By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಶ್ರೀ ರಾಜಾ ಉತ್ಸವಾಂಭ ಉಚ್ಚಂಗೆಲ್ಲಮ್ಮ ದೇವಿಗೆ ಬಂಗಾರದ ಮುಖಪದ್ಮ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಶ್ರೀ ರಾಜಾ ಉತ್ಸವಾಂಭ ಉಚ್ಚಂಗೆಲ್ಲಮ್ಮ ದೇವಿಗೆ ಬಂಗಾರದ ಮುಖಪದ್ಮ

ಮುಖ್ಯ ಸುದ್ದಿ

ಶ್ರೀ ರಾಜಾ ಉತ್ಸವಾಂಭ ಉಚ್ಚಂಗೆಲ್ಲಮ್ಮ ದೇವಿಗೆ ಬಂಗಾರದ ಮುಖಪದ್ಮ

chitradurganews.com
Last updated: 14 May 2024 17:51
chitradurganews.com
1 year ago
Share
ಶ್ರೀ ರಾಜಾ ಉತ್ಸವಾಂಭ ಉಚ್ಚಂಗೆಮ್ಮಲ್ಲ ದೇವಿ
ಶ್ರೀ ರಾಜಾ ಉತ್ಸವಾಂಭ ಉಚ್ಚಂಗೆಮ್ಮಲ್ಲ ದೇವಿ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 14 MAY 2014

ಚಿತ್ರದುರ್ಗ: ಕೋಟೆನಾಡಿನ ಪ್ರಮುಖ ಶಕ್ತಿ ದೇವತೆ ನಗರದ ದೊಡ್ಡಪೇಟೆಯಲ್ಲಿರುವ ಶ್ರೀ ರಾಜ ಉತ್ಸವಾಂಬ ಉಚ್ಚಂಗಿ ಯಲ್ಲಮ್ಮ ದೇವಿಯ ಬಂಗಾರ ಲೇಪಿತ ನೂತನ ಬೆಳ್ಳಿಯ ಮುಖಪದ್ಮವನ್ನು ಮಂಗಳವಾರ ಲೋಕಾರ್ಪಣೆ ಮಾಡಲಾಯಿತು.

ಮಂಗಳವಾರ ಬೆಳಗ್ಗೆ ಬ್ರಾಹ್ಮಿ ಮುಹೂರ್ತದಲ್ಲಿ 4 ಗಂಟೆಯಿಂದ ನೂತನ ವಿಗ್ರಹಕ್ಕೆ ಪ್ರಾಣ ಪ್ರತಿಷ್ಠಾಪನೆ ಮಾಡಲಾಯಿತು. ಮಂತ್ರ, ಘೋಷಗಳೊಂದಿಗೆ ಶಾಸ್ತ್ರೋಕ್ತವಾಗಿ ನೂತನ ವಿಗ್ರಹಕ್ಕೆ ಜೀವ ತುಂಬಲಾಯಿತು.

ಇದನ್ನೂ ಓದಿ: ಚಿತ್ರದುರ್ಗದಲ್ಲಿ ರಾಜ್ಯಮಟ್ಟದ ವಧು-ವರರ ಸಮಾವೇಶ | ಸರ್ವಧರ್ಮಿಯ ವಧು, ವರರು ಭಾಗವಹಿಸಲು ಅವಕಾಶ

ನೂತನ ವಿಗ್ರಹಕ್ಕೆ ಹೊಂಬಾಳೆ, ಗುಲಾಬಿ, ಮಲ್ಲಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಬಳಿಕ ಅಲಂಕೃತ ಪಲ್ಲಕ್ಕಿಯನ್ನು ನೂತನ ವಿಗ್ರಹವನ್ನು ಪ್ರತಿಷ್ಠಾಪಿಸಿ, ಮೆರವಣಿಗೆ ಮೂಲಕ ಬುರುಜನಹಟ್ಟಿಯಲ್ಲಿನ ಉಚ್ಚಂಗಿ ಹೊಂಡ ಎಂದೇ ಕರೆಯುವ ಸಿಹಿ ನೀರು ಹೊಂಡಕ್ಕೆ ಕರೆದೊಯ್ದು ಗಂಗಾ ಪೂಜೆ ನೆರವೇರಿಸಲಾಯಿತು.

ನೆರೆದಿದ್ದ ಭಕ್ತರಿಂದ ಉದೋ ಉದೋ ಎಂಬ ಉದ್ಘಾರ ಘೋಷಗಳು ಮೊಳಗಿದವು. ಅಲ್ಲಿಂದ ಉರುಮೆ, ಡೊಳ್ಳು ವಾದ್ಯಗಳೊಂದಿಗೆ ದೇವಸ್ಥಾನದವರೆಗೆ ಪಲ್ಲಕ್ಕಿ ಉತ್ಸವದ ಮೆರವಣಿಗೆ ನಡೆಸಲಾಯಿತು.

ಇದನ್ನೂ ಓದಿ: ತಪ್ಪಿದ ಭಾರೀ ಅನಾಹುತ | 49 ಪ್ರಯಾಣಿಕರ ಜೀವ ಉಳಿಸಿದ ಐರಾವತ ಬಸ್ ಚಾಲಕ 

ಸುಮಾರು 25 ಮಹಿಳೆಯರು ಕುಂಭ ಹೊತ್ತು ಸಾಗಿದರು. ಮಾಳಪ್ಪನಹಟ್ಟಿ, ಬುರುಜನಹಟ್ಟಿ ಸೇರಿದಂತೆ ಮತ್ತಿತರ ಭಾಗಗಳಿಂದ ಭಕ್ತರು ಪಾಲ್ಗೊಂಡಿದ್ದರು.

ಬಂಗಾರ ಲೇಪಿತ ನೂತನ ಬೆಳ್ಳಿ ಮುಖಪದ್ಮ, ಆಭರಣಗಳು:

ಭಕ್ತರ ಸಹಕಾರದಿಂದ ದೇವಿಯ ಬೆಳ್ಳಿಯ ಹೊಸ ಮುಖ ಪದ್ಮ, ಕಿರೀಟ, ಕತ್ತಿ, ಛತ್ರಿ, ಸೊಂಟದ ಪಟ್ಟಿ, ದೇವಿಯ ತಲೆಯ ಮೇಲಿನ ಏಳು ಹೆಡೆಯ ಸರ್ಪ, ದೇವಿಯ ಕೊರಳಿನ ರುಂಡ ಮಾಲೆಗಳು ಸೇರಿದಂತೆ ಮತ್ತಿತರ ಬೆಳ್ಳಿಯ ಆಭರಣಗಳನ್ನು ಹೊಸದಾಗಿ ಮಾಡಿಸಲಾಗಿದ್ದು, ಆಭರಣಗಳ ತಯಾರಿಕೆ ಜವಾಬ್ದಾರಿ ಹೊತ್ತಿದ್ದ ಶಿಲ್ಪಿಗಳು ಸೋಮವಾರ ದೇವಸ್ಥಾನಕ್ಕೆ ಹಸ್ತಾಂತರಿಸಿದರು.

ಇದನ್ನೂ ಓದಿ: ಕೋಟೆನಾಡಲ್ಲಿ ಮದಕರಿ ನಾಯಕರ ಪುಣ್ಯ ಸ್ಮರಣೆ | ಸರಳ ಆಚರಣೆಗೆ ತೀರ್ಮಾನ ಬಿ.ಕಾಂತರಾಜ್

ಮಂಗಳವಾರ ತಡರಾತ್ರಿ ದೇವಿಯ ಜಾತ್ರಾ ಮಹೋತ್ಸವದ ಸಾರು ಹಾಕಲಾಗಿದ್ದು, ಮೇ.28 ರವರೆಗೆ ಜಾತ್ರೆ ನಡೆಯಲಿದೆ. ಜಾತ್ರಾ ಮಹೋತ್ಸವದ ಅಂಗವಾಗಿ ಗರ್ಭಗುಡಿಯ ಮೂರ್ತಿಗೆ ಮಂಗಳವಾರ ವಿಶೇಷ ಅಲಂಕಾರ ಮಾಡಲಾಗಿತ್ತು.

ಇದನ್ನೂ ಓದಿ: ಚಿತ್ರದುರ್ಗ ಜಿಲ್ಲೆಯಲ್ಲಿ ನಿನ್ನೆ ಸುರಿದ ಮಳೆ ವಿವರ | ಎಲ್ಲೆಲ್ಲಿ ಎಷ್ಟೆಷ್ಟು ಮಳೆಯಾಗಿದೆ ನೋಡಿ..

ಭಕ್ತರು ತನು, ಮನ, ಧನದೊಂದಿಗೆ ದೇವಿಯ ಜಾತ್ರಾ ಮಹೋತ್ಸವಕ್ಕೆ ಸಹಕರಿಸಬೇಕು ಎಂದು ಜಾತ್ರಾ ಮಹೋತ್ಸವ ಸಮಿತಿ ಪದಾಧಿಕಾರಿಗಳು ಪ್ರಕಟಣೆ ಮೂಲಕ ಮನವಿ ಮಾಡಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:BangaraChitradurgaKannada Latest NewsKotenaduMukhapadmaSri Uchchangellamma Deviಕನ್ನಡ ಲೇಟೆಸ್ಟ್ ಸುದ್ದಿಕೋಟೆನಾಡುಚಿತ್ರದುರ್ಗಬಂಗಾರಮುಖಪದ್ಮಶ್ರೀ ಉಚ್ಚಂಗೆಲ್ಲಮ್ಮ ದೇವಿ
Share This Article
Facebook Email Print
Previous Article AI IMAGE ಚಿತ್ರದುರ್ಗದಲ್ಲಿ ರಾಜ್ಯಮಟ್ಟದ ವಧು-ವರರ ಸಮಾವೇಶ | ಸರ್ವಧರ್ಮಿಯ ವಧು, ವರರು ಭಾಗವಹಿಸಲು ಅವಕಾಶ
Next Article arecanut price list ಅಡಿಕೆಗೆ ಭರ್ಜರಿ ರೇಟ್ | ಬರದ ನಡುವೆ ಬೆಳೆಗಾರರಲ್ಲಿ ಮಂದಹಾಸ
Leave a Comment

Leave a Reply Cancel reply

Your email address will not be published. Required fields are marked *

ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up