
CHITRADURGA NEWS | 17 DECEMBER 2024
ಚಿತ್ರದುರ್ಗ: ಲಾರಿ ಎತ್ತಿನ ಗಾಡಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು, ಭೀಕರ ಅಪಘಾತದಲ್ಲಿ ಎರಡು ಎತ್ತುಗಳು ಹಾಗೂ ಓರ್ವ ಮಹಿಳೆ ಮೃತಪಟ್ಟಿದ್ದಾರೆ.
ಚಳ್ಳಕೆರೆ ಹಿರಿಯೂರು ನಡುವಿನ ಹೆದ್ದಾರಿಯಲ್ಲಿ ಸಾಣಿಕೆರೆ ಬಳಿ ವೇದಾ ಶಾಲೆ ಬಳಿ ಈ ಭೀಕರ ಅಪಘಾತ ನಡೆದಿದೆ.
ಇದನ್ನೂ ಓದಿ: ರೈಲಿಗೆ ಸಿಲುಕಿ ವ್ಯಕ್ತಿ ಸಾವು | ಗುರುತು ಪತ್ತೆಗೆ ಮನವಿ
ಘಟನೆಯಲ್ಲಿ ಎಂಜಮ್ಮ(45) ಸ್ಥಳದಲ್ಲೇ ಮೃತಪಟ್ಟಿದ್ದು, ಪತಿ ಗಂಭಿರವಾಗಿ ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಎರಡು ಎತ್ತುಗಳು ಮೃತಪಟ್ಟಿವೆ.
ಸಾಣಿಕೆರೆ ಗೊಲ್ಲರಹಟ್ಟಿಯ ದಂಪತಿಗಳು ಜಮೀನಿನಿಂದ ಎತ್ತಿನ ಗಾಡಿಯಲ್ಲಿ ಮನೆಗೆ ಮರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.
ಇದನ್ನೂ ಓದಿ: ಅಮೇರಿಕಾ ಯುವತಿ ಜೊತೆ ಸಪ್ತಪದಿ ತುಳಿದ ಕೋಟೆನಾಡಿನ ಯುವಕ
ಲಾರಿ ವೇಗವಾಗಿ ಬಂದು ಹೊಡೆದ ಹೊಡೆತಕ್ಕೆ ಎತ್ತಿನ ಗಾಡಿ ಪುಡಿ ಪುಡಿಯಾಗಿದೆ. ಘಟನಾ ಸ್ಥಳಕ್ಕೆ ಸಾಣಿಕೆರೆ ಹಾಗೂ ಚಳ್ಳಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ದೂರು ದಾಖಲಿಸಿಕೊಂಡಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

