
ಚಿತ್ರದುರ್ಗ ನ್ಯೂಸ್.ಕಾಂ: ಭಾನುವಾರ ಮಧ್ಯಾಹ್ನ ಚಿತ್ರದುರ್ಗ ನಗರದ ಹೊರವಲಯದ ತಮಟಕಲ್ಲು ಬಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ನಡೆದಿದ್ದ ಕಾರು ಅಪಘಾತದಲ್ಲಿ ಮೃತಪಟ್ಟವರು ದಾವಣಗೆರೆ ಮೂಲದ ದಂಪತಿ ಎಂದು ಗುರುತು ಪತ್ತೆಯಾಗಿದೆ.
ದಾವಣಗೆರೆಯ ಕರಿಬಸಪ್ಪ(60) ಅವರ ಪತ್ನಿ ಸಾವಿತ್ರಮ್ಮ(53) ಮೃತ ದಂಪತಿ. ಕಾರಿನಲ್ಲಿದ್ದ ಇನ್ನೂ ಮೂರು ಜನ ಗಂಭಿರವಾಗಿ ಗಾಯಗೊಂಡಿದ್ದು, ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ದಾವಣಗೆರೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿ ಮುಂದಿದ್ದ ಲಾರಿಗೆ ಡಿಕ್ಕಿಯಾಗಿದೆ. ಅಪಘಾತಕ್ಕೀಡಾದ ಕಾರು ನಜ್ಜುಗುಜ್ಜಾಗಿರುವುದು ಡಿಕ್ಕಿಯ ತೀವ್ರತೆಗೆ ಸಾಕ್ಷಿಯಾಗಿದೆ.

ಕಾರು ಚಾಲನೆ ಮಾಡುತ್ತಿದ್ದ ಕರಿಬಸಪ್ಪ ಸ್ಥಳದಲ್ಲೇ ಮೃತಪಟ್ಟರೆ, ಪತ್ನಿ ಸಾವಿತ್ರಮ್ಮ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
