By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಸರಳ ಮದುವೆ ಆದರ್ಶದ ಮದುವೆ | ಡಾ.ಬಸವಕುಮಾರ ಸ್ವಾಮೀಜಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಸರಳ ಮದುವೆ ಆದರ್ಶದ ಮದುವೆ | ಡಾ.ಬಸವಕುಮಾರ ಸ್ವಾಮೀಜಿ

ಮುಖ್ಯ ಸುದ್ದಿ

ಸರಳ ಮದುವೆ ಆದರ್ಶದ ಮದುವೆ | ಡಾ.ಬಸವಕುಮಾರ ಸ್ವಾಮೀಜಿ

News Desk Chitradurga News
Last updated: 6 May 2025 06:39
News Desk Chitradurga News
2 months ago
Share
ಮುರುಘಾ ಮಠದಲ್ಲಿ ಸಾಮೂಹಿಕ ಕಲ್ಯಾಣ ಮಹೋತ್ಸವ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 06 MAY 2025

ಚಿತ್ರದುರ್ಗ: ಸರಳ ಸಾಮೂಹಿಕ ವಿವಾಹವಾದರೆ ಅದು ಆದರ್ಶದ ಮದುವೆ ಅನಿಸಿಕೊಳ್ಳುತ್ತದೆ. ಇದನ್ನು ಪ್ರಪಂಚವೇ ಒಪ್ಪಿಕೊಳ್ಳುತ್ತದೆ ಎಂದು ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ಆಡಳಿತ ಮಂಡಳಿ ಸದಸ್ಯರಾದ ಡಾ.ಬಸವಕುಮಾರ ಸ್ವಾಮೀಜಿ ಹೇಳಿದರು.

Also Read: ಸಮಾಜದ ಹಿರಿಯರು, ಮುಖಂಡರು, ಭಕ್ತರಲ್ಲಿ ಶ್ರೀ ಶಾಂತವೀರ ಸ್ವಾಮೀಜಿ ಮನವಿ

ನಗರದ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದಲ್ಲಿಂದು ನಡೆದ 35ನೇ ವರ್ಷದ 5ನೇ ತಿಂಗಳ ಸಾಮೂಹಿಕ ಕಲ್ಯಾಣ ಮಹೋತ್ಸವ ಕಾರ್ಯಕ್ರಮದಲ್ಲಿ ದಿವ್ಯ ಸಾನ್ನಿಧ್ಯ ವಹಿಸಿ ಮಾತನಾಡಿದ ಶ್ರೀಗಳು,

ಶ್ರೀಮಂತರ ಮದುವೆಗಳಲ್ಲಿ ಪ್ರತಿಷ್ಠೆ ಎದ್ದುಕಾಣುತ್ತದೆ. ಇಂಥ ಕಾರ್ಯಕ್ರಮಗಳಲ್ಲಿ ಮದುವೆಗಳು ನಡೆದರೆ ಪೋಷಕರಿಗೆ ಸಾಲ ಮಾಡಲು ಅವಕಾಶವಿರುವುದಿಲ್ಲ. ಶ್ರೀಮಠವು ಯಾವುದೇ ಜಾತಿಗೆ ಸೀಮಿತವಾಗಿಲ್ಲ. ಶಾಂತವೀರ ಶ್ರೀಗಳ ಗದ್ದುಗೆ ಇರುವ ಜಾಗದಲ್ಲಿ ನೀವೆಲ್ಲ ವಿವಾಹವಾಗುತ್ತಿದ್ದೀರಿ. ಗುರುಗಳ ಆಶೀರ್ವಾದ ವಧು-ವರರ ಮೇಲೆ ಸದಾ ಇರುತ್ತದೆ ಎಂದರು.

ದಾವಣಗೆರೆ ವಿರಕ್ತಮಠದ ಡಾ.ಬಸವಪ್ರಭು ಸ್ವಾಮಿಗಳು ಮಾತನಾಡಿ, ಜೀವನ ಎಂದರೆ ಒಬ್ಬರಿಗೊಬ್ಬರು ಕುಸ್ತಿ ಹಿಡಿಯುವುದಲ್ಲ. ಗಂಡ ಹೆಂಡತಿ ವಿದ್ಯಾವಂತರಿರುತ್ತಾರೆ. ಪ್ರತಿಷ್ಠೆ ಅಹಂಕಾರದಿ0ದ ಎಷ್ಟೋ ಸಂಸಾರ ಮುರಿದುಬೀಳುವ ಘಟನೆಗಳು ಕಣ್ಣೆದೆರುಗಿವೆ.

ಸತಿ-ಪತಿ-ಕುಟುಂಬದ ಸದಸ್ಯರ ನಡುವೆ ಪ್ರೀತಿ ಇರಬೇಕು, ಇಲ್ಲವಾದರೆ ಮನಸ್ತಾಪಗಳಿಂದ ವಿಚ್ಛೇದನಕ್ಕೆ ದಾರಿಯಾಗುತ್ತದೆ. ಅನೇಕ ವಿದ್ಯಾವಂತರ ಜೀವನ ಅಧೋಗತಿಗೆ ಹೋಗುತ್ತಿದೆ. ಇಬ್ಬರ ಮಧ್ಯೆ ಅನುಮಾನ ಅಪನಂಬಿಕೆ ಮೂಡಬಾರದು. ಅವಕ್ಕೆ ಔಷಧಿ ಇಲ್ಲ. ಹಾಗಾಗಿ ಸಂಸಾರ ಸುಸೂತ್ರವಾಗಿ ನಡೆಯಬೇಕಾದರೆ ಅಂಥವುಗಳಿಗೆ ಅವಕಾಶ ಮಾಡಿಕೊಡಬಾರದು.

Also Read: ಜಿಲ್ಲೆಯಲ್ಲಿರುವ ಪಾಕ್‌ ಪ್ರಜೆಗಳನ್ನು ಹೊರಗೆ ಹಾಕಿ | ಬಿಜೆಪಿಯಿಂದ ಎಡಿಸಿಗೆ ಮನವಿ

ನಿಪ್ಪಾಣಿಯ ಶ್ರೀ ಮಲ್ಲಿಕಾರ್ಜುನ ಸ್ವಾಮಿಗಳು ಮಾತನಾಡಿದರು. ಈ ವೇಳೆ 19 ಜೋಡಿಗಳ ವಿವಾಹ ನೆರವೇರಿಸಲಾಯಿತು.

ಜಮುರಾ ಕಲಾವಿದರಾದ ಉಮೇಶ್ ಪತ್ತಾರ್ ಮತ್ತು ಸಂಗಡಿಗರು ಪ್ರಾರ್ಥಿಸಿದರು. ಚಿನ್ಮಯಾನಂದ ಸ್ವಾಗತಿಸಿದರು. ಟಿ.ಪಿ. ಜ್ಞಾನಮೂರ್ತಿ ನಿರೂಪಿಸಿದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChitradurgaChitradurga newsChitradurga UpdatesDr. Basavakumara SwamijiKannada Latest NewsKannada NewsMass welfare festivalMurugha MathWeddingಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಡಾ.ಬಸವಕುಮಾರ ಸ್ವಾಮೀಜಿಮದುವೆಮುರುಘಾ ಮಠಸಾಮೂಹಿಕ ಕಲ್ಯಾಣ ಮಹೋತ್ಸವ
Share This Article
Facebook Email Print
Previous Article ಜಿಲ್ಲೆಯಲ್ಲಿ ಪಾಕ್ ಪ್ರಜೆಗಳು ಇದ್ದರೆ ಜಿಲ್ಲಾಡಳಿತ ಹೊರ ಹಾಕಬೇಕು | ಗೋವಿಂದ ಕಾರಜೋಳ
Next Article today bhavishya Astrology: ದಿನ ಭವಿಷ್ಯ | ಮೇ 06 | ಶುಭ ಸುದ್ದಿ, ವೃತ್ತಿಪರ ಉದ್ಯೋಗಗಳಲ್ಲಿ ಪ್ರಗತಿ, ಹೊಸ ವಾಹನ ಖರೀದಿ
Leave a Comment

Leave a Reply Cancel reply

Your email address will not be published. Required fields are marked *

Sadguru Pradeep participate hosadurga bandh
ಹೊಸದುರ್ಗ ಬಂದ್‌ | ಇಂದು ಅಂತ್ಯವಲ್ಲ, ಆರಂಭ | ಸದ್ಗುರು ಪ್ರದೀಪ್‌
ಹೊಸದುರ್ಗ
ಹೊಸದುರ್ಗ ಸ್ಥಿತಿ ಸಮುದ್ರದ ನೆಂಟಸ್ಥನ, ಉಪ್ಪಿಗೆ ಬರ | ಕೆ.ಎಸ್.ನವೀನ್
ಹೊಸದುರ್ಗ
ಹೊಸದುರ್ಗ ಬಂದ್ | ನೀರಿಗೆ ಅಡ್ಡಿ ಕಿಡಿಗೇಡಿ ಕೃತ್ಯ | ಎಸ್.ಲಿಂಗಮೂರ್ತಿ
ಹೊಸದುರ್ಗ
ಹೊಸದುರ್ಗ ಬಂದ್ | ಶಾಸಕ ಬಿ.ಜಿ.ಗೋವಿಂದಪ್ಪ ನೇತೃತ್ವದಲ್ಲಿ ಹೋರಾಟ
ಹೊಸದುರ್ಗ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up