By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: municipal space: ನಗರಸಭೆ ಜಾಗಗಳನ್ನು ರಕ್ಷಿಸಲು ವಿಶೇಷ ಅಭಿಯಾನ | ಶ್ರೀನಿವಾಸ್
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » municipal space: ನಗರಸಭೆ ಜಾಗಗಳನ್ನು ರಕ್ಷಿಸಲು ವಿಶೇಷ ಅಭಿಯಾನ | ಶ್ರೀನಿವಾಸ್

ಮುಖ್ಯ ಸುದ್ದಿ

municipal space: ನಗರಸಭೆ ಜಾಗಗಳನ್ನು ರಕ್ಷಿಸಲು ವಿಶೇಷ ಅಭಿಯಾನ | ಶ್ರೀನಿವಾಸ್

News Desk Chitradurga News
Last updated: 16 November 2024 20:19
News Desk Chitradurga News
7 months ago
Share
ನಗರಸಭೆ ಸದಸ್ಯ ಶ್ರೀನಿವಾಸ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು
ನಗರಸಭೆ ಸದಸ್ಯ ಶ್ರೀನಿವಾಸ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 16 NOVEMBER 2024

ಚಿತ್ರದುರ್ಗ: ನಗರಸಭೆ(City Council)ಗೆ ಸೇರಿದ ಕೋಟ್ಯಾಂತರ ರೂ. ಬೆಲೆ ಬಾಳುವ ಆಸ್ತಿ(Property)ಗಳನ್ನು ಉಳಿಸಲು ಅಭಿಯಾನ ಆಂದೋಲನ ಹಮ್ಮಿಕೊಳ್ಳಲಾಗಿದೆ ಎಂದು ನಗರಸಭೆ ಸದಸ್ಯ ಶ್ರೀನಿವಾಸ್ ತಿಳಿಸಿದರು.

ಕ್ಲಿಕ್ ಮಾಡಿ ಓದಿ: ಕನಕ ಜಯಂತಿಯಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ | ಬಿ.ಟಿ.ಜಗದೀಶ್

ಪತ್ರಿಕಾ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಳ್ಳಕೆರೆ ರಸ್ತೆಯಲ್ಲಿರುವ ಆದಿಶಕ್ತಿ ಬಡಾವಣೆಯಲ್ಲಿ ನಗರಸಭೆಗೆ ಸೇರಿದ ಜಾಗದಲ್ಲಿ ವ್ಯಕ್ತಿಯೊಬ್ಬರು ಗುಜರಿ ಅಂಗಡಿ ಹಾಕಿಕೊಂಡಿದ್ದು, ಅಲ್ಲಿ ನಗರಸಭೆಯ ಜಾಗ ಎಂಬ ನಾಮಫಲಕ ಅಳವಡಿಸಲು ಹೋದಾಗ ನಗರಸಭೆ ಸದಸ್ಯ ದೀಪು ಅಡ್ಡಿಪಡಿಸಿ ಅಕ್ರಮಕ್ಕೆ ಕೈಜೋಡಿಸುತ್ತಿರುವುದು ಬೇಸರ ತರಿಸಿದೆ ಎಂದರು.

ನಗರಸಭೆ ಖಾಲಿ ಜಾಗವನ್ನು ಲೂಟಿ ಹೊಡೆಯಲು ಕೆಲವರು ಹುನ್ನಾರ ನಡೆಸುತ್ತಿದ್ದಾರೆ. ಆದಿಶಕ್ತಿ ನಗರ ಮೂರು ಮತ್ತು ನಾಲ್ಕನೆ ತಿರುವಿನಲ್ಲಿ 60*40 ವಿಸ್ತೀರ್ಣದ ಎಂಟು ನಿವೇಶನಗಳಿದ್ದು, ನಗರಸಭೆ ಗಮನಕ್ಕೆ ತಾರದೆ ಕೆಲವರು ಅಕ್ರಮವಾಗಿ ಅತಿಕ್ರಮಣ ಮಾಡಿರುವುದು ನಮ್ಮ ಗಮನಕ್ಕೆ ಬಂದಿದೆ. ಅಂತಹ ಜಾಗಗಳಲ್ಲಿ ನಗರಸಭೆ ಸ್ವತ್ತು ಎಂಬ ನಾಮಫಲಕ ಅಳವಡಿಸಲು ಬಿಡುತ್ತಿಲ್ಲ. ಜಾಗ ಸಂರಕ್ಷಣೆಗೆ ಹೋದರೆ ದೌರ್ಜನ್ಯ ಮಾಡುತ್ತಿದ್ದಾರೆ ಎಂದು ದೂರಿದರು.

ಕ್ಲಿಕ್ ಮಾಡಿ ಓದಿ: ಉಪ್ಪರಿಗೇನಹಳ್ಳಿ ಮಹಿಳೆ ಕೊಲೆಗಾರರ ಬಂಧನಕ್ಕೆ ಗಡುವು | ನ.30 ರಿಂದ ಎಸ್‌ಪಿ ಕಚೇರಿ ಬಳಿ ಉಪವಾಸ ಸತ್ಯಾಗ್ರಹ | ಪ್ರಣವಾನಂದ ಶ್ರೀ

1984-85 ರಲ್ಲಿ ನಾಲ್ಕುವರೆ ಎಕರೆ ಜಾಗವನ್ನು ನಿವೇಶನಗಳನ್ನಾಗಿ ಮಾರ್ಪಡಿಸಿ ಹರಾಜು ಹಾಕಿದಾಗ ಕೆಲವರು ಕಿಮ್ಮತ್ತು ಕಟ್ಟಿ ನಿವೇಶನಗಳನ್ನು ಪಡೆದುಕೊಂಡಿದ್ದಾರೆ. ಹಣ ಕಟ್ಟದ ಕೆಲವರು ನಿವೇಶನಗಳನ್ನು ಪಡೆದುಕೊಂಡಿಲ್ಲ. ಕೆಲವು ಪ್ರಭಾವಿಗಳು ತಮ್ಮ ಹೆಸರಿನಲ್ಲಿಟ್ಟುಕೊಂಡಿದ್ದಾರೆ. ಮೂವತ್ತರಿಂದ ನಲವತ್ತು ಕೋಟಿ ರೂ.ಆಸ್ತಿಯಿದೆ.

ನಗರಸಭೆ ಜಾಗವನ್ನು ಕಾಪಾಡುವಂತೆ ಲೋಕಾಯುಕ್ತಕ್ಕೆ ದೂರು ಕೊಡಲು ಮುಂದಾಗಿದ್ದೇವೆ. ಜಿಲ್ಲಾಧಿಕಾರಿ ಹಾಗೂ ನಗರಸಭೆ ಪೌರಾಯುಕ್ತರು ಈ ವಿಚಾರವನ್ನು ಗಂಭೀರವಾಗಿ ತೆಗೆದುಕೊಂಡು ನಗರಸಭೆ ಜಾಗಗಳನ್ನು ಉಳಿಸುವಂತೆ ನಗರಸಭೆ ಸದಸ್ಯರಾದ ಶ್ರೀನಿವಾಸ್ ಮತ್ತು ಭಾಸ್ಕರ್ ಒತ್ತಾಯಿಸಿದರು.

ಕ್ಲಿಕ್ ಮಾಡಿ ಓದಿ: ವಿವಿ ಸಾಗರ ಭರ್ತಿಗೆ 1.20 ಟಿಎಂಸಿ ನೀರಿನ ಅಗತ್ಯ

ಆದಿಶಕ್ತಿ ನಗರದಲ್ಲಿ ನಗರಸಭೆ ಜಾಗದಲ್ಲಿ ಗುಜರಿ ಅಂಗಡಿಗಳನ್ನಿಟ್ಟುಕೊಂಡಿರುವ ರಮೇಶ್, ರವಿ ಜಾಗ ಬಿಟ್ಟುಕೊಡಲು ತಯಾರಿದ್ದರು. ನಗರಸಭೆ ಸದಸ್ಯ ದೀಪು ಕ್ಯಾತೆ ತೆಗೆಯುತ್ತಿದ್ದಾರೆ.

ನಗರಸಭೆಯಲ್ಲಿ ಬಿಜೆಪಿ ಬಹುಮತ ಪಡೆದುಕೊಂಡಿದ್ದರು ನಮ್ಮ ಪಕ್ಷದವರೆ ನಾಲ್ವರು ಸದಸ್ಯರು ಹಣದ ಆಸೆಗೆ ಕಾಂಗ್ರೆಸ್ ಜೊತೆ ಕೈಜೋಡಿಸಿ ನಗರಸಭೆ ಜಾಗಗಳನ್ನು ಲೂಟಿ ಮಾಡಲು ಹೊರಟಿದ್ದಾರೆ. ಅದಕ್ಕೆ ನಾವು ಆಸ್ಪದ ನೀಡುವುದಿಲ್ಲ ಎಂದು ಎಚ್ಚರಿಸಿದರು.

ಕ್ಲಿಕ್ ಮಾಡಿ ಓದಿ: ಸಹ್ಯಾದ್ರಿ ದುರ್ಗ | ಬಯಲು ಸೀಮೆಯ ಹೊಸ ಶೇಂಗಾ ತಳಿ ಸಂಶೋಧನೆ | ಬಬ್ಬೂರು ಕೃಷಿ ವಿಜ್ಞಾನಿಗಳ ಸಾಧನೆ

ಸುದ್ದಿಗೋಷ್ಠಿಯಲ್ಲಿ ನಗರಸಭೆ ಮಾಜಿ ಉಪಾಧ್ಯಕ್ಷೆ ಅನುರಾಧ ರವಿಕುಮಾರ್, ಸದಸ್ಯ ಹರೀಶ್, ಗುಜರಿ ಅಂಗಡಿಯ ರಮೇಶ್, ರವಿ ಇದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChitradurgaChitradurga newsChitradurga UpdatesCity CouncilfeaturedKannada Latest NewsKannada NewsPropertyspaceSpecial campaignಆಸ್ತಿಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಲೇಟೆಸ್ಟ್ ಸುದ್ದಿಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಜಾಗನಗರಸಭೆಫೀಚರ್ಡ್ವಿಶೇಷ ಅಭಿಯಾನ
Share This Article
Facebook Email Print
Previous Article ಬಿ.ಟಿ.ಜಗದೀಶ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು Kanaka Jayanti: ಕನಕ ಜಯಂತಿಯಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ | ಬಿ.ಟಿ.ಜಗದೀಶ್
Next Article today bhavishya Dina Bhavishya: ದಿನ ಭವಿಷ್ಯ | 17 ನವೆಂಬರ್ 2024 | ನಿರುದ್ಯೋಗಿಗಳಿಗೆ ಉದ್ಯೋಗ, ವ್ಯಾಪಾರದಲ್ಲಿ ಲಾಭ, ಅನಾವಶ್ಯಕ ಖರ್ಚು
Leave a Comment

Leave a Reply Cancel reply

Your email address will not be published. Required fields are marked *

ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up