CHITRADURGA NEWS | 22 MAY 2026
ಚಿತ್ರದುರ್ಗ: ಕೇಂದ್ರ ಸರ್ಕಾರದ ಸಾಧನೆಗಳನ್ನು ಜಿಲ್ಲೆಯ ಪ್ರತಿಯೊಂದು ಬೂತ್ಗಳಲ್ಲಿನ ಮತದಾರರಿಗೆ ತಿಳಿಸುವುದರ ಮೂಲಕ ಮುಂಬರುವ ಚುನಾವಣೆಗೆ ಸಿದ್ದರಾಗಬೇಕಿದೆ ಎಂದು ಪಕ್ಷದ ಕಾರ್ಯಕರ್ತರಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಕರೆ ನೀಡಿದರು.
ಇದನ್ನೂ ಓದಿ: ಬಿಜೆಪಿ ಮೋರ್ಚಾ ಪದಾಧಿಕಾರಿಗಳ ನೇಮಕ | ಅರುಣ್ಕುಮಾರ್, ಗೂಳಿಹಟ್ಟಿ ಜಗದೀಶ್, ಸಂತೋಷ್ ಗುಡಿಮಠ ಇತರರು ನೇಮಕ
ನಗರದ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ನಡೆದ ಜಿಲ್ಲಾ ಮಟ್ಟದ ವಿಶೇಷ ಪದಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,
ಜಿಲ್ಲೆಯ ಎಲ್ಲಾ ಮಂಡಲಗಳಲ್ಲಿ ಸಭೆಯನ್ನು ಮಾಡುವುದರ ಮೂಲಕ ಬೂತ್ ಮಟ್ಟದಲ್ಲಿ ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಜನರಿಗೆ ಮಾಹಿತಿ ನೀಡುವಂತ ಕಾರ್ಯವಾಗಬೇಕಿದೆ. ಇದರಿಂದ ಪ್ರತಿ ಬೂತ್ ಮತ್ತು ಪ್ರಕೋಷ್ಠಗಳಿಗೂ ಸಹಾ ಶಕ್ತಿ ತುಂಬುವಂತ ಕಾರ್ಯ ಮುಂದಿನ ಒಂದು ತಿಂಗಳಲ್ಲಿ ಮಾಡಬೇಕಿದೆ ಎಂದರು.
ಜಿಲ್ಲೆಯಲ್ಲಿ ಪಕ್ಷವನ್ನು ಸಂಘಟಿಸುವ ಕಾರ್ಯವನ್ನು ಮಾಡಬೇಕಿದೆ, ಪಕ್ಷದ ಸಂಘಟನೆಗೆ ಸಮಯವನ್ನು ನೀಡಬೇಕಿದೆ. ಪಕ್ಷವನ್ನು ಸಂಘಟಿಸುವ ಜವಾಬ್ದಾರಿ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರ ಮೇಲಿದೆ. ಇದ್ದಲ್ಲದೆ 2028ರ ವಿಧಾನಸಭೆಯ ಚುನಾವಣೆಗೂ ಸಹಾ ನಾವುಗಳು ಸಿದ್ದರಾಗಬೇಕಿದೆ. ಮುಂದಿನ ಬಾರಿ ಬಿಜೆಪಿ ಮತ್ತು ಜೆಡಿಎಸ್ ಸಮಿಶ್ರ ಸರ್ಕಾರ ಅಧಿಕಾರಕ್ಕೆ ತರುವಂತ ಕಾರ್ಯವನ್ನು ಮಾಡಬೇಕು ಎಂದು ಕಾರ್ಯಕರ್ತರಿಗೆ ತಿಳಿಸಿದರು.
ಇದನ್ನೂ ಓದಿ: ಇತಿಹಾಸ ಉಳಿಯಲು ಪೂರ್ವಜರ ಹೋರಾಟ ಅವಿಸ್ಮರಣೀಯ | ಸಚಿವ ಸತೀಶ್ ಜಾರಕಿಹೊಳಿ
ದಾವಣಗೆರೆ ವಿಭಾಗ ಸಹಾ ಪ್ರಭಾರಿಗಳಾದ ಎ.ಮುರಳಿ ಮಾತನಾಡಿ, ಪಕ್ಷ ಸಂಘಟನಾತ್ಮಕ ವಿಚಾರವಾಗಿ ನಿರಂತರವಾಗಿ ಪ್ರತಿ ತಿಂಗಳು ಸಭೆ ಮಾಡುವುದರ ಮೂಲಕ, ಪಕ್ಷವನ್ನು ಜಿಲ್ಲೆಯಲ್ಲಿ ಬಲಗೊಳಿಸಲಾಗುತ್ತಿದೆ. ಪಕ್ಷದ ಕಾರ್ಯಕ್ರಮದ ವಿವರಗಳನ್ನು ದಾಖಲಾತಿ ಮಾಡಬೇಕಿದೆ.
ಪ್ರಧಾನ ಮಂತ್ರಿಯವರು ಮನಕೀ ಬಾತ್ನಲ್ಲಿ ಪ್ರತಿಯೊಬ್ಬರು ಸಹಾ ನೋಡಬೇಕಿದೆ, ಇದ್ದಲ್ಲದೆ ಪ್ರತಿಯೊಂದು ಮಂಡಲ ಮತ್ತು ಬೂತ್ನಲ್ಲಿಯೂ ಸಹಾ ಮನಕೀಬಾತ್ ಕಾರ್ಯಕ್ರಮವನ್ನು ನೋಡುವಂತೆ ಆಗಬೇಕಿದೆ. ಇದರೊಂದಿಗೆ ವಿಶ್ವ ಪರಿಸರ ದಿನಾಚರಣೆ, ಅಂತರಾಷ್ಟ್ರೀಯ ಯೋಗ ದಿನಾಚರಣೆ, ದೇಶದ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿಯವರ 12 ವರ್ಷ ಪೂರ್ಣವಾದ ಹಿನ್ನಲೆಯಲ್ಲಿ ಜನ ಕಲ್ಯಾಣ ಯೋಜನೆ ಆಚರಿಸಬೇಕಿದೆ.
ಪ್ರಗತಿ ಪಥ ಯಾತ್ರೆ ಮಾಡಬೇಕಿದೆ, ಇದರೊಂದಿಗೆ ದೇಶದ ಸುರಕ್ಷತೆಗಾಗಿ ಎಸ್.ಐ.ಆರ್. ಅವಶ್ಯಕತೆ ಇದೆ ಕೇಂದ್ರ ಸರ್ಕಾರದ ಸಾಧನೆಯ ಬಗ್ಗೆ ಜನಪರ ಕಾರ್ಯಕ್ರಮಗಳ ಬಗ್ಗೆ ಪ್ರಗತಿ ಪರರಾದ ವೈದ್ಯರು, ಸಾಹಿತಿಗಳು, ವಕೀಲರು, ರೈತರು, ಕಾರ್ಮಿಕರು, ಪತ್ರಕರ್ತರು, ಕಲಾವಿದರ ಜೊತೆಯಲ್ಲಿ ಮೋದಿ ಸರ್ಕಾರ 12 ವರ್ಷ ಪೂರೈಸಿದ ಹಿನ್ನಲೆಯಲ್ಲಿ ಸಂವಾದವನ್ನು ಮಾಡಬೇಕಿದೆ ಎಂದು ತಿಳಿಸಿದರು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಮೇ.22| ಮೆಕ್ಕೆಜೋಳ, ಶೇಂಗಾ ರೇಟ್..
ಜಿಲ್ಲಾ ಸ್ಥರದ ವಿವಿಧ ಜವಾಬ್ದಾರಿಯುತ ಪ್ರಮುಖರಿಗೆ ನಿಯುಕ್ತಿ ಪತ್ರ ವಿತರಣೆ ಮಾಡಲಾಯಿತು. ಎಸ್.ಐ.ಆರ್ ವಿಷಯದ ಬಗ್ಗೆ ಹಾಗೂ ಮುಂದಿನ ಒಂದು ತಿಂಗಳ ಅವಧಿಯಲ್ಲಿ ಕೈಗೊಳ್ಳಬಹುದಾದ ಕಾರ್ಯಕ್ರಮಗಳ ರೂಪರೇಷೆ ಹಾಗೂ ಸಂಘಟನಾತ್ಮಕ ಸಭೆಗಳ ಬಗ್ಗೆ ವಿಸ್ಕೃತವಾಗಿ ಚರ್ಚೆ ಮಾಡಿ ವಿಷಯ ಮಂಡನೆ ಮಾಡಲಾಯಿತು.
ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮಾಧುರಿ ಗಿರೀಶ್, ಡಾ ಪಿ.ಎಂ.ಮಂಜುನಾಥ, ವೆಂಕಟೇಶ್ ಯಾದವ್, ಜಿ.ಹೆಚ್.ಮೋಹನ್ಕುಮಾರ್, ರಾಜ್ಯ ರೈತ ಮೋರ್ಚಾ ಕಾರ್ಯದರ್ಶಿಗಳಾದ ಮಲ್ಲಿಕಾರ್ಜುನ, ರಾಜ್ಯ ಯುವ ಮೋರ್ಚಾ ಕಾರ್ಯದರ್ಶಿಯಾದ ಭಾರ್ಗವಿ ದ್ರಾವಿಡ, ಜಿಲ್ಲಾ ವಕ್ತಾರ ನಾಗರಾಜ್ ಬೇದ್ರೇ ಸೇರಿದಂತೆ ಜಿಲ್ಲಾ ಪದಾಧಿಕಾರಿಗಳು, ಮಂಡಲದ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
