CHITRADURGA NEWS | 04 MAY 2026
ಚಿತ್ರದುರ್ಗ: ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ರಾಜ್ಯ ಮತ್ತು ಜಿಲ್ಲಾ ಮಟ್ಟದ ಅಧ್ಯಕ್ಷ ಮತ್ತು ಇತರೆ ಪದಾಧಿಕಾರಿಗಳನ್ನು ಮೊಟ್ಟಮೊದಲ ಬಾರಿಗೆ ನೇರವಾಗಿ ಚುನಾವಣೆಯ ಮೂಲಕ ಆಯ್ಕೆಮಾಡುವ ಸದಾವಕಾಶ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರು ಹೊಂದಿದ್ದಾರೆ ಎಂದು ಚಿತ್ರದುರ್ಗ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಅಧ್ಯಕ್ಷ ಬಿ.ಆರ್.ಮಲ್ಲೇಶ್ ತಿಳಿಸಿದರು.
ಇದನ್ನೂ ಓದಿ: ಬಿಜೆಪಿಗೆ ಪ್ರಚಂಡ ಗೆಲುವು | ಕೋಟೆನಾಡಿನಲ್ಲಿ ಸಂಭ್ರಮಾಚರಣೆ
ನಗರದ ಪ್ರವಾಸಿ ಮಂದಿರದಲ್ಲಿ ನಡದ ಜಿಲ್ಲಾ ಕಾರ್ಯಕಾರಣಿ ಸಭೆಯಲ್ಲಿ ಮಾತನಾಡಿದ ಅವರು, 2011 ರ ಹಳೆಯ ಬೈಲಾ ಪ್ರಕಾರ ತಾಲ್ಲೂಕು ಮಟ್ಟದ ಪದಾಧಿಕಾರಿಗಳನ್ನು ಮಾತ್ರ ಆಯಾ ತಾಲೂಕಿನಲ್ಲಿ ಕೆಲಸ ನಿರ್ವಹಿಸುತ್ತಿರುವ ಉಪನ್ಯಾಸಕರು ಆಯ್ಕೆ ಮಾಡುತ್ತಿದ್ದರು. ಆಯ್ಕೆಯಾದ ತಾಲ್ಲೂಕು ಪ್ರತಿನಿಧಿಗಳು ಜಿಲ್ಲಾ ಮಟ್ಟದ ಪದಾಧಿಕಾರಿಗಳನ್ನು, ಜಿಲ್ಲಾ ಪದಾಧಿಕಾರಿಗಳು ರಾಜ್ಯ ಘಟಕದ ಪದಾಧಿಕಾರಿಗಳನ್ನು ಆಯ್ಕೆ ಮಾಡುವ ಮೂಲಕ ರಾಜ್ಯದ ಬಹುಸಂಖ್ಯೆಯ ಉಪನ್ಯಾಸಕರ ಅಭಿಪ್ರಾಯವನ್ನು ಕಡೆಗಾಣಿಸಲಾಗುತಿತ್ತು.
ಆದರೆ, 2024ರ ಹೊಸ ಬೈಲಾ ಪ್ರಕಾರ ರಾಜ್ಯದ ನೊಂದಾಯಿತ ಎಲ್ಲಾ ಉಪನ್ಯಾಸಕರು ರಾಜ್ಯ ಘಟಕ ಮತ್ತು ಜಿಲ್ಲಾ ಘಟಕದ 9 ಜನ ಪದಾಧಿಕಾರಿಗಳಾದ 1.ಅಧ್ಯಕ್ಷ, 2 .ಪ್ರಧಾನ ಕಾರ್ಯದರ್ಶಿ 3.ಕಾರ್ಯಾಧ್ಯಕ್ಷರು, 4.ಖಜಾಂಚಿ, 5.ಉಪಾಧ್ಯಕ್ಷರು, 6.ಪ್ರಧಾನ ಕಾರ್ಯ ಸಂಘಟನಾ ಕಾರ್ಯದರ್ಶಿ, 7.ಕಾರ್ಯದರ್ಶಿ 8.ಜಂಟಿ ಕಾರ್ಯದರ್ಶಿ ಹಾಗೂ 9.ಸಂಚಾಲಕರನ್ನು ಆಯ್ಕೆ ಮಾಡುವ ಅವಕಾಶ ಕಲ್ಪಿಸಿದೆ. ಒಂಬತ್ತು ಜನ ಕಾರ್ಯಕಾರಿ ಸದಸ್ಯರಲ್ಲಿ ಒಂದು ಸ್ಥಾನವನ್ನು ಕಡ್ಡಾಯವಾಗಿ ಮಹಿಳೆಯರಿಗೆ ಮೀಸಲಾಗಿಡಬೇಕಿದೆ ಎಂದರು.
ಈ ಚುನಾವಣೆಯಲ್ಲಿ ಸ್ಪರ್ಧಿಸಲು ಅಥವಾ ತಮ್ಮ ನೆಚ್ಚಿನ ಪ್ರತಿನಿಧಿಗೆ ಮತದಾನ ಮಾಡಲು ಸಂಘದ ಸದಸ್ಯತ್ವವನ್ನು ಹೊಂದಿರಬೇಕು. ಆದ್ದರಿಂದ ಈ ಜಿಲ್ಲೆಯ ಸರ್ಕಾರಿ ಮತ್ತು ಅನುದಾನಿತ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರು ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯತ್ವ ಪಡೆದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಸ್ಮಿತೆಯನ್ನು ಉಳಿಸಿಕೊಳ್ಳುವ ಹಾಗೂ ಉಪನ್ಯಾಸಕರ ಹಿತ ಕಾಪಾಡುವ ಉತ್ತಮ ಪ್ರತಿನಿಧಿಗಳನ್ನು ಆಯ್ಕೆಮಾಡುವ ಮೂಲಕ ಸಂಘವನ್ನು ಮತ್ತಷ್ಟು ಗಟ್ಟಿಗೊಳಿಸಲು ಮುಂದಾಗಬೇಕಿದೆ ಎಂದರು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಮೇ 04 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್…
ಜಿಲ್ಲಾ ಅನುದಾನಿತ ಪದವಿ ಪೂರ್ವ ಕಾಲೇಜುಗಳ ನೌಕರರ ಸಂಘದ ಜಿಲ್ಲಾಧ್ಯಕ್ಷ ಜಿ.ಎಸ್.ತಿಪ್ಪೇಸ್ವಾಮಿ ಮಾತನಾಡಿ ಏಪ್ರಿಲ್ 27 ರಿಂದ ಮೇ 07 ರವರೆಗೆ ಸದಸ್ಯತ್ವ ನೊಂದಣಿಗಾಗಿ ಆನ್ಲೈನ್ ಮತ್ತು ಆಫ್ಲೈನ್ ಎರಡು ವಿಧಾನದಲ್ಲಿ ಅವಕಾಶ ನೀಡಲಾಗಿದೆ.
ಮೇ. 08 ರಂದು ಕರಡು ಮತದಾರರ ಪಟ್ಟಿ ಪ್ರಕಟಿಸಲಾಗುವುದು. ಮೇ.15 ಕರಡು ಮತದಾರರ ಪಟ್ಟಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ ನೀಡಿ ನಂತರದಲ್ಲಿ ಅಂತಿಮ ಮತದಾರರ ಪಟ್ಟಿ ಪ್ರಕಟಿಸಿ ಜೂನ್ ಮೊದಲ ವಾರದಲ್ಲಿ ಚುನಾವಣೆ ನಡೆಸಲಾಗುವುದು ಎಂದರು.
ಜಿಲ್ಲಾ ಸಂಘದ ಕೋಶಾಧ್ಯಕ್ಷರಾದ ಎನ್.ಕೆಂಚವೀರಪ್ಪ ಮಾತಾನಾಡಿ ಆನ್ಲೈನ್ ಮೂಲಕ ನೊಂದಾಣಿಗಾಗಿ ಈ ಕೆಳಗಿನ ಲಿಂಕ್ https://kspucla.co.in ಬಳಸಬಹುದು ಎಂದರು.
ಇದನ್ನೂ ಓದಿ: ಮಾಸ್ ಲೀಡರ್ ಸಿದ್ದರಾಮಯ್ಯ ಅಲ್ಲ ಯಡಿಯೂರಪ್ಪ | ಬಸವರಾಜ ಬೊಮ್ಮಾಯಿ
ಸಭೆಯಲ್ಲಿ ಹೊಳಲ್ಕೆರೆ ತಾಲ್ಲೂಕಿನ ಅಧ್ಯಕ್ಷರಾದ ಆರ್.ಚಂದ್ರಶೇಖರ್, ಚಳ್ಳಕೆರೆ ತಾಲ್ಲೂಕಿನ ಕಾರ್ಯಾಧ್ಯಕ್ಷರಾದ ಅಶ್ವತ್ಥ ರೆಡ್ಡಿ, ಜಿಲ್ಲಾ ಸಂಘದ ಗೌರವಾಧ್ಯಕ್ಷ ಡಾ.ಜೆ ಮೋಹನ ಉಪಸ್ಥಿತರಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
