CHITRADURGA NEWS | 07 MARCH 2024
ಚಿತ್ರದುರ್ಗ: ಮನೆಯಲ್ಲಿದ್ದ ಮಾತ್ರಯನ್ನು ಚಾಕೊಲೇಟ್ ಎಂದು ಭಾವಿಸಿ ತಿಂದಿದ್ದ ಮಗುವೊಂದು ಮೃತಪಟ್ಟಿರುವ ಆತಂಕಕಾರಿ ಘಟನೆ ಚಿತ್ರದುರ್ಗ ತಾಲೂಕಿನ ಕಡಬನಕಟ್ಟೆಯಲ್ಲಿ ನಡೆದಿದೆ.
ಕಡಬನಕಟ್ಟೆ ನಿವಾಸಿ ವಸಂತಕುಮಾರ್ ಹಾಗೂ ಪವಿತ್ರ ದಂಪತಿಯ ಪುತ್ರ 4 ವರ್ಷದ ಹೃತ್ವಿಕ್ ಮೃತ ಕಂದ.
ಮಾರ್ಚ್ 2 ರಂದು ಮಧ್ಯಾಹ್ನ 12.30ರ ವೇಳೆಗೆ ಮನೆಯ ಒಳಗೆ ಯಾರೂ ಇಲ್ಲದಿದ್ದ ಸಮಯದಲ್ಲಿ ಕಪಾಟಿನಲ್ಲಿದ್ದ ಮಾತ್ರೆಗಳನ್ನು ಮಗು ತಿಂದಿದೆ. ಆನಂತರ ಸುಸ್ತಾಗಿದ್ದು, ತಾಯಿಗೆ ಸನ್ನೆಯ ಮೂಲಕ ಮಾತ್ರೆ ತಿಂದಿರುವುದನ್ನು ತಿಳಿಸಿದೆ.
ಇದನ್ನೂ ಓದಿ: ಭದ್ರಾ ಕಾಮಗಾರಿ ಆರಂಭ | ಟ್ರಬಲ್ ಶೂಟರ್ ಡಿಕೆಶಿ ಮಾತುಕತೆ ಫಲಪ್ರದ
ತಕ್ಷಣ ಮಗುವನ್ನು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ಕರೆತಂದಿದ್ದು, ಇಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಬಸವೇಶ್ವರ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮಾರ್ಚ್ 3 ರಂದು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗಿದೆ.
ಆದರೆ, ಮಾರ್ಚ್ 6 ರಂದು ಚಿಕಿತ್ಸೆ ಫಲಕಾರಿಯಾಗದೆ ಮಗು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ ಎಂದು ಮಗುವಿನ ತಂದೆ ವಸಂತಕುಮಾರ್ ತುರುವನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಇದನ್ನೂ ಓದಿ: ಹೆರಿಗೆ ವಿಚಾರದಲ್ಲಿ ಬಯಲಾಯ್ತು ಆತಂಕಕಾರಿ ಸಂಗತಿ
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number