By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಅರ್ಜಿ ಅಹ್ವಾನ
    ವಿಕಲಚೇತನರ ರಾಷ್ಟ್ರ ಪ್ರಶಸ್ತಿ | ಅರ್ಜಿ ಆಹ್ವಾನ
    7 hours ago
    ವಸತಿ ಯೋಜನೆಗೆ ಅರ್ಜಿ ಆಹ್ವಾನ
    7 hours ago
    ಮುಖ್ಯಮಂತ್ರಿ ಸಿದ್ದರಾಮಯ್ಯ
    ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ | ಬಳಿಕ PRESS MEET | ಸಂವಿಧಾನವೇ ಧರ್ಮ | ಮತದಾರರೇ ದೇವರು ಎಂದು ಭಾವುಕ
    9 hours ago
    ಕಾರಾಗೃಹ ಇಲಾಖೆಯಲ್ಲಿ ಸೈನಿಕರ ನೇಮಕಾತಿ | ಮೇ.29 ರಿಂದ ನೇರ ಸಂದರ್ಶನ
    10 hours ago
    ಎಂ.ಆರ್.ಪಿಗಳಿಗೆ TRANSITION ಮಾಡ್ಯೂಲ್ ತರಬೇತಿ ಕಾರ್ಯಾಗಾರ
    ಡಯಟ್ ನಲ್ಲಿ ತಾಲೂಕು ಹಂತದ ಎಂ.ಆರ್.ಪಿಗಳಿಗೆ TRANSITION ಮಾಡ್ಯೂಲ್ ತರಬೇತಿ ಕಾರ್ಯಾಗಾರ  
    12 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    1 day ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    5 days ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    1 month ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    1 month ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    2 months ago
  • ತಾಲೂಕು
    ತಾಲೂಕುShow More
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    4 days ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    6 days ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    2 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    3 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 20 ಮೇ | ಚನ್ನಗಿರಿ ಸೇರಿ ರಾಜ್ಯದ ಅಡಿಕೆ ರೇಟ್‌
    1 week ago
    arecanut price list
    ಅಡಿಕೆ ಧಾರಣೆ | 19 ಮೇ | ಭೀಮಸಮುದ್ರ ಸೇರಿ ವಿವಿಧ ಮಾರುಕಟ್ಟೆಗಳ ರೇಟ್‌
    1 week ago
    arecanut price list
    ಅಡಿಕೆ ಧಾರಣೆ | 16 ಮೇ | ರಾಜ್ಯದ ಅಡಿಕೆ ಮಾರುಕಟ್ಟೆಗಳ ನೋಟ
    2 weeks ago
    arecanut price list
    ಅಡಿಕೆ ಧಾರಣೆ | 6 ಮೇ | ರಾಶಿ ಅಡಿಕೆ ಬೆಲೆ ಏರಿಕೆ
    3 weeks ago
    arecanut price list
    ಅಡಿಕೆ ಧಾರಣೆ | 30 ಏಪ್ರಿಲ್‌ | ಇಂದಿನ ಅಡಿಕೆ ರೇಟ್‌
    4 weeks ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಮೇ.28 | ಕೈಗೊಂಡ ಕೆಲಸಗಳು ನಿಧಾನ, ಆಧ್ಯಾತ್ಮಿಕ ಚಿಂತನೆ ಹೆಚ್ಚು
    17 hours ago
    today bhavishya
    ದಿನ ಭವಿಷ್ಯ | ಮೇ. 27 | ದೂರ ಪ್ರಯಾಣದ ಸೂಚನೆ, ಆರೋಗ್ಯದಲ್ಲಿ ಎಚ್ಚರ
    2 days ago
    today bhavishya
    ದಿನ ಭವಿಷ್ಯ | ಮೇ. 26 | ಹಠಾತ್ ಆರ್ಥಿಕ ಲಾಭ, ವೃತ್ತಿಪರ ವ್ಯವಹಾರಗಳು ಅಭಿವೃದ್ಧಿ
    3 days ago
    today bhavishya
    ದಿನ ಭವಿಷ್ಯ | ಮೇ. 25 | ಉದ್ಯೋಗಗಳಿಗೆ ಅನುಕೂಲಕರ ವಾತಾವರಣ, ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು
    4 days ago
    today bhavishya
    ದಿನ ಭವಿಷ್ಯ | ಮೇ. 24 | ಹಠಾತ್ ಪ್ರಯಾಣದ ಸೂಚನೆ, ಅರೋಗ್ಯದಲ್ಲಿ ಎಚ್ಚರ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.27 | ರಾಗಿ, ಶೇಂಗಾ ರೇಟ್..
    1 day ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.25 | ಮೆಕ್ಕೆಜೋಳ, ರಾಗಿ ರೇಟ್..
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.23 | ಹತ್ತಿ ರೇಟ್….
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.22| ಮೆಕ್ಕೆಜೋಳ, ಶೇಂಗಾ ರೇಟ್..
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    4 weeks ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    2 months ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 days ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    3 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    4 days ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    6 days ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    2 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    3 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    3 weeks ago
  • Life Style
    Life StyleShow More
    Indoor plants
    ಒಳಾಂಗಣ ಸಸ್ಯಗಳು ಸೊಳ್ಳೆಗಳ ಹಾವಳಿಗೆ ಕಾರಣವಾಗಬಹುದು ಎಚ್ಚರ
    16 hours ago
    microwave
    ಅಪ್ಪಿತಪ್ಪಿಯೂ ಈ ವಸ್ತುಗಳನ್ನು ಮೈಕ್ರೊವೇವ್‌ನಲ್ಲಿ ಬಿಸಿ ಮಾಡಬೇಡಿ
    17 hours ago
    fruit and drinking coffee
    ಹಣ್ಣು ತಿನ್ನುವುದು ಮತ್ತು ಕಾಫಿ ಕುಡಿಯುವುದರಿಂದ ವಯಸ್ಸಾಗುವುದು ನಿಧಾನವಾಗುತ್ತದೆಯಂತೆ; ಅಧ್ಯಯನದಲ್ಲಿ ಸಾಬೀತು
    2 days ago
    oily skin
    ಎಣ್ಣೆಯುಕ್ತ ಚರ್ಮ ಹೊಂದಿರುವವರು ಬೇಸಿಗೆಯಲ್ಲಿ ಈ ಆಹಾರಗಳನ್ನು ತಪ್ಪಿಸಿ
    2 days ago
    sweating good or bad
    ಬೆವರು ಸುರಿಯುವುದು ನಿಮ್ಮ ಚರ್ಮಕ್ಕೆ ಒಳ್ಳೆಯದೇ ಅಥವಾ ಕೆಟ್ಟದೇ? ತಿಳಿಯಿರಿ
    3 days ago
Reading: 114 ಕೋಟಿ ವೆಚ್ಚದಲ್ಲಿ 180 ಹಾಸಿಗೆಗಳ ಸುಸಜ್ಜಿತ ಹೊಸ ಆಸ್ಪತ್ರೆ | ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ರವೀಂದ್ರ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

114 ಕೋಟಿ ವೆಚ್ಚದಲ್ಲಿ 180 ಹಾಸಿಗೆಗಳ ಸುಸಜ್ಜಿತ ಹೊಸ ಆಸ್ಪತ್ರೆ | ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ರವೀಂದ್ರ

News Desk Chitradurga News
Last updated: 6 April 2026 19:12
News Desk Chitradurga News
2 months ago
Share
ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ರವೀಂದ್ರ
ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ರವೀಂದ್ರ
SHARE

CHITRADURGA NEWS | 06 APRIL 2026

ಚಿತ್ರದುರ್ಗ: ಜಿಲ್ಲಾಸ್ಪತ್ರೆ ಆವರಣದಲ್ಲಿ ರೂ.114 ಕೋಟಿ ವೆಚ್ಚದಲ್ಲಿ 180 ಹಾಸಿಗೆಗಳ ಸುಸಜ್ಜಿತ ಹೊಸ ಆಸ್ಪತ್ರೆ ಕಟ್ಟಡ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಇದರೊಂದಿಗೆ ಎಚ್‍ಡಿಎಫ್‍ಸಿ ಬ್ಯಾಂಕ್ ಸಿಎಸ್‍ಆರ್ ನಿಧಿಯಡಿ ಬರೋಬ್ಬರಿ ರೂ. 1.80 ಕೋಟಿ ಮೌಲ್ಯದ ವೈದ್ಯಕೀಯ ಉಪಕರಣಗಳನ್ನು ದೇಣಿಗೆ ನೀಡಿದ್ದು, ಸಾರ್ವಜನಿಕರಿಗೆ ಅತ್ಯಾಧುನಿಕ ವೈದ್ಯಕೀಯ ಸೇವೆಗಳನ್ನು ಒದಗಿಸಲು ಜಿಲ್ಲಾಸ್ಪತ್ರೆ ಸನ್ನದ್ಧವಾಗಿದೆ ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಎಸ್.ಪಿ. ರವೀಂದ್ರ ಹೇಳಿದರು.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಏಪ್ರಿಲ್ 06 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…

ನಗರದ ಜಿಲ್ಲಾಸ್ಪತ್ರೆಯ ಬಿ.ಸಿ. ರಾಯ್ ಸಭಾಂಗಣದಲ್ಲಿ ಸೋಮವಾರ ಜಿಲ್ಲಾಸ್ಪತ್ರೆಯಲ್ಲಿ ಕೈಗೊಳ್ಳಲಾದ ಅಭಿವೃದ್ಧಿ ಕಾಮಗಾರಿಗಳು ಹಾಗೂ ಸಾರ್ವಜನಿಕರಿಗೆ ನೀಡಿರುವ ಸೇವೆಗಳ ಕುರಿತು ಪತ್ರಿಕಾಗೋಷ್ಠಿ ನಡೆಸಿ ಅವರು ಮಾತನಾಡಿದರು.

ಆಸ್ಪತ್ರೆಯ ಮೂಲಸೌಕರ್ಯ ವೃದ್ಧಿಗೆ ವಿಶೇಷ ಒತ್ತು ನೀಡುತ್ತಿದ್ದು, ಜಿಲ್ಲಾಸ್ಪತ್ರೆಯ ಹಳೆಯ ತುರ್ತು ಚಿಕಿತ್ಸಾ ವಿಭಾಗ ತೆರವುಗೊಳಿಸಿ ಸುಮಾರು ರೂ. 114 ಕೋಟಿ ವೆಚ್ಚದಲ್ಲಿ 180 ಹಾಸಿಗೆಗಳ ಸುಸಜ್ಜಿತ ನೂತನ ಕಟ್ಟಡ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. 

ಇದರೊಂದಿಗೆ ರೂ. 5 ಕೋಟಿ ವೆಚ್ಚದ ‘ಕ್ರಿಟಿಕಲ್ ಕೇರ್ ಬ್ಲಾಕ್’ ಕಾಮಗಾರಿ ಅಂತಿಮ ಹಂತದಲ್ಲಿದ್ದು, ಮುಂದಿನ ಮೂರು ತಿಂಗಳಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗಲಿದೆ. ಬೆಂಗಳೂರಿನ ಜಯದೇವ ಆಸ್ಪತ್ರೆಯ ಮಾದರಿಯಲ್ಲಿಯೇ ರೂ. 1.05 ಕೋಟಿ ವೆಚ್ಚದಲ್ಲಿ ‘ಇಂಟಿಗ್ರೇಟೆಡ್ ಪಬ್ಲಿಕ್ ಹೆಲ್ತ್ ಲ್ಯಾಬೊರೇಟರಿ’ ಸ್ಥಾಪಿಸಲಾಗಿದ್ದು, ಶೀಘ್ರವೇ ಕಾರ್ಯಾರಂಭ ಮಾಡಲಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಮುರುಘಾ ಮಠದಲ್ಲಿ ಸಾಮೂಹಿಕ ಕಲ್ಯಾಣ ಮಹೋತ್ಸವ | 21 ಜೋಡಿಗಳು ದಾಂಪತ್ಯ ಜೀವನಕ್ಕೆ ಪಾದರ್ಪಣೆ 

ಎಚ್‍ಡಿಎಫ್‍ಸಿ ಬ್ಯಾಂಕ್ ಸಿ.ಎಸ್.ಆರ್ ನಿಧಿಯಡಿ 100 ಫೌಲರ್ಸ್ ಕಾಟ್‍ಗಳು, ಬೆಡ್ ಸೈಡ್ ಲಾಕರ್‍ಗಳು, ತಲಾ 10 ಸಂಖ್ಯೆಯ ಸಿ-ಪ್ಯಾಪ್ ಯಂತ್ರಗಳು, ಮಾನಿಟರ್‍ಗಳು, ಇಸಿಜಿ ಯಂತ್ರಗಳು, ಬೇಬಿ ವಾರ್ಮರ್ ಹಾಗೂ ಫೋಟೋಥೆರಪಿ ಹಾಗೂ ರೂ. 28 ಲಕ್ಷ ಮೌಲ್ಯದ ತಲಾ ಎರಡು ಅತ್ಯಾಧುನಿಕ ಅರಿವಳಿಕೆ ಯಂತ್ರಗಳನ್ನು ಜಿಲ್ಲಾಸ್ಪತ್ರೆಗೆ ನೀಡಿದೆ. ಶೀಘ್ರವೇ ಜನಪ್ರತಿನಿಧಿಗಳನ್ನು ಸಂಪರ್ಕಿಸಿ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸುವುದಾಗಿ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಎಸ್.ಪಿ. ರವೀಂದ್ರ ತಿಳಿಸಿದರು.

ಆಧುನಿಕ ಲ್ಯಾಬ್ ಹಾಗೂ ಸ್ಕ್ಯಾನಿಂಗ್ ಸೌಲಭ್ಯ: ರೂ.30 ಲಕ್ಷ ವೆಚ್ಚದಲ್ಲಿ ಅತ್ಯಾಧುನಿಕ ಲ್ಯಾಬ್ ಉಪಕರಣಗಳನ್ನು ಜಿಲ್ಲಾಸ್ಪತ್ರೆಯಲ್ಲಿ ಅಳವಡಿಸಲಾಗಿದ್ದು, ಲ್ಯಾಬ್‍ನಲ್ಲಿ ಒಂದೇ ಬಾರಿಗೆ 240 ರಿಂದ 400 ಟೆಸ್ಟ್‍ಗಳನ್ನು ನಡೆಸಬಹುದು. ಕಿಡ್ನಿ, ಲಿವರ್ ಹಾಗೂ ಹೃದಯ ಸಂಬಂಧಿ ಪರೀಕ್ಷೆಗಳ ವರದಿಗಳು ಇನ್ನೂ ಮುಂದೆ ಅತ್ಯಂತ ವೇಗವಾಗಿ ರೋಗಿಗಳಿಗೆ ತಲುಪಿಸಲಾಗುವುದು. 

ರೂ.50 ಲಕ್ಷ ವೆಚ್ಚದಲ್ಲಿ ಉದರದರ್ಶಕ (ಎಂಡೋಸ್ಕೋಪಿ) ಸಿಸ್ಟಮ್ ಅನ್ನು ಅಳವಡಿಸಲಾಗಿದೆ. ಇದು ಅನ್ನನಾಳ ಮತ್ತು ಗುದದ್ವಾರದ ಕ್ಯಾನ್ಸರ್ ಪತ್ತೆಗೆ ಸಹಕಾರಿಯಾಗಿದ್ದು, ಈಗಾಗಲೇ 112 ತಪಾಸಣೆಗಳನ್ನು ಮಾಡಲಾಗಿದೆ. ಸ್ತನ ಕ್ಯಾನ್ಸರ್ ಅನ್ನು ಆರಂಭಿಕ ಹಂತದಲ್ಲಿಯೇ ಪತ್ತೆಹಚ್ಚಲು ಮೆಮೊಗ್ರಫಿ ಸೌಲಭ್ಯವನ್ನು ಅಳವಡಿಸಲಾಗಿದೆ. ಹಲ್ಲಿನ ಚಿಕಿತ್ಸೆಗಾಗಿ 360 ಡಿಗ್ರಿಯಲ್ಲಿ ಚಿತ್ರೀಕರಿಸುವ ಅತ್ಯಾಧುನಿಕ ಒಪಿಜಿ ಎಕ್ಸ್-ರೇ ಯಂತ್ರವನ್ನು ರೂ.15 ಲಕ್ಷ ರೂಪಾಯಿ ವೆಚ್ಚದಲ್ಲಿ ಅಳವಡಿಸಲಾಗಿದ್ದು, ಹೊಸ ಡೆಂಟಲ್ ಚೇರ್‍ಗಳನ್ನೂ ಸಹ ಒದಗಿಸಲಾಗಿದೆ ಎಂದರು.

ಜಿಲ್ಲಾಸ್ಪತ್ರೆ ನವೀಕರಣ: 

ಜಿಲ್ಲಾಸ್ಪತ್ರೆಯ ಒಳಾಂಗಣ ಹಾಗೂ ಹೊರಾಂಗಣವನ್ನು ಸುಂದರಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ಸುಮಾರು 4 ಕೋಟಿ ರೂ. ವೆಚ್ಚದಲ್ಲಿ ಆಸ್ಪತ್ರೆಯ ನವೀಕರಣ ಕಾರ್ಯ ನಡೆಯುತ್ತಿದ್ದು, ವಾರ್ಡ್‍ಗಳಿಗೆ ಬಣ್ಣ ಬಳಿಯುವುದು, ಬ್ಲಡ್ ಬ್ಯಾಂಕ್ ನವೀಕರಣ ಹಾಗೂ ಒಪಿಡಿ ಬ್ಲಾಕ್ ಹೊರಗಡೆ ನೋಂದಣಿ ಕೌಂಟರ್ ಸ್ಥಾಪಿಸುವ ಕಾರ್ಯಗಳು ಪ್ರಗತಿಯಲ್ಲಿವೆ. 

ಇದನ್ನೂ ಓದಿ: ಲಿಖಿತಾ ಆತ್ಮಹತ್ಯೆ ತನಿಖೆ ನಡೆಸಿ ನ್ಯಾಯ ಕೊಡಿಸಲು ಎಬಿವಿಪಿ ಒತ್ತಾಯ

ಹೊರರೋಗಿ ವಿಭಾಗವನ್ನು ಸಂಪೂರ್ಣವಾಗಿ ನವೀಕರಿಸಲಾಗಿದ್ದು, ಸಿಎಸ್‍ಆರ್ ನಿಧಿಯಡಿ ರೂ.7 ಲಕ್ಷ ವೆಚ್ಚದಲ್ಲಿ 50 ರಿಂದ 100 ಜನ ಕುಳಿತುಕೊಳ್ಳಬಹುದಾದ ವಿಶಾಲವಾದ ತಂಗುದಾಣ ನಿರ್ಮಿಸಲಾಗಿದ್ದು, ಇದು ಮಳೆ ಮತ್ತು ಬೇಸಿಗೆ ಕಾಲದಲ್ಲಿ ರೋಗಿಗಳ ಸಂಬಂಧಿಕರಿಗೆ ವಿಶ್ರಾಂತಿ ಪಡೆಯಲು ಸಹಕಾರಿಯಾಗಿದೆ. ಇದರೊಂದಿಗೆ ಮೃತದೇಹಗಳನ್ನು ಸಂರಕ್ಷಿಸಿಡಲು ಸಂಸದರ ನಿಧಿಯಡಿ ರೂ. 10 ಲಕ್ಷ ವೆಚ್ಚದಲ್ಲಿ ಹೊಸದಾಗಿ ನಾಲ್ಕು ‘ಹೈ ಕೋಲ್ಡ್ ಬಾಕ್ಸ್’ಗಳನ್ನು ಅಳವಡಿಸಲಾಗಿದೆ. 

ಆಸ್ಪತ್ರೆಯ ಸ್ವಚ್ಛತೆಗೆ ಪೂರಕವಾಗಿ ಲಾಂಡ್ರಿ ವಿಭಾಗಕ್ಕೆ ಹೊಸದಾಗಿ ಒಂದು ಟಂಬಲ್ ಡ್ರೈಯರ್ ಹಾಗೂ ಮೂರು ಸೆಮಿ ಡ್ರೈಯರ್ ಯಂತ್ರಗಳನ್ನು ಅಳವಡಿಸಲಾಗಿದೆ. ಕೆಟ್ಟು ಹೋಗಿದ್ದ ಐರನ್ ಮೆಷಿನ್ ಅನ್ನು ಸಹ ದುರಸ್ತಿಗೊಳಿಸಿಲಾಗಿದೆ ಎಂದರು.

ತಾಯಿ ಮತ್ತು ಮಕ್ಕಳ ಆರೈಕೆಗೆ ವಿಶೇಷ ಒತ್ತು: 

ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಸುಸಜ್ಜಿತ ಹೆರಿಗೆ ಕೊಠಡಿ, ಆಪರೇಷನ್ ಥಿಯೇಟರ್, ನವಜಾತ ಶಿಶುಗಳ ನಿಗಾ ಘಟಕ ಹಾಗೂ ಹೈ-ರಿಸ್ಕ್ ಗರ್ಭಿಣಿಯರ ಆರೈಕೆಗಾಗಿ ವಿಶೇಷ ವಾರ್ಡ್‍ಗಳನ್ನು ಸಜ್ಜುಗೊಳಿಸಲಾಗಿದೆ. ಅಪೌಷ್ಟಿಕ ಮಕ್ಕಳ ಚಿಕಿತ್ಸೆಗಾಗಿ ಎನ್‍ಆರ್‍ಸಿ ಕೇಂದ್ರ ಹಾಗೂ ಮಕ್ಕಳಲ್ಲಿನ ಜನ್ಮಜಾತ ದೋಷಗಳನ್ನು ಆರಂಭಿಕ ಹಂತದಲ್ಲೇ ಗುರುತಿಸಿ ಚಿಕಿತ್ಸೆ ನೀಡಲು ಜಿಲ್ಲಾ ಮುಂಚಿತ ಹಸ್ತಕ್ಷೇಪ ಕೇಂದ್ರ (DEIC) ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿವೆ. 

ಇದನ್ನೂ ಓದಿ: ಚಳ್ಳಕೆರೆ | ಏ.8ರಂದು ರಾಣಿಕೆರೆ ಒತ್ತುವರಿ ತೆರವು ಕಾರ್ಯಾಚರಣೆ

3,060 ಮಕ್ಕಳಿಗೆ ಆರಂಭಿಕ ರೋಗನಿರ್ಣಯ ಮಾಡಲಾಗಿದೆ. ದೃಷ್ಟಿ ದೋಷ, ಶ್ರವಣ ದೋಷ ಹಾಗೂ ಬುದ್ಧಿಮಾಂದ್ಯತೆಯಂತಹ ಸಮಸ್ಯೆಗಳನ್ನು ಗುರುತಿಸಿ ಅವರನ್ನು ಮುಖ್ಯವಾಹಿನಿಗೆ ತರಲು ಶ್ರಮಿಸಲಾಗುತ್ತಿದೆ. ಅಪೌಷ್ಟಿಕತೆಯಿಂದ ಬಳಲುತ್ತಿದ್ದ 206 ಮಕ್ಕಳಿಗೆ ಚಿಕಿತ್ಸೆ ನೀಡಿ ಗುಣಪಡಿಸಲಾಗಿದೆ.

ಆಸ್ಪತ್ರೆಯಲ್ಲಿ ಲಭ್ಯವಿಲ್ಲದ ಸೂಪರ್ ಸ್ಪೆಷಾಲಿಟಿ ತಜ್ಞರನ್ನು ವಾರಕ್ಕೊಮ್ಮೆ ಕರೆಸಿ ಸಾರ್ವಜನಿಕರಿಗೆ ಉಚಿತ ಚಿಕಿತ್ಸೆ ನೀಡಲಾಗುತ್ತಿದೆ. ನರರೋಗ ತಜ್ಞರು ಪ್ರತಿ ಶುಕ್ರವಾರ, ಹೃದ್ರೋಗ ತಜ್ಞರು ಪ್ರತಿ ಗುರುವಾರ, ಮೂತ್ರಪಿಂಡ ತಜ್ಞರು ಪ್ರತಿ ಶನಿವಾರ ಹಾಗೂ ಮಕ್ಕಳ ಹೃದ್ರೋಗ ತಜ್ಞರು ಪ್ರತಿ ತಿಂಗಳ ಮೊದಲ ಬುಧವಾರದಂದು ಲಭ್ಯವಿರುತ್ತಾರೆ. 

ಅಲ್ಲದೆ, ಕ್ಯಾನ್ಸರ್ ತಜ್ಞರು ವಾರಕ್ಕೆ ಮೂರು ದಿನ ಲಭ್ಯವಿದ್ದು ಶಸ್ತ್ರ ಚಿಕಿತ್ಸೆ ಹಾಗೂ ಕೀಮೋಥೆರಪಿ ಸಲಹೆಗಳನ್ನು ನೀಡುತ್ತಿದ್ದಾರೆ. ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಸೇವೆ ನೀಡುವುದೇ ನಮ್ಮ ಪ್ರಮುಖ ಗುರಿ ಎಂದರು.

ವೈದ್ಯಕೀಯ ಕಾಲೇಜು ಸೇವೆ ಲಭ್ಯ:  

ಜಿಲ್ಲಾಸ್ಪತ್ರೆಯು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರವಾಗಿ ಮೇಲ್ದರ್ಜೆಗೇರಿರುವ ಹಿನ್ನೆಲೆ ಸಿಬ್ಬಂದಿ ಕೊರತೆ ನೀಗಿದೆ. ವಿವಿಧ ವಿಭಾಗಗಳಿಗೆ 30 ಹೊಸ ವೈದ್ಯರು, 30 ನುರಿತ ಶುಶ್ರೂಷಾಧಿಕಾರಿಗಳು ಹಾಗೂ 14 ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇದರಿಂದ ರೋಗಿಗಳಿಗೆ ಹೆಚ್ಚಿನ ಚಿಕಿತ್ಸಾ ಸೌಲಭ್ಯ ದೊರೆಯುತ್ತಿದೆ. 

ಇದನ್ನೂ ಓದಿ: ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ

ಒಂದೇ ಕೊಠಡಿಯಲ್ಲಿ ಮೂವರು ವೈದ್ಯರು ಏಕಕಾಲಕ್ಕೆ ರೋಗಿಗಳನ್ನು ಪರೀಕ್ಷಿಸಲು ಅನುಕೂಲವಾಗುವಂತೆ ಪಾರ್ಟಿಷನ್ ಮಾಡಲಾಗಿದ್ದು, ಟೈಲ್ಸ್ ಅಳವಡಿಸಿ ಸುಂದರಗೊಳಿಸಲಾಗಿದೆ. ಇದರಿಂದ ಜನರಲ್ ಸರ್ಜರಿ, ಆರ್ಥೋಪೆಡಿಕ್, ಚರ್ಮದ ವಿಭಾಗ, ಇಎನ್‍ಟಿ, ಫಿಸಿಯೋಥೆರಪಿ ಹಾಗೂ ಮೆದುಳು ಸಂಬಂಧಿ ವಿಭಾಗಗಳಲ್ಲಿ ರೋಗಿಗಳಿಗೆ ಶೀಘ್ರವಾಗಿ ಚಿಕಿತ್ಸೆ ದೊರೆಯಲಿದೆ ಎಂದರು.

ಕಳೆದ 2025-26ನೇ ಸಾಲಿನ ಅಂಕಿ-ಅಂಶಗಳ ಮಾಹಿತಿ ನೀಡಿದ ಜಿಲ್ಲಾ ಶಸ್ತ್ರಚಿಕಿತ್ಸಕರು, ಆಸ್ಪತ್ರೆಯಲ್ಲಿ 3,96,997 ಹೊರರೋಗಿಗಳು ಹಾಗೂ 49,682 ಒಳರೋಗಿಗಳು ಚಿಕಿತ್ಸೆ ಪಡೆದಿದ್ದಾರೆ. 11,343 ಎಂಆರ್‍ಐ ಮತ್ತು 6,632 ಸಿಟಿ ಸ್ಕ್ಯಾನ್ ಪರೀಕ್ಷೆಗಳನ್ನು ನಡೆಸಲಾಗಿದೆ. ಹೆರಿಗೆ ವಿಭಾಗದಲ್ಲಿ 1,734 ಸಹಜ ಹೆರಿಗೆ ಹಾಗೂ 4,225 ಸಿಸೇರಿಯನ್ ಶಸ್ತ್ರ ಚಿಕಿತ್ಸೆಗಳಾಗಿವೆ. 

ಇನ್ನುಳಿದಂತೆ 1,196 ಮೇಜರ್ ಸರ್ಜರಿ, 971 ಮೂಳೆ ಶಸ್ತ್ರಚಿಕಿತ್ಸೆ ಹಾಗೂ 1,944 ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆಗಳನ್ನು ಯಶಸ್ವಿಯಾಗಿ ಮಾಡಲಾಗಿದೆ. 64 ರಕ್ತದಾನ ಶಿಬಿರಗಳ ಮೂಲಕ 4,508 ಯೂನಿಟ್ ರಕ್ತ ಸಂಗ್ರಹಿಸಿ, 4,667 ಮಂದಿಗೆ ವಿತರಿಸಲಾಗಿದೆ. ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ 110 ರೋಗಿಗಳಿಗೆ ಕಳೆದ ಸಾಲಿನಲ್ಲಿ ಸುಮಾರು 10,619 ಸೈಕಲ್‍ಗಳಷ್ಟು ಡಯಾಲಿಸಿಸ್ ಚಿಕಿತ್ಸೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು

ಎಂಆರ್‍ಐ ಅಥವಾ ಸ್ಕ್ಯಾನಿಂಗ್‍ಗಾಗಿ ರೋಗಿಗಳು ದಿನಗಟ್ಟಲೆ ಕಾಯಬೇಕಿತ್ತು. ಆದರೆ ಈಗ ವ್ಯವಸ್ಥೆ ಸುಧಾರಿಸಿದ್ದು, ನೋಂದಾಯಿತ ದಿನವೇ ಸ್ಕ್ಯಾನಿಂಗ್ ಸೌಲಭ್ಯ ದೊರೆಯುತ್ತಿದೆ. ಕಳೆದ ಸಾಲಿನಲ್ಲಿ ಪ್ರಯೋಗಾಲಯದಲ್ಲಿ ಒಟ್ಟು 9,80,412 ಪರೀಕ್ಷೆಗಳನ್ನು ನಡೆಸಲಾಗಿದೆ. ಹೊರರೋಗಿ ವಿಭಾಗದಲ್ಲಿ 2,67,438 ಜನ ಚಿಕಿತ್ಸೆ ಪಡೆದಿದ್ದು, ಅದರಲ್ಲಿ 97,918 ಜನ ರಾತ್ರಿ ವೇಳೆಯಲ್ಲಿ ತುರ್ತು ಸೇವೆ ಪಡೆದಿದ್ದಾರೆ. ಹಾವು ಕಡಿತದ 658 ಪ್ರಕರಣಗಳಲ್ಲಿ ಇಬ್ಬರನ್ನು ಹೊರತುಪಡಿಸಿ ಉಳಿದೆಲ್ಲಾ 656 ರೋಗಿಗಳನ್ನು ಪ್ರಾಣಾಪಾಯದಿಂದ ರಕ್ಷಿಸಲಾಗಿದೆ ಎಂದು ತಿಳಿಸಿದರು.

ತಾಲ್ಲೂಕು ಪಂಚಾಯಿತಿ ವತಿಯಿಂದ ರೂ.8 ಲಕ್ಷ ವೆಚ್ಚದಲ್ಲಿ ನೀಡಲಾಗಿರುವ ‘ಬೆರಾ’ ಪರೀಕ್ಷಾ ಯಂತ್ರವನ್ನು ಶೀಘ್ರದಲ್ಲೇ ಅಳವಡಿಸಲಾಗುವುದು. ಇದು ಶಿಶುಗಳಲ್ಲಿನ ಕಿವುಡುತನ ಪತ್ತೆಹಚ್ಚಲು ಸಹಕಾರಿಯಾಗಲಿದ್ದು, ಆಸ್ಪತ್ರೆಯಲ್ಲಿ ಸೌಂಡ್ ಪ್ರೂಫ್ ಕೊಠಡಿಯನ್ನೂ ಸಜ್ಜುಗೊಳಿಸಲಾಗಿದೆ ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ. ರವೀಂದ್ರ ಹೇಳಿದರು.  

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsDistrict HospitalWell-equipped new hospitalಚಿತ್ರದುರ್ಗಚಿತ್ರದುರ್ಗ ನ್ಯೂಸ್ಜಿಲ್ಲಾಸ್ಪತ್ರೆಸುಸಜ್ಜಿತ ಹೊಸ ಆಸ್ಪತ್ರೆ
Share This Article
Facebook Email Print
Previous Article ಮಾರುಕಟ್ಟೆ ಧಾರಣೆ ಮಾರುಕಟ್ಟೆ ಧಾರಣೆ | ಏಪ್ರಿಲ್ 06 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
Next Article ARECANUT RATE ಅಡಿಕೆ ಧಾರಣೆಯಲ್ಲಿ ಕೊಂಚ ಏರಿಕೆ
Leave a Comment

Leave a Reply Cancel reply

Your email address will not be published. Required fields are marked *

ಅರ್ಜಿ ಅಹ್ವಾನ
ವಿಕಲಚೇತನರ ರಾಷ್ಟ್ರ ಪ್ರಶಸ್ತಿ | ಅರ್ಜಿ ಆಹ್ವಾನ
ಮುಖ್ಯ ಸುದ್ದಿ
ವಸತಿ ಯೋಜನೆಗೆ ಅರ್ಜಿ ಆಹ್ವಾನ
ಮುಖ್ಯ ಸುದ್ದಿ
ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ | ಬಳಿಕ PRESS MEET | ಸಂವಿಧಾನವೇ ಧರ್ಮ | ಮತದಾರರೇ ದೇವರು ಎಂದು ಭಾವುಕ
ಮುಖ್ಯ ಸುದ್ದಿ
ಕಾರಾಗೃಹ ಇಲಾಖೆಯಲ್ಲಿ ಸೈನಿಕರ ನೇಮಕಾತಿ | ಮೇ.29 ರಿಂದ ನೇರ ಸಂದರ್ಶನ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up