
CHITRADURGA NEWS | 16 JANUARY 2024
ಹೊಸದುರ್ಗ: ಹೊಸದುರ್ಗ ತಾಲೂಕಿನ ಹಲವು ಭಾಗಗಳಲ್ಲಿ ಆಗಾಗ ಕಾಣಿಸಿಕೊಂಡು ಜನರಲ್ಲಿ ಭಯ ಹುಟ್ಟಿಸಿದ್ದ ಚಿರತೆಯೊಂದು ಅರಣ್ಯ ಇಲಾಖೆಯ ಬೋನಿಗೆ ಬಿದ್ದಿದೆ.
ಹೊಸದುರ್ಗ ತಾಲೂಕು ಕೃಷ್ಣಾಪುರ ಬಳಿ ಜಮೀನಿನಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಇಟ್ಟಿದ್ದ ಬೋನಿಗೆ ಚಿರತೆ ಬಂದು ಬಂದಿಯಾಗಿದೆ.
ಇದನ್ನೂ ಓದಿ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಲಾರಿ ಡಿಕ್ಕಿ | ಸ್ಥಳದಲ್ಲೇ ಮೃತಪಟ್ಟ ಸುಚಿತ್ರಾ
ಒಂದು ವಾರದಿಂದ ಪದೇ ಪದೇ ಕಾಣಿಸಿಕೊಂಡು ಜನರಲ್ಲಿ ಆತಂಕ ಸೃಷ್ಟಿಸಿತ್ತು. ಚಿರತೆಯ ಭಯದಿಂದ ಜನ ರಾತ್ರಿ ಹೊತ್ತು ಜಮೀನು, ತೋಟಗಳಿಗೆ ಹೋಗಲು ಹೆದರಿಕೊಂಡಿದ್ದರು.
ಈಗ ಅರಣ್ಯ ಇಲಾಖೆಯ ಬೋನಿಗೆ ಚಿರತೆ ಸಿಕ್ಕಿಬಿದ್ದ ವಿಷಯ ಕೇಳಿ ಜನ ನಿಟ್ಟುಸಿರುವ ಬಿಟ್ಟಿದ್ದಾರೆ. ಚಿgಚಿve ನೋಡಲು ಸಾಕಷ್ಟು ಜನ ಕೂಡಾ ಸ್ಥಳಕ್ಕೆ ಬಂದಿದ್ದರು.
ತಾಲೂಕಿನ ಹೆಬ್ಬಳ್ಳಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಈ ಚಿರತೆ ಕಾಣಿಸಿಕೊಳ್ಳುತ್ತಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
