
ಚಿತ್ರದುರ್ಗ ನ್ಯೂಸ್.ಕಾಂ: ಚಿತ್ರದುರ್ಗ ಜಿಲ್ಲೆಯ ಮೂರು ತಾಲೂಕು ಮತ್ತು ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕನ್ನು ಕಲ್ಯಾಣ ಕರ್ನಾಟಕ ಮಾದರಿ 371ಜೆ ವಿಶೇಷ ಸ್ಥಾನಮಾನ ನೀಡಿದರೆ ಅಭಿವೃದ್ಧಿಗೆ ಅನುಕೂಲವಾಗುತ್ತದೆ ಎಂದು ರಾಜನಹಳ್ಳಿ ಶ್ರೀ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಹೇಳಿದರು.
ನಗರದ ತರಾಸು ರಂಗಮಂದಿರದಲ್ಲಿ ಚಿತ್ರದುರ್ಗ ವಾಲ್ಮೀಕಿ ನಾಯಕ ನೌಕರರ ಕ್ಷೇಮಾಭಿವೃದ್ಧಿ ಮತ್ತು ಸಾಂಸ್ಕøತಿಕ ಸಂಘದಿಂದ ಹಮ್ಮಿಕೊಂಡಿದ್ದ ವಾಲ್ಮೀಕಿ ನಾಯಕ ನೌಕರರ ಸಮಾವೇಶ, ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಆಶೀರ್ವಚನೆ ನೀಡಿದರು.

ಕಲ್ಯಾಣ ಕರ್ನಾಟಕ ಜಿಲ್ಲೆಗಳಂತೆ 371ಜೆ ಅಡಿಯಲ್ಲಿ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ, ಚಿತ್ರದುರ್ಗ, ಮೊಳಕಾಲ್ಮುರು, ದಾವಣಗೆರೆ ಜಿಲ್ಲೆಯ ಜಗಳೂರನ್ನು ಸೇರಿಸಬೇಕು. 371ಜೆ ಸ್ಥಾನದೊಂದಿಗೆ ಕೇಂದ್ರದಿಂದ ವಿಶೇಷ ಅನುದಾನ ದೊರೆತರೆ, ಈ ಭಾಗದ ನಾಯಕ ಸಮುದಾಯದ ಜನರ ಅಭಿವೃದ್ಧಿಗೆ ಸಹಕಾರಿ ಆಗಲಿದೆ. ಈ ಬಗ್ಗೆ ರಾಜನಹಳ್ಳಿಯಲ್ಲಿ ನಡೆಯುವ ವಾಲ್ಮೀಕಿ ಜಾತ್ರೆಯಲ್ಲಿ ಸರ್ಕಾರದ ಗಮನ ಸೆಳೆಯಲಾಗುವುದು ಎಂದು ಹೇಳಿದರು.
ಇದನ್ನೂ ಓದಿ: ಮೊಳಕಾಲ್ಮೂರಿನಲ್ಲಿ ಬೀದಿ ಬದಿ ಬಂಗಾರದ ನಾಣ್ಯಕ್ಕೆ ಹುಡುಕಾಟ
ಅಯೋಧ್ಯೆಯಲ್ಲಿ ಶ್ರೀ ರಾಮಮಂದಿರ ಉದ್ಘಾಟನೆಯಾಗುತ್ತಿರುವ ಸಂದರ್ಭ ಇದು. ಶ್ರೀರಾಮಾಯಣ ರಚಿಸಿದ ಶ್ರೀ ಮಹರ್ಷಿ ವಾಲ್ಮೀಕಿ, ಬೇಡರಕಣ್ಣಪ್ಪ ಹಾಗೂ ಏಕಲವ್ಯರಿಗೆ ಈ ದೇಶದಲ್ಲಿ ಸೂಕ್ತ ಪುರಸ್ಕಾರ ಸಿಕ್ಕಿಲ್ಲ ಎಂಬ ಬೇಸರವಿದೆ ಎಂದರು.
ರಾಜ್ಯ ಸರ್ಕಾರ ಕೆಲವು ವರ್ಷಗಳಿಂದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಮಾಡಿಕೊಂಡು ಬರುತ್ತಿದೆ. ಕಳೆದ ಚುನಾವಣೆ ಸಂದರ್ಭದಲ್ಲಿ ಚಿತ್ರದುರ್ಗದಲ್ಲಿ ರಾಜವೀರ ಮದಕರಿ ನಾಯಕರ ಥೀಮ್ಪಾರ್ಕ್ ಆರಂಭಿಸುವುಗಿ ಕೇಂದ್ರದ ಗೃಹ ಮಂತ್ರಿಗಳಾದ ಅಮಿತ್ ಶಾ ಭರವಸೆ ನೀಡಿದ್ದರು. ಆದರೆ, ಈವರೆಗೆ ಈಡೇರಿಲ್ಲ ಎಂದರು.
ನಾಯಕ ಸಮಾಜದ ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿದೆ. ನಮಗೆ ಡಾ.ಬಿ.ಆರ್.ಅಂಬೇಡ್ಕರ್ ಅವರು ನೀಡಿದ ಮೀಸಲಾತಿ ಮೂಲಕ ಶೋಷಿತ ಸಮುದಾಯಗಳಿಗೆ ಪ್ರಾತಿನಿಧ್ಯ ನೀಡುವ ಕೆಲಸ ಮಾಡಿದರು. ಆದರೆ ರಾಜ್ಯದಲ್ಲಿ ನಕಲಿ ಪ್ರಮಾಣ ಪತ್ರದ ಹಾವಳಿ ಹೆಚ್ಚುತ್ತಿದೆ. ಕೆಲವರು ಎಸ್ಸಿ, ಎಸ್ಟಿ ಜನರ ಸೌಲಭ್ಯಗಳನ್ನು ಕಬಳಿಕೆ ಮಾಡುತ್ತಿದ್ದು ಈ ಬಗ್ಗೆ ಸಮುದಾಯ ಎಚ್ಚರ ವಹಿಸದಿದ್ದರೆ ಮುಂದಿನ ದಿನಗಳಲ್ಲಿ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಮೀಸಲು ಪ್ರಮಾಣ ಹೆಚ್ಚಾಗಿದ್ದು ಇದಕ್ಕೆ ಪೂರಕ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಕರ್ನಾಟಕ ಸರ್ಕಾರ ಭರವಸೆ ನೀಡಿದೆ. ಮೀಸಲು ಹೆಚ್ಚಳ ಬೇಡಿಕೆಗೆ ಅಡ್ಡಿಯಾಗಿದ್ದ ಕಾನೂನು ತೊಡಕು, ಅರ್ಜಿ ಹಾಕದಿದ್ದರು ಸಹ ಒಂದು ಸಮುದಾಯಕ್ಕೆ ಶೇ.10 ರಷ್ಟು ಮೀಸಲು ನೀಡಲು ಅಡ್ಡಿಯಾಗದಿರುವುದು ವಿಪರ್ಯಾಸ ಎಂದರು.
ಕಾರ್ಯಕ್ರಮ ಉದ್ಘಾಟಿಸಿದ ಮೊಳಕಾಲ್ಮೂರು ಶಾಸಕ ಎನ್.ವೈ.ಗೋಪಾಲಕೃಷ್ಣ ಮಾತನಾಡಿ, ಚಿತ್ರದುರ್ಗಕ್ಕೆ 371 ಜೆ ಸ್ಥಾನ ಸಿಗಬೇಕಿದೆ. ಬೇಡಿಕೆ ಈಡೇರಿಕೆ ಗಾಗಿ ಸರ್ಕಾರಗಳ ಮೇಲೆ ಒತ್ತಡ ಹಾಕಬೇಕು ಎಂದರು.
ನಿವೃತ್ತ ನ್ಯಾಯಮೂರ್ತಿ ಎನ್.ವೈ.ಹನುಮಂತಪ್ಪ ಅವರ ಪರವಾಗಿ ಜೀವಮಾನ ಸಾಧನೆ ಪ್ರಶಸ್ತಿಯನ್ನು ಸ್ವೀಕರಿಸುತ್ತಿರುವುದು ಸಂತಸ ತಂದಿದೆ. ರಾಜ್ಯ ಸರ್ಕಾರದ ರಾಜ್ಯ ವಾಲ್ಮೀಕಿ ಪ್ರಶಸ್ತಿಗೆ ಭಾಜನರಾಗಿದ್ದ ಎನ್.ವೈ ಹನುಮಂತಪ್ಪ ಅವರಿಗೆ ಸಿಕ್ಕಿದ್ದು ಅವರ ಸೇವೆಗೆ ತಂದ ದೊಡ್ಡ ಗೌರವವಾಗಿದೆ. ಎನ್.ವೈ.ಹನುಮಂತಪ್ಪ ಅವರಿಗೆ ವಾಲ್ಮೀಕಿ ಪ್ರಶಸ್ತಿಯಿಂದ ದೊರೆತಿರುವ 5 ಲಕ್ಷ ಮೊತ್ತವನ್ನು ವಾಲ್ಮೀಕಿ ಸಮಾಜದ ವ್ಯಕ್ತಿತ್ವ ವಿಕಾಸಕ್ಕೆ ನೀಡಲಾಗುತ್ತದೆ ಎಂದರು.
ಇದನ್ನೂ ಓದಿ: ಸಚಿವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ
ಸಚಿವ ಸತೀಶ್ ಜಾರಕಿಹೊಳಿ ಪುತ್ರ ರಾಹುಲ್ ಜಾರಕಿಹೊಳಿ ಮಾತನಾಡಿ, ಸರ್ಕಾರಿ ನೌಕರರ ಸಂಘದಿಂದ ಏರ್ಪಡಿಸಿರುವ ಈ ಕಾರ್ಯಕ್ರಮ ಅರ್ಥಪೂರ್ಣವಾಗಿದೆ. ಒಂದು ಸರ್ಕಾರ ಉತ್ತಮ ಆಡಳಿತ ನಡೆಯಲು ಸರ್ಕಾರಿ ನೌಕರರು ಪಾತ್ರ ದೊಡ್ಡದು. ಸಮಾಜ ಪರ ಕಾಳಜಿಯಿಂದ ಕಳೆದ 12 ವರ್ಷಗಳಿಂದ ಸರ್ಕಾರಿ ನೌಕರರ ಸಂಘದಿಂದ ಪ್ರತಿಭಾ ಪುರಸ್ಕಾರ ಮೂಲಕ ವಿದ್ಯಾರ್ಥಿಗಳನ್ನು ಪೆÇ್ರೀತ್ಸಾಹ ನೀಡುವ ಕೆಲಸ ಮಾಡುತ್ತಿರುವುದು ನನಗೆ ಸಂತಸ ತಂದಿದೆ ಎಂದರು.

ಸಮಾಜದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ ಸಾಧಕರನ್ನು ಸನ್ಮಾನಿಸಿ ಯುವ ಸಮೂಹಕ್ಕೆ ಸ್ಪೂರ್ತಿ ತುಂಬುತ್ತಿರುವುದು ಭವಿಷ್ಯದ ದೃಷ್ಟಿಯಿಂದ ಉತ್ತಮ ಬೆಳವಣಿಗೆಯಾಗಿದೆ.
ಇಂದು ನಮ್ಮ ಸಮಾಜಕ್ಕೆ ಮೀಸಲಾತಿಯಿಂದ ಅಧಿಕಾರ ದೊರತಿದೆ. ಅನೇಕ ನಾಯಕರು ಸಮಾಜದ ಪರವಾಗಿ ಕೆಲಸ ಮಾಡಲು ಸಹಕಾರಿಯಾಗಿದ್ದು ಸಮಾಜದ ಪರವಾಗಿ ನಿಂತು ಸಮಾಜವನ್ನು ಉನ್ನತ ಮಟ್ಟಕ್ಕೆ ತೆಗೆದುಕೊಂಡು ಹೋಗಲು ಮತ್ತಷ್ಟು ಶ್ರಮ ಹಾಕಬೇಕಿದೆ ಎಂದರು.
ಸಮಾಜದ ಸಾಧಕರಾದ ನಿವೃತ್ತ ಡಿಐಜಿ ಎಂ.ಎನ್.ನಾಗರಾಜ್, ಪತ್ರಕರ್ತ ಎಂ.ಎನ್.ಅಹೋಬಲಪತಿ, ಉದ್ಯಮಿಗಳಾದ ಪಿ.ವಿ.ಅರುಣ್ಕುಮಾರ್, ಆರ್.ರಾಜಮನೆ, ಥ್ರೋಬಾಲ್ ಆಟಗಾರ ಆರ್.ಹೊಯ್ಸಳ, ಶಿಕ್ಷಕಿ ಕೆ.ಒ.ರತ್ನಮ್ಮ, ಡಾ.ಎನ್.ಬಿ. ಪ್ರಹ್ಲಾದ್, ಡಾ.ಎಚ್.ಟಿ.ತೇಜಸ್ವಿ, ಡಾ.ಎಸ್.ಕೆ. ಮೋಹನ್, ಮುಖ್ಯ ಲೆಕ್ಕಾಧಿಕಾರಿ ಸಿ.ಜೆ.ಶ್ರೀನಿವಾಸ್, ನಾಟಕ ಅಕಾಡೆಮಿ ಸದಸ್ಯ ತಿಪ್ಪೇಸ್ವಾಮಿ ಅವರನ್ನು ಸನ್ಮಾನಿಸಲಾಯಿತು.
ನೌಕರರ ಸಂಘದ ಅಧ್ಯಕ್ಷ ಡಾ.ಎಚ್.ಗುಡ್ಡದೇಶ್ವರಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ನಾಯಕ ಸಮಾಜದ ಅಧ್ಯಕ್ಷ ಎಚ್.ಜೆ.ಕೃಷ್ಣಮೂರ್ತಿ, ತಾಲೂಕು ಅಧ್ಯಕ್ಷ ಬಿ.ಕಾಂತರಾಜ್, ಮದಕರಿ ವಿದ್ಯಾಸಂಸ್ಥೆಗಳ ಮುಖ್ಯಸ್ಥರಾದ ಎಸ್.ಸಂದೀಪ್, ನಾಗೇಂದ್ರ ಬಾಬು, ಮುಖ್ಯ ಲೆಕ್ಕಧಿಕಾರಿ ಶ್ರೀನಿವಾಸ್, ಅಧಿಕಾರಿಗಳಾದ ಡಾ.ಎಚ್.ಪಾಲಾಕ್ಷ, ಕೆ.ಪಿ.ಮಧುಸೂ ದನ್, ಪಾಪಯ್ಯ, ಮಾರಣ್ಣ, ಮಹಾಂತೇಶ್, ದೀಪಕ್, ಜೆ.ವೈಶಾಲಿ, ಎಸ್.ಎಸ್.ಗಣೇಶ್, ಡಾ.ಎಸ್.ರಂಗಸ್ವಾಮಿ, ಡಾ.ಸಾಲಿಮಂಜಪ್ಪ, ತಿಪ್ಪೇ ಸ್ವಾಮಿ, ಎ.ರಮೇಶ್, ಪೆÇ್ರ.ಟಿ.ಎಲ್.ಸುಧಾಕರ್, ಮಂಜುನಾಥ್, ಬಸವರಾಜ ಟಿ.ಗೊರವರ್, ಅಂಜಿನಪ್ಪ, ಕೆ.ಪಿ.ಸಂಪತ್ಕುಮಾರ್, ಜಿ.ಬಿ.ಮಹಂತೇಶ್, ಎಸ್.ಮಂಜುನಾಥ್, ಎನ್.ಪಿ.ರವಿ, ಎಚ್.ಮಹೇಶ್, ಪೆÇೀಲಿಸ್ ರವಿ ಮತ್ತಿತರರಿದ್ದರು.
ಪಕ್ಷಾತೀತವಾಗಿ ನಿರಂತರ ಹೋರಾಟ ಮಾಡಿದಾಗ ಮಾತ್ರ 371ಜೆ ಮಾದರಿಯಲ್ಲಿ ವಿಶೇಷ ಸ್ಥಾನಮಾನ ಪಡೆಯಲು ಸಾಧ್ಯ. ಸಮಾಜದ ಪರವಾಗಿ ವಾಲ್ಮೀಕಿ ಶ್ರೀಗಳು ಸತತ 260 ದಿನಗಳ ಮೀಸಲಾತಿ ಹೋರಾಟ ಮಾಡಿದ್ದಾರೆ. ಈ ಕಾರಣಕ್ಕೆ ಶೇ.3.5 ರಿಂದ ಶೇ.7ರಷ್ಟು ಮೀಸಲಾತಿ ದೊರೆಯಲು ಸಾಧ್ಯವಾಗಿದೆ.
| ಟಿ.ರಘುಮೂರ್ತಿ, ಚಳ್ಳಕೆರೆ ಶಾಸಕರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
