CHITRADURGA NEWS | 08 FEBRUARY 2025
ಚಿತ್ರದುರ್ಗ: ನಗರದ ಒಂದು ಭಾಗವೇ ಆಗಿರುವ ಮೆದೇಹಳ್ಳಿಯಲ್ಲಿ ಘೋರ ದುರಂತ ಸಂಭವಿಸಿದ್ದು, ಪತಿಯೇ ಪತ್ನಿಯನ್ನು ಕೊಲೆ ಮಾಡಿರುವ ಘಟನೆ ನಡೆದಿದೆ.
ಮೆದೇಹಳ್ಳಿಯ ಶ್ರೀದೇವಿ(48) ಕೊಲೆಯಾದ ಮಹಿಳೆ. ಇವರ ಪತಿ ಉಮಾಪತಿ ಮೇಲೆ ಕೊಲೆ ಆರೋಪ ಬಂದಿದ್ದು, ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ಬೈಕ್ ಲಾರಿ ಡಿಕ್ಕಿ | ಇಬ್ಬರು ಯುವಕರು ಮೃತ
ಉಮಾಪತಿ ತನ್ನ ಜಮೀನು ಮಾರಾಟ ಮಾಡಿ ಹಣ ಖರ್ಚು ಮಾಡುತ್ತಾನೆ ಎನ್ನುವ ಕಾರಣಕ್ಕೆ ಪತ್ನಿ ಶ್ರೀದೇವಿ ಜಮೀನನ್ನು ತನ್ನ ಹಾಗೂ ಮಗಳ ಹೆಸರಿಗೆ ಮಾಡಿಸಿಕೊಡಿ ಎಂದು ಒತ್ತಾಯ ಮಾಡುತ್ತಿದ್ದರು.
ಫೆಬ್ರವರಿ 7 ರಂದು ಬೆಳಗ್ಗೆ ಶ್ರೀದೇವಿ ಮನೆಯಲ್ಲಿ ಪೂಜೆ ಮಾಡುತ್ತಿದ್ದಾಗ ಉಮಾಪತಿ ಸೀರೆಯಿಂದ ಕೊರಳಿಗೆ ಸುತ್ತಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ ಎಂದು ದೂರಲಾಗಿದೆ.
ಇದನ್ನೂ ಓದಿ: ಚನ್ನಗಿರಿ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ರೇಟ್
ಬಾಯಲ್ಲಿ ರಕ್ತ ಬಂದಿದ್ದು, ಪೂಜೆ ಮಾಡುವಾಗ ನೆಲಕ್ಕೆ ಬಿದ್ದಿದ್ದಾರೆ ಎಂದು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಶ್ರೀದೇವಿ ಮೃತಪಟ್ಟಿದ್ದಾರೆ.
ಈ ಸಂಬಂಧ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮೃತರ ಅಣ್ಣ ಎಚ್.ರಂಗಸ್ವಾಮಿ ದೂರು ದಾಖಲಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
