By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಮಹನೀಯರ ತತ್ವಾದರ್ಶ ಬದುಕಿಗೆ ದಾರಿದೀಪ | ತಹಶೀಲ್ದಾರ್ ಡಾ.ನಾಗವೇಣಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಮಹನೀಯರ ತತ್ವಾದರ್ಶ ಬದುಕಿಗೆ ದಾರಿದೀಪ | ತಹಶೀಲ್ದಾರ್ ಡಾ.ನಾಗವೇಣಿ

ಮುಖ್ಯ ಸುದ್ದಿ

ಮಹನೀಯರ ತತ್ವಾದರ್ಶ ಬದುಕಿಗೆ ದಾರಿದೀಪ | ತಹಶೀಲ್ದಾರ್ ಡಾ.ನಾಗವೇಣಿ

News Desk Chitradurga News
Last updated: 19 August 2024 19:05
News Desk Chitradurga News
10 months ago
Share
ಶ್ರೀ ನುಲಿಯ ಚಂದಯ್ಯ ಜಯಂತಿ ಆಚರಣೆ
ಶ್ರೀ ನುಲಿಯ ಚಂದಯ್ಯ ಜಯಂತಿ ಆಚರಣೆ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 19 AUGUST 2024

ಚಿತ್ರದುರ್ಗ: ಮಹನೀಯರ ಜೀವನ, ಸಂದೇಶ, ತತ್ವಾದರ್ಶಗಳು ನಮ್ಮೆಲ್ಲರ ಬದುಕಿಗೆ ದಾರಿದೀಪವಾಗಲಿವೆ ಎಂದು ತಹಶೀಲ್ದಾರ್ ಡಾ.ನಾಗವೇಣಿ ಹೇಳಿದರು.

ಕ್ಲಿಕ್ ಮಾಡಿ ಓದಿ: Govt Recruitment: ಸರ್ಕಾರಿ ಕೆಲಸಕ್ಕೆ ನೇಮಕಾತಿ ಪ್ರಾರಂಭ | ಅರ್ಜಿ ಸಲ್ಲಿಕೆಗೆ ಕೌಂಟ್‌ಡೌನ್‌

ನಗರದ ತರಾಸು ರಂಗಮಂದಿರದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ನಗರಸಭೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಶ್ರೀ ನುಲಿಯ ಚಂದಯ್ಯ ಜಯಂತಿ ಆಚರಣೆ ಸಮಾರಂಭದಲ್ಲಿ ನುಲಿಯ ಚಂದಯ್ಯ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.

ಶರಣರು ಆಚರಣೆಯ ಮೂಲಕ ತೋರಿಸಿಕೊಟ್ಟ ಕಾಯಕ ತತ್ವ ಚಿಂತನೆಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಆರ್.ನುಲೇನೂರು ಗ್ರಾಮದ ನಿವೃತ್ತ ಶಿಕ್ಷಕ ವಿ.ಟಿ.ಚಂದಯ್ಯ ಉಪನ್ಯಾಸ ನೀಡಿ, ಚಂದಯ್ಯನವರು ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಆರ್.ನುಲೇನೂರಿನಲ್ಲಿ ಐಕ್ಯರಾಗಿರುವ ಸಮಾಧಿ ಇದೆ. ಅವರ ಜನ್ಮ ವೃತ್ತಾಂತವನ್ನು ಭಾರತೀಯ ಪುರಾತತ್ವ ಇಲಾಖೆಯು ಸಂಶೋಧನೆಯನ್ನೂ ಮಾಡಿದೆ ಎಂದು ತಿಳಿಸಿದರು.

ಮಹನೀಯರ ಜಯಂತಿ ಅಂಗವಾಗಿ ವಿಚಾರಗಳನ್ನು ಸಮಾಜಕ್ಕೆ ತಿಳುವಳಿಕೆ ನೀಡಲು ಹಲವು ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಆದರೆ ಇಂದು ಭಾಷಣ ಮಾಡುವವರ ಸಂಖ್ಯೆ ಹೇರಳವಾಗಿದ್ದು, ಕೇಳುವ ಮನಸ್ಸುಗಳು ಕಡಿಮೆಯಾಗಿವೆ.

ಕ್ಲಿಕ್ ಮಾಡಿ ಓದಿ: Direct Recruitment: ತೆರೆದಿದೆ ಉದ್ಯೋಗದ ಬಾಗಿಲು | ನೇರ ನೇಮಕಾತಿ ಸಂದರ್ಶನ

ಭಾಷಣ ಮಾಡುವುದು ಸುಲಭ ಆದರೆ ಅದರಂತೆ ಜೀವನದಲ್ಲಿ ಅಳವಡಿಸಿಕೊಂಡು ಬದುಕು ನಡೆಸುವುದು ಕಷ್ಟ ಎಂದು ತಿಳಿಸಿದ ಅವರು, ಶರಣರು ಕಾಯಕ, ದಾಸೋಹ ತತ್ವದ ಮೂಲಕ ಸುಂದರ, ಸರಳತೆಯಿಂದ ಬದುಕು ನಡೆಸಿದರು. ಅದರಂತೆ ನಾವುಗಳು ಕೂಡ ಜೀವನದಲ್ಲಿ ಉತ್ತಮ ಕೆಲಸಗಳನ್ನು ಮಾಡಬೇಕು ಎಂದು ಸಲಹೆ ನೀಡಿದರು.

ಕೊರಮ ಸಮಾಜದ ಜಿಲ್ಲಾ ಅಧ್ಯಕ್ಷ ಕೆ.ಕೃಷ್ಣಪ್ಪ ಮಾತನಾಡಿ, ಶ್ರೀ ನುಲಿಯ ಚಂದಯ್ಯ ಅವರ 917 ನೇ ಜಯಂತಿ ಆಚರಿಸಲಾಗುತ್ತಿದ್ದು, ಕೋಟೆನಾಡಿನಲ್ಲಿ ವಿಜೃಂಭಣೆಯಿಂದ ಜಯಂತಿ ಆಚರಿಸುತ್ತಿರುವುದು ಸಂತಸದ ಸಂಗತಿ ಎಂದರು.

ಜಿಲ್ಲೆಯಲ್ಲಿ ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಸಮಾಜದ ಜನರು ಸಂಕಷ್ಟದಿಂದ ಜೀವನ ಸಾಗಿಸುತ್ತಿದ್ದಾರೆ. ನಗರದಲ್ಲಿ ಸಮಾಜದ ವಿದ್ಯಾರ್ಥಿಗಳಿಗಾಗಿ ವಿದ್ಯಾರ್ಥಿ ನಿಲಯ ನಿರ್ಮಾಣಕ್ಕಾಗಿ, ಸಮುದಾಯ ಭವನ ನಿರ್ಮಾಣಕ್ಕಾಗಿ ನಗರಲ್ಲಿ ನಿವೇಶನ ಮಂಜೂರು ಮಾಡುವಂತೆ ಕೋರಿದರು. ನಗರದ ಪ್ರಮುಖ ರಸ್ತೆಗೆ ಶ್ರೀ ನುಲಿಯ ಚಂದಯ್ಯ ಹೆಸರು ನಾಮಕರಣ ಮಾಡಬೇಕು ಎಂದು ಕೋರಿದರು.

ಕಾರ್ಯಕ್ರದಲ್ಲಿ ಜಿಲ್ಲಾ ಕೆಡಿಪಿ ಸದಸ್ಯ ಕೆ.ಸಿ.ನಾಗರಾಜ್, ಕೊರಮ ಸಮಾಜದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದ್ವಾರಕನಾಥ್, ಗೌರವಾಧ್ಯಕ್ಷ ಹನುಮಂತಪ್ಪ, ನಗರಸಭೆ ನಾಮನಿರ್ದೇಶನ ಸದಸ್ಯ ಬಿ.ನರಸಿಂಹಮೂರ್ತಿ, ನಗರಸಭೆ ಮಾಜಿ ಸದಸ್ಯ ಗೌರಮ್ಮ, ಮುಖಂಡರಾದ ಜಯಶ್ರೀ, ಪರಮೇಶ್, ಮಹಂತೇಶ್, ಧನಂಜಯ್ ಸೇರಿದಂತೆ ಮತ್ತಿತರರು ಇದ್ದರು. ಚಿತ್ರದುರ್ಗದ ಸುಜೀತ್ ಕುಲಕರ್ಣಿ ಅವರ ತಂಡ ಗೀತಗಾಯನ ನಡೆಸಿಕೊಟ್ಟರು. ಕಲಾವಿದ ಹರೀಶ್ ನಿರೂಪಿಸಿದರು.

ಕ್ಲಿಕ್ ಮಾಡಿ ಓದಿ: CONGRESS; ಎಂತಹ ಹೋರಾಟ ತ್ಯಾಗಕ್ಕೂ ಸಿದ್ಧ | ಕೈ ನಾಯಕರ ಬೃಹತ್ ಪ್ರತಿಭಟನೆ

ಅದ್ದೂರಿ ಮೆರವಣಿಗೆ:

ಶ್ರೀ ನುಲಿಯ ಚಂದಯ್ಯ ಜಯಂತಿಯ ಆಚರಣೆ ಅಂಗವಾಗಿ ಸೋಮವಾರ ನಗರದ ಹೊಳಲ್ಕೆರೆ ರಸ್ತೆಯ ನೀಲಕಂಠೇಶ್ವರ ದೇವಸ್ಥಾನದಲ್ಲಿ ಶ್ರೀ ನುಲಿಯ ಚಂದಯ್ಯ ಭಾವಚಿತ್ರ ಮೆರವಣಿಗೆ ತಹಶೀಲ್ದಾರ್ ಡಾ.ನಾಗವೇಣಿ ಹಾಗೂ ನಗರಸಭೆ ಪೌರಾಯುಕ್ತೆ ಎಂ.ರೇಣುಕಾ ಅವರು ಚಾಲನೆ ನೀಡಿದರು.

ನಗರದ ಹೊಳಲ್ಕೆರೆ ರಸ್ತೆಯ ನೀಲಕಂಠೇಶ್ವರ ದೇವಸ್ಥಾನದಿಂದ ಪ್ರಾರಂಭವಾದ ಮೆರವಣಿಗೆಯು ನಗರದ ಪ್ರಮುಖ ವೃತ್ತಗಳ ಮೂಲಕ ಸಾಗಿ, ವೇದಿಕೆ ಕಾರ್ಯಕ್ರಮ ನಡೆಯುವ ತರಾಸು ರಂಗಮಂದಿರದಲ್ಲಿ ಅಂತ್ಯಗೊಂಡಿತು. ಡೋಲು, ತಮಟೆ ಸೇರಿದಂತೆ ವಿವಿಧ ಜಾನಪದ ಕಲಾತಂಡಗಳು ಮೆರವಣಿಗೆಗೆ ಮೆರಗು ನೀಡಿದವು.

ಈ ಸಂದರ್ಭದಲ್ಲಿ ಕೊರಮ ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಕೃಷ್ಣಪ್ಪ ಸೇರಿದಂತೆ ಸಮುದಾಯದ ಮುಖಂಡರು ಇದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:beaconChitradurgaChitradurga newsDr. NagavenigentlemenKannada Latest NewsLifephilosophyಕನ್ನಡ ಲೇಟೆಸ್ಟ್ ನ್ಯೂಸ್ಚಿತ್ರದುರ್ಗಚಿತ್ರದುರ್ಗ ನ್ಯೂಸ್ಡಾ.ನಾಗವೇಣಿತತ್ವಾದರ್ಶದಾರಿದೀಪಬದುಕಿಗೆಮಹನೀಯರ
Share This Article
Facebook Email Print
Previous Article arecanut price list Adike Rate | ರಾಜ್ಯದ ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟಿತ್ತು
Next Article CHANDRAPA SPORTS sports; ಹೊಳಲ್ಕೆರೆ ಹೋಬಳಿ ಮಟ್ಟದ ಕ್ರೀಡಾಕೂಟಕ್ಕೆ ಶಾಸಕ ಎಂ. ಚಂದಪ್ಪ ಚಾಲನೆ 
Leave a Comment

Leave a Reply Cancel reply

Your email address will not be published. Required fields are marked *

Gavayi smaranothsava
ಶಾರದಮ್ಮ ರುದ್ರಪ್ಪ ಕಲ್ಯಾಣ ಮಂಟಪದಲ್ಲಿ ಗಾನಯೋಗಿಗಳ ಪುಣ್ಯ ಸ್ಮರಣೆ | ಸಾಧಕರಿಗೆ ಸನ್ಮಾನ
ಮುಖ್ಯ ಸುದ್ದಿ
ಮುರುಘಾಮಠದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾದ ಮೊದಲನೇ ಕಾರ್ಯಕಾರಿ ಸಭೆ | ಮಠಾಧೀಶರು ಸೇರಿದಂತೆ ಗಣ್ಯರು ಭಾಗೀ
ಮುಖ್ಯ ಸುದ್ದಿ
ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up