CHITRADURGA NEWS | 24 AUGUST 2024
ಚಿತ್ರದುರ್ಗ: ಕಳೆದ ವಾರ ಸುರಿದ ಹೆಚ್ಚಿನ ಮಳೆಯಿಂದ ಹಾನಿಗೊಳಗಾದ ಚಿತ್ರದುರ್ಗ ತಾಲ್ಲೂಕಿನ ಓಬಣ್ಣನಹಳ್ಳಿ ಗ್ರಾಮಕ್ಕೆ ಸಂಸದ(MP) ಗೋವಿಂದ ಎಂ ಕಾರಜೋಳ ಶನಿವಾರ ಭೇಟಿ(visit) ನೀಡಿ, ಪರಿಶೀಲನೆ ನಡೆಸಿ ಸಂತ್ರಸ್ಥರ ಅಹವಾಲು ಆಲಿಸಿದರು.
ಕ್ಲಿಕ್ ಮಾಡಿ ಓದಿ: POLICE: ಜಿಲ್ಲೆಯ ಅಡಿಕೆ ಬೆಳೆಗಾರರಿಗೆ ಪೊಲೀಸ್ ಇಲಾಖೆಯಿಂದ ಮಹತ್ವದ ಸೂಚನೆ

ತೀವ್ರ ಮಳೆಯಿಂದಾಗಿ ಓಬಣ್ಣನಹಳ್ಳಿ ಗ್ರಾಮದ ಬಹುತೇಕ ಮನೆಗಳು ಹಾನಿಯಾಗಿರುವುದನ್ನು ಕಂಡು ಮರುಕ ವ್ಯಕ್ತಪಡಿಸಿ, ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡುವಂತೆ ಸ್ಥಳದಲ್ಲಿದ್ದ ತಹಶೀಲ್ದಾರ್ ಅವರಿಗೆ ಸೂಚನೆ ನೀಡಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಗೋವಿಂದ ಎಂ.ಕಾರಜೋಳ ಅವರು, ಓಬಣ್ಣನಹಳ್ಳಿ ಸುತ್ತಮುತ್ತ ಬೆಟ್ಟ ಇದೆ. ಹೀಗಾಗಿ ಹೆಚ್ಚಿನ ಮಳೆಯಿಂದಾಗಿ, ಬೆಟ್ಟದಿಂದ ಮಳೆನೀರು ಹರಿದು ಇಡೀ ಗ್ರಾಮದ ಮನೆಗಳಿಗೆ ನೀರು ನುಗ್ಗಿ ಅನೇಕ ಮನೆಗಳು ಹಾನಿಗೀಡಾಗಿವೆ. ಮಳೆ ನೀರು ನುಗ್ಗಿದ್ದರಿಂದ ಮನೆಯ ಸಾಮಾಗ್ರಿಗಳು ಹಾನಿಯಾಗಿವೆ.
ಈಗಾಗಲೇ ತಹಶೀಲ್ದಾರ್ ಅವರು ಹಾನಿಯಾದ ಮನೆಗಳಿಗೆ ₹ 5 ಸಾವಿರ ತುರ್ತು ಪರಿಹಾರ ನೀಡಿದ್ದಾರೆ ಎಂದು ತಿಳಿಸಿದ ಅವರು, ಗ್ರಾಮದಲ್ಲಿ ಮಳೆಯಿಂದ ಹಾನಿಯಾಗಿರುವ ಮನೆಗಳು, ಗುಡಿಸಲುಗಳನ್ನು ಪಟ್ಟಿ ಮಾಡಿ ಮನೆ ನಿರ್ಮಾಣಕ್ಕೆ ಕ್ರಮಕ್ಕೆ ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ಮಾಡಿದರು.
ಕ್ಲಿಕ್ ಮಾಡಿ ಓದಿ: Land acquisition: ವಾರದೊಳಗೆ ಭೂಸ್ವಾಧೀನ ಪೂರ್ಣಗೊಳಿಸಿ | ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಸೂಚನೆ
ಗ್ರಾಮಕ್ಕೆ ವಿಶೇಷ ಪ್ಯಾಕೇಜ್(special package) ಭರವಸೆ:
ಓಬಣ್ಣನಹಳ್ಳಿ ಗ್ರಾಮಕ್ಕೆ ಎಸ್ಸಿಪಿ, ಟಿ ಎಸ್ ಪಿ ಯೋಜನೆ ಅನುದಾನದಲ್ಲಿ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಕೂಡಲೇ ಸಲ್ಲಿಸಿ ವಿಶೇಷ ಪ್ಯಾಕೇಜ್ ನೀಡಲು ಪ್ರಯತ್ನಿಸಲಾಗುವುದು ಎಂದು ಸಂಸದ ಗೋವಿಂದ ಎಂ ಕಾರಜೋಳ ಭರವಸೆ ನೀಡಿದರು.
ಗ್ರಾಮದಲ್ಲಿ ಲೇ ಔಟ್ ನಿರ್ಮಾಣ:
ಓಬಣ್ಣನಹಳ್ಳಿ ಗ್ರಾಮದ ಕೆಲವರಿಗೆ ನಿವೇಶನದ ಸಮಸ್ಯೆ ಇದ್ದು, ಇದರ ಜೊತೆಗೆ ಹಳ್ಳ ಒತ್ತುವರಿ ಮಾಡಿಕೊಂಡು ಹಲವರು ಮನೆಗಳನ್ನು ನಿರ್ಮಿಸಿದ್ದು, ಅವುಗಳನ್ನು ತೆರವುಗೊಳಿಸಿ, ಗ್ರಾಮದಲ್ಲಿ 3 ಎಕೆರೆ ಗ್ರಾಮಠಾಣಾ ಲಭ್ಯವಿದ್ದು, ಇದನ್ನು ಲೇ ಔಟ್ ಮಾಡಲು ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಕಾನೂನು ಪ್ರಕಾರ ಹಕ್ಜುಪತ್ರಗಳನ್ನು ನೀಡಿ, ಮನೆ ನಿರ್ಮಾಣಕ್ಕೆ ಸರ್ಕಾರದಿಂದ ಅನುದಾನ ಕೊಡಿಸಲು ವ್ಯವಸ್ಥೆ ಮಾಡಲಾಗುವುದು ಎಂದು ಸಂಸದರು ಹೇಳಿದರು.
ತಹಶೀಲ್ದಾರ್ ಡಾ.ನಾಗವೇಣಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
