CHITRADURGA NEWS | 08 JUNE 2026
ಚಿತ್ರದುರ್ಗ: ಮಾದಿಗರ ಗಟ್ಟಿದ್ವನಿ, ಒಳ ಮೀಸಲಾತಿ ಜಾರಿಯಲ್ಲಿ ಪ್ರಮುಖ ಪಾತ್ರ ವಹಿಸಿರುವ ಎಚ್.ಆಂಜನೇಯ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಿ, ಸಚಿವರನ್ನಾಗಿ ಮಾಡಬೇಕೆಂದು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಮತ್ತು ರಾಜ್ಯದ ನಾಯಕರನ್ನು ಜಿ.ಪಂ. ಮಾಜಿ ಸದಸ್ಯರು, ಮಾದಿಗ ಸಮುದಾಯದ ಮುಖಂಡರಾದ ನರಸಿಂಹರಾಜು ಆಗ್ರಹಿಸಿದ್ದಾರೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಜೂನ್ 08 | ಶೇಂಗಾ, ರಾಗಿ ರೇಟ್ ಎಷ್ಟಿದೆ?
ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನಸೌಧದ ಹೊರಗಡೆ ಮಾದಿಗ ಸಮುದಾಯಕ್ಕೆ ಬೆಂಬಲವಾಗಿ ನಿಲ್ಲುವಂತಹ ಆಂಜನೇಯರವರು ವಿಧಾನಸೌಧದ ಒಳಗಡೆಗೂ ಸಹ ನಮ್ಮ ಸಮುದಾಯದ ಪರವಾಗಿ ಧ್ವನಿ ಎತ್ತುವ ಕಾರ್ಯವನ್ನು ಸಚಿವರಾಗಿ ಮಾಡುತ್ತಾರೆ.
ಇದಲ್ಲದೇ ರಾಜ್ಯದಲ್ಲಿ ಮಾದಿಗ ಸಮುದಾಯ ಸುಮಾರು ಒಂದು ಕೋಟಿಯಷ್ಟಿದೆ. ಈ ಹಿನ್ನೆಲೆಯಲ್ಲಿ ನಮ್ಮ ಸಮುದಾಯಕ್ಕೆ 3 ರಿಂದ 4 ಸಚಿವ ಸ್ಥಾನವನ್ನು ನೀಡಬೇಕಿದೆ. ಈ ಹಿನ್ನೆಲೆಯಲ್ಲಿ ಆಂಜನೇಯರವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಿ, ಸಚಿವರನ್ನಾಗಿ ಮಾಡಬೇಕು. ಇದರಿಂದ ಮಾದಿಗ ಸಮುದಾಯಕ್ಕೆ ಬಲಬಂದಾಗುತ್ತದೆ ಎಂದು ತಿಳಿಸಿದರು.
ಮಾದಿಗ ಜನಾಂಗದಲ್ಲಿ ಧ್ರುವತಾರೆಯಾಗಿ ಜನಾಂಗ ಮತ್ತು ಸರ್ಕಾರಕ್ಕೆ ಕೊಂಡಿಯಾಗಿ ಕೆಲಸ ಮಾಡುತ್ತಾ, ಸಿದ್ದರಾಮಯ್ಯ ಸರ್ಕಾರದಲ್ಲಿ ಒಳ ಮೀಸಲಾತಿಯನ್ನು ಜಾರಿಗೊಳಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿರುವ ಹೆಚ್. ಆಂಜನೇಯರವರು 2023ರ ಚುನಾವಣೆಯಲ್ಲಿ ನಮ್ಮ ಪಕ್ಷದ ಕೆಲವರಿಂದ ಸೋಲನ್ನು ಅನುಭವಿಸ ಬೇಕಾಯಿತು. ಅವರು ಜೀವನವಿಡಿ ಕಾಂಗ್ರೆಸ್ ಪಕ್ಷಕ್ಕೆ ದುಡಿಯುತ್ತಾ ಬಂದಿದ್ದಾರೆ.
ಇದನ್ನೂ ಓದಿ: ಭೂ ಒಡೆತನ ಯೋಜನೆಯಡಿ ಆಸಕ್ತ ಭೂ ಮಾಲೀಕರಿಂದ ಜಮೀನು ಖರೀದಿ
2013-18 ರವರೆಗೆ ಸಮಾಜ ಕಲ್ಯಾಣ ಸಚಿವರಾಗುವ ಮೂಲಕ ಉತ್ತಮ ಕೆಲಸವನ್ನು ಮಾಡಿದ್ದಾರೆ. ಎಲ್ಲಾ ಸಮುದಾಯದ ಶಾಲಾ ಮಕ್ಕಳಿಗೆ ಹಾಸ್ಟೆಲ್ ಸೌಲಭ್ಯವನ್ನು ಕಲ್ಪಿಸಿದ್ದಾರೆ. ಇದರಿಂದ ಮಕ್ಕಳು ನೆಮ್ಮದಿಯಾಗಿ ಶಿಕ್ಷಣವನ್ನು ಪಡೆಯುವಂತಾಗಿದೆ.
ಈ ಹಿಂದೆ ರಾಜಕೀಯದಲ್ಲಿ ಮಲ್ಲಿಕಾರ್ಜುನ ಖರ್ಗೆ, ಆರ್.ಬಿ.ತಿಮ್ಮಾಪುರ ಹಾಗೂ ಡಾ.ಜಿ.ಪರಮೇಶ್ವರ್ ರವರು ಚುನಾವಣೆಯಲ್ಲಿ ಸೋತಿದ್ದರು ಸಹ ಇವರಲ್ಲಿ ಮಲ್ಲಿಕಾರ್ಜುನ ಖರ್ಗೆಯವರನ್ನು ರಾಜ್ಯಸಭಾ ಸದಸ್ಯರನ್ನಾಗಿ ಮಾಡಿ ವಿರೋಧ ಪಕ್ಷದ ನಾಯಕರನ್ನಾಗಿ ಮಾಡಿದರು. ಹಾಗೆಯೇ ಡಾ.ಜಿ ಪರಮೇಶ್ವರ್ ಹಾಗೂ ಆರ್.ಬಿ ತಿಮ್ಮಾಪುರರವರು ಚುನಾವಣೆಯಲ್ಲಿ ಸೋತಿದ್ದರು ಸಹ ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಿ ಸಚಿವರನ್ನಾಗಿ ಮಾಡಿದ ಉದಾಹರಣೆಗಳಿವೆ.
ಇದೇ ರೀತಿ ಈ ಬಾರಿ ಮಾಜಿ ಸಚಿವರಾದ ಹೆಚ್.ಅಂಜನೇಯರವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಿ ಸಚಿವರನ್ನಾಗಿ ಮಾಡಬೇಕಿದೆ ಇದರ ಬಗ್ಗೆ ರಾಜ್ಯದ ಪಕ್ಷದ ಮುಖಂಡರಾದ ಡಿ.ಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ, ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆರವರ ಮನವೊಲಿಸುವ ಕಾರ್ಯವನ್ನು ಮಾಡಬೇಕಿದೆ.
ಇದನ್ನೂ ಓದಿ: ಅಂಚೆ ಜೀವ ವಿಮೆ ಪ್ರತಿನಿಧಿಗಳ ನೇಮಕಾತಿ | ನೇರ ಸಂದರ್ಶನ
ಕಾಂಗ್ರೆಸ್ ಪಕ್ಷ ಒಂದು ವೇಳೆ ಅಂಜನೇಯರವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ, ಸಚಿವರನ್ನಾಗಿ ಮಾಡದೇ ಇದ್ದರೆ ಅದರ ಪರಿಣಾಮವನ್ನು ಮುಂದೆ ಬರುವ ಎಲ್ಲಾ ಚುನಾವಣೆಗಳಲ್ಲೂ ಕಾಂಗ್ರೆಸ್ ಪಕ್ಷ ಎದುರಿಸಲಿದೆ ಎಂದು ನರಸಿಂಹರಾಜು ಎಚ್ಚರಿಸಿದರು.
ಗೋಷ್ಠಿಯಲ್ಲಿ ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಸಮರ್ಥ, ಸಿದ್ದರಾಮಪ್ಪ, ರಘು, ಉಮೇಶ್, ಕೋಟಿ, ತಿಪ್ಪೇಸ್ವಾಮಿ ಸೇರಿದಂತೆ ಇತರರು ಭಾಗವಹಿಸಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
