CHITRADURGA NEWS | 03 AUGUST 2024
ಹೊಳಲ್ಕೆರೆ: ವಿಕಲಚೇತನ ವ್ಯಕ್ತಿಯೊಬ್ಬರು ರಸ್ತೆ ದಾಟುತ್ತಿದ್ದಾಗ ಅತೀ ವೇಗವಾಗಿ ಬಂದ ಲಾರಿ ಡಿಕ್ಕಿಯಾಗಿದ್ದು, ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ ಅಮಾನವೀಯ ಘಟನೆ ನಡೆದಿದೆ.
ಹೊಳಲ್ಕೆರೆ ತಾಲೂಕಿನ ಟಿ.ನುಲೇನೂರು ಗೇಟ್ ಬಳಿ ಈ ಅಪಘಾತ ನಡೆದಿದ್ದು, ಅಪಘಾತದ ಭೀಕರ ದೃಶ್ಯ ಸಿ.ಸಿ.ಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಇದನ್ನೂ ಓದಿ: ಕಾರು ಅಪಘಾತ | ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸಾವು
ಹೊಳಲ್ಕೆರೆ ತಾಲೂಕು ತಿರುಮಲಾಪುರದ ನಿವಾಸಿ 52 ವರ್ಷದ ಮಲ್ಲಿಕಾರ್ಜುನ್ ಅಪಘಾತದಲ್ಲಿ ಮೃತಪಟ್ಟ ದುರ್ದೈವಿ.
ವಿಕಲಚೇತನರಾಗಿದ್ದ ಮಲ್ಲಿಕಾರ್ಜುನ್, ಇಲ್ಲಿ ಹಾದು ಹೋಗಿರುವ ರಾಷ್ಟಿçÃಯ ಹೆದ್ದಾರಿಯನ್ನು ಕೋಲಿನ ಆಸರೆಯಿಂದ ಕುಂಟುತ್ತಾ ದಾಟಲು ಬಂದಿದ್ದಾರೆ. ಈ ಕ್ಷಣಕ್ಕೆ ವೇಗವಾಗಿ ಬಂದ ಲಾರಿಯೊಂದು ಮಲ್ಲಿಕಾರ್ಜುನ್ ಮೇಲೆ ಹರಿದಿದೆ.
ಇದನ್ನೂ ಓದಿ: ಜವನಗೊಂಡನಹಳ್ಳಿ ಪಿಡಿಓ ಸಿ.ಈಶ್ವರ್ ಅಮಾನತು | ಜಿಪಂ ಸಿಇಓ ಎಸ್.ಜೆ.ಸೋಮಶೇಖರ್ ಆದೇಶ
ಲಾರಿ ಕಣ್ಣೆದುರೇ ಎದೆಯ ಮೇಲೆ ಬಂದರೂ ಅತ್ತಿತ್ತ ಓಡಲು ಸಾಧ್ಯವಾಗದೆ ಮಲ್ಲಿಕಾರ್ಜುನ್ ನಿಂತಲ್ಲೇ ನಿಂತುಬಿಡುತ್ತಾರೆ, ಕ್ಷಣಮಾತ್ರದಲ್ಲಿ ಲಾರಿ ಮೈಮೇಲೆ ಹರಿದು ಜೀವ ತೆಗೆದಿದೆ.
ಅಪಘಾತದ ಬಳಿಕ ಲಾರಿ ನಿಲ್ಲಿಸಿದೆ ಚಾಲಕ ಪರಾರಿಯಾಗಿದ್ದು, ಚಿತ್ರಹಳ್ಳಿ ಪೊಲೀಸ್ ಠಾಣೆ ಪಿಎಸ್ಐ ಕಾಂತರಾಜ್ ಲಾರಿ ಪತ್ತೆ ಮಾಡಿದ್ದಾರೆ. ಈ ಬಗ್ಗೆ ಚಿತ್ರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
