
CHITRADURGA NEWS | 07 JULY 2026
ಚಿತ್ರದುರ್ಗ: ಕೇಂದ್ರ ಸರ್ಕಾರದ ನ್ಯಾಷನಲ್ ಎಸ್ಸಿ/ಎಸ್ಟಿ ಹಬ್, ಆರೈಸ್ ಸಂಸ್ಥೆ, ಜಿಲ್ಲಾ ಕೈಗಾರಿಕಾ ಕೇಂದ್ರ ಹಾಗೂ ಜಿಲ್ಲಾ ಎಸ್ಸಿ/ಎಸ್ಟಿ ಕೈಗಾರಿಕಾ ಉದ್ಯಮಿಗಳ ಸಂಘದ ಜಂಟಿ ಆಶ್ರಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದ ಉದ್ಯಮಿಗಳಿಗಾಗಿ ವಿಶೇಷ ಉಚಿತ ‘ವೆಂಡರ್ ಡೆವಲಪ್ಮೆಂಟ್ ಕಾರ್ಯಾಗಾರ’ವನ್ನು ಇದೇ ಜುಲೈ 21ರಂದು ಬೆಳಿಗ್ಗೆ 10ಕ್ಕೆ ಚಿತ್ರದುರ್ಗ ನಗರದ ಮದಕರಿ ವೃತ್ತದ ಬಳಿಯ ಐಎಂಎ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಇದನ್ನೂ ಓದಿ: ಚಿತ್ರದುರ್ಗದ ನಿಯಲಿಟ್ ಕೇಂದ್ರದಲ್ಲಿ ಉದ್ಯೋಗಾವಕಾಶ | ಜುಲೈ 21 ರಂದು ನೇರ ಸಂದರ್ಶನ
ಹೊಸ ಉದ್ಯಮ ಆರಂಭಿಸಲು ಆಸಕ್ತಿ ಹೊಂದಿರುವ ಯುವಕರು, ಮಹಿಳೆಯರು ಮತ್ತು ಹಾಲಿ ಉದ್ಯಮಿಗಳಲ್ಲಿ ಜಾಗೃತಿ ಮೂಡಿಸುವುದು ಈ ಕಾರ್ಯಾಗಾರದ ಪ್ರಮುಖ ಉದ್ದೇಶವಾಗಿದ್ದು, ಕಾರ್ಯಕ್ರಮದಲ್ಲಿ ತಜ್ಞರಿಂದ ಉದ್ಯಮ ಪ್ರಾರಂಭಿಸುವ ಸುಲಭ ವಿಧಾನಗಳು, ಸರ್ಕಾರದ ವಿವಿಧ ಯೋಜನೆಗಳ ವಿವರಣೆ, ಸರ್ಕಾರಿ ಖರೀದಿ ಪ್ರಕ್ರಿಯೆಗಳಲ್ಲಿ ಭಾಗವಹಿಸುವ ಅವಕಾಶಗಳು ಹಾಗೂ ಉದ್ಯಮಕ್ಕೆ ಸಿಗುವ ಹಣಕಾಸಿನ ನೆರವು ಮತ್ತು ಮಾರುಕಟ್ಟೆ ಸಂಪರ್ಕಗಳ ಕುರಿತು ಸಂಪೂರ್ಣ ಮಾಹಿತಿ ನೀಡಲಾಗುವುದು.
ಈ ಕಾರ್ಯಾಗಾರದಲ್ಲಿ ಭಾಗವಹಿಸಲು ಯಾವುದೇ ರೀತಿಯ ಶುಲ್ಕ ಇರುವುದಿಲ್ಲ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಆಸಕ್ತ ಯುವಕರು, ಮಹಿಳಾ ಫಲಾನುಭವಿಗಳು, ಉದ್ಯಮಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.
ಇದನ್ನೂ ಓದಿ: ನಗರಸಭೆಯಿಂದ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ
ನೋಂದಣಿ ಮತ್ತು ಹೆಚ್ಚಿನ ವಿವರಗಳಿಗಾಗಿ ಆರೈಸ್ ಸಂಸ್ಥೆಯ ಮುಖ್ಯ ತರಬೇತಿ ಸಂಯೋಜನಾಧಿಕಾರಿ ಎಸ್.ಸದಾಶಿವ ಅವರ ಮೊಬೈಲ್ ಸಂಖ್ಯೆ 9880041360ಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

