By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ವಿಧಾನ ಪರಿಷತ್ತಿನಲ್ಲಿ ಬಹುಮತ ಬೇಕು | ಡಿ.ಟಿ.ಶ್ರೀನಿವಾಸ್ ಗೆಲ್ಲಿಸಲು ಪಣ ತೊಡಿ | ಮಯೂರ್ ಜಯಕುಮಾರ್
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ವಿಧಾನ ಪರಿಷತ್ತಿನಲ್ಲಿ ಬಹುಮತ ಬೇಕು | ಡಿ.ಟಿ.ಶ್ರೀನಿವಾಸ್ ಗೆಲ್ಲಿಸಲು ಪಣ ತೊಡಿ | ಮಯೂರ್ ಜಯಕುಮಾರ್

ಮುಖ್ಯ ಸುದ್ದಿ

ವಿಧಾನ ಪರಿಷತ್ತಿನಲ್ಲಿ ಬಹುಮತ ಬೇಕು | ಡಿ.ಟಿ.ಶ್ರೀನಿವಾಸ್ ಗೆಲ್ಲಿಸಲು ಪಣ ತೊಡಿ | ಮಯೂರ್ ಜಯಕುಮಾರ್

News Desk Chitradurga News
Last updated: 17 May 2024 19:20
News Desk Chitradurga News
1 year ago
Share
ಪೂರ್ವಬಾವಿ ಸಭೆಯಲ್ಲಿ ಎ.ಐ.ಸಿ.ಸಿ. ಕಾರ್ಯದರ್ಶಿ ಮಯೂರ್ ಜಯಕುಮಾರ್
ಪೂರ್ವಬಾವಿ ಸಭೆಯಲ್ಲಿ ಎ.ಐ.ಸಿ.ಸಿ. ಕಾರ್ಯದರ್ಶಿ ಮಯೂರ್ ಜಯಕುಮಾರ್
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 17 MAY 2024

ಚಿತ್ರದುರ್ಗ: ವಿಧಾನ ಪರಿಷತ್ತಿನಲ್ಲಿ ಬಹುಮತ ಬೇಕಾಗಿರುವುದರಿಂದ ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್‍ ಅವರನ್ನು ಗೆಲ್ಲಿಸಲು ಪಣ ತೊಡಬೇಕು ಎಂದು ಎ.ಐ.ಸಿ.ಸಿ. ಕಾರ್ಯದರ್ಶಿ ಮಯೂರ್ ಜಯಕುಮಾರ್ ಪದಾಧಿಕಾರಿಗಳಿಗೆ ಹೇಳಿದರು.

ಇದನ್ನೂ ಓದಿ: ಭರವಸೆ ಮೂಡಿಸಿದ ಮಳೆರಾಯ | ಚಿಕ್ಕಜಾಜೂರು ಭಾಗದಲ್ಲಿ ಹದ ಮಳೆ

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಅಂಗವಾಗಿ ನಡೆದ ಪೂರ್ವಬಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು.

ಮುಂದಿನ ತಿಂಗಳು ನಡೆಯಲಿರುವ ಆಗ್ನೇಯ ಶಿಕ್ಷಕರ ಪದವೀಧರ ಕ್ಷೇತ್ರ ವಿಧಾನಪರಿಷತ್ ಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ನಮ್ಮ ಅಭ್ಯರ್ಥಿ ಸೋಲಬಾರದು.

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇವರುಗಳು ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರುಗಳಿಗೆ ಖಡಕ್ ಎಚ್ಚರಿಕೆ ನೀಡಿರುವುದರಿಂದ ಈ ಚುನಾವಣೆಯನ್ನು ನಿರ್ಲಕ್ಷಿಸಬಾರದು. ಮತದಾನಕ್ಕೆ ಸಮಯ ತುಂಬಾ ಕಡಿಮೆ ಇರುವುದರಿಂದ ಈಗಿನಿಂದಲೇ ಶಿಕ್ಷಕರುಗಳ ಬಳಿ ಹೋಗಿ ಅಭ್ಯರ್ಥಿ ಪರ ಮತ ಯಾಚಿಸುವಂತೆ ಮನವಿ ಮಾಡಿದರು.

ಇದನ್ನೂ ಓದಿ: ಚಿತ್ರದುರ್ಗ ಸೇರಿ ಹಲವು ಜಿಲ್ಲೆಗಳಿಗೆ ಭಾರೀ ಮಳೆ ಮುನ್ಸೂಚನೆ | ಮೇ.18 ರಿಂದ 22 ರವರೆಗೆ ಧಾರಾಕಾರ ಮಳೆ

ಜಿಲ್ಲಾ ಮಟ್ಟದಲ್ಲಿ ವಾರ್ ರೂಂ ತೆರೆದು ತಾಲ್ಲೂಕು ಮಟ್ಟದಲ್ಲಿ ಸಮಿತಿ ರಚಿಸಿ ಎಲ್ಲಾ ಬ್ಲಾಕ್ ಅಧ್ಯಕ್ಷರುಗಳ ಜೊತೆ ಚರ್ಚಿಸಿ ಪ್ರತಿ ನಿತ್ಯವು ನನಗೆ ವರದಿ ನೀಡಬೇಕೆಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಿಗೆ ಮಯೂರ್ ಜಯಕುಮಾರ್ ಸೂಚಿಸಿದರು.

ಕೆ.ಪಿ.ಸಿ.ಸಿ. ಉಸ್ತುವಾರಿ ಮುರಳಿಧರ ಹಾಲಪ್ಪ ಮಾತನಾಡಿ, ಪಾರ್ಲಿಮೆಂಟ್ ಹಾಗೂ ಲೋಕಸಭೆ ಚುನಾವಣೆಯನ್ನು ಹೇಗೆ ಸಮರ್ಥವಾಗಿ ನಿಭಾಯಿಸಿದೆವೋ ಅದಕ್ಕಿಂತಲೂ ಹೆಚ್ಚು ಮುತುವರ್ಜಿಯನ್ನು ವಿಧಾನಪರಿಷತ್ ಚುನಾವಣೆಯಲ್ಲಿ ವಹಿಸಬೇಕಿದೆ.

ಚಿತ್ರದುರ್ಗ ಜಿಲ್ಲೆಯಲ್ಲಿ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್‍ರವರಿಗೆ ಶೇ.80 ಕ್ಕಿಂತ ಹೆಚ್ಚಿನ ಮತಗಳು ಸಿಗಬೇಕು. ಪದವೀಧರ ಶಿಕ್ಷಕರುಗಳನ್ನು ಸಂಪರ್ಕಿಸಿ ಮತ ಕೇಳಿ. ವಿಧಾನಸಭೆಯಲ್ಲಿ ಯಾವುದೇ ಬಿಲ್ ಪಾಸ್ ಆಗಬೇಕೆಂದರೆ ವಿಧಾನಪರಿಷತ್‍ನಲ್ಲಿ ಬಹುಮತವಿರಬೇಕು. ಹಾಗಾಗಿ ಈ ಚುನಾವಣೆ ಅತ್ಯಂತ ಮಹತ್ವವಿದೆ ಎಂದರು.

ಇದನ್ನೂ ಓದಿ: ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರ ಚುನಾವಣೆ | ಇಲ್ಲಿದೆ ನೋಡಿ ಮತದಾನ ಕೇಂದ್ರಗಳ ಪಟ್ಟಿ

ಕಾಂಗ್ರೆಸ್‍ಗೆ ತ್ಯಾಗ ಬಲಿದಾನಗಳ ಇತಿಹಾಸವಿದೆ. ಎಸ್.ನಿಜಲಿಂಗಪ್ಪ, ಕೆಂಗಲ್ ಹನುಮಂತಯ್ಯ ಇವರುಗಳು ಸ್ವಾತಂತ್ರಕ್ಕಾಗಿ ಹೋರಾಡಿ ಜೈಲಿಗೆ ಹೋಗಿ ಬಂದಿದ್ದಾರೆ. ಇಂತಹ ನಾಯಕರುಗಳನ್ನು ಸ್ಮರಿಸಿಕೊಳ್ಳಬೇಕು ಎಂದು ತಿಳಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಮಾತನಾಡಿ, ರಾಜ್ಯದಲ್ಲಿ ನಮ್ಮ ಪಕ್ಷ ಅಧಿಕಾರದಲ್ಲಿರುವುದರಿಂದ ಪದಾಧಿಕಾರಿಗಳು, ಕಾರ್ಯಕರ್ತರು, ಶಾಸಕರು, ಮುಖಂಡರುಗಳು ವಿಧಾನಪರಿಷತ್ ಚುನಾವಣೆಯಲ್ಲಿ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್‍ರವರನ್ನು ಗೆಲ್ಲಿಸಿಕೊಳ್ಳಲು ಇದೊಂದು ಒಳ್ಳೆಯ ಅವಕಾಶ, ವಿಧಾನಸಭೆ ಹಾಗೂ ಪಾರ್ಲಿಮೆಂಟ್ ಚುನಾವಣೆಯಲ್ಲಿ ಹೇಗೆ ಉತ್ಸಾಹದಿಂದ ಅಭ್ಯರ್ಥಿಗಳ ಪರ ಕೆಲಸ ಮಾಡಿದಿರೋ ಅದೇ ರೀತಿ ವಿಧಾನಪರಿಷತ್ ಚುನಾವಣೆಯಲ್ಲಿಯೂ ಲವಲವಿಕೆಯಿಂದ ಗೆಲುವಿಗೆ ಶ್ರಮಿಸುವಂತೆ ಹೇಳಿದರು.

ಇದನ್ನೂ ಓದಿ: ಮೊರಾರ್ಜಿ ದೇಸಾಯಿ ವಸತಿ ಕಾಲೇಜುನಲ್ಲಿ 1sಣ ಪಿಯುಸಿಗೆ ಉಚಿತ ಪ್ರವೇಶ | ಅರ್ಜಿ ಆಹ್ವಾನ

ಮಾಜಿ ಮಂತ್ರಿ ಹೆಚ್.ಆಂಜನೇಯ ಮಾತನಾಡಿ, ಸಮರ್ಥ ಅಭ್ಯರ್ಥಿಯನ್ನು ಪಕ್ಷ ಚುನಾವಣೆಗಿಳಿಸಿದೆ. ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಹೋಗಿ ಅಭ್ಯರ್ಥಿ ಪರ ಮತ ಕೇಳಿ. ಶಿಕ್ಷಕರುಗಳಿಗೆ ಹೆಚ್ಚು ಸೌಲಭ್ಯಗಳನ್ನು ಕೊಟ್ಟಿರುವುದು ನಮ್ಮ ಪಕ್ಷ ಎನ್ನುವುದನ್ನು ಮನವರಿಕೆ ಮಾಡಿಕೊಡಿ. ಪ್ರಣಾಳಿಕೆಯಲ್ಲಿ ಹೇಳಿದ್ದನ್ನು ಚಾಚು ತಪ್ಪದೆ ಪಾಲಿಸಿದ್ದೇವೆ. ಹಾಗಾಗಿ ಈ ಚುನಾವಣೆಯನ್ನು ಗೆಲ್ಲಲೇಬೇಕು ಎಂದು ಪದಾಧಿಕಾರಿಗಳಿಗೆ ತಿಳಿಸಿದರು.

ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಮಾತನಾಡಿ, ಐದು ಜಿಲ್ಲೆಗಳಿಂದ 11222 ಹಳ್ಳಿಗಳಿವೆ. ಹಿಂದಿನ ಸಮಸ್ಯೆಗಳೆ ಬೇರೆ, ಈಗಿರುವ ಸಮಸ್ಯೆಗಳೆ ಬೇರೆ. ವೇತನದಲ್ಲಿ ತಾರತಮ್ಯ, ಬಡ್ತಿ, ಹೀಗೆ ಹತ್ತು ಹಲವಾರು ಬೇಡಿಕೆಗಳು ಈಡೇರಬೇಕಿದೆ. ಬಿ.ಎಸ್.ಯಡಿಯೂರಪ್ಪ, ಕುಮಾರಸ್ವಾಮಿ ಇವರುಗಳ ಮೈತ್ರಿ ಸರ್ಕಾರವಿದ್ದಾಗ ಎನ್.ಪಿ.ಎಸ್. ಜಾರಿಗೆ ಬಂತು. ಖಾಸಗಿ, ಅನುದಾನಿತ ಸಂಸ್ಥೆ, ಸರ್ಕಾರಿ ಶಾಲೆಗಳು, ಪಿ.ಯು.ಸಿ. ಪದವಿ, ಸ್ನಾತಕೋತ್ತರ, ಡಿಪ್ಲಮೋ, ಐ.ಟಿ.ಐ. ಕಾಲೇಜುಗಳಿಗೆ ಹೋಗಿ ನನ್ನ ಪರ ಮತ ಕೇಳಿ ಎಂದು ಪದಾಧಿಕಾರಿಗಳಲ್ಲಿ ವಿನಂತಿಸಿದರು.

ಇದನ್ನೂ ಓದಿ: ನಿಮ್ಮ ಮನೆಗೆ ಕೊರಿಯರ್‌ ಬಂದರೆ ಎಚ್ಚರ | ಸ್ವೀಕರಿಸುವ ಮುನ್ನ ಯೋಚಿಸಿ

ಸಭೆಯಲ್ಲಿ ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿಗಳಾದ ನೇರ್ಲಗುಂಟೆ ರಾಮಪ್ಪ, ಹುಸೇನ್, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ, ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್, ಕೆ.ಪಿ.ಸಿ.ಸಿ. ಅಸಂಘಟಿತ ಕಾರ್ಮಿಕ ವಿಭಾಗದ ರಾಜ್ಯಾಧ್ಯಕ್ಷ ಜಿ.ಎಸ್.ಮಂಜುನಾಥ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಕಾರ್ಯಾಧ್ಯಕ್ಷ ಕೆ.ಎಂ.ಹಾಲಸ್ವಾಮಿ, ಪ್ರಧಾನ ಕಾರ್ಯದರ್ಶಿಗಳಾದ ಕೆ.ಪಿ.ಸಂಪತ್‍ಕುಮಾರ್, ಡಿ.ಎನ್.ಮೈಲಾರಪ್ಪ ಸೇರಿದಂತೆ ಕಾರ್ಯದರ್ಶಿಗಳು, ಪದಾಧಿಕಾರಿಗಳು ಇದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:Chitradurga newsDT SrinivasElectionKannada Latest NewsMayur JayakumarSouth East Teachers Constituencythe majorityಆಗ್ನೇಯ ಶಿಕ್ಷಕರ ಕ್ಷೇತ್ರಕನ್ನಡ ಲೇಟೆಸ್ಟ್ ಸುದ್ದಿಚಿತ್ರದುರ್ಗ ಸುದ್ದಿಚುನಾವಣೆಡಿ.ಟಿ.ಶ್ರೀನಿವಾಸ್ಬಹುಮತಮಯೂರ್ ಜಯಕುಮಾರ್
Share This Article
Facebook Email Print
Previous Article Rain ಭರವಸೆ ಮೂಡಿಸಿದ ಮಳೆರಾಯ | ಚಿಕ್ಕಜಾಜೂರು ಭಾಗದಲ್ಲಿ ಹದ ಮಳೆ
Next Article ಚಿತ್ರದುರ್ಗದಲ್ಲಿ ಅರ್ಧ ಗಂಟೆಗೂ ಹೆಚ್ಚು ಹೊತ್ತು ಸುರಿದ ಮಳೆ ಚಿತ್ರದುರ್ಗದಲ್ಲಿ ಧಾರಾಕಾರ ಮಳೆ | ಅರ್ಧ ಗಂಟೆಗೂ ಹೆಚ್ಚು ಹೊತ್ತು ಸುರಿದ ಮಳೆ
Leave a Comment

Leave a Reply Cancel reply

Your email address will not be published. Required fields are marked *

Gavayi smaranothsava
ಶಾರದಮ್ಮ ರುದ್ರಪ್ಪ ಕಲ್ಯಾಣ ಮಂಟಪದಲ್ಲಿ ಗಾನಯೋಗಿಗಳ ಪುಣ್ಯ ಸ್ಮರಣೆ | ಸಾಧಕರಿಗೆ ಸನ್ಮಾನ
ಮುಖ್ಯ ಸುದ್ದಿ
ಮುರುಘಾಮಠದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾದ ಮೊದಲನೇ ಕಾರ್ಯಕಾರಿ ಸಭೆ | ಮಠಾಧೀಶರು ಸೇರಿದಂತೆ ಗಣ್ಯರು ಭಾಗೀ
ಮುಖ್ಯ ಸುದ್ದಿ
ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up