CHITRADURGA NEWS | 15 DECEMBER 2025
ಚಿತ್ರದುರ್ಗ: ನಗರದ ಹೊರವಲಯದ ಚಂದ್ರವಳ್ಳಿಯಲ್ಲಿ ನೆಲೆಸಿರುವ ಶ್ರೀ ಹುಲೆಗುಂದಿ ಸಿದ್ಧೇಶ್ವರ ಸ್ವಾಮಿ, ಪಂಚಲಿಂಗೇಶ್ವರ ಸ್ವಾಮಿ, ಧವಳೇಶ್ವರ ಸ್ವಾಮಿಯ ಕಡೇ ಕಾರ್ತಿಕೋತ್ಸವ ವಿಜೃಂಭಣೆಯಿಂದ ಜರುಗಿತು.
ಇದನ್ನೂ ಓದಿ: ಆಯೋಗ ರಚನೆಗೆ ಒತ್ತಾಯಿಸಿ ಕಟ್ಟಡ ಕಾರ್ಮಿಕರ ಧರಣಿ
ಐತಿಹಾಸಿಕ ಗುಹೆಯಾಕಾರದ ದೇಗುಲಗಳಲ್ಲಿ ನೆಲೆ ನಿಂತಿರುವ ದೇವರ ದರ್ಶನ ಹಾಗೂ ವಿಶೇಷ ಪೂಜೆಗೆ ಭಾನುವಾರ ಸಾವಿರಾರು ಭಕ್ತರು ಸಾಕ್ಷಿಯಾದರು.
ಸ್ವಾಮಿಯ ಮೂರ್ತಿಗೆ ವಿವಿಧ ಪುಷ್ಪಗಳಿಂದ ವಿಶೇಷ ಅಲಂಕಾರ ಸೇವೆ, ಪ್ರಾತಃಕಾಲದಿಂದ ಅಭಿಷೇಕ ಸೇರಿ ಅನೇಕ ಪೂಜಾ ಕೈಂಕರ್ಯಗಳು ಅದ್ದೂರಿಯಾಗಿ ಜರುಗಿದವು. ಬೆಳಗ್ಗೆ 8ಕ್ಕೆ ಮಹಾಮಂಗಳಾರತಿ ನೆರವೇರಿತು.
ಜನಪದ ಕಲಾಮೇಳ, ವೀರಗಾಸೆ ಕಲಾತಂಡದೊಂದಿಗೆ ಸ್ವಾಮಿಯ ಅಡ್ಡಪಲ್ಲಕ್ಕಿ ಮೆರವಣಿಗೆ ಅದ್ದೂರಿಯಾಗಿ ಜರುಗಿತು. ಸಂಜೆ 6ರ ನಂತರ ನಡೆದ ದೀಪಾರಾಧನೆಯಲ್ಲಿ ಸಾವಿರಾರು ದೀಪಗಳನ್ನು ಹಚ್ಚುವ ಮೂಲಕ ಭಕ್ತರು ಭಕ್ತಿ ಸಮರ್ಪಿಸಿದರು.
ಇದನ್ನೂ ಓದಿ: MLC ಕೆ.ಎಸ್.ನವೀನ್ ಅವರ ಮಾವ ಕೆ.ಟಿ.ತಿಪ್ಪೇಸ್ವಾಮಿ ನಿಧನ
ಬುರುಜನಹಟ್ಟಿ, ಹೊಳಲ್ಕೆರೆ ರಸ್ತೆ, ಧವಳಗಿರಿ ಬಡಾವಣೆ, ಬಿವಿಕೆಎಸ್ ಲೇಔಟ್, ನೆಹರು ನಗರ ಸೇರಿ ನಗರದ ವಿವಿಧ ಬಡಾವಣೆಗಳಿಂದ ಸಾವಿರಾರು ಭಕ್ತರು ತಂಡೋಪ ತಂಡವಾಗಿ ಆಗಮಿಸಿ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಭಕ್ತಿಯಲ್ಲಿ ಮಿಂದೆದ್ದರು.
ಭಕ್ತರು ಮಹಾಮಂಗಳಾರತಿ, ತೀರ್ಥ ಪಡೆದರು. ಮಹಾ ಅನ್ನದಾಸೋಹಕ್ಕೆ ಡಾ. ಬಸವಪ್ರಭು ಸ್ವಾಮೀಜಿ ಚಾಲನೆ ನೀಡಿದರು. ನೆರೆದಿದ್ದ ಭಕ್ತರು ಪ್ರಸಾದ ಸ್ವೀಕರಿಸಿದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
