನೇ ದಿನಕ್ಕೆ ಕಾಲಿಟ್ಟ ರೈತರ ಉಪವಾಸ ಸತ್ಯಾಗ್ರಹ | ಭದ್ರೆಗೆ ಅನುದಾನಕ್ಕೆ ಬಿಗಿಪಟ್ಟು
ಮುಂಬರುವ ಮುಂಗಾರು ಮತ್ತು ಹಿಂಗಾರು ಹಂಗಾಮಿಗೆ ಅಗತ್ಯವಿರುವ ಬಿತ್ತನೆ ಬೀಜಗಳ ಶೇಖರಣೆ, ವಹಿವಾಟು ಹಾಗೂ ಗುಣಮಟ್ಟದ ಕುರಿತು ಅವರು ಅಧಿಕಾರಿಗಳು ಹಾಗೂ ಸಿಬ್ಬಂದಿಯೊಂದಿಗೆ ಸುದೀರ್ಘ ಚರ್ಚೆ ನಡೆಸಿದರು.
ತದನಂತರ ಕಸಬಾ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿದ ಅಧ್ಯಕ್ಷರು, ಅಲ್ಲಿನ ಕಾರ್ಯವೈಖರಿಯನ್ನು ವೀಕ್ಷಿಸಿದರು. ಕೇಂದ್ರಕ್ಕೆ ಬಂದಿದ್ದ ರೈತರೊಂದಿಗೆ ಸಂವಾದ ನಡೆಸಿ, ಕೃಷಿ ಸೌಲಭ್ಯಗಳು ಮತ್ತು ಬೀಜ ವಿತರಣೆ ಬಗ್ಗೆ ಮಾಹಿತಿ ಪಡೆದರು.
ಇದನ್ನೂ ಓದಿ: ಮಾದಿಗ ಸಮುದಾಯದಿಂದ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ | ಒಳಮೀಸಲಾತಿಯಂತೆ ನೇಮಕಾತಿಗೆ ಆಗ್ರಹ
ಈ ಸಂದರ್ಭದಲ್ಲಿ ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ್, ಬೀಜ ನಿಗಮದ ಕಾರ್ಯದರ್ಶಿ ಎ. ಕಾರ್ತಿಕ್, ಕೃಷಿ ಅಧಿಕಾರಿ ಬಿ.ಎಂ.ಆಶಾರಾಣಿ ಹಾಗೂ ನಿಗಮದ ಸಿಬ್ಬಂದಿಗಳು ಮತ್ತು ರೈತರು ಉಪಸ್ಥಿತರಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
