By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಪ್ರತಿಭೋತ್ಸವ ಹಾಗೂ ಸನ್ಮಾನ ಸಮಾರಂಭ
    ಪರಿಶ್ರಮ, ತಾಳ್ಮೆಯಿದ್ದರೆ ಯಾವುದೇ ಕ್ಷೇತ್ರದಲ್ಲಿ ಯಶಸ್ಸು | ಸಚಿವ ಟಿ.ರಘುಮೂರ್ತಿ
    2 hours ago
    ರೈಲ್ವೆ ಮೇಲ್ಸೇತುವೆ ಕಾಮಗಾರಿಗೆ ಭೂಮಿಪೂಜೆ
    9 ತಿಂಗಳಲ್ಲಿ ಜಿಲ್ಲೆಯ 33 ರೈಲ್ವೆ ಮೇಲ್ಸೇತುವೆ, ಕೆಳಸೇತುವೆ ಕಾಮಗಾರಿ ಪೂರ್ಣ | ಸಚಿವ ವಿ.ಸೋಮಣ್ಣ
    3 hours ago
    ರಂಗಯ್ಯನ ಬಾಗಿಲುಗೆ ಗುಲಾಬಿ ಬಣ್ಣದ ದೀಪಾಲಂಕಾರ
    ಗೃಹಲಕ್ಷ್ಮಿ ಎಫೆಕ್ಟ್ | ಗುಲಾಬಿ ಬಣ್ಣಕ್ಕೆ ತಿರುಗಿದ ರಂಗಯ್ಯನ ಬಾಗಿಲು 
    3 hours ago
    ಬ್ರಹ್ಮಶ್ರೀ ನಾರಾಯಣ ಗುರು, ನುಲಿಯ ಚಂದಯ್ಯ ಜಯಂತಿ ಆಚರಣೆ
    ನಾರಾಯಣ ಗುರು, ನುಲಿಯ ಚಂದಯ್ಯ ತತ್ವಗಳು ಸಮಾಜಕ್ಕೆ ದಾರಿದೀಪ | ಸಚಿವ ರಘುಮೂರ್ತಿ
    2 days ago
    ಸಾಂದರ್ಭಿಕ ಚಿತ್ರ
    ಸೆ.6ರಂದು ಬೆಂಗಳೂರಿನಲ್ಲಿ ವಿದೇಶದಲ್ಲಿ ಅಧ್ಯಯನ–2026 ಶಿಕ್ಷಣ ಮೇಳ 
    2 days ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    1 week ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    1 month ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 week ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    3 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಆಗಸ್ಟ್ 30 | ಕೈಗೊಂಡ ಕಾರ್ಯಕ್ರಮಗಳಲ್ಲಿ ಯಶಸ್ಸು, ಆರ್ಥಿಕ ಲಾಭ
    15 hours ago
    today bhavishya
    ದಿನ ಭವಿಷ್ಯ | ಆಗಸ್ಟ್ 29 | ಕೈಗೊಂಡ ಕಾರ್ಯಗಳು ಮಂದಗತಿಯಲ್ಲಿ ಸಾಗುತ್ತವೆ, ದೂರದ ಪ್ರಯಾಣ ಬೇಡ
    2 days ago
    today bhavishya
    ದಿನ ಭವಿಷ್ಯ | ಆಗಸ್ಟ್ 28 | ವೃತ್ತಿಪರ ವ್ಯವಹಾರದಲ್ಲಿ ಲಾಭ, ಹೊಸ ಉದ್ಯೋಗಾವಕಾಶಗಳು ದೊರೆಯುತ್ತವೆ
    3 days ago
    today bhavishya
    ದಿನ ಭವಿಷ್ಯ | ಆಗಸ್ಟ್ 27 | ಹಠಾತ್ ಆರ್ಥಿಕ ಲಾಭದ ಸೂಚನೆ, ಅರೋಗ್ಯದಲ್ಲಿ ಎಚ್ಚರ
    4 days ago
    today bhavishya
    ದಿನ ಭವಿಷ್ಯ | ಆಗಸ್ಟ್ 26 | ಶುಭ ಸುದ್ದಿ, ಕೈಗೊಂಡ ಕಾರ್ಯಗಳು ಯಶಸ್ವಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್
    1 day ago
    ಮಾರುಕಟ್ಟೆ ಧಾರಣೆ | ಆಗಸ್ಟ್ 28 | ರಾಗಿ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 27 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 24 | ಮೆಕ್ಕೆಜೋಳ, ಶೇಂಗಾ ರೇಟ್…..
    6 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 20 | ಹತ್ತಿ ರೇಟ್ ಎಷ್ಟಿದೆ?
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    3 weeks ago
    ಗುರು–ಲಿಂಗ–ಜಂಗಮ ವಿಷಯದ ಕುರಿತು ಉಪನ್ಯಾಸ
    ಅಷ್ಟಾವರಣಗಳು ಆಧ್ಯಾತ್ಮಿಕ ಬದುಕಿನ ರಕ್ಷಣಾ ಕವಚ | ಡಾ.ಜಿ.ವಿ.ಮಂಜುನಾಥ
    3 weeks ago
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    1 month ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    2 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 week ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 months ago
  • Life Style
    Life StyleShow More
    Vastu Remedies
    ನಿಮ್ಮ ಸಂಬಳ ಬಂದ ಕೂಡಲೇ ಖಾಲಿಯಾಗುತ್ತದೆಯೇ? ಹಣ ಮನೆಯಲ್ಲಿ ಉಳಿಯಲು ಈ ವಾಸ್ತು ಪರಿಹಾರಗಳನ್ನು ಪ್ರಯತ್ನಿಸಿ
    15 hours ago
    Thirst even after drinking water
    ನೀರು ಕುಡಿದ ನಂತರವೂ ಬಾಯಾರಿಕೆಯಾಗುತ್ತಿದ್ದರೆ ಅದಕ್ಕೆ ಈ ಸಮಸ್ಯೆಯೇ ಕಾರಣವಂತೆ?
    16 hours ago
    rosemary oil to your hair
    ಕೂದಲಿಗೆ ರೋಸ್ಮರಿ ಎಣ್ಣೆ ಹಚ್ಚುವುದರಿಂದ ಏನು ಪ್ರಯೋಜನ ತಿಳಿಯಿರಿ
    2 days ago
    hernia
    ನಿಮ್ಮ ದೈನಂದಿನ ಈ ಅಭ್ಯಾಸಗಳು ಹರ್ನಿಯಾ ಅಪಾಯವನ್ನು ಹೆಚ್ಚಿಸುತ್ತವೆಯಂತೆ
    2 days ago
    Omkaalu (Carom seed snack)
    ಓಂಕಾಳನ್ನು ಬಳಸಿ ಹೊಟ್ಟೆಯ ಕೊಬ್ಬನ್ನು ಕಳೆದುಕೊಳ್ಳುವುದು ಹೇಗೆ? ತಿಳಿಯಿರಿ
    3 days ago
Reading: ಮಿಂಚೇರಿಗೆ ಹೊಂಟವು ಸಾಲು ಸಾಲು ಎತ್ತಿನ ಬಂಡಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಮಿಂಚೇರಿಗೆ ಹೊಂಟವು ಸಾಲು ಸಾಲು ಎತ್ತಿನ ಬಂಡಿ

chitradurganews.com
Last updated: 23 December 2023 16:50
chitradurganews.com
3 years ago
Share
ಮಿಂಚೇರಿಗೆ ಹೊರಟ ಯಾತ್ರೆ
ಮಿಂಚೇರಿಗೆ ಹೊರಟ ಯಾತ್ರೆ
SHARE

ಚಿತ್ರದುರ್ಗ ನ್ಯೂಸ್.ಕಾಂ: ಕಣ್ಣು ಹಾಯಿಸಿದಷ್ಟೂ ದೂರದವರೆಗೆ ಕಾಣುವ ಎತ್ತಿನ ಬಂಡಿಗಳ ಸಾಲು, ಗಾಡಿಗಳ ಮೇಲೆ ಗಾಳಿ, ಬಿಸಿಲು ಮಳೆಯಿಂದ ರಕ್ಷಣೆ ಮಾಡಿಕೊಳ್ಳಲು ತಾಡಪಾಲಿನಿಂದ ಮಾಡಿದ ಸವಾರಿ, ನಾಲ್ಕು ದಿನಕ್ಕೆ ಸಾಕಾಗುವಷ್ಟು ಮೇವು, ಖುಷಿ ಖುಷಿಯಿಂದ ನಲಿಯುವ ಪುಟ್ಟ ಪುಟ್ಟ ಮಕ್ಕಳು..

ಇಂಥದ್ದೊಂದು ದೃಶ್ಯ ಕಂಡು ಬಂದಿದ್ದು ಚಿತ್ರದುರ್ಗದ ಪಕ್ಕದಲ್ಲೇ ಇರುವ ಬಚ್ಚಬೋರನಹಟ್ಟಿಯಿಂದ ಸಿರಿಗೆರೆ ಬಳಿಯಿರುವ ಮಿಂಚೇರಿಗೆ ಹೊರಟ ಯಾತ್ರೆಯಲ್ಲಿ.

ಹೌದು, ಎಷ್ಟೇ ಆಧುನಿಕತೆ ಇದ್ದರೂ, ಇಂದಿಗೂ ಬುಡಕಟ್ಟು ಮ್ಯಾಸ ನಾಯಕ ಸಮುದಾಯದ ಈ ಜನತೆ ತಮ್ಮ ಆಚರಣೆ. ಸಂಪ್ರದಾಯ, ಸಂಸ್ಕøತಿಯನ್ನು ಕಾಪಾಡಿಕೊಂಡು ಬಂದಿರುವ ಪರಿ ಇದು.

ಇದನ್ನೂ ಓದಿ: ಉದ್ಯಮಿ ಮನೆ ದರೋಡೆಗೆ ಚಿತ್ರದುರ್ಗದ ಹಣ್ಣಿನ ವ್ಯಾಪಾರಿ ಸಾಥ್

ಮಿಂಚೇರಿ ಬೆಟ್ಟದಲ್ಲಿರುವ ತಮ್ಮ ಕುಲದೇವರು ಶ್ರೀ ಗಾದ್ರಿಪಾಲನಾಯಕ ಸ್ವಾಮಿಯ ಪೂಜೆಗೆಂದು ಇವರು ಹೋಗುವ ಪರಿ ನಿಜಕ್ಕೂ ಅಚ್ಚರಿ ಮೂಡಿಸುತ್ತದೆ.

ಮಿಂಚೇರಿಗೆ ಹೊರಟ ಯಾತ್ರೆ
ಮಿಂಚೇರಿಗೆ ಹೊರಟ ಯಾತ್ರೆ

ಇಡೀ ಊರಿನ ಸಿಂಹಪಾಲು ಮನೆಗಳಿಗೆ ಅಕ್ಷರಶಃ ಬೀಗ ಹಾಕಿ ಯಾತ್ರೆ ಹೊರಟಿದ್ದಾರೆ. ವಯಸ್ಕರು, ಯಾತ್ರೆಗೆ ಹೋಗಲಾರದವರು, ದನ ಕರುಗಳಿದ್ದರೆ ಮೇವು ನೀರು ನೋಡಿಕೊಳ್ಳಲು ಒಂದಿಷ್ಟು ಜನ ಹಾಗೂ ಊರಿನ ರಕ್ಷಣೆಗೆ ಮತ್ತೊಂದಿಷ್ಟು ಜನ ಮಾತ್ರ ಊರಲ್ಲಿದ್ದಾರೆ. ಉಳಿದಂತೆ ಇನ್ನೂ ನಾಲ್ಕು ದಿನ ಬಚ್ಚಬೋರನಹಟ್ಟಿ ಗ್ರಾಮಕ್ಕೆ ಪೊಲೀಸರ ಕಣ್ಗಾವಲಿರುತ್ತದೆ.

ಕಳೆದೊಂದು ತಿಂಗಳಿನಿಂದ ಮಿಂಚೇರಿ ಯಾತ್ರೆಗೆ ತಯಾರಿ ಮಾಡಿಕೊಂಡಿರುವ ಬಚ್ಚಬೋರನಹಟ್ಟಿ ಜನತೆ ಸುಮಾರು 200ಕ್ಕಿಂತ ಹೆಚ್ಚು ಎತ್ತಿನ ಗಾಡಿಗಳು, 50ಕ್ಕಿಂತ ಹೆಚ್ಚು ಟ್ರ್ಯಾಕ್ಟರ್, ಟೆಂಪೊ, ಕಾರುಗಳಲ್ಲಿ ಯಾತ್ರೆಗೆ ತೆರಳಿದರು.

ಎಲ್ಲ ಗಾಡಿಗಳ ಮೇಲೆ ಸವಾರಿ, ಸವಾರಿಯ ಮೇಲೆ ಮನೆಯ ಮಕ್ಕಳು, ಗಾದ್ರಿಪಾಲನಾಯಕ ಸ್ವಾಮಿ ಭಾವಚಿತ್ರ, ಮದಕರಿ ನಾಯಕ, ಮಹರ್ಷಿ ವಾಲ್ಮೀಕಿ ಭಾವಚಿತ್ರಗಳನ್ನು ಕಟ್ಟಿಕೊಂಡು ಸಂಭ್ರಮದಿಂದ ತೆರಳುವ ದೃಶ್ಯಗಳನ್ನು ರಸ್ತೆ ಬದಿ ನಿಂತ ಸಾವಿರಾರು ಜನ ಕಣ್ತುಂಬಿಕೊಂಡರು.

ಮಿಂಚೇರಿಗೆ ಹೊರಟ ಯಾತ್ರೆ
ಮಿಂಚೇರಿಗೆ ಹೊರಟ ಯಾತ್ರೆ

ಇದನ್ನೂ ಓದಿ: ಕೋಟೆನಾಡಿನಲ್ಲಿ ವೈಕುಂಠ ಏಕಾದಶಿ ಸಂಭ್ರಮ

ಯಾತ್ರೆಗಾಗಿ ಎತ್ತುಗಳಿಗೂ ವಿಶೇಷವಾಗಿ ಸಿಂಗಾರ ಮಾಡಲಾಗಿತ್ತು. ಕಾಲ್ಗೆಜ್ಜೆ, ಕೊಂಬುಗಳಿಗೆ ಬಣ್ಣ ಬಣ್ಣದ ಟೇಪು, ಬೆನ್ನ ಮೇಲೆ ಬಟ್ಟೆ, ಕೊಂಬಣಸು, ಕೊರಳಿಗೆ ಗಂಟೆ ಕಟ್ಟಿ ಒಂದರ ಹಿಂದೆ ಒಂದರಂತೆ ಎತ್ತಿನ ಬಂಡಿಗಳು ಸಾಗುವ ದೃಶ್ಯ ಸೊಗಸಾಗಿತ್ತು.

ಶನಿವಾರ ನಸುಕಿನಲ್ಲೇ ಎದ್ದು ಇಡೀ ಗ್ರಾಮದ ಜನತೆ ಸ್ನಾನ ಮಾಡಿ, ದೇವರ ಪೂಜಾ ಕಾರ್ಯಗಳನ್ನು ಮಾಡಿಕೊಂಡು, ಊರ ದೇವರಿಗೂ ಪೂಜೆ ಸಲ್ಲಿಸಿ ನಂತರ ದೇವರನ್ನು ಗಂಗಾ ಪೂಜೆಗೆ ಕರೆದುಕೊಂಡು ಹೋಗಿ ಬಂದು, ದೇವರ ಹಿಂದೆ ಇಡೀ ಊರೇ ಹೊರಗೆ ಬಂದಿತು.

ಮಿಂಚೇರಿ ಯಾತ್ರೆ ಸೀಬಾರ ಬಳಿ ಬಂದಾಗ ಸೀಬಾರ ಗ್ರಾಮಸ್ಥರು ಮಜ್ಜಿಗೆ ವಿತರಣೆ ಮಾಡಿದರು.

ಮಿಂಚೇರಿ ಯಾತ್ರೆ ಹೇಗೆ ಸಾಗುತ್ತದೆ, ಏನೇನು ಕಾರ್ಯಕ್ರಮ ಇರುತ್ತವೆ:

ಬುಡಕಟ್ಟು ಸಂಸ್ಕøತಿಯ ಆಚರಣೆಗಳಲ್ಲಿ ಒಂದಾಗಿರುವ ಗಾದ್ರಿಪಾಲನಾಯಕ ಸ್ವಾಮಿಯ ಮಿಂಚೇರಿ ಯಾತ್ರೆಯನ್ನು ಪ್ರತಿ ಐದು ವರ್ಷಗಳಿಗೊಮ್ಮೆ ಅನಾದಿ ಕಾಲದಿಂದಲೂ ಆಚರಣೆ ಮಾಡಿಕೊಂಡು ಬರಲಾಗಿದೆ.

ದೇವರ ಮುತ್ತಯ್ಯಗಳ ಆಗಮನವಾದ ನಂತರ ಬೆಳಿಗ್ಗೆ 7ಕ್ಕೆ ದೇವರ ಮಜ್ಜನಬಾವಿಯಲ್ಲಿ ಗುರು-ಹಿರಿಯರೊಂದಿಗೆ ಗಂಗಾಪೂಜೆ ಹಾಗೂ ಬೆಳಿಗ್ಗೆ 11.30ಕ್ಕೆ ಮಿಂಚೇರಿ ಯಾತ್ರಾ ಮಹೋತ್ಸವ ಆರಂಭವಾಗುತ್ತದೆ.

ದೇವರ ಮುತ್ತಯ್ಯಗಳೊಂದಿಗೆ ಊರಿನಿಂದ ನಿರ್ಗಮಿಸಿ ಅಲ್ಲಿಂದ ಕಕ್ಕಲು ಬೆಂಚಲ್ಲಿ ಪೂಜೆ ಸಲ್ಲಿಸಿ, ಯಾತ್ರೆ ಮುಂದುವರೆಯುತ್ತದೆ. ಇಂದು ಸಂಜೆ 7ಕ್ಕೆ ಕ್ಯಾಸಾಪುರದ ಬಯಲಿನಲ್ಲಿ ಸ್ವಾಮಿಗೆ ಪೂಜೆ ಎಲ್ಲ ಗಾಡಿಗಳನ್ನು ನಿಲ್ಲಿಸಿ ಅಲ್ಲಿಯೇ ರಾತ್ರಿ ಬಿಡಾರ ಊಡಲಾಗುತ್ತದೆ. ರಾತ್ರಿ ಭಜನೆ, ಕೋಲಾಟ, ಸೋಬಾನೆ, ಸಾಂಸ್ಕøತಿಕ ಕಾರ್ಯಕ್ರಮ ನಡೆಯುವುದು.

ಮಿಂಚೇರಿಗೆ ಹೊರಟ ಯಾತ್ರೆ
ಮಿಂಚೇರಿಗೆ ಹೊರಟ ಯಾತ್ರೆ

ಇದನ್ನೂ ಓದಿ: ಚಿತ್ರದುರ್ಗ ನಗರದಲ್ಲಿ ಉದ್ಯೋಗಾವಕಾಶ

ನಾಳೆ ಬೆಳಗ್ಗೆ ಅಂದರೆ ಡಿ.24ರಂದು ಬೆಳಿಗ್ಗೆ 7ಕ್ಕೆ ಸಕಲ ಸ್ವಾಮಿಯ ಪೂಜೆ ನಂತರ ಯಾತ್ರೆ ಮುಂದುವರೆಯುತ್ತದೆ. ಮಧ್ಯಾಹ್ನ 12ಕ್ಕೆ ಸಿರಿಗೆರೆ ಡಿ.ಮದಕರಿಪುರ ವರತಿನಾಯಕನ ಕೆರೆಯ ದಂಡೆಯಲ್ಲಿ ಊಟ, ವಿಶ್ರಾಂತಿ. ನಂತರ ಕೆರೆಯ ದಂಡೆಯಲ್ಲಿ ಪೂಜೆ ಮುಗಿಸಿ ಪಶುಪಾಲಕರಾದ ಗಾದ್ರಿಪಾಲನಾಯಕ ಸ್ವಾಮಿಯ ಸುಕ್ಷೇತ್ರ ಮಿಂಚೇರಿಗೆ ಪಯಣ ಆರಂಭವಾಗಲಿದೆ.

ಸಂಜೆ 5ಕ್ಕೆ ಸ್ವಾಮಿಯ ಮೀಸಲು ಹಾಲಿನ ಕಂಬಿಯ ಪೂಜೆ. ರಾತ್ರಿ ಗುರು-ಹಿರಿಯರ ಸಾಂಪ್ರದಾಯಿಕ ಪೂಜೆ ನಂತರ ಬೀಡು ಬಿಡಲಾಗುವುದು. ಮಧ್ಯರಾತ್ರಿ ಕಂಚವ್ವ, ಕಾಮವ್ವರ ಚಿಲುಮೆ, ಗಂಗಮ್ಮನ ಮಹಾಪೂಜೆ. ಕೋಲಾಟ, ಭಜನೆ, ಸೋಬಾನೆ ಹಾಗೂ ಇತರೆ ಕಾರ್ಯಕ್ರಮಗಳು ನಡೆಯುತ್ತವೆ.

ಡಿ.25ರಂದು ಬೆಳಿಗ್ಗೆ 5ಕ್ಕೆ ಸ್ವಾಮಿಯ ಪೂರ್ವಿಕರ ವಿಧಿ-ವಿಧಾನಗಳೊಂದಿಗೆ ಹುಲಿರಾಯನ ಸಮಾಧಿಗೆ ಪೂಜೆ. ನಾಯಕನ ಸಮಾಧಿಗೆ ಪೂಜೆ ಹಾಗೂ ಮಣೆವು ಕಾರ್ಯಕ್ರಮ. ನಂತರ ಮಧ್ಯಾಹ್ನ 2ಕ್ಕೆ ಸ್ವಾಮಿಯ ಸನ್ನಿಧಿಯಲ್ಲಿ ಬಸವಂತರಿಗೆ ಹಾಗೂ ಚೌಕು ಮಣೆವು ಕಾರ್ಯಕ್ರಮ. ಸಂಜೆ 4ಕ್ಕೆ ಕಣಿವೆ ಮಾರಮ್ಮ, ಮಲಿಯಮ್ಮ ಹಾಗೂ ಕೊಲ್ಲಪುರದಮ್ಮನವರ ಗಂಗಾಪೂಜೆ. ಸಂಜೆ 7ಕ್ಕೆ ಸ್ವಾಮಿಗೆ ಪೂಜೆ ನಂತರ ಭಕ್ತಾಧಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮ ನಡೆಯಲಿದೆ.

ಮಿಂಚೇರಿ ಯಾತ್ರೆಗೆ ಚಾಲನೆ ನೀಡಿದ ಮಾದಾರ ಚನ್ನಯ್ಯ ಶ್ರೀ
ಮಿಂಚೇರಿ ಯಾತ್ರೆಗೆ ಚಾಲನೆ ನೀಡಿದ ಮಾದಾರ ಚನ್ನಯ್ಯ ಶ್ರೀ

ಡಿ.26ರಂದು ಬೆಳಿಗ್ಗೆ 7ಕ್ಕೆ ಸ್ವಾಮಿಯು ಜಂಗಮ ಸ್ವರೂಪಿಯಾಗಿ ಭಿಕ್ಷೆ ಸ್ವೀಕಾರ ಕಾರ್ಯಕ್ರಮ. ಬೆಳಿಗ್ಗೆ 11ಕ್ಕೆ ಸ್ವಾಮಿಯ ಸನ್ನಿಧಿಯಲ್ಲಿ ಪ್ರಸಾದ ದಾಸೋಹ. ಮಧ್ಯಾಹ್ನ 2ಕ್ಕೆ ಮಿಂಚೇರಿ ಸುಕ್ಷೇತ್ರದಿಂದ ನಿರ್ಗಮನ. ರಾತ್ರಿ 7ಕ್ಕೆ ಕಡ್ಲೇಗುದ್ದು ಬಳಿಯ ಸಿದ್ದರ ಗುಂಡಿಗೆ ಆಗಮನ. ನಂತರ ಸ್ವಾಮಿಗೆ ಪೂಜೆ ಸಲ್ಲಿಸಿ ಬೀಡು ಬಿಡುವುದು.

ಡಿ.27ರಂದು ಬೆಳಿಗ್ಗೆ 7ಕ್ಕೆ ಸ್ವಾಮಿಗೆ ಪೂಜೆ ಸಲ್ಲಿಸಿ ಬೆಳಿಗ್ಗೆ 10ಕ್ಕೆ ಕ್ಯಾಸಾಪುರ ಹತ್ತಿರ ಜನಿಗಿಹಳ್ಳದ ದಂಡೆಯಲ್ಲಿ ವಿಶ್ರಾಂತಿ ಮತ್ತು ಸ್ವಾಮಿಯ ಸಂಪ್ರಾದಾಯದಂತೆ ಜನಿಗಿ ಹಳಕ್ಕೆ ಗಂಗಾಪೂಜೆ ನಡೆಯುತ್ತದೆ. ನಂತರ ಯಾತ್ರೆ ಮುಂದುವರೆಯಲಿದೆ. ಮಧ್ಯಾಹ್ನ 2ಕ್ಕೆ ಚಿತ್ರದುರ್ಗಕ್ಕೆ ಮಿಂಚೇರಿ ಮಹೋತ್ಸವದ ಮೆರವಣಿಗೆ ಆಗಮನವಾಗಲಿದೆ. ನಂತರ ರಾಜಾ ಬೀದಿಗಳಲ್ಲಿ ಸ್ವಾಮಿಯ ಮೆರವಣಿಗೆ ಆಗಮನ. ನಂತರ ರಾಜಾ ಬೀದಿಗಳಲ್ಲಿ ಸ್ವಾಮಿಯ ಮೆರವಣಿಗೆ, ಕೋಲಾಟ, ಭಜನೆ, ಉರುಮೆ, ಕುಣಿತ, ತಮಟೆ, ವಾದ್ಯಗಳೊಂದಿಗೆ ಕಹಳೆಯ ನಾದದೊಂದಿಗೆ ಜನಪದ ನೃತ್ಯಗಳೊಂದಿಗೆ ಭವ್ಯ ಮೆರವಣಿಗೆ ನಡೆಯಲಿದೆ. ಸಂಜೆ 7ಕ್ಕೆ ಸುಕ್ಷೇತ್ರ ಕಕ್ಕಲು ಬೆಂಚಿನಲ್ಲಿ ಬೀಡು ಬಿಡುವುದು.

ಡಿ.28ರಂದು ಸಂಜೆ 7ಕ್ಕೆ ಸ್ವಾಮಿಯ ಗ್ರಾಮದ ಹೊಸ್ತಿಲು ಪೂಜೆಯೊಂದಿಗೆ ಸ್ವಸ್ಥಾನಕ್ಕೆ ಮರಳುವುದು. ಗುರು-ಹಿರಿಯರೊಂದಿಗೆ ದೇವರ ಮುತ್ತಯ್ಯಗಳ ಬೀಳ್ಕೊಡುಗೆ ನಡೆಯಲಿದೆ.

ಮಿಂಚೇರಿ ಯಾತ್ರೆಗೆ ಚಾಲನೆ ನೀಡಿದ ಮಾದಾರ ಚನ್ನಯ್ಯ ಶ್ರೀ:

ಬಚ್ಚಬೋರನಹಟ್ಟಿ ಗ್ರಾಮದಿಂದ ಬಂದ ಮಿಂಚೇರಿ ಯಾತ್ರೆಗೆ ನಗರದ ತುರುವನೂರು ರಸ್ತೆಯಲ್ಲಿರುವ ಶ್ರೀ ವೆಂಕಟರಮಣ ಸ್ವಾಮಿ ದೇವಸ್ಥಾನದ ಬಳಿ ಮಾದಾರ ಚನ್ನಯ್ಯ ಶ್ರೀಗಳು ಪುಷ್ಪವೃಷ್ಠಿ ಮಾಡಿ ಚಾಲನೆ ನೀಡಿದರು. ಜಿಪಂ ಕೆಡಿಪಿ ಸದಸ್ಯ ಕೆ.ಸಿ.ನಾಗರಾಜ್, ನಗರಸಭೆ ಮಾಜಿ ಅಧ್ಯಕ್ಷ ಬಿ.ಕಾಂತರಾಜು, ಸಿ.ಟಿ.ಕೃಷ್ಣಮೂರ್ತಿ, ನಾಯಕ ಸಮಾಜದ ಜಿಲ್ಲಾಧ್ಯಕ್ಷ ಎಚ್.ಜೆ.ಕೃಷ್ಣಮೂರ್ತಿ, ನಗರಸಭೆ ಸದಸ್ಯ ದೀಪು, ಮುಖಂಡರಾದ ಗೋಪಾಲಸ್ವಾಮಿ ನಾಯಕ, ಅಂಜಿನಪ್ಪ, ಗ್ರಾಮದ ಮುಖಂಡರಾದ ಬೋರಯ್ಯ, ರಮೇಶ್, ನೆಲಗೆತನ ಬೋರಯ್ಯ, ಬಸವರಾಜು, ಬಿ.ಬೋರಯ್ಯ, ಪ್ರಹ್ಲಾದ್, ಸಣ್ಣ ಬೋರಯ್ಯ, ಪಾಲಯ್ಯ, ಪಾಪಣ್ಣ, ಮೂರ್ತಿ, ದೀಪು, ಕಾಟಿಹಳ್ಳಿ ಕರಿಯಣ್ಣ, ಸಣ್ಣ ಹನುಮಂತಸ್ವಾಮಿ ಮತ್ತಿತರರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:BachchaboranahattiChitradurgaMadara Channaiah SriMasa NayakMincheri YatraTribalಚಿತ್ರದುರ್ಗಬಚ್ಚಬೋರನಹಟ್ಟಿಬುಡಕಟ್ಟುಮಾದಾರ ಚನ್ನಯ್ಯ ಶ್ರೀಮಿಂಚೇರಿ ಯಾತ್ರೆಮ್ಯಾಸ ನಾಯಕರು
Share This Article
Facebook Email Print
Previous Article ಕೋಟೆನಾಡಿನಲ್ಲಿ ವೈಕುಂಠ ಏಕಾದಶಿ ಸಂಭ್ರಮ; ಮೊಳಗಿದ ಸಪ್ತಗಿರಿವಾಸ ಶ್ರೀನಿವಾಸ ನಾಮಸ್ಮರಣೆ
Next Article FIR ರೈಲು ಡಿಕ್ಕಿಯಾಗಿ ವ್ಯಕ್ತಿ ಸಾವು
Leave a Comment

Leave a Reply Cancel reply

Your email address will not be published. Required fields are marked *

ಪ್ರತಿಭೋತ್ಸವ ಹಾಗೂ ಸನ್ಮಾನ ಸಮಾರಂಭ
ಪರಿಶ್ರಮ, ತಾಳ್ಮೆಯಿದ್ದರೆ ಯಾವುದೇ ಕ್ಷೇತ್ರದಲ್ಲಿ ಯಶಸ್ಸು | ಸಚಿವ ಟಿ.ರಘುಮೂರ್ತಿ
ಮುಖ್ಯ ಸುದ್ದಿ
ರೈಲ್ವೆ ಮೇಲ್ಸೇತುವೆ ಕಾಮಗಾರಿಗೆ ಭೂಮಿಪೂಜೆ
9 ತಿಂಗಳಲ್ಲಿ ಜಿಲ್ಲೆಯ 33 ರೈಲ್ವೆ ಮೇಲ್ಸೇತುವೆ, ಕೆಳಸೇತುವೆ ಕಾಮಗಾರಿ ಪೂರ್ಣ | ಸಚಿವ ವಿ.ಸೋಮಣ್ಣ
ಮುಖ್ಯ ಸುದ್ದಿ
ರಂಗಯ್ಯನ ಬಾಗಿಲುಗೆ ಗುಲಾಬಿ ಬಣ್ಣದ ದೀಪಾಲಂಕಾರ
ಗೃಹಲಕ್ಷ್ಮಿ ಎಫೆಕ್ಟ್ | ಗುಲಾಬಿ ಬಣ್ಣಕ್ಕೆ ತಿರುಗಿದ ರಂಗಯ್ಯನ ಬಾಗಿಲು 
ಮುಖ್ಯ ಸುದ್ದಿ
Vastu Remedies
ನಿಮ್ಮ ಸಂಬಳ ಬಂದ ಕೂಡಲೇ ಖಾಲಿಯಾಗುತ್ತದೆಯೇ? ಹಣ ಮನೆಯಲ್ಲಿ ಉಳಿಯಲು ಈ ವಾಸ್ತು ಪರಿಹಾರಗಳನ್ನು ಪ್ರಯತ್ನಿಸಿ
Life Style
© Chitradurga News 2025 | Powered By Karnatakabest.com
Loading Comments...
Welcome Back!

Sign in to your account

Username or Email Address
Password

Lost your password?

Not a member? Sign Up