CHITRADURGA NEWS | 05 MAY 2024
ಚಿತ್ರದುರ್ಗ: ಈರುಳ್ಳಿ ಬೆಳೆಗಾರರಿಗೆ ಕೇಂದ್ರ ಸರ್ಕಾರ ಗುಡ್ನ್ಯೂಸ್ ಕೊಟ್ಟಿದೆ. ಕಳೆದ ಎಂಟತ್ತು ವರ್ಷಗಳಿಂದ ಈರುಳ್ಳಿಗೆ ಸರಿಯಾದ ಬೆಲೆ ಇಲ್ಲದೆ ರೈತರು ಸಂಕಷ್ಟಕ್ಕೆ ಸಿಲುಕಿದ್ದರು.
ಯಾವಾಗಲೋ ಒಮ್ಮೆ ಲಾಟರಿ ಹೊಡೆದಂತೆ ಈರುಳ್ಳಿಗೆ ಬಂಪರ್ ಬೆಲೆ ಬಂದಿದ್ದನ್ನು ಗಮನಿಸಿದ ರೈತರು ಬೆಳೆ ಬೆಳೆದರೆ ಬೆಲೆ ಕುಸಿದು ಹೋಗಿರುತ್ತಿತ್ತು.

ಇದನ್ನೂ ಓದಿ: ಮಠದ ಮುಂದಿನ ಕೆರೆಯ ದುರ್ವಾಸನೆಗೆ ಜನ ಹೈರಾಣ | ಸತ್ತು ತೇಲುತ್ತಿವೆ ಸಾವಿರಾರು ಮೀನುಗಳು
ಆದರೆ, ಈಗ ಕೇಂದ್ರ ಸರ್ಕಾರ ಈರುಳ್ಳಿ ರಫ್ತು ಮಾಡಲು ಸರ್ಕಾರ ಅವಕಾಶ ಕಲ್ಪಿಸಿದ್ದು, ಈರುಳ್ಳಿ ಬೆಲೆಯಲ್ಲಿ ಸ್ಥಿರತೆ ಬರುವ ಸಾಧ್ಯತೆ ಇದೆ.
ರಾಜ್ಯದಲ್ಲಿ ಈರುಳ್ಳಿ ಬೆಳೆಯುವ ಜಿಲ್ಲೆಗಳ ಪೈಕಿ ಚಿತ್ರದುರ್ಗ ಜಿಲ್ಲೆ ಪ್ರಮುಖ ಸ್ಥಾನದಲ್ಲಿದೆ. ಜಿಲ್ಲೆಯ ಚಳ್ಳಕೆರೆ, ಚಿತ್ರದುರ್ಗ, ಹಿರಿಯೂರು, ಹೊಸದುರ್ಗ ಸೇರಿದಂತೆ ಮತ್ತಿತರೆಡೆಗಳಲ್ಲಿ 16 ರಿಂದ 18 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ರೈತರು ಈರುಳ್ಳಿ ಬೆಳೆಯುತ್ತಾರೆ.
ಇದನ್ನೂ ಓದಿ: ಭೀಮಸಮುದ್ರ ಸೇರಿ ವಿವಿಧ ಮಾರುಕಟ್ಟೆಗಳ ಅಡಿಕೆ ರೇಟ್
ಈಗ ಕೇಂದ್ರ ಸರ್ಕಾರ ಈರುಳ್ಳಿ ರಫ್ತಿನ ಮೇಲೆ ಹೇರಿದ್ದ ನಿಷಧವನ್ನು ತೆರವುಗೊಳಿಸಿದೆ. ಈ ಮೂಲಕ ಈರುಳ್ಳಿ ಬೆಳೆಗಾರರು, ವರ್ತಕರ ಬಹು ದಿನಗಳ ಬೇಡಿಕೆಯನ್ನು ಸರ್ಕಾರ ಈಡೇರಿಸಿದಂತಾಗಿದೆ.
ಈರುಳ್ಳಿ ರಫ್ತು ನಿಷೇಧದ ತೆರವಿನಿಂದಾಗಿ ರೈತರ ಆದಾಯ ಹೆಚ್ಚಾಗಲಿದೆ. ಇನ್ನಷ್ಟು ಈರುಳ್ಳಿ ಬೆಳೆಯಲು ಉತ್ತೇಜನ ದೊರೆಯಲಿದೆ.
ಇದನ್ನೂ ಓದಿ: ಚಿತ್ರದುರ್ಗದಲ್ಲಿ ತಂಪಾದ ಮಡಿಕೆ ನೀರಿನ ಅರವಟಿಗೆ ಆರಂಭ | ಎಲ್ಲಿ ಅಂತಿರಾ ಈ ಸುದ್ದಿ ಓದಿ..
ರಫ್ತು ಮಾಡುವ ಈರುಳ್ಳಿಗೆ ಪ್ರತಿ ಟನ್ಗೆ 45860 ರೂ(550 ಡಾಲರ್) ಕನಿಷ್ಟ ಬೆಲೆ ನಿಗಧಿ ಮಾಡಲಾಗಿದೆ. ಜೊತೆಗೆ ರಫ್ತಿಗೆ ಶೇ.40 ರಷ್ಟು ತೆರಿಗೆಯೂ ಇರಲಿದೆ. ಇದರೊಂದಿಗೆ ಸರ್ಕಾರ ರಫ್ತು ಮಾಡುವ ಈರುಳ್ಳಿ ದರ ಟನ್ಗೆ 64204 ರೂ. (770 ಡಾಲರ್) ಆಗಲಿದೆ ಎಂದು ಕೇಂದ್ರ ಸರ್ಕಾರದ ಗ್ರಾಹಕ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ ನಿಧಿ ಖರೆ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಹಾಡಹಗಲೇ ಮನೆಯ ಬೀಗ ಮುರಿದು ಕಳ್ಳರು | ಮನೆ ಮಾಲಿಕನ ಕಂಡು ಕಾಲ್ಕಿತ್ತರು
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
